Homeಅಂತರಾಷ್ಟ್ರೀಯಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

- Advertisement -
- Advertisement -

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ ಸಮನ್ಸ್‌ಗಳನ್ನು ಅಧಿಕೃತವಾಗಿ ಅದಾನಿ ಅವರಿಗೆ ತಲುಪಿಸಲು ಎರಡು ಬಾರಿ ನಿರಾಕರಿಸಿದೆ ಎಂದು ವರದಿಯಾಗಿದೆ.

ಸಮನ್ಸ್‌ಗಳಲ್ಲಿ ತಾಂತ್ರಿಕ ದೋಷಗಳಿದ್ದವು. ಅಂದರೆ, ಅದರ ಮೇಲೆ ಅಗತ್ಯವಾದ ಅಧಿಕೃತ ಸೀಲ್ ಮತ್ತು ಇಂಕ್ ಸಹಿ ಮುಂತಾದವು ಸರಿಯಾಗಿ ಇರಲಿಲ್ಲ ಎಂದು ಸರ್ಕಾರ ಜಾರಿಕೊಂಡಿದೆ ಎಂದು ವರದಿ ಹೇಳಿದೆ.

ವರದಿಗಳ ಪ್ರಕಾರ, ಕಳೆದ ವರ್ಷ (2025ರಲ್ಲಿ) ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಎಸ್‌ಇಸಿ ಕಳುಹಿಸಿದ ಕವರ್ ಲೆಟರ್‌ನಲ್ಲಿ ಇಂಕ್ ಸಹಿ, ಅಗತ್ಯ ಫಾರ್ಮ್‌ಗಳ ಮೇಲೆ ಅಧಿಕೃತ ಸೀಲ್ ಇಲ್ಲದಿರುವುದನ್ನು ಮತ್ತು ಸಮನ್ಸ್ ತಲುಪಿಸುವ ವಿಧಾನಕ್ಕೆ ಸಂಬಂಧಿಸಿದ ಪ್ರಕ್ರಿಯಾ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಎರಡು ಬಾರಿ ಸಮನ್ಸ್‌ಗಳನ್ನು ಅಧಿಕೃತವಾಗಿ ಅದಾನಿಗೆ ನೀಡಲು ನಿರಾಕರಿಸಿದೆ.

ಎರಡು ಭಾರತ ಸರ್ಕಾರ ಸಮನ್ಸ್ ತಲುಪಿಸಲು ನಿರಾಕರಿಸಿದ ಕಾರಣ ಎಸ್‌ಇಸಿಗೆ ಹೇಗ್ ಕನ್ವೆನ್ಷನ್ ಮೂಲಕ ಸಮನ್ಸ್ ತಲುಪಿಸುವುದು ಕಷ್ಟವಾಗಿದೆ. ಇದರಿಂದಾಗಿ ಅದು ನ್ಯೂಯಾರ್ಕ್‌ನ ಈಸ್ಟರ್ನ್ ಡಿಸ್ಟ್ರಿಕ್ಟ್ ಫೆಡರಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸಾಮಾನ್ಯ ಪ್ರಕ್ರಿಯೆಯನ್ನು ಬಿಟ್ಟು ಬೇರೆ ಮಾರ್ಗದ ಮೂಲಕ (ಇ-ಮೇಲ್ ಮೂಲಕ) ಸಮನ್ಸ್ ತಲುಪಿಸಲು ಅನುಮತಿ ಕೇಳಿದೆ.

ಹೇಗ್ ಕನ್ವೆನ್ಷನ್‌ನಲ್ಲಿ ಸೀಲ್ ಮತ್ತು ಅಥವಾ ಇಂಕ್ ಸಹಿ ಕಡ್ಡಾಯವಲ್ಲ ಎಂದು ಎಸ್‌ಇಸಿ ವಾದಿಸಿದರೂ, 2025ರ ಮೇ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಕಾನೂನು ಮತ್ತು ನ್ಯಾಯ ಸಚಿವಾಲಯವು ಸಮನ್ಸ್ ತಲುಪಿಸಲು ನಿರಾಕರಿಸಿದೆ.

ಡಿಸೆಂಬರ್‌ನಲ್ಲಿ ತಿರಸ್ಕರಿಸುವಾಗ ಕೇಂದ್ರ ಸಚಿವಾಲಯ ಅಮೆರಿಕದ ಕಾನೂನನ್ನೇ ಉಲ್ಲೇಖಿಸಿ, ಈ ಸಮನ್ಸ್‌ಗಳು ಅನುಮತಿಸಲಾದ ವರ್ಗಗಳಲ್ಲಿ ಬರುವುದಿಲ್ಲ ಎಂದಿದೆ. ಅಂದರೆ, ಇದು ಹೇಗ್ ಕನ್ವೆನ್ಷನ್ ಅಡಿಯಲ್ಲಿ ಸಹಾಯ ಮಾಡಬಹುದಾದ ರೀತಿಯ ದಾಖಲೆಯಲ್ಲ ಎಂದು ವಾದಿಸಿತ್ತು.

