Homeಮುಖಪುಟಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

ಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

- Advertisement -
- Advertisement -

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‍ ವಿರುದ್ಧ ಪೊಲೀಸರು ನ್ಯಾಯಾಲಯದ ನಿರ್ದೇಶನದಂತೆ ಎಫ್‍ಐಆರ್ ದಾಖಲಿಸಿದ್ದಾರೆ.

ಮಂಜೇಶ್ವರಂನಲ್ಲಿ ಸ್ಪರ್ಧಿಸಿದ್ದ ಬಿಎಸ್‍ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಕಣದಿಂದ ಹಿಂದೆ ಸರಿಯಲು ಸುರೇಂದ್ರನ್‍ 2.5 ಲಕ್ಷ ರೂ. ಲಂಚ ನೀಡಿದ ಆರೋಪ ಎದುರಿಸುತ್ತಿದ್ದಾರೆ. ನಾಮಪತ್ರ ಹಿತೆಗೆದುಕೊಂಡು ಬಿಜೆಪಿ ಸೇರಿದ್ದ ಸುಂದರ ಅವರೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಎಕೆಎಂ ಅಶ್ರಫ್ ಈ ಕ್ಷೇತ್ರದಲ್ಲಿ 2 ಸಾವಿರ ಮತಗಳಿಂದ ಗೆದ್ದಿದ್ದಾರೆ.

ಫಲಿತಾಂಶದಲ್ಲಿ ಮೂರನೇ ಸ್ಥಾನದಲ್ಲಿದ್ದ ಸಿಪಿಎಂ ಮುಖಂಡ ವಿ.ವಿ.ರಮೇಶನ್‌ರ ಮನವಿಗೆ ಸ್ಥಳೀಯ ನ್ಯಾಯಾಲಯ ಸ್ಪಂದಿಸಿದ್ದು, ‘ಚುನಾವಣೆಗಳನ್ನು ಹಾಳುಮಾಡುವ ಉದ್ದೇಶದಿಂದ ಲಂಚ’ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು, ಕೆ ಸುಂದರ ಅವರ ಹೇಳಿಕೆಯನ್ನು ದಾಖಲಿಸಲಾಗಿದ್ದು, ಹಣ ಹೇಗೆ ವಿನಿಮಯವಾಯಿತು ಮತ್ತು ಯಾರು ಅದನ್ನು ನೀಡಿದರು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಕೆ. ಸುರೇಂದ್ರನ್ ವಿರುದ್ಧದ ಈ ಆರೋಪಗಳು ಇತ್ತೀಚಿನವು. ಅವರು ಮತ್ತು ಅವರ ಪಕ್ಷವು ಕೆಲವು ಮುಜುಗರದ ಆರೋಪಗಳನ್ನು ಎದುರಿಸುತ್ತಿದೆ. ಇದರಲ್ಲಿ ಒಂದು, ಜನತಿಪತ್ಯ ರಾಷ್ಟ್ರೀಯ ಪಕ್ಷ (ಜೆಆರ್‌ಪಿ) ಮುಖಂಡ ಪರಿಸಿಥಾ ಅಝಿಕೊಡೆ ಕೂಡ ಇಂಥದ್ದೇ ಆರೋಪ ಮಾಡಿದ್ದಾರೆ. ಜೆಆರ್‍ಪಿ ನಾಯಕ ಸಿ.ಕೆ. ಜಾನು ಅವರಿಗೆ ಎನ್‍ಡಿಎ ಸೇರಲು ಕೆ. ಸುರೇಂದ್ರನ್‍  10 ಲಕ್ಷ ರೂ. ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸುರೇಂದ್ರನ್ ಈ ಆರೋಪವನ್ನು ನಿರಾಕರಿಸಿದ್ದಾರೆ.

3.5 ಕೋಟಿ ದರೋಡೆ ಪ್ರಕರಣ

ಏಪ್ರಿಲ್‍ 6ರ ಚುನಾವಣೆಗೂ ಮೂರು ದಿನ ಮುನ್ನ ಕೇರಳ ಹೆದ್ದಾರಿಯಲ್ಲಿ 3.5 ಕೋಟಿ ರೂ.ಗಳ ದರೋಡೆ ನಡೆದಿದೆ ಮತ್ತು ಇದು ಹವಾಲಾ ಹಣ ಎಂಬ ಆರೋಪವಿದೆ. ಇದರಲ್ಲೂ ಕೆ.ಸುರೇಂದ್ರನ್‍ ಹೆಸರು ಕೇಳಿ ಬಂದಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

