Homeಅಂತರಾಷ್ಟ್ರೀಯಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

- Advertisement -
- Advertisement -

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ ಸಮನ್ಸ್‌ಗಳನ್ನು ಅಧಿಕೃತವಾಗಿ ಅದಾನಿ ಅವರಿಗೆ ತಲುಪಿಸಲು ಎರಡು ಬಾರಿ ನಿರಾಕರಿಸಿದೆ ಎಂದು ವರದಿಯಾಗಿದೆ.

ಸಮನ್ಸ್‌ಗಳಲ್ಲಿ ತಾಂತ್ರಿಕ ದೋಷಗಳಿದ್ದವು. ಅಂದರೆ, ಅದರ ಮೇಲೆ ಅಗತ್ಯವಾದ ಅಧಿಕೃತ ಸೀಲ್ ಮತ್ತು ಇಂಕ್ ಸಹಿ ಮುಂತಾದವು ಸರಿಯಾಗಿ ಇರಲಿಲ್ಲ ಎಂದು ಸರ್ಕಾರ ಜಾರಿಕೊಂಡಿದೆ ಎಂದು ವರದಿ ಹೇಳಿದೆ.

ವರದಿಗಳ ಪ್ರಕಾರ, ಕಳೆದ ವರ್ಷ (2025ರಲ್ಲಿ) ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಎಸ್‌ಇಸಿ ಕಳುಹಿಸಿದ ಕವರ್ ಲೆಟರ್‌ನಲ್ಲಿ ಇಂಕ್ ಸಹಿ, ಅಗತ್ಯ ಫಾರ್ಮ್‌ಗಳ ಮೇಲೆ ಅಧಿಕೃತ ಸೀಲ್ ಇಲ್ಲದಿರುವುದನ್ನು ಮತ್ತು ಸಮನ್ಸ್ ತಲುಪಿಸುವ ವಿಧಾನಕ್ಕೆ ಸಂಬಂಧಿಸಿದ ಪ್ರಕ್ರಿಯಾ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಎರಡು ಬಾರಿ ಸಮನ್ಸ್‌ಗಳನ್ನು ಅಧಿಕೃತವಾಗಿ ಅದಾನಿಗೆ ನೀಡಲು ನಿರಾಕರಿಸಿದೆ.

ಎರಡು ಭಾರತ ಸರ್ಕಾರ ಸಮನ್ಸ್ ತಲುಪಿಸಲು ನಿರಾಕರಿಸಿದ ಕಾರಣ ಎಸ್‌ಇಸಿಗೆ ಹೇಗ್ ಕನ್ವೆನ್ಷನ್ ಮೂಲಕ ಸಮನ್ಸ್ ತಲುಪಿಸುವುದು ಕಷ್ಟವಾಗಿದೆ. ಇದರಿಂದಾಗಿ ಅದು ನ್ಯೂಯಾರ್ಕ್‌ನ ಈಸ್ಟರ್ನ್ ಡಿಸ್ಟ್ರಿಕ್ಟ್ ಫೆಡರಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸಾಮಾನ್ಯ ಪ್ರಕ್ರಿಯೆಯನ್ನು ಬಿಟ್ಟು ಬೇರೆ ಮಾರ್ಗದ ಮೂಲಕ (ಇ-ಮೇಲ್ ಮೂಲಕ) ಸಮನ್ಸ್ ತಲುಪಿಸಲು ಅನುಮತಿ ಕೇಳಿದೆ.

ಹೇಗ್ ಕನ್ವೆನ್ಷನ್‌ನಲ್ಲಿ ಸೀಲ್ ಮತ್ತು ಅಥವಾ ಇಂಕ್ ಸಹಿ ಕಡ್ಡಾಯವಲ್ಲ ಎಂದು ಎಸ್‌ಇಸಿ ವಾದಿಸಿದರೂ, 2025ರ ಮೇ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಕಾನೂನು ಮತ್ತು ನ್ಯಾಯ ಸಚಿವಾಲಯವು ಸಮನ್ಸ್ ತಲುಪಿಸಲು ನಿರಾಕರಿಸಿದೆ.

ಡಿಸೆಂಬರ್‌ನಲ್ಲಿ ತಿರಸ್ಕರಿಸುವಾಗ ಕೇಂದ್ರ ಸಚಿವಾಲಯ ಅಮೆರಿಕದ ಕಾನೂನನ್ನೇ ಉಲ್ಲೇಖಿಸಿ, ಈ ಸಮನ್ಸ್‌ಗಳು ಅನುಮತಿಸಲಾದ ವರ್ಗಗಳಲ್ಲಿ ಬರುವುದಿಲ್ಲ ಎಂದಿದೆ. ಅಂದರೆ, ಇದು ಹೇಗ್ ಕನ್ವೆನ್ಷನ್ ಅಡಿಯಲ್ಲಿ ಸಹಾಯ ಮಾಡಬಹುದಾದ ರೀತಿಯ ದಾಖಲೆಯಲ್ಲ ಎಂದು ವಾದಿಸಿತ್ತು.

