Homeಮುಖಪುಟರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ 'ಬ್ರಿಕ್ಸ್‌' ಸದಸ್ಯ ರಾಷ್ಟ್ರಗಳು

ರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ ‘ಬ್ರಿಕ್ಸ್‌’ ಸದಸ್ಯ ರಾಷ್ಟ್ರಗಳು

- Advertisement -
- Advertisement -

ಭಾರತ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳ ಒಕ್ಕೂಟ ಬ್ರಿಕ್ಸ್ ದಕ್ಷಿಣ ಪ್ಯಾಲೆಸ್ತೀನ್‌ ರಫಾದಲ್ಲಿನ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸಿದೆ ಮತ್ತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಗಳ ನಿರ್ಲ್ಷಕ್ಷ್ಯದ ಬಗ್ಗೆ ಕಳವಳನ್ನು ವ್ಯಕ್ತಪಡಿಸಿದೆ.

ಬ್ರಿಕ್ಸ್ ಗುಂಪಿನ ದೇಶಗಳ ವಿದೇಶಾಂಗ ಸಚಿವರುಗಳು ಸೋಮವಾರ ರಷ್ಯಾದಲ್ಲಿ ಸಭೆ ಸೇರಿದ್ದರು. ಸಭೆಯಲ್ಲಿ ಭಾರತದ ಕಾರ್ಯದರ್ಶಿ ದಮ್ಮು ರವಿ ಭಾಗಿಯಾಗಿದ್ದರು.

ಭಾರತವು ಬ್ರೆಜಿಲ್, ರಷ್ಯಾ ಮತ್ತು ಚೀನಾ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಬ್ರಿಕ್ಸ್‌ನ ಸ್ಥಾಪಕ ಸದಸ್ಯ ದೇಶಗಳಲ್ಲಿ ಒಂದಾಗಿದೆ. ಕಳೆದ ವರ್ಷದ ಶೃಂಗಸಭೆಯಲ್ಲಿ ಬ್ಲಾಕ್ ತನ್ನ ಸದಸ್ಯತ್ವವನ್ನು ದ್ವಿಗುಣಗೊಳಿಸಿದ ನಂತರ, ಈಜಿಪ್ಟ್, ಇರಾನ್, ಯುಎಇ, ಸೌದಿ ಅರೇಬಿಯಾ ಮತ್ತು ಇಥಿಯೋಪಿಯಾ ಸೇರಿಕೊಂಡಿದ್ದವು. ಸೋಮವಾರ ನಡೆದ ವಿಸ್ತೃತ ಶೃಂಗಸಭೆಯ ಮೊದಲ ಪ್ರಮುಖ ಸಭೆಯಲ್ಲಿ ಹೊಸದಾಗಿ ಸೆರ್ಪಡೆಗೊಂಡಿದ್ದ ದೇಶಗಳ ಪ್ರತಿನಧಿಗಳು ಕೂಡ ಭಾಗವಹಿಸಿದ್ದರು.

ಗಾಝಾದ ಮೇಲೆ ಇಸ್ರೇಲ್‌ ಹತ್ಯಾಕಾಂಡವನ್ನು ಭಾರತ ಈ ಮೊದಲಿನಿಂದಲೇ ಖಂಡಿಸುತ್ತಾ ಬಂದಿದೆ. ರಷ್ಯಾದಲ್ಲಿ ನಡೆದ ಸಭೆಯ ನಂತರ ಬಿಡುಗಡೆಯಾದ ಜಂಟಿ ಹೇಳಿಕೆಯಲ್ಲಿ ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದೆ.

ರಾಫಾದಲ್ಲಿ ಇಸ್ರೇಲ್‌ ಮಿಲಿಟರಿ ದಾಳಿ ಮತ್ತು ನಾಗರಿಕರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಅದರ ಪರಿಣಾಮಗಳನ್ನು ಬ್ರಿಕ್ಸ್‌ ಸದಸ್ಯರಾಷ್ಟ್ರಗಳು ಬಲವಾಗಿ ಖಂಡಿಸಿದೆ.

ಕಳೆದ ವರ್ಷ ಅಕ್ಟೋಬರ್ 7ರಂದು ಇಸ್ರೇಲ್ ಗಾಝಾದ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ಬಳಿಕ ಕಳೆದ ಒಂಬತ್ತು ತಿಂಗಳಲ್ಲಿ 36,000ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಗಾಝಾ ಪಟ್ಟಿಯ ಮೇಲೆ ಆಕ್ರಮಣದ ವೇಳೆ ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ರಫಾದಲ್ಲಿ ತೆರಳಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು. ರಫಾವನ್ನು ಯುದ್ಧ ಸಂತ್ರಸ್ತ ನಿರಾಶ್ರಿತರ ಕೊನೆಯ ತಾಣ ಎಂದು ಹೇಳಲಾಗಿತ್ತು. ಆದರೆ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿ ನಡೆಸುತ್ತಿದೆ. ರಫಾದಲ್ಲಿ ಇಸ್ರೇಲ್ ಆಕ್ರಮಣವು ನಾಗರಿಕರ ಸಾವುನೋವುಗಳನ್ನು ಅಗಾಧವಾಗಿ ಹೆಚ್ಚಿಸುತ್ತದೆ ಎಂದು ವಿಶ್ವವೇ ಕಳವಳ ವ್ಯಕ್ತಪಡಿಸಿದೆ.

ಇಸ್ರೇಲ್‌, ಅಂತರಾಷ್ಟ್ರೀಯ ಕಾನೂನು, ಯುಎನ್ ಚಾರ್ಟರ್, ಯುಎನ್ ನಿರ್ಣಯಗಳು ಮತ್ತು ನ್ಯಾಯಾಲಯದ ಆದೇಶಗಳನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ಬಗ್ಗೆ ಗಂಭೀರ ಕಳವಳವನ್ನು ಬಿಕ್ಸ್‌ ಸದಸ್ಯ ರಾಷ್ಟ್ರಗಳು ವ್ಯಕ್ತಪಡಿಸಿದೆ.

ಇಸ್ರೇಲಿ ದಾಳಿಯಿಂದ ಪ್ಯಾಲೆಸ್ತೀನ್‌ನಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ರಿಕ್ಸ್‌ ದೇಶಗಳು ಜಂಟಿ ಹೇಳಿಕೆಯಲ್ಲಿ ತಕ್ಷಣದ ಕದನ ವಿರಾಮ ಮತ್ತು ಯಾವುದೇ ಅಡೆ ತಡೆಯಿಲ್ಲದೆ ಪ್ಯಾಲೆಸ್ತೀನ್‌ಗೆ ನೆರವು ತಲುಪಿಸುವ ಯುಎನ್ ನಿರ್ಣಯಗಳನ್ನು ಜಾರಿಗೆ ತರಲು ಕರೆ ನೀಡಿದೆ. ಎಲ್ಲಾ ಒತ್ತೆಯಾಳುಗಳು ಮತ್ತು ನಾಗರಿಕರನ್ನು ತಕ್ಷಣವೇ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಲು ಅವರು ಹಮಾಸ್‌ ಮತ್ತು ಇಸ್ರೇಲ್‌ಗೆ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಕರೆನೀಡಿದೆ.

ಇದನ್ನು ಓದಿ: ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...