HomeಮುಖಪುಟBride in the Hills | ಕುವೆಂಪು ಕಾದಂಬರಿ 'ಮಲೆಗಳಲ್ಲಿ ಮದುಮಗಳು' ಮತ್ತೆ ಇಂಗ್ಲಿಷ್‌ಗೆ ಅನುವಾದ

Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಅವರ ಶ್ರೇಷ್ಠ ಕೃತಿಗಳಲ್ಲಿ ಒಂದಾದ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಮತ್ತೊಮ್ಮೆ ಇಂಗ್ಲಿಷ್‌ಗೆ ಅನುವಾದಗೊಂಡಿದೆ. ಈ ಬಾರಿ ಖ್ಯಾತ ಪ್ರಕಾಶನ ಸಂಸ್ಥೆಯಾದ ‘ಪೆಂಗ್ವಿನ್ ರಾಂಡೋಕ್‌ ಹೌಸ್ ಇಂಡಿಯಾ’ ಪ್ರಕಟಿಸಿದ್ದು, ಸಾಹಿತಿ, ಪ್ರಾಧ್ಯಾಪಕಿ ವನಮಾಲಾ ವಿಶ್ವನಾಥ ಅವರು ಈ ಬೃಹತ್ ಕಾದಂಬರಿಯನ್ನು ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಎಂಬ ಶೀರ್ಷಿಕೆಯಲ್ಲಿ ಇಂಗ್ಲಿಷ್‌ಗೆ ಅನುವಾದ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಅನುವಾದಕಿ ವನಮಾಲಾ ವಿಶ್ವನಾಥ ಅವರು ನಾಲ್ಕು ದಶಕಗಳಿಂದ ಬೆಂಗಳೂರಿನ ಗಣ್ಯ ಸಂಸ್ಥೆಗಳಲ್ಲಿ ಇಂಗ್ಲಿಷ್ ಕಲಿಸಿದ್ದಾರೆ. ದ್ವಿಭಾಷಾ ವಿದ್ವಾಂಸರಾಗಿರುವ ಅವರು ಕಥಾ, ಸಾಹಿತ್ಯ ಅಕಾಡೆಮಿ ಮತ್ತು ರಾಷ್ಟ್ರೀಯ ಅನುವಾದ ಮಿಷನ್‌ನ ಸಹಯೋಗದೊಂದಿಗೆ ಇಂಗ್ಲಿಷ್ ಭಾಷಾಂತರದಲ್ಲಿ ಭಾರತೀಯ ಸಾಹಿತ್ಯವನ್ನು ಕಲಿಸಿದ್ದಾರೆ, ಪ್ರಕಟಿಸಿದ್ದಾರೆ ಮತ್ತು ಪ್ರಚಾರ ಮಾಡಿದ್ದಾರೆ.

ಇದನ್ನೂಓದಿ: ಸಂದರ್ಶನ; ರಿಚರ್ಡ್ ಈಟನ್: ಸವೆದ ಹಾದಿಯಲ್ಲಿ ನಡೆಯದ ಇತಿಹಾಸಕಾರ

ಪ್ರಶಸ್ತಿ ವಿಜೇತ ಅನುವಾದಕಿ ಆಗಿರುವ ವನಮಾಲ ಅವರು ಆಧುನಿಕ ಕನ್ನಡ ಲೇಖಕರಾದ ತೇಜಸ್ವಿ (1994), ವೈದೇಹಿ (1998), ಸಾರಾ ಅಬೂಬಕರ್ (1999), ಯು.ಆರ್. ಅನಂತಮೂರ್ತಿ (2001), ಲಂಕೇಶ್ (2003), ಮತ್ತು ಗುಲ್ವಾಡಿ ವೆಂಕಟ ರಾವ್ (2019) ಅವರ ಕೃತಿಗಳನ್ನು ಅನುವಾದ ಮಾಡಿದ್ದಾರೆ. ಅಷ್ಟೆ ಅಲ್ಲದೆ, ವಚನ (2012); ದಿ ಲೈಫ್ ಆಫ್ ಹರಿಶ್ಚಂದ್ರ (ಹಾರ್ವರ್ಡ್ ಯೂನಿವರ್ಸಿಟಿ ಪ್ರೆಸ್, 2017); ಮತ್ತು ವಡ್ಡಾರಾಧನೆಯನ್ನು ಕೂಡಾ ಅವರು ಅನುವಾದ ಮಾಡಿದ್ದಾರೆ. ಅಶೋಕ ವಿಶ್ವವಿದ್ಯಾನಿಲಯದಲ್ಲಿ ಭಾಷಾಂತರ ಫೆಲೋ ಆಗಿರುವ ಅವರು ಪ್ರಸ್ತುತ ಎಲ್. ತೋಲ್ಪಾಡಿಯವರ ಪ್ರಬಂಧ ಸಂಗ್ರಹ, ‘ಮ್ಯೂಸಿಂಗ್ಸ್ ಆನ್ ದಿ ಮಹಾಭಾರತ’ವನ್ನು ಅನುವಾದಿಸುತ್ತಿದ್ದಾರೆ.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

