Homeಮುಖಪುಟರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ 'ಬ್ರಿಕ್ಸ್‌' ಸದಸ್ಯ ರಾಷ್ಟ್ರಗಳು

ರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ ‘ಬ್ರಿಕ್ಸ್‌’ ಸದಸ್ಯ ರಾಷ್ಟ್ರಗಳು

- Advertisement -
- Advertisement -

ಭಾರತ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳ ಒಕ್ಕೂಟ ಬ್ರಿಕ್ಸ್ ದಕ್ಷಿಣ ಪ್ಯಾಲೆಸ್ತೀನ್‌ ರಫಾದಲ್ಲಿನ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸಿದೆ ಮತ್ತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಗಳ ನಿರ್ಲ್ಷಕ್ಷ್ಯದ ಬಗ್ಗೆ ಕಳವಳನ್ನು ವ್ಯಕ್ತಪಡಿಸಿದೆ.

ಬ್ರಿಕ್ಸ್ ಗುಂಪಿನ ದೇಶಗಳ ವಿದೇಶಾಂಗ ಸಚಿವರುಗಳು ಸೋಮವಾರ ರಷ್ಯಾದಲ್ಲಿ ಸಭೆ ಸೇರಿದ್ದರು. ಸಭೆಯಲ್ಲಿ ಭಾರತದ ಕಾರ್ಯದರ್ಶಿ ದಮ್ಮು ರವಿ ಭಾಗಿಯಾಗಿದ್ದರು.

ಭಾರತವು ಬ್ರೆಜಿಲ್, ರಷ್ಯಾ ಮತ್ತು ಚೀನಾ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಬ್ರಿಕ್ಸ್‌ನ ಸ್ಥಾಪಕ ಸದಸ್ಯ ದೇಶಗಳಲ್ಲಿ ಒಂದಾಗಿದೆ. ಕಳೆದ ವರ್ಷದ ಶೃಂಗಸಭೆಯಲ್ಲಿ ಬ್ಲಾಕ್ ತನ್ನ ಸದಸ್ಯತ್ವವನ್ನು ದ್ವಿಗುಣಗೊಳಿಸಿದ ನಂತರ, ಈಜಿಪ್ಟ್, ಇರಾನ್, ಯುಎಇ, ಸೌದಿ ಅರೇಬಿಯಾ ಮತ್ತು ಇಥಿಯೋಪಿಯಾ ಸೇರಿಕೊಂಡಿದ್ದವು. ಸೋಮವಾರ ನಡೆದ ವಿಸ್ತೃತ ಶೃಂಗಸಭೆಯ ಮೊದಲ ಪ್ರಮುಖ ಸಭೆಯಲ್ಲಿ ಹೊಸದಾಗಿ ಸೆರ್ಪಡೆಗೊಂಡಿದ್ದ ದೇಶಗಳ ಪ್ರತಿನಧಿಗಳು ಕೂಡ ಭಾಗವಹಿಸಿದ್ದರು.

ಗಾಝಾದ ಮೇಲೆ ಇಸ್ರೇಲ್‌ ಹತ್ಯಾಕಾಂಡವನ್ನು ಭಾರತ ಈ ಮೊದಲಿನಿಂದಲೇ ಖಂಡಿಸುತ್ತಾ ಬಂದಿದೆ. ರಷ್ಯಾದಲ್ಲಿ ನಡೆದ ಸಭೆಯ ನಂತರ ಬಿಡುಗಡೆಯಾದ ಜಂಟಿ ಹೇಳಿಕೆಯಲ್ಲಿ ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದೆ.

ರಾಫಾದಲ್ಲಿ ಇಸ್ರೇಲ್‌ ಮಿಲಿಟರಿ ದಾಳಿ ಮತ್ತು ನಾಗರಿಕರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಅದರ ಪರಿಣಾಮಗಳನ್ನು ಬ್ರಿಕ್ಸ್‌ ಸದಸ್ಯರಾಷ್ಟ್ರಗಳು ಬಲವಾಗಿ ಖಂಡಿಸಿದೆ.

ಕಳೆದ ವರ್ಷ ಅಕ್ಟೋಬರ್ 7ರಂದು ಇಸ್ರೇಲ್ ಗಾಝಾದ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ಬಳಿಕ ಕಳೆದ ಒಂಬತ್ತು ತಿಂಗಳಲ್ಲಿ 36,000ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಗಾಝಾ ಪಟ್ಟಿಯ ಮೇಲೆ ಆಕ್ರಮಣದ ವೇಳೆ ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ರಫಾದಲ್ಲಿ ತೆರಳಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು. ರಫಾವನ್ನು ಯುದ್ಧ ಸಂತ್ರಸ್ತ ನಿರಾಶ್ರಿತರ ಕೊನೆಯ ತಾಣ ಎಂದು ಹೇಳಲಾಗಿತ್ತು. ಆದರೆ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿ ನಡೆಸುತ್ತಿದೆ. ರಫಾದಲ್ಲಿ ಇಸ್ರೇಲ್ ಆಕ್ರಮಣವು ನಾಗರಿಕರ ಸಾವುನೋವುಗಳನ್ನು ಅಗಾಧವಾಗಿ ಹೆಚ್ಚಿಸುತ್ತದೆ ಎಂದು ವಿಶ್ವವೇ ಕಳವಳ ವ್ಯಕ್ತಪಡಿಸಿದೆ.

ಇಸ್ರೇಲ್‌, ಅಂತರಾಷ್ಟ್ರೀಯ ಕಾನೂನು, ಯುಎನ್ ಚಾರ್ಟರ್, ಯುಎನ್ ನಿರ್ಣಯಗಳು ಮತ್ತು ನ್ಯಾಯಾಲಯದ ಆದೇಶಗಳನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ಬಗ್ಗೆ ಗಂಭೀರ ಕಳವಳವನ್ನು ಬಿಕ್ಸ್‌ ಸದಸ್ಯ ರಾಷ್ಟ್ರಗಳು ವ್ಯಕ್ತಪಡಿಸಿದೆ.

ಇಸ್ರೇಲಿ ದಾಳಿಯಿಂದ ಪ್ಯಾಲೆಸ್ತೀನ್‌ನಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ರಿಕ್ಸ್‌ ದೇಶಗಳು ಜಂಟಿ ಹೇಳಿಕೆಯಲ್ಲಿ ತಕ್ಷಣದ ಕದನ ವಿರಾಮ ಮತ್ತು ಯಾವುದೇ ಅಡೆ ತಡೆಯಿಲ್ಲದೆ ಪ್ಯಾಲೆಸ್ತೀನ್‌ಗೆ ನೆರವು ತಲುಪಿಸುವ ಯುಎನ್ ನಿರ್ಣಯಗಳನ್ನು ಜಾರಿಗೆ ತರಲು ಕರೆ ನೀಡಿದೆ. ಎಲ್ಲಾ ಒತ್ತೆಯಾಳುಗಳು ಮತ್ತು ನಾಗರಿಕರನ್ನು ತಕ್ಷಣವೇ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಲು ಅವರು ಹಮಾಸ್‌ ಮತ್ತು ಇಸ್ರೇಲ್‌ಗೆ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಕರೆನೀಡಿದೆ.

ಇದನ್ನು ಓದಿ: ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...