HomeಮುಖಪುಟBride in the Hills | ಕುವೆಂಪು ಕಾದಂಬರಿ 'ಮಲೆಗಳಲ್ಲಿ ಮದುಮಗಳು' ಮತ್ತೆ ಇಂಗ್ಲಿಷ್‌ಗೆ ಅನುವಾದ

Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಅವರ ಶ್ರೇಷ್ಠ ಕೃತಿಗಳಲ್ಲಿ ಒಂದಾದ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಮತ್ತೊಮ್ಮೆ ಇಂಗ್ಲಿಷ್‌ಗೆ ಅನುವಾದಗೊಂಡಿದೆ. ಈ ಬಾರಿ ಖ್ಯಾತ ಪ್ರಕಾಶನ ಸಂಸ್ಥೆಯಾದ ‘ಪೆಂಗ್ವಿನ್ ರಾಂಡೋಕ್‌ ಹೌಸ್ ಇಂಡಿಯಾ’ ಪ್ರಕಟಿಸಿದ್ದು, ಸಾಹಿತಿ, ಪ್ರಾಧ್ಯಾಪಕಿ ವನಮಾಲಾ ವಿಶ್ವನಾಥ ಅವರು ಈ ಬೃಹತ್ ಕಾದಂಬರಿಯನ್ನು ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಎಂಬ ಶೀರ್ಷಿಕೆಯಲ್ಲಿ ಇಂಗ್ಲಿಷ್‌ಗೆ ಅನುವಾದ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಅನುವಾದಕಿ ವನಮಾಲಾ ವಿಶ್ವನಾಥ ಅವರು ನಾಲ್ಕು ದಶಕಗಳಿಂದ ಬೆಂಗಳೂರಿನ ಗಣ್ಯ ಸಂಸ್ಥೆಗಳಲ್ಲಿ ಇಂಗ್ಲಿಷ್ ಕಲಿಸಿದ್ದಾರೆ. ದ್ವಿಭಾಷಾ ವಿದ್ವಾಂಸರಾಗಿರುವ ಅವರು ಕಥಾ, ಸಾಹಿತ್ಯ ಅಕಾಡೆಮಿ ಮತ್ತು ರಾಷ್ಟ್ರೀಯ ಅನುವಾದ ಮಿಷನ್‌ನ ಸಹಯೋಗದೊಂದಿಗೆ ಇಂಗ್ಲಿಷ್ ಭಾಷಾಂತರದಲ್ಲಿ ಭಾರತೀಯ ಸಾಹಿತ್ಯವನ್ನು ಕಲಿಸಿದ್ದಾರೆ, ಪ್ರಕಟಿಸಿದ್ದಾರೆ ಮತ್ತು ಪ್ರಚಾರ ಮಾಡಿದ್ದಾರೆ.

ಇದನ್ನೂಓದಿ: ಸಂದರ್ಶನ; ರಿಚರ್ಡ್ ಈಟನ್: ಸವೆದ ಹಾದಿಯಲ್ಲಿ ನಡೆಯದ ಇತಿಹಾಸಕಾರ

ಪ್ರಶಸ್ತಿ ವಿಜೇತ ಅನುವಾದಕಿ ಆಗಿರುವ ವನಮಾಲ ಅವರು ಆಧುನಿಕ ಕನ್ನಡ ಲೇಖಕರಾದ ತೇಜಸ್ವಿ (1994), ವೈದೇಹಿ (1998), ಸಾರಾ ಅಬೂಬಕರ್ (1999), ಯು.ಆರ್. ಅನಂತಮೂರ್ತಿ (2001), ಲಂಕೇಶ್ (2003), ಮತ್ತು ಗುಲ್ವಾಡಿ ವೆಂಕಟ ರಾವ್ (2019) ಅವರ ಕೃತಿಗಳನ್ನು ಅನುವಾದ ಮಾಡಿದ್ದಾರೆ. ಅಷ್ಟೆ ಅಲ್ಲದೆ, ವಚನ (2012); ದಿ ಲೈಫ್ ಆಫ್ ಹರಿಶ್ಚಂದ್ರ (ಹಾರ್ವರ್ಡ್ ಯೂನಿವರ್ಸಿಟಿ ಪ್ರೆಸ್, 2017); ಮತ್ತು ವಡ್ಡಾರಾಧನೆಯನ್ನು ಕೂಡಾ ಅವರು ಅನುವಾದ ಮಾಡಿದ್ದಾರೆ. ಅಶೋಕ ವಿಶ್ವವಿದ್ಯಾನಿಲಯದಲ್ಲಿ ಭಾಷಾಂತರ ಫೆಲೋ ಆಗಿರುವ ಅವರು ಪ್ರಸ್ತುತ ಎಲ್. ತೋಲ್ಪಾಡಿಯವರ ಪ್ರಬಂಧ ಸಂಗ್ರಹ, ‘ಮ್ಯೂಸಿಂಗ್ಸ್ ಆನ್ ದಿ ಮಹಾಭಾರತ’ವನ್ನು ಅನುವಾದಿಸುತ್ತಿದ್ದಾರೆ.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