ತಮ್ಮ ಅನುವಾದಿತ ಕೃತಿ ‘ಬ್ರೈಡ್ ಇನ್‌ ದಿ ಹಿಲ್ಸ್‌’ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವನಮಾಲ ಅವರು, ”ಕನ್ನಡ ಕಾದಂಬರಿ ಲೋಕದ ಉತ್ತುಂಗ ಶಿಖರ ಎನಿಸಿಕೊಂಡಿರುವ ‘ಮಲೆಗಲಲ್ಲಿ ಮದುಮಗಳು’ ಕೃತಿಯನ್ನು ಸುಮಾರು 30 ವರ್ಷಗಳ ಹಿಂದೆ ಮೊದಲ ಬಾರಿಗೆ ಓದಿದಾಗಲೆ ಅದರ ಆಳ ಅಗಲಗಳನ್ನು ನೋಡಿ ದಂಗಾಗಿ ಬಿಟ್ಟಿದ್ದೆ. ಕಾದಂಬರಿಯ ವಿಸ್ತಾವರವಾದ ಬಿತ್ತಿ ಯಾವುದನ್ನೂ ಯಾರನ್ನೂ ಬಿಡದೆ ಒಳಗೊಳ್ಳುವ ರೀತಿ ಕೆವಿ ಸುಬ್ಬಣ್ಣ ಅವರು ಹೇಳಿದಂತೆ ‘ಮಲೆನಾಡ ಮಹಾಭಾರತ’ ಎನ್ನಿಸುವಂತಹ ಸಂಕೀರ್ಣತೆ ನಮ್ಮ ಮುಂದೆ ಚೈತನ್ಯದಿಂದ ಮಿಡಿಯುತ್ತಿರುವ ಬದುಕನ್ನೆ ಅನಾವರಣ ಮಾಡುತ್ತವೆ. ಇಂತಹ ಮಹಾನ್ ಕೃತಿಯನ್ನು ಅನುವಾದ ಮಾಡಬಹುದು, ನಾನೇ ಮಾಡಿದರೂ ಮಾಡಬಹುದು ಎಂಬ ಕನಸು ಕೂಡಾ ಆಗ ಇರಲಿಲ್ಲ” ಎಂದು ಹೇಳಿದರು.

ಅದಾಗ್ಯೂ, 2017ರಲ್ಲಿ ಹಾರ್ವರ್ಡ್ ಯುನಿವರ್ಸಿಟಿ ಪ್ರೆಸ್‌ಗೆ ‘ಹರಿಶ್ಚಂದ್ರ ಕಾವ್ಯ’ವನ್ನು, 2019ರಲ್ಲಿ ಆಕ್ಸ್‌ಫರ್ಡ್‌ ಯುನಿವರ್ಸಿಟಿ ಪ್ರೆಸ್‌ಗೆ ‘ಇಂದಿರಾ ಬಾಯಿ’ಯಂತಹ ಬಹು ಭಾಷೆಗಳನ್ನು ಬಳಸಿರುವ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದ ಮಾಡಿದ ನಂತರ ಈ ಸಾಹಸಕ್ಕೆ ಕೈ ಹಾಕುವ ಧೈರ್ಯ ಬಂತು ಎಂದು ವನಮಾಲ ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂಓದಿ: ದೇವಿದಯಾಳ್ ಅವರ ’ಡಾ. ಬಾಬಾಸಾಹೇಬ್ ಅಂಬೇಡ್ಕರ್ ದಿನಚರಿ’ ಪುಸ್ತಕದ ಕನ್ನಡಾನುವಾದದಿಂದ ಆಯ್ದ ಅಧ್ಯಾಯ

