Homeಮುಖಪುಟಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

ಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

- Advertisement -
- Advertisement -

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‍ ವಿರುದ್ಧ ಪೊಲೀಸರು ನ್ಯಾಯಾಲಯದ ನಿರ್ದೇಶನದಂತೆ ಎಫ್‍ಐಆರ್ ದಾಖಲಿಸಿದ್ದಾರೆ.

ಮಂಜೇಶ್ವರಂನಲ್ಲಿ ಸ್ಪರ್ಧಿಸಿದ್ದ ಬಿಎಸ್‍ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಕಣದಿಂದ ಹಿಂದೆ ಸರಿಯಲು ಸುರೇಂದ್ರನ್‍ 2.5 ಲಕ್ಷ ರೂ. ಲಂಚ ನೀಡಿದ ಆರೋಪ ಎದುರಿಸುತ್ತಿದ್ದಾರೆ. ನಾಮಪತ್ರ ಹಿತೆಗೆದುಕೊಂಡು ಬಿಜೆಪಿ ಸೇರಿದ್ದ ಸುಂದರ ಅವರೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಎಕೆಎಂ ಅಶ್ರಫ್ ಈ ಕ್ಷೇತ್ರದಲ್ಲಿ 2 ಸಾವಿರ ಮತಗಳಿಂದ ಗೆದ್ದಿದ್ದಾರೆ.

ಫಲಿತಾಂಶದಲ್ಲಿ ಮೂರನೇ ಸ್ಥಾನದಲ್ಲಿದ್ದ ಸಿಪಿಎಂ ಮುಖಂಡ ವಿ.ವಿ.ರಮೇಶನ್‌ರ ಮನವಿಗೆ ಸ್ಥಳೀಯ ನ್ಯಾಯಾಲಯ ಸ್ಪಂದಿಸಿದ್ದು, ‘ಚುನಾವಣೆಗಳನ್ನು ಹಾಳುಮಾಡುವ ಉದ್ದೇಶದಿಂದ ಲಂಚ’ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು, ಕೆ ಸುಂದರ ಅವರ ಹೇಳಿಕೆಯನ್ನು ದಾಖಲಿಸಲಾಗಿದ್ದು, ಹಣ ಹೇಗೆ ವಿನಿಮಯವಾಯಿತು ಮತ್ತು ಯಾರು ಅದನ್ನು ನೀಡಿದರು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಕೆ. ಸುರೇಂದ್ರನ್ ವಿರುದ್ಧದ ಈ ಆರೋಪಗಳು ಇತ್ತೀಚಿನವು. ಅವರು ಮತ್ತು ಅವರ ಪಕ್ಷವು ಕೆಲವು ಮುಜುಗರದ ಆರೋಪಗಳನ್ನು ಎದುರಿಸುತ್ತಿದೆ. ಇದರಲ್ಲಿ ಒಂದು, ಜನತಿಪತ್ಯ ರಾಷ್ಟ್ರೀಯ ಪಕ್ಷ (ಜೆಆರ್‌ಪಿ) ಮುಖಂಡ ಪರಿಸಿಥಾ ಅಝಿಕೊಡೆ ಕೂಡ ಇಂಥದ್ದೇ ಆರೋಪ ಮಾಡಿದ್ದಾರೆ. ಜೆಆರ್‍ಪಿ ನಾಯಕ ಸಿ.ಕೆ. ಜಾನು ಅವರಿಗೆ ಎನ್‍ಡಿಎ ಸೇರಲು ಕೆ. ಸುರೇಂದ್ರನ್‍  10 ಲಕ್ಷ ರೂ. ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸುರೇಂದ್ರನ್ ಈ ಆರೋಪವನ್ನು ನಿರಾಕರಿಸಿದ್ದಾರೆ.

3.5 ಕೋಟಿ ದರೋಡೆ ಪ್ರಕರಣ

ಏಪ್ರಿಲ್‍ 6ರ ಚುನಾವಣೆಗೂ ಮೂರು ದಿನ ಮುನ್ನ ಕೇರಳ ಹೆದ್ದಾರಿಯಲ್ಲಿ 3.5 ಕೋಟಿ ರೂ.ಗಳ ದರೋಡೆ ನಡೆದಿದೆ ಮತ್ತು ಇದು ಹವಾಲಾ ಹಣ ಎಂಬ ಆರೋಪವಿದೆ. ಇದರಲ್ಲೂ ಕೆ.ಸುರೇಂದ್ರನ್‍ ಹೆಸರು ಕೇಳಿ ಬಂದಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

