Homeಮುಖಪುಟಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

ಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

- Advertisement -
- Advertisement -

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‍ ವಿರುದ್ಧ ಪೊಲೀಸರು ನ್ಯಾಯಾಲಯದ ನಿರ್ದೇಶನದಂತೆ ಎಫ್‍ಐಆರ್ ದಾಖಲಿಸಿದ್ದಾರೆ.

ಮಂಜೇಶ್ವರಂನಲ್ಲಿ ಸ್ಪರ್ಧಿಸಿದ್ದ ಬಿಎಸ್‍ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಕಣದಿಂದ ಹಿಂದೆ ಸರಿಯಲು ಸುರೇಂದ್ರನ್‍ 2.5 ಲಕ್ಷ ರೂ. ಲಂಚ ನೀಡಿದ ಆರೋಪ ಎದುರಿಸುತ್ತಿದ್ದಾರೆ. ನಾಮಪತ್ರ ಹಿತೆಗೆದುಕೊಂಡು ಬಿಜೆಪಿ ಸೇರಿದ್ದ ಸುಂದರ ಅವರೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಎಕೆಎಂ ಅಶ್ರಫ್ ಈ ಕ್ಷೇತ್ರದಲ್ಲಿ 2 ಸಾವಿರ ಮತಗಳಿಂದ ಗೆದ್ದಿದ್ದಾರೆ.

ಫಲಿತಾಂಶದಲ್ಲಿ ಮೂರನೇ ಸ್ಥಾನದಲ್ಲಿದ್ದ ಸಿಪಿಎಂ ಮುಖಂಡ ವಿ.ವಿ.ರಮೇಶನ್‌ರ ಮನವಿಗೆ ಸ್ಥಳೀಯ ನ್ಯಾಯಾಲಯ ಸ್ಪಂದಿಸಿದ್ದು, ‘ಚುನಾವಣೆಗಳನ್ನು ಹಾಳುಮಾಡುವ ಉದ್ದೇಶದಿಂದ ಲಂಚ’ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು, ಕೆ ಸುಂದರ ಅವರ ಹೇಳಿಕೆಯನ್ನು ದಾಖಲಿಸಲಾಗಿದ್ದು, ಹಣ ಹೇಗೆ ವಿನಿಮಯವಾಯಿತು ಮತ್ತು ಯಾರು ಅದನ್ನು ನೀಡಿದರು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಕೆ. ಸುರೇಂದ್ರನ್ ವಿರುದ್ಧದ ಈ ಆರೋಪಗಳು ಇತ್ತೀಚಿನವು. ಅವರು ಮತ್ತು ಅವರ ಪಕ್ಷವು ಕೆಲವು ಮುಜುಗರದ ಆರೋಪಗಳನ್ನು ಎದುರಿಸುತ್ತಿದೆ. ಇದರಲ್ಲಿ ಒಂದು, ಜನತಿಪತ್ಯ ರಾಷ್ಟ್ರೀಯ ಪಕ್ಷ (ಜೆಆರ್‌ಪಿ) ಮುಖಂಡ ಪರಿಸಿಥಾ ಅಝಿಕೊಡೆ ಕೂಡ ಇಂಥದ್ದೇ ಆರೋಪ ಮಾಡಿದ್ದಾರೆ. ಜೆಆರ್‍ಪಿ ನಾಯಕ ಸಿ.ಕೆ. ಜಾನು ಅವರಿಗೆ ಎನ್‍ಡಿಎ ಸೇರಲು ಕೆ. ಸುರೇಂದ್ರನ್‍  10 ಲಕ್ಷ ರೂ. ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸುರೇಂದ್ರನ್ ಈ ಆರೋಪವನ್ನು ನಿರಾಕರಿಸಿದ್ದಾರೆ.

3.5 ಕೋಟಿ ದರೋಡೆ ಪ್ರಕರಣ

ಏಪ್ರಿಲ್‍ 6ರ ಚುನಾವಣೆಗೂ ಮೂರು ದಿನ ಮುನ್ನ ಕೇರಳ ಹೆದ್ದಾರಿಯಲ್ಲಿ 3.5 ಕೋಟಿ ರೂ.ಗಳ ದರೋಡೆ ನಡೆದಿದೆ ಮತ್ತು ಇದು ಹವಾಲಾ ಹಣ ಎಂಬ ಆರೋಪವಿದೆ. ಇದರಲ್ಲೂ ಕೆ.ಸುರೇಂದ್ರನ್‍ ಹೆಸರು ಕೇಳಿ ಬಂದಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