“ಕದ್ದ ಹವಾಲಾ ಹಣದ ಬಗ್ಗೆ ಕನಿಷ್ಠ ಇಬ್ಬರು ಬಿಜೆಪಿ ನಾಯಕರನ್ನು ಪ್ರಶ್ನಿಸಲಾಗಿದೆ. ಹಣದ ಮೂಲ ಮತ್ತು ಅದನ್ನು ಹಸ್ತಾಂತರಿಸಿದ ವಿವಿಧ ಜನರನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಹೆಚ್ಚಿನ ಬಿಜೆಪಿ ನಾಯಕರನ್ನು ಪ್ರಶ್ನಿಸುವ ಸಾಧ್ಯತೆಯಿದೆ. ನಾವು ಸತ್ಯಗಳನ್ನು ಕಂಡುಹಿಡಿಯುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎರ್ನಾಕುಲಂ ವಲಯದ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಎಲ್ ಪದ್ಮಕುಮಾರ್ ಮತ್ತು ತ್ರಿಶೂರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಕೆ.ಕೆ. ಅನೀಶ್ ಕುಮಾರ್ ಅವರನ್ನು ಪ್ರಶ್ನಿಸಲಾಗಿದೆ. ಇವರಿಬ್ಬರು ಹಣ ಸಾಗಿಸುತ್ತಿದ್ದರು ಎಂಬ ಆರೋಪವಿದೆ. ಇವರಿಬ್ಬರನ್ನೂ ಈಗಾಗಲೇ ಪ್ರಶ್ನಿಸಲಾಗಿದೆ. ಹಣವಿದ್ದ ಇವರ ಕಾರನ್ನು ಅಡ್ಡಗಟ್ಟಿ 3.5 ಕೋಟಿ ರೂ ಹವಾಲಾ ಹಣವನ್ನು ದರೋಡೆ ಮಾಡಲಾದ ಆರೋಪವಿದ್ದು, ಇದರಲ್ಲೂ ಕೆ. ಸುರೇಂದ್ರನ್‍ ಅವರ ಕೈವಾಡ ಇದೆ ಎನ್ನಲಾಗಿದೆ.

ಈ ಹಣವು ಬಿಜೆಪಿಗೆ ಸಂಬಂಧಿಸಿದ ಹವಾಲಾ ನಗದು ಆಗಿರಬಹುದು ಎಂದು ಇದುವರೆಗೆ ನಡೆದ ತನಿಖೆಯಿಂದ ತಿಳಿದುಬಂದಿದೆ.

ಈಗ, ಈ ಪ್ರಕರಣವನ್ನು ತನಿಖೆ ಮಾಡುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುರೇಂದ್ರನ್ ಮತ್ತು ಅವನ ಮಗ ಹರಿ ಕೃಷ್ಣನ್ ಅವರನ್ನು ಪ್ರಶ್ನಿಸಲಿದೆ ಎಂದು ತಿಳಿದುಬಂದಿದೆ. ಕರೆ ವಿವರ ದಾಖಲೆಗಳನ್ನು ಆಧರಿಸಿ ಕೆ.ಸುರೇಂದ್ರನ್‍ ಅವರ ಮೇಲೆ ಶಂಕೆ ಶುರುವಾಗಿದೆ.

ಈ ಪ್ರಕರಣದಲ್ಲಿ ಸುರೇಂದ್ರನ್ ಅವರ ಚಾಲಕ ಮತ್ತು ಕಾರ್ಯದರ್ಶಿಯನ್ನು ಎಸ್ಐಟಿ ಈಗಾಗಲೇ ಪ್ರಶ್ನಿಸಿದೆ. ಆರೋಪಗಳನ್ನು ಪರಿಶೀಲಿಸಲು ಬಿಜೆಪಿ ಎರಡು ಸಮಿತಿಗಳನ್ನು ರಚಿಸಿದೆ.

ಚುನಾವಣಾ ನಿಧಿಯೂ ದುರ್ಬಳಕೆ

ಇದರ ಜೊತೆಗೆ ಬಿಜೆಪಿ ಪಕ್ಷವು ನೀಡಿದ ಚುನಾವಣಾ ನಿಧಿಯನ್ನೂ ಕೆ, ಸುರೇಂದ್ರನ್‍ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಕ್ಷದ ಹಲವರು ಆರೋಪಿಸಿದ್ದಾರೆ.

ಈ  ಎಲ್ಲ ಆರೋಪಗಳು ರಾಜ್ಯ ಬಿಜೆಪಿಯನ್ನು ಚುನಾವಣೆಯಲ್ಲಿ ಸೋತ ಕೆಲವೇ ವಾರಗಳ ನಂತರ ಬಿಕ್ಕಟ್ಟಿಗೆ ಸಿಲುಕಿಸಿವೆ. ಈ ಸಲ ಬಿಜೆಪಿ ಕೇರಳದಲ್ಲಿ ಇದ್ದ ಏಕೈಕ ಸ್ಥಾನವನ್ನೂ ಕಳೆದುಕೊಂಡಿದೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...