ತಮ್ಮ ಅನುವಾದಿತ ಕೃತಿ ‘ಬ್ರೈಡ್ ಇನ್‌ ದಿ ಹಿಲ್ಸ್‌’ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವನಮಾಲ ಅವರು, ”ಕನ್ನಡ ಕಾದಂಬರಿ ಲೋಕದ ಉತ್ತುಂಗ ಶಿಖರ ಎನಿಸಿಕೊಂಡಿರುವ ‘ಮಲೆಗಲಲ್ಲಿ ಮದುಮಗಳು’ ಕೃತಿಯನ್ನು ಸುಮಾರು 30 ವರ್ಷಗಳ ಹಿಂದೆ ಮೊದಲ ಬಾರಿಗೆ ಓದಿದಾಗಲೆ ಅದರ ಆಳ ಅಗಲಗಳನ್ನು ನೋಡಿ ದಂಗಾಗಿ ಬಿಟ್ಟಿದ್ದೆ. ಕಾದಂಬರಿಯ ವಿಸ್ತಾವರವಾದ ಬಿತ್ತಿ ಯಾವುದನ್ನೂ ಯಾರನ್ನೂ ಬಿಡದೆ ಒಳಗೊಳ್ಳುವ ರೀತಿ ಕೆವಿ ಸುಬ್ಬಣ್ಣ ಅವರು ಹೇಳಿದಂತೆ ‘ಮಲೆನಾಡ ಮಹಾಭಾರತ’ ಎನ್ನಿಸುವಂತಹ ಸಂಕೀರ್ಣತೆ ನಮ್ಮ ಮುಂದೆ ಚೈತನ್ಯದಿಂದ ಮಿಡಿಯುತ್ತಿರುವ ಬದುಕನ್ನೆ ಅನಾವರಣ ಮಾಡುತ್ತವೆ. ಇಂತಹ ಮಹಾನ್ ಕೃತಿಯನ್ನು ಅನುವಾದ ಮಾಡಬಹುದು, ನಾನೇ ಮಾಡಿದರೂ ಮಾಡಬಹುದು ಎಂಬ ಕನಸು ಕೂಡಾ ಆಗ ಇರಲಿಲ್ಲ” ಎಂದು ಹೇಳಿದರು.

ಅದಾಗ್ಯೂ, 2017ರಲ್ಲಿ ಹಾರ್ವರ್ಡ್ ಯುನಿವರ್ಸಿಟಿ ಪ್ರೆಸ್‌ಗೆ ‘ಹರಿಶ್ಚಂದ್ರ ಕಾವ್ಯ’ವನ್ನು, 2019ರಲ್ಲಿ ಆಕ್ಸ್‌ಫರ್ಡ್‌ ಯುನಿವರ್ಸಿಟಿ ಪ್ರೆಸ್‌ಗೆ ‘ಇಂದಿರಾ ಬಾಯಿ’ಯಂತಹ ಬಹು ಭಾಷೆಗಳನ್ನು ಬಳಸಿರುವ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದ ಮಾಡಿದ ನಂತರ ಈ ಸಾಹಸಕ್ಕೆ ಕೈ ಹಾಕುವ ಧೈರ್ಯ ಬಂತು ಎಂದು ವನಮಾಲ ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂಓದಿ: ದೇವಿದಯಾಳ್ ಅವರ ’ಡಾ. ಬಾಬಾಸಾಹೇಬ್ ಅಂಬೇಡ್ಕರ್ ದಿನಚರಿ’ ಪುಸ್ತಕದ ಕನ್ನಡಾನುವಾದದಿಂದ ಆಯ್ದ ಅಧ್ಯಾಯ

