Homeಕರ್ನಾಟಕಸಿಎಂ ಸಿದ್ದರಾಮಯ್ಯ ವಿರುದ್ಧದ ಲಂಚ ಪ್ರಕರಣ: ಮುಕ್ತಾಯ ವರದಿ ಅಂಗೀಕರಿಸಿದ ವಿಶೇಷ ನ್ಯಾಯಾಲಯ

ಸಿಎಂ ಸಿದ್ದರಾಮಯ್ಯ ವಿರುದ್ಧದ ಲಂಚ ಪ್ರಕರಣ: ಮುಕ್ತಾಯ ವರದಿ ಅಂಗೀಕರಿಸಿದ ವಿಶೇಷ ನ್ಯಾಯಾಲಯ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವಿವೇಕ್‌ ಹೋಟೆಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಎಲ್‌. ವಿವೇಕಾನಂದ ಅಲಿಯಾಸ್‌ ಕಿಂಗ್ಸ್‌ ಕೋರ್ಟ್‌ ವಿವೇಕ್‌ ಅವರನ್ನು ಕೋಟ್ಯಾಂತರ ರೂಪಾಯಿ ಲಂಚ ಪಡೆದು ಬೆಂಗಳೂರು ಟರ್ಫ್‌ ಕ್ಲಬ್‌ ಲಿಮಿಟೆಡ್‌ನ (ಬಿಟಿಸಿಎಲ್‌) ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಿದ್ದಾರೆ ಎಂದು ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಲೋಕಾಯುಕ್ತ ಪೊಲೀಸರ ಅಂತಿಮ ವರದಿಗೆ ಆಕ್ಷೇಪಿಸಿ, ದೂರುದಾರ ಬೆಂಗಳೂರಿನ ಬಿಜೆಪಿ ಮುಖಂಡ ಎನ್‌. ಆರ್‌ ರಮೇಶ್‌ ಅವರು ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ಆದೇಶ ಪ್ರಕಟಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2024ರ ಸೆಪ್ಟೆಂಬರ್ 12 ಸಲ್ಲಿಸಿರುವ ಅಂತಿಮ ವರದಿಯನ್ನು ಒಪ್ಪಿಕೊಳ್ಳಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದಾಗಿ ವರದಿ ತಿಳಿಸಿದೆ.

ಸಿದ್ದರಾಮಯ್ಯ ಅವರು ಲಂಚ ಪಡೆದು ವಿವೇಕಾನಂದ ಅವರನ್ನು ಬಿಟಿಸಿಎಲ್‌ಗೆ ಸ್ಟ್ಯುವರ್ಡ್‌ ಆಗಿ ನೇಮಕ ಮಾಡಿದ್ದಾರೆ ಎಂಬುವುದಕ್ಕೆ ಯಾವುದೇ ದಾಖಲೆಗಳು ಇಲ್ಲ ಎಂದು ಲೋಕಾಯುಕ್ತದ ಪ್ರಾಥಮಿಕ ತನಿಖಾ ವರದಿಯಲ್ಲಿ ಹೇಳಲಾಗಿದೆ. ದೂರುದಾರರು ತನಿಖೆಗೆ ಹಾಜರಾಗದ ಕಾರಣ, ಆರೋಪಿಗಳ ವಿರುದ್ಧ ಮುಂದುವರಿಯಲು ಸೂಕ್ತ ದಾಖಲೆಗಳ ಕೊರತೆಯ ಹಿನ್ನೆಲೆಯಲ್ಲಿ ಪ್ರಕರಣ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ ಎಂದು ನ್ಯಾಯಾಲಯದ ಆದೇಶದಲ್ಲಿ ವಿವರಿಸಲಾಗಿದೆ.

“ಲೋಕಾಯುಕ್ತ ಸಲ್ಲಿಸಿರುವ ಮುಕ್ತಾಯ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, 1998-99ರಲ್ಲಿ ವಿವೇಕಾನಂದ ಅವರು ಮೈಸೂರು ಟರ್ಫ್‌ ಕ್ಲಬ್‌ನ ಸ್ಟ್ಯುವರ್ಡ್‌ ಆಗಿದ್ದರು. 2003-04ರಲ್ಲಿ ಬೆಂಗಳೂರು ಟರ್ಫ್‌ ಕ್ಲಬ್‌ಗೆ (ಬಿಟಿಸಿ) ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಲಾಗಿತ್ತು. ಆನಂತರ ಮತ್ತೆ ಬಿಟಿಸಿ ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಲಾಗಿತ್ತು. ಈ ಎಲ್ಲಾ ವಿಚಾರಗಳು ಗಮನಿಸಿದರೆ ಸರ್ಕಾರವು ತನಗೆ ದೊರೆತಿರುವ ವಿಶೇಷ ಅಧಿಕಾರವನ್ನು ಸ್ವೇಚ್ಛೆಯಿಂದ ಬಳಸಿ ನೇಮಕ ಮಾಡಬೇಕಾದ ಹೊಸಬರು ವಿವೇಕಾನಂದ ಅವರಲ್ಲ. ಈ ನೆಲೆಯಲ್ಲಿ ಸ್ಟ್ಯುವರ್ಡ್‌ ಆಗಿ ನೇಮಕವಾಗಲು ವಿವೇಕಾನಂದ ಅವರು ಅರ್ಹರಾಗಿದ್ದು, ಸ್ವೇಚ್ಛೆಯ ನಡೆ ಅನುಸರಿಸಬೇಕಿಲ್ಲ. ಇದರಿಂದ ವಿವೇಕಾನಂದ ಅವರ ನೇಮಕಾತಿ ಸಮರ್ಥನೀಯವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

