Homeಅಂತರಾಷ್ಟ್ರೀಯಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

- Advertisement -
- Advertisement -

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ ಸಮನ್ಸ್‌ಗಳನ್ನು ಅಧಿಕೃತವಾಗಿ ಅದಾನಿ ಅವರಿಗೆ ತಲುಪಿಸಲು ಎರಡು ಬಾರಿ ನಿರಾಕರಿಸಿದೆ ಎಂದು ವರದಿಯಾಗಿದೆ.

ಸಮನ್ಸ್‌ಗಳಲ್ಲಿ ತಾಂತ್ರಿಕ ದೋಷಗಳಿದ್ದವು. ಅಂದರೆ, ಅದರ ಮೇಲೆ ಅಗತ್ಯವಾದ ಅಧಿಕೃತ ಸೀಲ್ ಮತ್ತು ಇಂಕ್ ಸಹಿ ಮುಂತಾದವು ಸರಿಯಾಗಿ ಇರಲಿಲ್ಲ ಎಂದು ಸರ್ಕಾರ ಜಾರಿಕೊಂಡಿದೆ ಎಂದು ವರದಿ ಹೇಳಿದೆ.

ವರದಿಗಳ ಪ್ರಕಾರ, ಕಳೆದ ವರ್ಷ (2025ರಲ್ಲಿ) ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಎಸ್‌ಇಸಿ ಕಳುಹಿಸಿದ ಕವರ್ ಲೆಟರ್‌ನಲ್ಲಿ ಇಂಕ್ ಸಹಿ, ಅಗತ್ಯ ಫಾರ್ಮ್‌ಗಳ ಮೇಲೆ ಅಧಿಕೃತ ಸೀಲ್ ಇಲ್ಲದಿರುವುದನ್ನು ಮತ್ತು ಸಮನ್ಸ್ ತಲುಪಿಸುವ ವಿಧಾನಕ್ಕೆ ಸಂಬಂಧಿಸಿದ ಪ್ರಕ್ರಿಯಾ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಎರಡು ಬಾರಿ ಸಮನ್ಸ್‌ಗಳನ್ನು ಅಧಿಕೃತವಾಗಿ ಅದಾನಿಗೆ ನೀಡಲು ನಿರಾಕರಿಸಿದೆ.

ಎರಡು ಭಾರತ ಸರ್ಕಾರ ಸಮನ್ಸ್ ತಲುಪಿಸಲು ನಿರಾಕರಿಸಿದ ಕಾರಣ ಎಸ್‌ಇಸಿಗೆ ಹೇಗ್ ಕನ್ವೆನ್ಷನ್ ಮೂಲಕ ಸಮನ್ಸ್ ತಲುಪಿಸುವುದು ಕಷ್ಟವಾಗಿದೆ. ಇದರಿಂದಾಗಿ ಅದು ನ್ಯೂಯಾರ್ಕ್‌ನ ಈಸ್ಟರ್ನ್ ಡಿಸ್ಟ್ರಿಕ್ಟ್ ಫೆಡರಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸಾಮಾನ್ಯ ಪ್ರಕ್ರಿಯೆಯನ್ನು ಬಿಟ್ಟು ಬೇರೆ ಮಾರ್ಗದ ಮೂಲಕ (ಇ-ಮೇಲ್ ಮೂಲಕ) ಸಮನ್ಸ್ ತಲುಪಿಸಲು ಅನುಮತಿ ಕೇಳಿದೆ.

ಹೇಗ್ ಕನ್ವೆನ್ಷನ್‌ನಲ್ಲಿ ಸೀಲ್ ಮತ್ತು ಅಥವಾ ಇಂಕ್ ಸಹಿ ಕಡ್ಡಾಯವಲ್ಲ ಎಂದು ಎಸ್‌ಇಸಿ ವಾದಿಸಿದರೂ, 2025ರ ಮೇ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಕಾನೂನು ಮತ್ತು ನ್ಯಾಯ ಸಚಿವಾಲಯವು ಸಮನ್ಸ್ ತಲುಪಿಸಲು ನಿರಾಕರಿಸಿದೆ.

ಡಿಸೆಂಬರ್‌ನಲ್ಲಿ ತಿರಸ್ಕರಿಸುವಾಗ ಕೇಂದ್ರ ಸಚಿವಾಲಯ ಅಮೆರಿಕದ ಕಾನೂನನ್ನೇ ಉಲ್ಲೇಖಿಸಿ, ಈ ಸಮನ್ಸ್‌ಗಳು ಅನುಮತಿಸಲಾದ ವರ್ಗಗಳಲ್ಲಿ ಬರುವುದಿಲ್ಲ ಎಂದಿದೆ. ಅಂದರೆ, ಇದು ಹೇಗ್ ಕನ್ವೆನ್ಷನ್ ಅಡಿಯಲ್ಲಿ ಸಹಾಯ ಮಾಡಬಹುದಾದ ರೀತಿಯ ದಾಖಲೆಯಲ್ಲ ಎಂದು ವಾದಿಸಿತ್ತು.

