Homeರಾಜಕೀಯಲಂಚ ಪ್ರಕರಣ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಲಂಚ ಪ್ರಕರಣ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆ ವೇಳೆ ನಡೆದ ‘ಮಂಜೇಶ್ವರ ಚುನಾವಣಾ ಲಂಚ ಪ್ರಕರಣ’ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್‌ ವಿರುದ್ಧ ಕೇರಳ ಪೊಲೀಸರ ಕ್ರೈಂ ಬ್ರಾಂಚ್ ವಿಭಾಗವು ಆರೋಪಪಟ್ಟಿ ಸಲ್ಲಿಸಿದೆ. ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಕಾಸರಗೋಡು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಪ್ರಕರಣದಲ್ಲಿ ಆರು ಮಂದಿ ಆರೋಪಿಗಳಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ಸುರೇಂದ್ರನ್ ಅವರು 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯಲು ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಬೆದರಿಸಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸುರೇಂದ್ರನ್ ವಿರುದ್ಧ ಜಾಮೀನು ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರೈಂ ಬ್ರಾಂಚ್ ತನ್ನ ಚಾರ್ಜ್‌ಶೀಟ್‌ನಲ್ಲಿ ಸಿಪಿಐ(ಎಂ) ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿಯ ಸುರೇಂದ್ರನ್‌ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದೆ. ಆದರೆ ಬಿಜೆಪಿ ನಾಯಕರು ಪ್ರಕರಣವನ್ನು ಸುಳ್ಳು ಎಂದು ಹೇಳಿದ್ದು ಸುರೇಂದ್ರನ್ ಅವರನ್ನು ಬೆಂಬಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ಹಿರಿಯ ನಾಯಕ, ಒಕ್ಕೂಟ ಸರ್ಕಾರದ ಸಚಿವ ವಿ. ಮುರಳೀಧರನ್, ಸಿಪಿಐ(ಎಂ) ಮುಖಂಡರೊಬ್ಬರು ಡ್ರಗ್ ಪ್ರಕರಣದಲ್ಲಿ ಸಿಕ್ಕಿಬಿದ್ದ ದಿನವೇ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕ್ರೈಂ ಬ್ರಾಂಚ್‌ ಅನ್ನು ಬಳಸಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷರ ಬೇಟೆಯಾಡುವ ರಾಜ್ಯ ಸರ್ಕಾರದ ಕ್ರಮವನ್ನು ಕಾನೂನು ಮತ್ತು ರಾಜಕೀಯವಾಗಿ ಎದುರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಂಜೇಶ್ವರಂ ವಿಧಾನಸಭಾ ಕ್ಷೇತ್ರಕ್ಕೆ ತನ್ನ ನಾಮಪತ್ರವನ್ನು ಹಿಂಪಡೆಯಲು ಇನ್ನೊಬ್ಬ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದು ಮತ್ತು ಲಂಚ ನೀಡಿದ ಆರೋಪದ ಮೇಲೆ ಕೇರಳದ ಪೊಲೀಸರು 2021ರ ಜೂನ್ ತಿಂಗಳಲ್ಲಿ ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಂಜೇಶ್ವರಂನಲ್ಲಿ ಸುರೇಂದ್ರನ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿಪಿಐ(ಎಂ) ಅಭ್ಯರ್ಥಿ ವಿ.ವಿ. ರಮೇಶನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದಂತೆ ಪ್ರಕರಣ ದಾಖಲಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 (ಬಿ) ಮತ್ತು (ಇ) (ಲಂಚ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನಂತರ ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯಲು ಬಿಜೆಪಿಯವರು ಆರಂಭದಲ್ಲಿ ತಮಗೆ ಬೆದರಿಕೆ ಹಾಕಿದ್ದರು ಮತ್ತು ನಂತರ 2.5 ಲಕ್ಷ ಲಂಚ ನೀಡಿದ್ದರು ಎಂದು ಬಿಎಸ್‌ಪಿ ಅಭ್ಯರ್ಥಿ ಸುಂದರ ಆರೋಪಿಸಿದ್ದರು. ಯುವಮೋರ್ಚಾ ಮುಖಂಡ ಮತ್ತು ಸುರೇಂದ್ರನ್ ಅವರ ಆಪ್ತ ಸಹಾಯಕ ಸುನೀಲ್ ನಾಯ್ಕ್ ಅವರು ಹಣ ಮತ್ತು ಸ್ಮಾರ್ಟ್‌ಫೋನ್ ಅನ್ನು ತನಗೆ ಹಸ್ತಾಂತರಿಸಿದ್ದಾರೆ ಎಂದು ಸುಂದರ ಹೇಳಿಕೊಂಡಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ನಿರಾಕರಿಸಿತ್ತು.

ಯಕ್ಷಗಾನ ಕಲಾವಿದರಾದ ಸುಂದರ ಅವರು 2016 ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಇದರ ನಂತರ ಅವರು 2021 ರಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿ, ಅದನ್ನು ಹಿಂಪಡೆದಿದ್ದರು.

ಅದಾಗ್ಯೂ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಅವರು ಮಂಜೇಶ್ವರಂನಿಂದ ಚುನಾವಣೆಯಲ್ಲಿ ಸೋತಿದ್ದು, ಮುಸ್ಲಿಂ ಲೀಗ್‌ ಅಭ್ಯರ್ಥಿ ಎಕೆಎಂ ಅಶ್ರಫ್ 65,758 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಚುನಾವಣೆಯಲ್ಲಿ ಸುರೇಂದ್ರನ್ 65,013 ಮತಗಳನ್ನು ಪಡೆದಿದ್ದರು ಹಾಗೂ ಸಿಪಿಐ(ಎಂ)ನ ರಮೇಶ ಅವರು 40,639 ಮತಗಳನ್ನು ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...