Homeಮುಖಪುಟಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

ಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

- Advertisement -
- Advertisement -

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‍ ವಿರುದ್ಧ ಪೊಲೀಸರು ನ್ಯಾಯಾಲಯದ ನಿರ್ದೇಶನದಂತೆ ಎಫ್‍ಐಆರ್ ದಾಖಲಿಸಿದ್ದಾರೆ.

ಮಂಜೇಶ್ವರಂನಲ್ಲಿ ಸ್ಪರ್ಧಿಸಿದ್ದ ಬಿಎಸ್‍ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಕಣದಿಂದ ಹಿಂದೆ ಸರಿಯಲು ಸುರೇಂದ್ರನ್‍ 2.5 ಲಕ್ಷ ರೂ. ಲಂಚ ನೀಡಿದ ಆರೋಪ ಎದುರಿಸುತ್ತಿದ್ದಾರೆ. ನಾಮಪತ್ರ ಹಿತೆಗೆದುಕೊಂಡು ಬಿಜೆಪಿ ಸೇರಿದ್ದ ಸುಂದರ ಅವರೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಎಕೆಎಂ ಅಶ್ರಫ್ ಈ ಕ್ಷೇತ್ರದಲ್ಲಿ 2 ಸಾವಿರ ಮತಗಳಿಂದ ಗೆದ್ದಿದ್ದಾರೆ.

ಫಲಿತಾಂಶದಲ್ಲಿ ಮೂರನೇ ಸ್ಥಾನದಲ್ಲಿದ್ದ ಸಿಪಿಎಂ ಮುಖಂಡ ವಿ.ವಿ.ರಮೇಶನ್‌ರ ಮನವಿಗೆ ಸ್ಥಳೀಯ ನ್ಯಾಯಾಲಯ ಸ್ಪಂದಿಸಿದ್ದು, ‘ಚುನಾವಣೆಗಳನ್ನು ಹಾಳುಮಾಡುವ ಉದ್ದೇಶದಿಂದ ಲಂಚ’ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು, ಕೆ ಸುಂದರ ಅವರ ಹೇಳಿಕೆಯನ್ನು ದಾಖಲಿಸಲಾಗಿದ್ದು, ಹಣ ಹೇಗೆ ವಿನಿಮಯವಾಯಿತು ಮತ್ತು ಯಾರು ಅದನ್ನು ನೀಡಿದರು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಕೆ. ಸುರೇಂದ್ರನ್ ವಿರುದ್ಧದ ಈ ಆರೋಪಗಳು ಇತ್ತೀಚಿನವು. ಅವರು ಮತ್ತು ಅವರ ಪಕ್ಷವು ಕೆಲವು ಮುಜುಗರದ ಆರೋಪಗಳನ್ನು ಎದುರಿಸುತ್ತಿದೆ. ಇದರಲ್ಲಿ ಒಂದು, ಜನತಿಪತ್ಯ ರಾಷ್ಟ್ರೀಯ ಪಕ್ಷ (ಜೆಆರ್‌ಪಿ) ಮುಖಂಡ ಪರಿಸಿಥಾ ಅಝಿಕೊಡೆ ಕೂಡ ಇಂಥದ್ದೇ ಆರೋಪ ಮಾಡಿದ್ದಾರೆ. ಜೆಆರ್‍ಪಿ ನಾಯಕ ಸಿ.ಕೆ. ಜಾನು ಅವರಿಗೆ ಎನ್‍ಡಿಎ ಸೇರಲು ಕೆ. ಸುರೇಂದ್ರನ್‍  10 ಲಕ್ಷ ರೂ. ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸುರೇಂದ್ರನ್ ಈ ಆರೋಪವನ್ನು ನಿರಾಕರಿಸಿದ್ದಾರೆ.

3.5 ಕೋಟಿ ದರೋಡೆ ಪ್ರಕರಣ

ಏಪ್ರಿಲ್‍ 6ರ ಚುನಾವಣೆಗೂ ಮೂರು ದಿನ ಮುನ್ನ ಕೇರಳ ಹೆದ್ದಾರಿಯಲ್ಲಿ 3.5 ಕೋಟಿ ರೂ.ಗಳ ದರೋಡೆ ನಡೆದಿದೆ ಮತ್ತು ಇದು ಹವಾಲಾ ಹಣ ಎಂಬ ಆರೋಪವಿದೆ. ಇದರಲ್ಲೂ ಕೆ.ಸುರೇಂದ್ರನ್‍ ಹೆಸರು ಕೇಳಿ ಬಂದಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