ಸಚಿವಾಲಯದ ವಾದಕ್ಕೆ ಹೇಗ್ ಕನ್ವೆನ್ಷನ್ ಅಡಿಯಲ್ಲಿ ಯಾವುದೇ ಆಧಾರವಿಲ್ಲ ಎಂದು ಎಸ್‌ಇಸಿ ಹೇಳಿತ್ತು. ಅಂದರೆ, ಅಂತಾರಾಷ್ಟ್ರೀಯ ಸಮನ್ಸ್ ನೀಡುವುದಕ್ಕೆ ಸಂಬಂಧಿಸಿದ ಹೇಗ್ ಕನ್ವೆನ್ಷನ್ ನಿಯಮಗಳು ಇಂತಹ ತಾಂತ್ರಿಕ ಅಗತ್ಯಗಳನ್ನು (ಇಂಕ್ ಸಹಿ ಅಥವಾ ಅಧಿಕೃತ ಸೀಲ್) ಕಡ್ಡಾಯಗೊಳಿಸುವುದಿಲ್ಲ ಎಂದಿತ್ತು. ಆದರೂ, ಭಾರತ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಲ್ಲ ಎನ್ನಲಾಗಿದೆ.

ಭಾರತ ಸರ್ಕಾರದ ಎರಡು ನಿರಾಕರಣೆಯ ಬಳಿಕ ಎಸ್‌ಇಸಿ ನ್ಯೂಯಾರ್ಕ್ ಕೋರ್ಟ್‌ಗೆ ಅರ್ಜಿ ಹಾಕಿ ಇಮೇಲ್ ಮೂಲಕ ಸಮನ್ಸ್ ತಲುಪಿಸಲು ಅನುಮತಿ ಕೇಳಿದೆ. ಈ ಸುದ್ದಿ ಹೊರಬಿದ್ದ ನಂತರ ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿವೆ. ವಿವಿಧ ಕಂಪನಿಗಳ ಷೇರುಗಳು 3.3% ರಿಂದ 14.6% ವರೆಗೆ ಕುಸಿದಿವೆ. ಒಟ್ಟಾರೆಯಾಗಿ ಅದಾನಿ ಗ್ರೂಪ್ ಕಂಪನಿಗಳ ಮಾರ್ಕೆಟ್ ಕ್ಯಾಪ್ ಸುಮಾರು 12.5 ಬಿಲಿಯನ್ ಡಾಲರ್ (ಅಂದಾಜು 1 ಲಕ್ಷ ಕೋಟಿ ರೂ.) ಕಳೆದುಕೊಂಡಿದೆ. ಉದಾಹರಣೆಗೆ : ಅದಾನಿ ಎಂಟರ್‌ಪ್ರೈಸಸ್, ಅದಾನಿ ಎನರ್ಜಿ ಸೊಲ್ಯೂಷನ್ಸ್ ಮುಂತಾದವು ಹೆಚ್ಚು ಇಳಿಕೆ ಕಂಡಿವೆ (10-14% ವರೆಗೆ).

ಎಸ್‌ಇಸಿಯ ಆರೋಪಗಳನ್ನು ಅದಾನಿ ಗ್ರೂಪ್ ತಳ್ಳಿ ಹಾಕಿದೆ. ಅವುಗಳನ್ನು ಆಧಾರರಹಿತ ಎಂದು ಕರೆದಿದೆ. ಎಸ್‌ಇಸಿಯ ಆರೋಪಗಳನ್ನು ಎದುರಿಸಲು ಎಲ್ಲಾ ಸಾಧ್ಯವಾದ ಕಾನೂನು ಮಾರ್ಗಗಳನ್ನು ಬಳಸುವುದಾಗಿ ಹೇಳಿದೆ. ವಿಶೇಷವಾಗಿ ಅದಾನಿ ಗ್ರೀನ್ ಎನರ್ಜಿ ಕಂಪನಿಯು ಸ್ಟಾಕ್ ಎಕ್ಸ್‌ಚೇಂಜ್‌ಗೆ ದಾಖಲೆ ಸಲ್ಲಿಸಿ, ಕಂಪನಿಯು ಈ ಎಸ್‌ಇಸಿ ಪ್ರಕರಣದ ಯಾವುದೇ ಪಕ್ಷವಲ್ಲ, ಇದು ಸಿವಿಲ್ ಪ್ರಕರಣ ಮಾತ್ರ, ಅಂದರೆ ಕ್ರಿಮಿನಲ್ ಅಲ್ಲ ಮತ್ತು ಆರೋಪಿಗಳ ವಿರುದ್ಧ ಲಂಚ ಅಥವಾ ಭ್ರಷ್ಟಾಚಾರದ ಆರೋಪಗಳಿಲ್ಲ ಎಂದು ತಿಳಿಸಿದೆ.

ಈ ಸಮನ್ಸ್‌ಗಳು ಅದಾನಿ ಗ್ರೂಪ್ ವಿರುದ್ದದ ವಂಚನೆ ಮತ್ತು 265 ಮಿಲಿಯನ್ ಡಾಲರ್ (ಸುಮಾರು 2,200 ಕೋಟಿ ರೂ.) ಲಂಚದ ಪ್ರಕರಣಕ್ಕೆ ಸಂಬಂಧಿಸಿದೆ. ವಂಚನೆ ಮತ್ತು ಲಂಚದ ಆರೋಪಗಳನ್ನು ಮಾಡಿ ಎಸ್‌ಇಸಿಯು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಸಿವಿಲ್ ಕೇಸ್ ದಾಖಲಿಸಿದೆ. ಅಮೆರಿಕದ ಕಾನೂನಿನ ಪ್ರಕಾರ, ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ವೈಯಕ್ತಿಕವಾಗಿ ಸಮನ್ಸ್ ತಲುಪಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...