“ಕದ್ದ ಹವಾಲಾ ಹಣದ ಬಗ್ಗೆ ಕನಿಷ್ಠ ಇಬ್ಬರು ಬಿಜೆಪಿ ನಾಯಕರನ್ನು ಪ್ರಶ್ನಿಸಲಾಗಿದೆ. ಹಣದ ಮೂಲ ಮತ್ತು ಅದನ್ನು ಹಸ್ತಾಂತರಿಸಿದ ವಿವಿಧ ಜನರನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಹೆಚ್ಚಿನ ಬಿಜೆಪಿ ನಾಯಕರನ್ನು ಪ್ರಶ್ನಿಸುವ ಸಾಧ್ಯತೆಯಿದೆ. ನಾವು ಸತ್ಯಗಳನ್ನು ಕಂಡುಹಿಡಿಯುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎರ್ನಾಕುಲಂ ವಲಯದ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಎಲ್ ಪದ್ಮಕುಮಾರ್ ಮತ್ತು ತ್ರಿಶೂರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಕೆ.ಕೆ. ಅನೀಶ್ ಕುಮಾರ್ ಅವರನ್ನು ಪ್ರಶ್ನಿಸಲಾಗಿದೆ. ಇವರಿಬ್ಬರು ಹಣ ಸಾಗಿಸುತ್ತಿದ್ದರು ಎಂಬ ಆರೋಪವಿದೆ. ಇವರಿಬ್ಬರನ್ನೂ ಈಗಾಗಲೇ ಪ್ರಶ್ನಿಸಲಾಗಿದೆ. ಹಣವಿದ್ದ ಇವರ ಕಾರನ್ನು ಅಡ್ಡಗಟ್ಟಿ 3.5 ಕೋಟಿ ರೂ ಹವಾಲಾ ಹಣವನ್ನು ದರೋಡೆ ಮಾಡಲಾದ ಆರೋಪವಿದ್ದು, ಇದರಲ್ಲೂ ಕೆ. ಸುರೇಂದ್ರನ್‍ ಅವರ ಕೈವಾಡ ಇದೆ ಎನ್ನಲಾಗಿದೆ.

ಈ ಹಣವು ಬಿಜೆಪಿಗೆ ಸಂಬಂಧಿಸಿದ ಹವಾಲಾ ನಗದು ಆಗಿರಬಹುದು ಎಂದು ಇದುವರೆಗೆ ನಡೆದ ತನಿಖೆಯಿಂದ ತಿಳಿದುಬಂದಿದೆ.

ಈಗ, ಈ ಪ್ರಕರಣವನ್ನು ತನಿಖೆ ಮಾಡುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುರೇಂದ್ರನ್ ಮತ್ತು ಅವನ ಮಗ ಹರಿ ಕೃಷ್ಣನ್ ಅವರನ್ನು ಪ್ರಶ್ನಿಸಲಿದೆ ಎಂದು ತಿಳಿದುಬಂದಿದೆ. ಕರೆ ವಿವರ ದಾಖಲೆಗಳನ್ನು ಆಧರಿಸಿ ಕೆ.ಸುರೇಂದ್ರನ್‍ ಅವರ ಮೇಲೆ ಶಂಕೆ ಶುರುವಾಗಿದೆ.

ಈ ಪ್ರಕರಣದಲ್ಲಿ ಸುರೇಂದ್ರನ್ ಅವರ ಚಾಲಕ ಮತ್ತು ಕಾರ್ಯದರ್ಶಿಯನ್ನು ಎಸ್ಐಟಿ ಈಗಾಗಲೇ ಪ್ರಶ್ನಿಸಿದೆ. ಆರೋಪಗಳನ್ನು ಪರಿಶೀಲಿಸಲು ಬಿಜೆಪಿ ಎರಡು ಸಮಿತಿಗಳನ್ನು ರಚಿಸಿದೆ.

ಚುನಾವಣಾ ನಿಧಿಯೂ ದುರ್ಬಳಕೆ

ಇದರ ಜೊತೆಗೆ ಬಿಜೆಪಿ ಪಕ್ಷವು ನೀಡಿದ ಚುನಾವಣಾ ನಿಧಿಯನ್ನೂ ಕೆ, ಸುರೇಂದ್ರನ್‍ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಕ್ಷದ ಹಲವರು ಆರೋಪಿಸಿದ್ದಾರೆ.

ಈ  ಎಲ್ಲ ಆರೋಪಗಳು ರಾಜ್ಯ ಬಿಜೆಪಿಯನ್ನು ಚುನಾವಣೆಯಲ್ಲಿ ಸೋತ ಕೆಲವೇ ವಾರಗಳ ನಂತರ ಬಿಕ್ಕಟ್ಟಿಗೆ ಸಿಲುಕಿಸಿವೆ. ಈ ಸಲ ಬಿಜೆಪಿ ಕೇರಳದಲ್ಲಿ ಇದ್ದ ಏಕೈಕ ಸ್ಥಾನವನ್ನೂ ಕಳೆದುಕೊಂಡಿದೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...