“ಕದ್ದ ಹವಾಲಾ ಹಣದ ಬಗ್ಗೆ ಕನಿಷ್ಠ ಇಬ್ಬರು ಬಿಜೆಪಿ ನಾಯಕರನ್ನು ಪ್ರಶ್ನಿಸಲಾಗಿದೆ. ಹಣದ ಮೂಲ ಮತ್ತು ಅದನ್ನು ಹಸ್ತಾಂತರಿಸಿದ ವಿವಿಧ ಜನರನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಹೆಚ್ಚಿನ ಬಿಜೆಪಿ ನಾಯಕರನ್ನು ಪ್ರಶ್ನಿಸುವ ಸಾಧ್ಯತೆಯಿದೆ. ನಾವು ಸತ್ಯಗಳನ್ನು ಕಂಡುಹಿಡಿಯುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎರ್ನಾಕುಲಂ ವಲಯದ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಎಲ್ ಪದ್ಮಕುಮಾರ್ ಮತ್ತು ತ್ರಿಶೂರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಕೆ.ಕೆ. ಅನೀಶ್ ಕುಮಾರ್ ಅವರನ್ನು ಪ್ರಶ್ನಿಸಲಾಗಿದೆ. ಇವರಿಬ್ಬರು ಹಣ ಸಾಗಿಸುತ್ತಿದ್ದರು ಎಂಬ ಆರೋಪವಿದೆ. ಇವರಿಬ್ಬರನ್ನೂ ಈಗಾಗಲೇ ಪ್ರಶ್ನಿಸಲಾಗಿದೆ. ಹಣವಿದ್ದ ಇವರ ಕಾರನ್ನು ಅಡ್ಡಗಟ್ಟಿ 3.5 ಕೋಟಿ ರೂ ಹವಾಲಾ ಹಣವನ್ನು ದರೋಡೆ ಮಾಡಲಾದ ಆರೋಪವಿದ್ದು, ಇದರಲ್ಲೂ ಕೆ. ಸುರೇಂದ್ರನ್‍ ಅವರ ಕೈವಾಡ ಇದೆ ಎನ್ನಲಾಗಿದೆ.

ಈ ಹಣವು ಬಿಜೆಪಿಗೆ ಸಂಬಂಧಿಸಿದ ಹವಾಲಾ ನಗದು ಆಗಿರಬಹುದು ಎಂದು ಇದುವರೆಗೆ ನಡೆದ ತನಿಖೆಯಿಂದ ತಿಳಿದುಬಂದಿದೆ.

ಈಗ, ಈ ಪ್ರಕರಣವನ್ನು ತನಿಖೆ ಮಾಡುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುರೇಂದ್ರನ್ ಮತ್ತು ಅವನ ಮಗ ಹರಿ ಕೃಷ್ಣನ್ ಅವರನ್ನು ಪ್ರಶ್ನಿಸಲಿದೆ ಎಂದು ತಿಳಿದುಬಂದಿದೆ. ಕರೆ ವಿವರ ದಾಖಲೆಗಳನ್ನು ಆಧರಿಸಿ ಕೆ.ಸುರೇಂದ್ರನ್‍ ಅವರ ಮೇಲೆ ಶಂಕೆ ಶುರುವಾಗಿದೆ.

ಈ ಪ್ರಕರಣದಲ್ಲಿ ಸುರೇಂದ್ರನ್ ಅವರ ಚಾಲಕ ಮತ್ತು ಕಾರ್ಯದರ್ಶಿಯನ್ನು ಎಸ್ಐಟಿ ಈಗಾಗಲೇ ಪ್ರಶ್ನಿಸಿದೆ. ಆರೋಪಗಳನ್ನು ಪರಿಶೀಲಿಸಲು ಬಿಜೆಪಿ ಎರಡು ಸಮಿತಿಗಳನ್ನು ರಚಿಸಿದೆ.

ಚುನಾವಣಾ ನಿಧಿಯೂ ದುರ್ಬಳಕೆ

ಇದರ ಜೊತೆಗೆ ಬಿಜೆಪಿ ಪಕ್ಷವು ನೀಡಿದ ಚುನಾವಣಾ ನಿಧಿಯನ್ನೂ ಕೆ, ಸುರೇಂದ್ರನ್‍ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಕ್ಷದ ಹಲವರು ಆರೋಪಿಸಿದ್ದಾರೆ.

ಈ  ಎಲ್ಲ ಆರೋಪಗಳು ರಾಜ್ಯ ಬಿಜೆಪಿಯನ್ನು ಚುನಾವಣೆಯಲ್ಲಿ ಸೋತ ಕೆಲವೇ ವಾರಗಳ ನಂತರ ಬಿಕ್ಕಟ್ಟಿಗೆ ಸಿಲುಕಿಸಿವೆ. ಈ ಸಲ ಬಿಜೆಪಿ ಕೇರಳದಲ್ಲಿ ಇದ್ದ ಏಕೈಕ ಸ್ಥಾನವನ್ನೂ ಕಳೆದುಕೊಂಡಿದೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...