“ಸಿದ್ದರಾಮಯ್ಯ ಅವರು ಸಲ್ಲಿಸಿರುವ ಆದಾಯ ತೆರಿಗೆ ವರದಿ, ಅಫಿಡವಿಟ್‌, ಅವರ ಬ್ಯಾಂಕ್‌ ಖಾತೆ ಹಾಗೂ ವಿವೇಕಾನಂದ ಅವರ ಘೋಷಣಾ ಪತ್ರವನ್ನು ಲೋಕಾಯುಕ್ತ ಸಂಗ್ರಹಿಸಿದೆ. ವಿವೇಕಾನಂದ ಅವರ ಹೇಳಿಕೆಯನ್ನು ಪರಿಶೀಲಿಸಲಾಗಿದ್ದು, ಬಡ್ಡಿರಹಿತ ಸಾಲವನ್ನು ಸಿದ್ಧರಾಮಯ್ಯ ಅವರಿಗೆ ನೀಡಲಾಗಿದೆ ಎಂದು ವಿವೇಕಾನಂದ ಹೇಳಿದ್ದು, ಅವರ ಐಟಿ ದಾಖಲೆಯಲ್ಲಿ ಉಲ್ಲೇಖಿತವಾಗಿದೆ. ಗೌರವಾನ್ವಿತ ಹುದ್ದೆಯ ಸ್ಟ್ಯುವರ್ಡ್‌ಶಿಪ್‌ಗೆ ನೇಮಕವಾಗುವ ಎಲ್ಲಾ ಅರ್ಹತೆಯನ್ನು ವಿವೇಕಾನಂದ ಹೊಂದಿದ್ದು, ಇದರಿಂದ ಅಕ್ರಮವಾಗಿ ಸಂಪಾದಿಸುವುದು ಏನೂ ಇಲ್ಲ. ಹೀಗಾಗಿ, ಹಾಲಿ ಪ್ರಕರಣಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್‌ 7,8 ಅಥವಾ 13 ಅನ್ವಯಿಸುವುದಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

“ದೂರುದಾರರ ಪರ ವಕೀಲರು ತನಿಖಾ ಸಂಸ್ಥೆಗೆ ಅಗತ್ಯವಾದ ಸಮಯ ನೀಡಿಲ್ಲ ಎಂದಿದ್ದಾರೆ. ಇದನ್ನು ಒಪ್ಪಿಕೊಳ್ಳುವುದಾದರೆ ದೂರುದಾರರು ಪ್ರತಿಭಟನಾ ಅರ್ಜಿ ಸಲ್ಲಿಕೆಯ ವಾದದ ಸಂದರ್ಭದಲ್ಲಿ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಯಾರೂ ಅವರನ್ನು ನಿರ್ಬಂಧಿಸಿರಲಿಲ್ಲ. ಹಾಲಿ ಪ್ರಕರಣದಲ್ಲಿ ಆರೋಪ ಮಾಡಿರುವುದನ್ನು ಹೊರತುಪಡಿಸಿ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“2014ರಲ್ಲಿ ಕೃತ್ಯ ನಡೆದಿದ್ದು, 2022ರಲ್ಲಿ ಮೊದಲ ಬಾರಿಗೆ ಎಂಟು ವರ್ಷಗಳ ಬಳಿಕ ದೂರು ದಾಖಲಿಸಲಾಗಿದೆ. ತಡವಾಗಿ ದೂರು ದಾಖಲಿಸಿರುವುದಕ್ಕೆ ನ್ಯಾಯಾಲಯವು ಯಾವುದೇ ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ. ಆದರೆ, ತಡವಾಗಿ ದೂರು ದಾಖಲಿಸಲು ಕಾರಣವೇನು ಎಂದ ಹೇಳಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

“ಸಿದ್ದರಾಮಯ್ಯ ಅವರು ವಿವೇಕಾನಂದ ಅವರಿಂದ ಸ್ವೀಕರಿಸಿರುವ 1.30 ಕೋಟಿ ರೂಪಾಯಿಯನ್ನು ಅವರಿಗೆ ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಿರುವುದಕ್ಕೆ ಪಡೆದಿರುವ ಹಣ ಎನ್ನಲಾಗದು. ಈ ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ವಿವೇಕಾನಂದ ಅವರ ವಿರುದ್ಧ ಪ್ರಕ್ರಿಯೆ ಮುಂದುವರಿಸಲು ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ತನಿಖಾ ಸಂಸ್ಥೆಯು ಸಲ್ಲಿಸಿರುವ ಮುಕ್ತಾಯ ವರದಿಯನ್ನು ಒಪ್ಪಿಕೊಳ್ಳಬೇಕಿದೆ” ಎಂದು ನ್ಯಾಯಾಲಯ ಹೇಳಿದೆ. ‌

ಕೃಪೆ : ಬಾರ್ & ಬೆಂಚ್

ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...