Homeರಾಜಕೀಯಲಂಚ ಪ್ರಕರಣ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಲಂಚ ಪ್ರಕರಣ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆ ವೇಳೆ ನಡೆದ ‘ಮಂಜೇಶ್ವರ ಚುನಾವಣಾ ಲಂಚ ಪ್ರಕರಣ’ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್‌ ವಿರುದ್ಧ ಕೇರಳ ಪೊಲೀಸರ ಕ್ರೈಂ ಬ್ರಾಂಚ್ ವಿಭಾಗವು ಆರೋಪಪಟ್ಟಿ ಸಲ್ಲಿಸಿದೆ. ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಕಾಸರಗೋಡು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಪ್ರಕರಣದಲ್ಲಿ ಆರು ಮಂದಿ ಆರೋಪಿಗಳಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ಸುರೇಂದ್ರನ್ ಅವರು 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯಲು ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಬೆದರಿಸಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸುರೇಂದ್ರನ್ ವಿರುದ್ಧ ಜಾಮೀನು ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರೈಂ ಬ್ರಾಂಚ್ ತನ್ನ ಚಾರ್ಜ್‌ಶೀಟ್‌ನಲ್ಲಿ ಸಿಪಿಐ(ಎಂ) ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿಯ ಸುರೇಂದ್ರನ್‌ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದೆ. ಆದರೆ ಬಿಜೆಪಿ ನಾಯಕರು ಪ್ರಕರಣವನ್ನು ಸುಳ್ಳು ಎಂದು ಹೇಳಿದ್ದು ಸುರೇಂದ್ರನ್ ಅವರನ್ನು ಬೆಂಬಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ಹಿರಿಯ ನಾಯಕ, ಒಕ್ಕೂಟ ಸರ್ಕಾರದ ಸಚಿವ ವಿ. ಮುರಳೀಧರನ್, ಸಿಪಿಐ(ಎಂ) ಮುಖಂಡರೊಬ್ಬರು ಡ್ರಗ್ ಪ್ರಕರಣದಲ್ಲಿ ಸಿಕ್ಕಿಬಿದ್ದ ದಿನವೇ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕ್ರೈಂ ಬ್ರಾಂಚ್‌ ಅನ್ನು ಬಳಸಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷರ ಬೇಟೆಯಾಡುವ ರಾಜ್ಯ ಸರ್ಕಾರದ ಕ್ರಮವನ್ನು ಕಾನೂನು ಮತ್ತು ರಾಜಕೀಯವಾಗಿ ಎದುರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಂಜೇಶ್ವರಂ ವಿಧಾನಸಭಾ ಕ್ಷೇತ್ರಕ್ಕೆ ತನ್ನ ನಾಮಪತ್ರವನ್ನು ಹಿಂಪಡೆಯಲು ಇನ್ನೊಬ್ಬ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದು ಮತ್ತು ಲಂಚ ನೀಡಿದ ಆರೋಪದ ಮೇಲೆ ಕೇರಳದ ಪೊಲೀಸರು 2021ರ ಜೂನ್ ತಿಂಗಳಲ್ಲಿ ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಂಜೇಶ್ವರಂನಲ್ಲಿ ಸುರೇಂದ್ರನ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿಪಿಐ(ಎಂ) ಅಭ್ಯರ್ಥಿ ವಿ.ವಿ. ರಮೇಶನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದಂತೆ ಪ್ರಕರಣ ದಾಖಲಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 (ಬಿ) ಮತ್ತು (ಇ) (ಲಂಚ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನಂತರ ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯಲು ಬಿಜೆಪಿಯವರು ಆರಂಭದಲ್ಲಿ ತಮಗೆ ಬೆದರಿಕೆ ಹಾಕಿದ್ದರು ಮತ್ತು ನಂತರ 2.5 ಲಕ್ಷ ಲಂಚ ನೀಡಿದ್ದರು ಎಂದು ಬಿಎಸ್‌ಪಿ ಅಭ್ಯರ್ಥಿ ಸುಂದರ ಆರೋಪಿಸಿದ್ದರು. ಯುವಮೋರ್ಚಾ ಮುಖಂಡ ಮತ್ತು ಸುರೇಂದ್ರನ್ ಅವರ ಆಪ್ತ ಸಹಾಯಕ ಸುನೀಲ್ ನಾಯ್ಕ್ ಅವರು ಹಣ ಮತ್ತು ಸ್ಮಾರ್ಟ್‌ಫೋನ್ ಅನ್ನು ತನಗೆ ಹಸ್ತಾಂತರಿಸಿದ್ದಾರೆ ಎಂದು ಸುಂದರ ಹೇಳಿಕೊಂಡಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ನಿರಾಕರಿಸಿತ್ತು.

ಯಕ್ಷಗಾನ ಕಲಾವಿದರಾದ ಸುಂದರ ಅವರು 2016 ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಇದರ ನಂತರ ಅವರು 2021 ರಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿ, ಅದನ್ನು ಹಿಂಪಡೆದಿದ್ದರು.

ಅದಾಗ್ಯೂ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಅವರು ಮಂಜೇಶ್ವರಂನಿಂದ ಚುನಾವಣೆಯಲ್ಲಿ ಸೋತಿದ್ದು, ಮುಸ್ಲಿಂ ಲೀಗ್‌ ಅಭ್ಯರ್ಥಿ ಎಕೆಎಂ ಅಶ್ರಫ್ 65,758 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಚುನಾವಣೆಯಲ್ಲಿ ಸುರೇಂದ್ರನ್ 65,013 ಮತಗಳನ್ನು ಪಡೆದಿದ್ದರು ಹಾಗೂ ಸಿಪಿಐ(ಎಂ)ನ ರಮೇಶ ಅವರು 40,639 ಮತಗಳನ್ನು ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...