ಸಚಿವಾಲಯದ ವಾದಕ್ಕೆ ಹೇಗ್ ಕನ್ವೆನ್ಷನ್ ಅಡಿಯಲ್ಲಿ ಯಾವುದೇ ಆಧಾರವಿಲ್ಲ ಎಂದು ಎಸ್‌ಇಸಿ ಹೇಳಿತ್ತು. ಅಂದರೆ, ಅಂತಾರಾಷ್ಟ್ರೀಯ ಸಮನ್ಸ್ ನೀಡುವುದಕ್ಕೆ ಸಂಬಂಧಿಸಿದ ಹೇಗ್ ಕನ್ವೆನ್ಷನ್ ನಿಯಮಗಳು ಇಂತಹ ತಾಂತ್ರಿಕ ಅಗತ್ಯಗಳನ್ನು (ಇಂಕ್ ಸಹಿ ಅಥವಾ ಅಧಿಕೃತ ಸೀಲ್) ಕಡ್ಡಾಯಗೊಳಿಸುವುದಿಲ್ಲ ಎಂದಿತ್ತು. ಆದರೂ, ಭಾರತ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಲ್ಲ ಎನ್ನಲಾಗಿದೆ.

ಭಾರತ ಸರ್ಕಾರದ ಎರಡು ನಿರಾಕರಣೆಯ ಬಳಿಕ ಎಸ್‌ಇಸಿ ನ್ಯೂಯಾರ್ಕ್ ಕೋರ್ಟ್‌ಗೆ ಅರ್ಜಿ ಹಾಕಿ ಇಮೇಲ್ ಮೂಲಕ ಸಮನ್ಸ್ ತಲುಪಿಸಲು ಅನುಮತಿ ಕೇಳಿದೆ. ಈ ಸುದ್ದಿ ಹೊರಬಿದ್ದ ನಂತರ ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿವೆ. ವಿವಿಧ ಕಂಪನಿಗಳ ಷೇರುಗಳು 3.3% ರಿಂದ 14.6% ವರೆಗೆ ಕುಸಿದಿವೆ. ಒಟ್ಟಾರೆಯಾಗಿ ಅದಾನಿ ಗ್ರೂಪ್ ಕಂಪನಿಗಳ ಮಾರ್ಕೆಟ್ ಕ್ಯಾಪ್ ಸುಮಾರು 12.5 ಬಿಲಿಯನ್ ಡಾಲರ್ (ಅಂದಾಜು 1 ಲಕ್ಷ ಕೋಟಿ ರೂ.) ಕಳೆದುಕೊಂಡಿದೆ. ಉದಾಹರಣೆಗೆ : ಅದಾನಿ ಎಂಟರ್‌ಪ್ರೈಸಸ್, ಅದಾನಿ ಎನರ್ಜಿ ಸೊಲ್ಯೂಷನ್ಸ್ ಮುಂತಾದವು ಹೆಚ್ಚು ಇಳಿಕೆ ಕಂಡಿವೆ (10-14% ವರೆಗೆ).

ಎಸ್‌ಇಸಿಯ ಆರೋಪಗಳನ್ನು ಅದಾನಿ ಗ್ರೂಪ್ ತಳ್ಳಿ ಹಾಕಿದೆ. ಅವುಗಳನ್ನು ಆಧಾರರಹಿತ ಎಂದು ಕರೆದಿದೆ. ಎಸ್‌ಇಸಿಯ ಆರೋಪಗಳನ್ನು ಎದುರಿಸಲು ಎಲ್ಲಾ ಸಾಧ್ಯವಾದ ಕಾನೂನು ಮಾರ್ಗಗಳನ್ನು ಬಳಸುವುದಾಗಿ ಹೇಳಿದೆ. ವಿಶೇಷವಾಗಿ ಅದಾನಿ ಗ್ರೀನ್ ಎನರ್ಜಿ ಕಂಪನಿಯು ಸ್ಟಾಕ್ ಎಕ್ಸ್‌ಚೇಂಜ್‌ಗೆ ದಾಖಲೆ ಸಲ್ಲಿಸಿ, ಕಂಪನಿಯು ಈ ಎಸ್‌ಇಸಿ ಪ್ರಕರಣದ ಯಾವುದೇ ಪಕ್ಷವಲ್ಲ, ಇದು ಸಿವಿಲ್ ಪ್ರಕರಣ ಮಾತ್ರ, ಅಂದರೆ ಕ್ರಿಮಿನಲ್ ಅಲ್ಲ ಮತ್ತು ಆರೋಪಿಗಳ ವಿರುದ್ಧ ಲಂಚ ಅಥವಾ ಭ್ರಷ್ಟಾಚಾರದ ಆರೋಪಗಳಿಲ್ಲ ಎಂದು ತಿಳಿಸಿದೆ.

ಈ ಸಮನ್ಸ್‌ಗಳು ಅದಾನಿ ಗ್ರೂಪ್ ವಿರುದ್ದದ ವಂಚನೆ ಮತ್ತು 265 ಮಿಲಿಯನ್ ಡಾಲರ್ (ಸುಮಾರು 2,200 ಕೋಟಿ ರೂ.) ಲಂಚದ ಪ್ರಕರಣಕ್ಕೆ ಸಂಬಂಧಿಸಿದೆ. ವಂಚನೆ ಮತ್ತು ಲಂಚದ ಆರೋಪಗಳನ್ನು ಮಾಡಿ ಎಸ್‌ಇಸಿಯು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಸಿವಿಲ್ ಕೇಸ್ ದಾಖಲಿಸಿದೆ. ಅಮೆರಿಕದ ಕಾನೂನಿನ ಪ್ರಕಾರ, ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ವೈಯಕ್ತಿಕವಾಗಿ ಸಮನ್ಸ್ ತಲುಪಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...