Homeಮುಖಪುಟಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

ಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

- Advertisement -
- Advertisement -

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‍ ವಿರುದ್ಧ ಪೊಲೀಸರು ನ್ಯಾಯಾಲಯದ ನಿರ್ದೇಶನದಂತೆ ಎಫ್‍ಐಆರ್ ದಾಖಲಿಸಿದ್ದಾರೆ.

ಮಂಜೇಶ್ವರಂನಲ್ಲಿ ಸ್ಪರ್ಧಿಸಿದ್ದ ಬಿಎಸ್‍ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಕಣದಿಂದ ಹಿಂದೆ ಸರಿಯಲು ಸುರೇಂದ್ರನ್‍ 2.5 ಲಕ್ಷ ರೂ. ಲಂಚ ನೀಡಿದ ಆರೋಪ ಎದುರಿಸುತ್ತಿದ್ದಾರೆ. ನಾಮಪತ್ರ ಹಿತೆಗೆದುಕೊಂಡು ಬಿಜೆಪಿ ಸೇರಿದ್ದ ಸುಂದರ ಅವರೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಎಕೆಎಂ ಅಶ್ರಫ್ ಈ ಕ್ಷೇತ್ರದಲ್ಲಿ 2 ಸಾವಿರ ಮತಗಳಿಂದ ಗೆದ್ದಿದ್ದಾರೆ.

ಫಲಿತಾಂಶದಲ್ಲಿ ಮೂರನೇ ಸ್ಥಾನದಲ್ಲಿದ್ದ ಸಿಪಿಎಂ ಮುಖಂಡ ವಿ.ವಿ.ರಮೇಶನ್‌ರ ಮನವಿಗೆ ಸ್ಥಳೀಯ ನ್ಯಾಯಾಲಯ ಸ್ಪಂದಿಸಿದ್ದು, ‘ಚುನಾವಣೆಗಳನ್ನು ಹಾಳುಮಾಡುವ ಉದ್ದೇಶದಿಂದ ಲಂಚ’ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು, ಕೆ ಸುಂದರ ಅವರ ಹೇಳಿಕೆಯನ್ನು ದಾಖಲಿಸಲಾಗಿದ್ದು, ಹಣ ಹೇಗೆ ವಿನಿಮಯವಾಯಿತು ಮತ್ತು ಯಾರು ಅದನ್ನು ನೀಡಿದರು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಕೆ. ಸುರೇಂದ್ರನ್ ವಿರುದ್ಧದ ಈ ಆರೋಪಗಳು ಇತ್ತೀಚಿನವು. ಅವರು ಮತ್ತು ಅವರ ಪಕ್ಷವು ಕೆಲವು ಮುಜುಗರದ ಆರೋಪಗಳನ್ನು ಎದುರಿಸುತ್ತಿದೆ. ಇದರಲ್ಲಿ ಒಂದು, ಜನತಿಪತ್ಯ ರಾಷ್ಟ್ರೀಯ ಪಕ್ಷ (ಜೆಆರ್‌ಪಿ) ಮುಖಂಡ ಪರಿಸಿಥಾ ಅಝಿಕೊಡೆ ಕೂಡ ಇಂಥದ್ದೇ ಆರೋಪ ಮಾಡಿದ್ದಾರೆ. ಜೆಆರ್‍ಪಿ ನಾಯಕ ಸಿ.ಕೆ. ಜಾನು ಅವರಿಗೆ ಎನ್‍ಡಿಎ ಸೇರಲು ಕೆ. ಸುರೇಂದ್ರನ್‍  10 ಲಕ್ಷ ರೂ. ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸುರೇಂದ್ರನ್ ಈ ಆರೋಪವನ್ನು ನಿರಾಕರಿಸಿದ್ದಾರೆ.

3.5 ಕೋಟಿ ದರೋಡೆ ಪ್ರಕರಣ

ಏಪ್ರಿಲ್‍ 6ರ ಚುನಾವಣೆಗೂ ಮೂರು ದಿನ ಮುನ್ನ ಕೇರಳ ಹೆದ್ದಾರಿಯಲ್ಲಿ 3.5 ಕೋಟಿ ರೂ.ಗಳ ದರೋಡೆ ನಡೆದಿದೆ ಮತ್ತು ಇದು ಹವಾಲಾ ಹಣ ಎಂಬ ಆರೋಪವಿದೆ. ಇದರಲ್ಲೂ ಕೆ.ಸುರೇಂದ್ರನ್‍ ಹೆಸರು ಕೇಳಿ ಬಂದಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

