Homeಮುಖಪುಟರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ 'ಬ್ರಿಕ್ಸ್‌' ಸದಸ್ಯ ರಾಷ್ಟ್ರಗಳು

ರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ ‘ಬ್ರಿಕ್ಸ್‌’ ಸದಸ್ಯ ರಾಷ್ಟ್ರಗಳು

- Advertisement -
- Advertisement -

ಭಾರತ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳ ಒಕ್ಕೂಟ ಬ್ರಿಕ್ಸ್ ದಕ್ಷಿಣ ಪ್ಯಾಲೆಸ್ತೀನ್‌ ರಫಾದಲ್ಲಿನ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸಿದೆ ಮತ್ತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಗಳ ನಿರ್ಲ್ಷಕ್ಷ್ಯದ ಬಗ್ಗೆ ಕಳವಳನ್ನು ವ್ಯಕ್ತಪಡಿಸಿದೆ.

ಬ್ರಿಕ್ಸ್ ಗುಂಪಿನ ದೇಶಗಳ ವಿದೇಶಾಂಗ ಸಚಿವರುಗಳು ಸೋಮವಾರ ರಷ್ಯಾದಲ್ಲಿ ಸಭೆ ಸೇರಿದ್ದರು. ಸಭೆಯಲ್ಲಿ ಭಾರತದ ಕಾರ್ಯದರ್ಶಿ ದಮ್ಮು ರವಿ ಭಾಗಿಯಾಗಿದ್ದರು.

ಭಾರತವು ಬ್ರೆಜಿಲ್, ರಷ್ಯಾ ಮತ್ತು ಚೀನಾ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಬ್ರಿಕ್ಸ್‌ನ ಸ್ಥಾಪಕ ಸದಸ್ಯ ದೇಶಗಳಲ್ಲಿ ಒಂದಾಗಿದೆ. ಕಳೆದ ವರ್ಷದ ಶೃಂಗಸಭೆಯಲ್ಲಿ ಬ್ಲಾಕ್ ತನ್ನ ಸದಸ್ಯತ್ವವನ್ನು ದ್ವಿಗುಣಗೊಳಿಸಿದ ನಂತರ, ಈಜಿಪ್ಟ್, ಇರಾನ್, ಯುಎಇ, ಸೌದಿ ಅರೇಬಿಯಾ ಮತ್ತು ಇಥಿಯೋಪಿಯಾ ಸೇರಿಕೊಂಡಿದ್ದವು. ಸೋಮವಾರ ನಡೆದ ವಿಸ್ತೃತ ಶೃಂಗಸಭೆಯ ಮೊದಲ ಪ್ರಮುಖ ಸಭೆಯಲ್ಲಿ ಹೊಸದಾಗಿ ಸೆರ್ಪಡೆಗೊಂಡಿದ್ದ ದೇಶಗಳ ಪ್ರತಿನಧಿಗಳು ಕೂಡ ಭಾಗವಹಿಸಿದ್ದರು.

ಗಾಝಾದ ಮೇಲೆ ಇಸ್ರೇಲ್‌ ಹತ್ಯಾಕಾಂಡವನ್ನು ಭಾರತ ಈ ಮೊದಲಿನಿಂದಲೇ ಖಂಡಿಸುತ್ತಾ ಬಂದಿದೆ. ರಷ್ಯಾದಲ್ಲಿ ನಡೆದ ಸಭೆಯ ನಂತರ ಬಿಡುಗಡೆಯಾದ ಜಂಟಿ ಹೇಳಿಕೆಯಲ್ಲಿ ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದೆ.

ರಾಫಾದಲ್ಲಿ ಇಸ್ರೇಲ್‌ ಮಿಲಿಟರಿ ದಾಳಿ ಮತ್ತು ನಾಗರಿಕರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಅದರ ಪರಿಣಾಮಗಳನ್ನು ಬ್ರಿಕ್ಸ್‌ ಸದಸ್ಯರಾಷ್ಟ್ರಗಳು ಬಲವಾಗಿ ಖಂಡಿಸಿದೆ.

ಕಳೆದ ವರ್ಷ ಅಕ್ಟೋಬರ್ 7ರಂದು ಇಸ್ರೇಲ್ ಗಾಝಾದ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ಬಳಿಕ ಕಳೆದ ಒಂಬತ್ತು ತಿಂಗಳಲ್ಲಿ 36,000ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಗಾಝಾ ಪಟ್ಟಿಯ ಮೇಲೆ ಆಕ್ರಮಣದ ವೇಳೆ ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ರಫಾದಲ್ಲಿ ತೆರಳಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು. ರಫಾವನ್ನು ಯುದ್ಧ ಸಂತ್ರಸ್ತ ನಿರಾಶ್ರಿತರ ಕೊನೆಯ ತಾಣ ಎಂದು ಹೇಳಲಾಗಿತ್ತು. ಆದರೆ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿ ನಡೆಸುತ್ತಿದೆ. ರಫಾದಲ್ಲಿ ಇಸ್ರೇಲ್ ಆಕ್ರಮಣವು ನಾಗರಿಕರ ಸಾವುನೋವುಗಳನ್ನು ಅಗಾಧವಾಗಿ ಹೆಚ್ಚಿಸುತ್ತದೆ ಎಂದು ವಿಶ್ವವೇ ಕಳವಳ ವ್ಯಕ್ತಪಡಿಸಿದೆ.

ಇಸ್ರೇಲ್‌, ಅಂತರಾಷ್ಟ್ರೀಯ ಕಾನೂನು, ಯುಎನ್ ಚಾರ್ಟರ್, ಯುಎನ್ ನಿರ್ಣಯಗಳು ಮತ್ತು ನ್ಯಾಯಾಲಯದ ಆದೇಶಗಳನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ಬಗ್ಗೆ ಗಂಭೀರ ಕಳವಳವನ್ನು ಬಿಕ್ಸ್‌ ಸದಸ್ಯ ರಾಷ್ಟ್ರಗಳು ವ್ಯಕ್ತಪಡಿಸಿದೆ.

ಇಸ್ರೇಲಿ ದಾಳಿಯಿಂದ ಪ್ಯಾಲೆಸ್ತೀನ್‌ನಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ರಿಕ್ಸ್‌ ದೇಶಗಳು ಜಂಟಿ ಹೇಳಿಕೆಯಲ್ಲಿ ತಕ್ಷಣದ ಕದನ ವಿರಾಮ ಮತ್ತು ಯಾವುದೇ ಅಡೆ ತಡೆಯಿಲ್ಲದೆ ಪ್ಯಾಲೆಸ್ತೀನ್‌ಗೆ ನೆರವು ತಲುಪಿಸುವ ಯುಎನ್ ನಿರ್ಣಯಗಳನ್ನು ಜಾರಿಗೆ ತರಲು ಕರೆ ನೀಡಿದೆ. ಎಲ್ಲಾ ಒತ್ತೆಯಾಳುಗಳು ಮತ್ತು ನಾಗರಿಕರನ್ನು ತಕ್ಷಣವೇ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಲು ಅವರು ಹಮಾಸ್‌ ಮತ್ತು ಇಸ್ರೇಲ್‌ಗೆ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಕರೆನೀಡಿದೆ.

ಇದನ್ನು ಓದಿ: ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...