ಸಚಿವಾಲಯದ ವಾದಕ್ಕೆ ಹೇಗ್ ಕನ್ವೆನ್ಷನ್ ಅಡಿಯಲ್ಲಿ ಯಾವುದೇ ಆಧಾರವಿಲ್ಲ ಎಂದು ಎಸ್‌ಇಸಿ ಹೇಳಿತ್ತು. ಅಂದರೆ, ಅಂತಾರಾಷ್ಟ್ರೀಯ ಸಮನ್ಸ್ ನೀಡುವುದಕ್ಕೆ ಸಂಬಂಧಿಸಿದ ಹೇಗ್ ಕನ್ವೆನ್ಷನ್ ನಿಯಮಗಳು ಇಂತಹ ತಾಂತ್ರಿಕ ಅಗತ್ಯಗಳನ್ನು (ಇಂಕ್ ಸಹಿ ಅಥವಾ ಅಧಿಕೃತ ಸೀಲ್) ಕಡ್ಡಾಯಗೊಳಿಸುವುದಿಲ್ಲ ಎಂದಿತ್ತು. ಆದರೂ, ಭಾರತ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಲ್ಲ ಎನ್ನಲಾಗಿದೆ.

ಭಾರತ ಸರ್ಕಾರದ ಎರಡು ನಿರಾಕರಣೆಯ ಬಳಿಕ ಎಸ್‌ಇಸಿ ನ್ಯೂಯಾರ್ಕ್ ಕೋರ್ಟ್‌ಗೆ ಅರ್ಜಿ ಹಾಕಿ ಇಮೇಲ್ ಮೂಲಕ ಸಮನ್ಸ್ ತಲುಪಿಸಲು ಅನುಮತಿ ಕೇಳಿದೆ. ಈ ಸುದ್ದಿ ಹೊರಬಿದ್ದ ನಂತರ ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿವೆ. ವಿವಿಧ ಕಂಪನಿಗಳ ಷೇರುಗಳು 3.3% ರಿಂದ 14.6% ವರೆಗೆ ಕುಸಿದಿವೆ. ಒಟ್ಟಾರೆಯಾಗಿ ಅದಾನಿ ಗ್ರೂಪ್ ಕಂಪನಿಗಳ ಮಾರ್ಕೆಟ್ ಕ್ಯಾಪ್ ಸುಮಾರು 12.5 ಬಿಲಿಯನ್ ಡಾಲರ್ (ಅಂದಾಜು 1 ಲಕ್ಷ ಕೋಟಿ ರೂ.) ಕಳೆದುಕೊಂಡಿದೆ. ಉದಾಹರಣೆಗೆ : ಅದಾನಿ ಎಂಟರ್‌ಪ್ರೈಸಸ್, ಅದಾನಿ ಎನರ್ಜಿ ಸೊಲ್ಯೂಷನ್ಸ್ ಮುಂತಾದವು ಹೆಚ್ಚು ಇಳಿಕೆ ಕಂಡಿವೆ (10-14% ವರೆಗೆ).

ಎಸ್‌ಇಸಿಯ ಆರೋಪಗಳನ್ನು ಅದಾನಿ ಗ್ರೂಪ್ ತಳ್ಳಿ ಹಾಕಿದೆ. ಅವುಗಳನ್ನು ಆಧಾರರಹಿತ ಎಂದು ಕರೆದಿದೆ. ಎಸ್‌ಇಸಿಯ ಆರೋಪಗಳನ್ನು ಎದುರಿಸಲು ಎಲ್ಲಾ ಸಾಧ್ಯವಾದ ಕಾನೂನು ಮಾರ್ಗಗಳನ್ನು ಬಳಸುವುದಾಗಿ ಹೇಳಿದೆ. ವಿಶೇಷವಾಗಿ ಅದಾನಿ ಗ್ರೀನ್ ಎನರ್ಜಿ ಕಂಪನಿಯು ಸ್ಟಾಕ್ ಎಕ್ಸ್‌ಚೇಂಜ್‌ಗೆ ದಾಖಲೆ ಸಲ್ಲಿಸಿ, ಕಂಪನಿಯು ಈ ಎಸ್‌ಇಸಿ ಪ್ರಕರಣದ ಯಾವುದೇ ಪಕ್ಷವಲ್ಲ, ಇದು ಸಿವಿಲ್ ಪ್ರಕರಣ ಮಾತ್ರ, ಅಂದರೆ ಕ್ರಿಮಿನಲ್ ಅಲ್ಲ ಮತ್ತು ಆರೋಪಿಗಳ ವಿರುದ್ಧ ಲಂಚ ಅಥವಾ ಭ್ರಷ್ಟಾಚಾರದ ಆರೋಪಗಳಿಲ್ಲ ಎಂದು ತಿಳಿಸಿದೆ.

ಈ ಸಮನ್ಸ್‌ಗಳು ಅದಾನಿ ಗ್ರೂಪ್ ವಿರುದ್ದದ ವಂಚನೆ ಮತ್ತು 265 ಮಿಲಿಯನ್ ಡಾಲರ್ (ಸುಮಾರು 2,200 ಕೋಟಿ ರೂ.) ಲಂಚದ ಪ್ರಕರಣಕ್ಕೆ ಸಂಬಂಧಿಸಿದೆ. ವಂಚನೆ ಮತ್ತು ಲಂಚದ ಆರೋಪಗಳನ್ನು ಮಾಡಿ ಎಸ್‌ಇಸಿಯು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಸಿವಿಲ್ ಕೇಸ್ ದಾಖಲಿಸಿದೆ. ಅಮೆರಿಕದ ಕಾನೂನಿನ ಪ್ರಕಾರ, ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ವೈಯಕ್ತಿಕವಾಗಿ ಸಮನ್ಸ್ ತಲುಪಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...