“ಕದ್ದ ಹವಾಲಾ ಹಣದ ಬಗ್ಗೆ ಕನಿಷ್ಠ ಇಬ್ಬರು ಬಿಜೆಪಿ ನಾಯಕರನ್ನು ಪ್ರಶ್ನಿಸಲಾಗಿದೆ. ಹಣದ ಮೂಲ ಮತ್ತು ಅದನ್ನು ಹಸ್ತಾಂತರಿಸಿದ ವಿವಿಧ ಜನರನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಹೆಚ್ಚಿನ ಬಿಜೆಪಿ ನಾಯಕರನ್ನು ಪ್ರಶ್ನಿಸುವ ಸಾಧ್ಯತೆಯಿದೆ. ನಾವು ಸತ್ಯಗಳನ್ನು ಕಂಡುಹಿಡಿಯುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎರ್ನಾಕುಲಂ ವಲಯದ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಎಲ್ ಪದ್ಮಕುಮಾರ್ ಮತ್ತು ತ್ರಿಶೂರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಕೆ.ಕೆ. ಅನೀಶ್ ಕುಮಾರ್ ಅವರನ್ನು ಪ್ರಶ್ನಿಸಲಾಗಿದೆ. ಇವರಿಬ್ಬರು ಹಣ ಸಾಗಿಸುತ್ತಿದ್ದರು ಎಂಬ ಆರೋಪವಿದೆ. ಇವರಿಬ್ಬರನ್ನೂ ಈಗಾಗಲೇ ಪ್ರಶ್ನಿಸಲಾಗಿದೆ. ಹಣವಿದ್ದ ಇವರ ಕಾರನ್ನು ಅಡ್ಡಗಟ್ಟಿ 3.5 ಕೋಟಿ ರೂ ಹವಾಲಾ ಹಣವನ್ನು ದರೋಡೆ ಮಾಡಲಾದ ಆರೋಪವಿದ್ದು, ಇದರಲ್ಲೂ ಕೆ. ಸುರೇಂದ್ರನ್‍ ಅವರ ಕೈವಾಡ ಇದೆ ಎನ್ನಲಾಗಿದೆ.

ಈ ಹಣವು ಬಿಜೆಪಿಗೆ ಸಂಬಂಧಿಸಿದ ಹವಾಲಾ ನಗದು ಆಗಿರಬಹುದು ಎಂದು ಇದುವರೆಗೆ ನಡೆದ ತನಿಖೆಯಿಂದ ತಿಳಿದುಬಂದಿದೆ.

ಈಗ, ಈ ಪ್ರಕರಣವನ್ನು ತನಿಖೆ ಮಾಡುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುರೇಂದ್ರನ್ ಮತ್ತು ಅವನ ಮಗ ಹರಿ ಕೃಷ್ಣನ್ ಅವರನ್ನು ಪ್ರಶ್ನಿಸಲಿದೆ ಎಂದು ತಿಳಿದುಬಂದಿದೆ. ಕರೆ ವಿವರ ದಾಖಲೆಗಳನ್ನು ಆಧರಿಸಿ ಕೆ.ಸುರೇಂದ್ರನ್‍ ಅವರ ಮೇಲೆ ಶಂಕೆ ಶುರುವಾಗಿದೆ.

ಈ ಪ್ರಕರಣದಲ್ಲಿ ಸುರೇಂದ್ರನ್ ಅವರ ಚಾಲಕ ಮತ್ತು ಕಾರ್ಯದರ್ಶಿಯನ್ನು ಎಸ್ಐಟಿ ಈಗಾಗಲೇ ಪ್ರಶ್ನಿಸಿದೆ. ಆರೋಪಗಳನ್ನು ಪರಿಶೀಲಿಸಲು ಬಿಜೆಪಿ ಎರಡು ಸಮಿತಿಗಳನ್ನು ರಚಿಸಿದೆ.

ಚುನಾವಣಾ ನಿಧಿಯೂ ದುರ್ಬಳಕೆ

ಇದರ ಜೊತೆಗೆ ಬಿಜೆಪಿ ಪಕ್ಷವು ನೀಡಿದ ಚುನಾವಣಾ ನಿಧಿಯನ್ನೂ ಕೆ, ಸುರೇಂದ್ರನ್‍ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಕ್ಷದ ಹಲವರು ಆರೋಪಿಸಿದ್ದಾರೆ.

ಈ  ಎಲ್ಲ ಆರೋಪಗಳು ರಾಜ್ಯ ಬಿಜೆಪಿಯನ್ನು ಚುನಾವಣೆಯಲ್ಲಿ ಸೋತ ಕೆಲವೇ ವಾರಗಳ ನಂತರ ಬಿಕ್ಕಟ್ಟಿಗೆ ಸಿಲುಕಿಸಿವೆ. ಈ ಸಲ ಬಿಜೆಪಿ ಕೇರಳದಲ್ಲಿ ಇದ್ದ ಏಕೈಕ ಸ್ಥಾನವನ್ನೂ ಕಳೆದುಕೊಂಡಿದೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....