Homeಮುಖಪುಟರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ 'ಬ್ರಿಕ್ಸ್‌' ಸದಸ್ಯ ರಾಷ್ಟ್ರಗಳು

ರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ ‘ಬ್ರಿಕ್ಸ್‌’ ಸದಸ್ಯ ರಾಷ್ಟ್ರಗಳು

- Advertisement -
- Advertisement -

ಭಾರತ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳ ಒಕ್ಕೂಟ ಬ್ರಿಕ್ಸ್ ದಕ್ಷಿಣ ಪ್ಯಾಲೆಸ್ತೀನ್‌ ರಫಾದಲ್ಲಿನ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸಿದೆ ಮತ್ತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಗಳ ನಿರ್ಲ್ಷಕ್ಷ್ಯದ ಬಗ್ಗೆ ಕಳವಳನ್ನು ವ್ಯಕ್ತಪಡಿಸಿದೆ.

ಬ್ರಿಕ್ಸ್ ಗುಂಪಿನ ದೇಶಗಳ ವಿದೇಶಾಂಗ ಸಚಿವರುಗಳು ಸೋಮವಾರ ರಷ್ಯಾದಲ್ಲಿ ಸಭೆ ಸೇರಿದ್ದರು. ಸಭೆಯಲ್ಲಿ ಭಾರತದ ಕಾರ್ಯದರ್ಶಿ ದಮ್ಮು ರವಿ ಭಾಗಿಯಾಗಿದ್ದರು.

ಭಾರತವು ಬ್ರೆಜಿಲ್, ರಷ್ಯಾ ಮತ್ತು ಚೀನಾ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಬ್ರಿಕ್ಸ್‌ನ ಸ್ಥಾಪಕ ಸದಸ್ಯ ದೇಶಗಳಲ್ಲಿ ಒಂದಾಗಿದೆ. ಕಳೆದ ವರ್ಷದ ಶೃಂಗಸಭೆಯಲ್ಲಿ ಬ್ಲಾಕ್ ತನ್ನ ಸದಸ್ಯತ್ವವನ್ನು ದ್ವಿಗುಣಗೊಳಿಸಿದ ನಂತರ, ಈಜಿಪ್ಟ್, ಇರಾನ್, ಯುಎಇ, ಸೌದಿ ಅರೇಬಿಯಾ ಮತ್ತು ಇಥಿಯೋಪಿಯಾ ಸೇರಿಕೊಂಡಿದ್ದವು. ಸೋಮವಾರ ನಡೆದ ವಿಸ್ತೃತ ಶೃಂಗಸಭೆಯ ಮೊದಲ ಪ್ರಮುಖ ಸಭೆಯಲ್ಲಿ ಹೊಸದಾಗಿ ಸೆರ್ಪಡೆಗೊಂಡಿದ್ದ ದೇಶಗಳ ಪ್ರತಿನಧಿಗಳು ಕೂಡ ಭಾಗವಹಿಸಿದ್ದರು.

ಗಾಝಾದ ಮೇಲೆ ಇಸ್ರೇಲ್‌ ಹತ್ಯಾಕಾಂಡವನ್ನು ಭಾರತ ಈ ಮೊದಲಿನಿಂದಲೇ ಖಂಡಿಸುತ್ತಾ ಬಂದಿದೆ. ರಷ್ಯಾದಲ್ಲಿ ನಡೆದ ಸಭೆಯ ನಂತರ ಬಿಡುಗಡೆಯಾದ ಜಂಟಿ ಹೇಳಿಕೆಯಲ್ಲಿ ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದೆ.

ರಾಫಾದಲ್ಲಿ ಇಸ್ರೇಲ್‌ ಮಿಲಿಟರಿ ದಾಳಿ ಮತ್ತು ನಾಗರಿಕರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಅದರ ಪರಿಣಾಮಗಳನ್ನು ಬ್ರಿಕ್ಸ್‌ ಸದಸ್ಯರಾಷ್ಟ್ರಗಳು ಬಲವಾಗಿ ಖಂಡಿಸಿದೆ.

ಕಳೆದ ವರ್ಷ ಅಕ್ಟೋಬರ್ 7ರಂದು ಇಸ್ರೇಲ್ ಗಾಝಾದ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ಬಳಿಕ ಕಳೆದ ಒಂಬತ್ತು ತಿಂಗಳಲ್ಲಿ 36,000ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಗಾಝಾ ಪಟ್ಟಿಯ ಮೇಲೆ ಆಕ್ರಮಣದ ವೇಳೆ ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ರಫಾದಲ್ಲಿ ತೆರಳಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು. ರಫಾವನ್ನು ಯುದ್ಧ ಸಂತ್ರಸ್ತ ನಿರಾಶ್ರಿತರ ಕೊನೆಯ ತಾಣ ಎಂದು ಹೇಳಲಾಗಿತ್ತು. ಆದರೆ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿ ನಡೆಸುತ್ತಿದೆ. ರಫಾದಲ್ಲಿ ಇಸ್ರೇಲ್ ಆಕ್ರಮಣವು ನಾಗರಿಕರ ಸಾವುನೋವುಗಳನ್ನು ಅಗಾಧವಾಗಿ ಹೆಚ್ಚಿಸುತ್ತದೆ ಎಂದು ವಿಶ್ವವೇ ಕಳವಳ ವ್ಯಕ್ತಪಡಿಸಿದೆ.

ಇಸ್ರೇಲ್‌, ಅಂತರಾಷ್ಟ್ರೀಯ ಕಾನೂನು, ಯುಎನ್ ಚಾರ್ಟರ್, ಯುಎನ್ ನಿರ್ಣಯಗಳು ಮತ್ತು ನ್ಯಾಯಾಲಯದ ಆದೇಶಗಳನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ಬಗ್ಗೆ ಗಂಭೀರ ಕಳವಳವನ್ನು ಬಿಕ್ಸ್‌ ಸದಸ್ಯ ರಾಷ್ಟ್ರಗಳು ವ್ಯಕ್ತಪಡಿಸಿದೆ.

ಇಸ್ರೇಲಿ ದಾಳಿಯಿಂದ ಪ್ಯಾಲೆಸ್ತೀನ್‌ನಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ರಿಕ್ಸ್‌ ದೇಶಗಳು ಜಂಟಿ ಹೇಳಿಕೆಯಲ್ಲಿ ತಕ್ಷಣದ ಕದನ ವಿರಾಮ ಮತ್ತು ಯಾವುದೇ ಅಡೆ ತಡೆಯಿಲ್ಲದೆ ಪ್ಯಾಲೆಸ್ತೀನ್‌ಗೆ ನೆರವು ತಲುಪಿಸುವ ಯುಎನ್ ನಿರ್ಣಯಗಳನ್ನು ಜಾರಿಗೆ ತರಲು ಕರೆ ನೀಡಿದೆ. ಎಲ್ಲಾ ಒತ್ತೆಯಾಳುಗಳು ಮತ್ತು ನಾಗರಿಕರನ್ನು ತಕ್ಷಣವೇ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಲು ಅವರು ಹಮಾಸ್‌ ಮತ್ತು ಇಸ್ರೇಲ್‌ಗೆ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಕರೆನೀಡಿದೆ.

ಇದನ್ನು ಓದಿ: ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...