“ಇಂತಹ ಕಷ್ಟಸಾಧ್ಯವಾದ ಕೃತಿಯನ್ನು ಅನುವಾದ ಮಾಡುವುದು ಒಂದು ಮಾತಾದರೆ, ಅದನ್ನು ಕನ್ನಡೇತರರಿಗೆ ದೊರಕುವಂತೆ ಮಾಡುವುದು ಬೇರೆಯದೆ ಮಾತು. ಹೀಗಾಗಿ Penguin Random House India ನಂತಹ ಪ್ರತಿಷ್ಠಿತ ಸಂಸ್ಥೆ ಕೃತಿ ಅನುವಾದ ಪ್ರಕಟಿಸಲು ಮುಂದಾದಾಗ ನನಗೆ ಈ ಹಿಮಾಲಯವನ್ನು ಏರುವುದಕ್ಕೆ ಬೇಕಾದ ಶಕ್ತಿ ಮತ್ತು ಹುರುಪು ಬಂತು” ಎಂದು ತಿಳಿಸಿದರು. ನಮ್ಮ ಅರಿವನ್ನು ಹಿಗ್ಗಿಸಿ ನಮ್ಮ ವರ್ಣ ವರ್ಗಗಳ ಮಿತಿಗಳನ್ನು ವಿಸ್ತರಿಸಿ, ನಮ್ಮ ಅಸ್ಮಿತೆಗಳ ಎಲ್ಲೆಗಳ ಮಾರುವಂತೆ ನಮ್ಮನ್ನು ಬೆಳೆಸುವ ‘ಎಪಿಕ್ ನೋವೆಲ್’ ಇದು. ಇಂತಹ ಮೇರು ಕೃತಿಯನ್ನು ಅನುವಾದ ಮಾಡುವ ಅವಕಾಶ, ಸವಾಲು, ಸಂತೋಷ ನನ್ನಗಾಗಿದ್ದು, ಇದಕ್ಕಾಗಿ, ನಾನು ಚಿರಋಣಿ ಎಂದು ವನಮಾಲ ಹೇಳಿದರು.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

 

1967ರಲ್ಲಿ ಕನ್ನಡದಲ್ಲಿ ಪ್ರಕಟವಾದ “ಮಲೆಗಳಲ್ಲಿ ಮದುಮಗಳು” ಕಾದಂಬರಿಯನ್ನು ಈ ಹಿಂದೆ 2020ರಲ್ಲಿ ‘ಕುವೆಂಪು ಪ್ರತಿಷ್ಠಾನ’ವು ದಿ ಬ್ರೈಡ್ ಇನ್ ದಿ ರೈನಿ ಮೌಂಟೈನ್ಸ್‌ (The Bride in the Rainy Mountains) ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿತ್ತು. ಅದನ್ನು ಡಾ. ಕೆ.ಎಂ. ಶ್ರೀನಿವಾಸ ಗೌಡ ಮತ್ತು ಜಿ.ಎಸ್ ಶ್ರೀಕಾಂತ ಮೂರ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪೆಂಗ್ವಿನ್ ಪ್ರಕಟಿಸಿರುವ, ವನಮಾಲ ವಿಶ್ವನಾಥ್ ಅನುವಾದಿಸಿರುವ ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಇಂಗ್ಲಿಷ್ ಆವೃತ್ತಿಯ ಬೆಲೆ 799/- ಆಗಿದ್ದು ಪುಸ್ತಕದ ಅಂಗಡಿಗಳನ್ನು ದೊರೆಯುತ್ತದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...