“ಕದ್ದ ಹವಾಲಾ ಹಣದ ಬಗ್ಗೆ ಕನಿಷ್ಠ ಇಬ್ಬರು ಬಿಜೆಪಿ ನಾಯಕರನ್ನು ಪ್ರಶ್ನಿಸಲಾಗಿದೆ. ಹಣದ ಮೂಲ ಮತ್ತು ಅದನ್ನು ಹಸ್ತಾಂತರಿಸಿದ ವಿವಿಧ ಜನರನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಹೆಚ್ಚಿನ ಬಿಜೆಪಿ ನಾಯಕರನ್ನು ಪ್ರಶ್ನಿಸುವ ಸಾಧ್ಯತೆಯಿದೆ. ನಾವು ಸತ್ಯಗಳನ್ನು ಕಂಡುಹಿಡಿಯುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎರ್ನಾಕುಲಂ ವಲಯದ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಎಲ್ ಪದ್ಮಕುಮಾರ್ ಮತ್ತು ತ್ರಿಶೂರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಕೆ.ಕೆ. ಅನೀಶ್ ಕುಮಾರ್ ಅವರನ್ನು ಪ್ರಶ್ನಿಸಲಾಗಿದೆ. ಇವರಿಬ್ಬರು ಹಣ ಸಾಗಿಸುತ್ತಿದ್ದರು ಎಂಬ ಆರೋಪವಿದೆ. ಇವರಿಬ್ಬರನ್ನೂ ಈಗಾಗಲೇ ಪ್ರಶ್ನಿಸಲಾಗಿದೆ. ಹಣವಿದ್ದ ಇವರ ಕಾರನ್ನು ಅಡ್ಡಗಟ್ಟಿ 3.5 ಕೋಟಿ ರೂ ಹವಾಲಾ ಹಣವನ್ನು ದರೋಡೆ ಮಾಡಲಾದ ಆರೋಪವಿದ್ದು, ಇದರಲ್ಲೂ ಕೆ. ಸುರೇಂದ್ರನ್‍ ಅವರ ಕೈವಾಡ ಇದೆ ಎನ್ನಲಾಗಿದೆ.

ಈ ಹಣವು ಬಿಜೆಪಿಗೆ ಸಂಬಂಧಿಸಿದ ಹವಾಲಾ ನಗದು ಆಗಿರಬಹುದು ಎಂದು ಇದುವರೆಗೆ ನಡೆದ ತನಿಖೆಯಿಂದ ತಿಳಿದುಬಂದಿದೆ.

ಈಗ, ಈ ಪ್ರಕರಣವನ್ನು ತನಿಖೆ ಮಾಡುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುರೇಂದ್ರನ್ ಮತ್ತು ಅವನ ಮಗ ಹರಿ ಕೃಷ್ಣನ್ ಅವರನ್ನು ಪ್ರಶ್ನಿಸಲಿದೆ ಎಂದು ತಿಳಿದುಬಂದಿದೆ. ಕರೆ ವಿವರ ದಾಖಲೆಗಳನ್ನು ಆಧರಿಸಿ ಕೆ.ಸುರೇಂದ್ರನ್‍ ಅವರ ಮೇಲೆ ಶಂಕೆ ಶುರುವಾಗಿದೆ.

ಈ ಪ್ರಕರಣದಲ್ಲಿ ಸುರೇಂದ್ರನ್ ಅವರ ಚಾಲಕ ಮತ್ತು ಕಾರ್ಯದರ್ಶಿಯನ್ನು ಎಸ್ಐಟಿ ಈಗಾಗಲೇ ಪ್ರಶ್ನಿಸಿದೆ. ಆರೋಪಗಳನ್ನು ಪರಿಶೀಲಿಸಲು ಬಿಜೆಪಿ ಎರಡು ಸಮಿತಿಗಳನ್ನು ರಚಿಸಿದೆ.

ಚುನಾವಣಾ ನಿಧಿಯೂ ದುರ್ಬಳಕೆ

ಇದರ ಜೊತೆಗೆ ಬಿಜೆಪಿ ಪಕ್ಷವು ನೀಡಿದ ಚುನಾವಣಾ ನಿಧಿಯನ್ನೂ ಕೆ, ಸುರೇಂದ್ರನ್‍ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಕ್ಷದ ಹಲವರು ಆರೋಪಿಸಿದ್ದಾರೆ.

ಈ  ಎಲ್ಲ ಆರೋಪಗಳು ರಾಜ್ಯ ಬಿಜೆಪಿಯನ್ನು ಚುನಾವಣೆಯಲ್ಲಿ ಸೋತ ಕೆಲವೇ ವಾರಗಳ ನಂತರ ಬಿಕ್ಕಟ್ಟಿಗೆ ಸಿಲುಕಿಸಿವೆ. ಈ ಸಲ ಬಿಜೆಪಿ ಕೇರಳದಲ್ಲಿ ಇದ್ದ ಏಕೈಕ ಸ್ಥಾನವನ್ನೂ ಕಳೆದುಕೊಂಡಿದೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...