“ಇಂತಹ ಕಷ್ಟಸಾಧ್ಯವಾದ ಕೃತಿಯನ್ನು ಅನುವಾದ ಮಾಡುವುದು ಒಂದು ಮಾತಾದರೆ, ಅದನ್ನು ಕನ್ನಡೇತರರಿಗೆ ದೊರಕುವಂತೆ ಮಾಡುವುದು ಬೇರೆಯದೆ ಮಾತು. ಹೀಗಾಗಿ Penguin Random House India ನಂತಹ ಪ್ರತಿಷ್ಠಿತ ಸಂಸ್ಥೆ ಕೃತಿ ಅನುವಾದ ಪ್ರಕಟಿಸಲು ಮುಂದಾದಾಗ ನನಗೆ ಈ ಹಿಮಾಲಯವನ್ನು ಏರುವುದಕ್ಕೆ ಬೇಕಾದ ಶಕ್ತಿ ಮತ್ತು ಹುರುಪು ಬಂತು” ಎಂದು ತಿಳಿಸಿದರು. ನಮ್ಮ ಅರಿವನ್ನು ಹಿಗ್ಗಿಸಿ ನಮ್ಮ ವರ್ಣ ವರ್ಗಗಳ ಮಿತಿಗಳನ್ನು ವಿಸ್ತರಿಸಿ, ನಮ್ಮ ಅಸ್ಮಿತೆಗಳ ಎಲ್ಲೆಗಳ ಮಾರುವಂತೆ ನಮ್ಮನ್ನು ಬೆಳೆಸುವ ‘ಎಪಿಕ್ ನೋವೆಲ್’ ಇದು. ಇಂತಹ ಮೇರು ಕೃತಿಯನ್ನು ಅನುವಾದ ಮಾಡುವ ಅವಕಾಶ, ಸವಾಲು, ಸಂತೋಷ ನನ್ನಗಾಗಿದ್ದು, ಇದಕ್ಕಾಗಿ, ನಾನು ಚಿರಋಣಿ ಎಂದು ವನಮಾಲ ಹೇಳಿದರು.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

 

1967ರಲ್ಲಿ ಕನ್ನಡದಲ್ಲಿ ಪ್ರಕಟವಾದ “ಮಲೆಗಳಲ್ಲಿ ಮದುಮಗಳು” ಕಾದಂಬರಿಯನ್ನು ಈ ಹಿಂದೆ 2020ರಲ್ಲಿ ‘ಕುವೆಂಪು ಪ್ರತಿಷ್ಠಾನ’ವು ದಿ ಬ್ರೈಡ್ ಇನ್ ದಿ ರೈನಿ ಮೌಂಟೈನ್ಸ್‌ (The Bride in the Rainy Mountains) ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿತ್ತು. ಅದನ್ನು ಡಾ. ಕೆ.ಎಂ. ಶ್ರೀನಿವಾಸ ಗೌಡ ಮತ್ತು ಜಿ.ಎಸ್ ಶ್ರೀಕಾಂತ ಮೂರ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪೆಂಗ್ವಿನ್ ಪ್ರಕಟಿಸಿರುವ, ವನಮಾಲ ವಿಶ್ವನಾಥ್ ಅನುವಾದಿಸಿರುವ ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಇಂಗ್ಲಿಷ್ ಆವೃತ್ತಿಯ ಬೆಲೆ 799/- ಆಗಿದ್ದು ಪುಸ್ತಕದ ಅಂಗಡಿಗಳನ್ನು ದೊರೆಯುತ್ತದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...