HomeಮುಖಪುಟBride in the Hills | ಕುವೆಂಪು ಕಾದಂಬರಿ 'ಮಲೆಗಳಲ್ಲಿ ಮದುಮಗಳು' ಮತ್ತೆ ಇಂಗ್ಲಿಷ್‌ಗೆ ಅನುವಾದ

Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಅವರ ಶ್ರೇಷ್ಠ ಕೃತಿಗಳಲ್ಲಿ ಒಂದಾದ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಮತ್ತೊಮ್ಮೆ ಇಂಗ್ಲಿಷ್‌ಗೆ ಅನುವಾದಗೊಂಡಿದೆ. ಈ ಬಾರಿ ಖ್ಯಾತ ಪ್ರಕಾಶನ ಸಂಸ್ಥೆಯಾದ ‘ಪೆಂಗ್ವಿನ್ ರಾಂಡೋಕ್‌ ಹೌಸ್ ಇಂಡಿಯಾ’ ಪ್ರಕಟಿಸಿದ್ದು, ಸಾಹಿತಿ, ಪ್ರಾಧ್ಯಾಪಕಿ ವನಮಾಲಾ ವಿಶ್ವನಾಥ ಅವರು ಈ ಬೃಹತ್ ಕಾದಂಬರಿಯನ್ನು ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಎಂಬ ಶೀರ್ಷಿಕೆಯಲ್ಲಿ ಇಂಗ್ಲಿಷ್‌ಗೆ ಅನುವಾದ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಅನುವಾದಕಿ ವನಮಾಲಾ ವಿಶ್ವನಾಥ ಅವರು ನಾಲ್ಕು ದಶಕಗಳಿಂದ ಬೆಂಗಳೂರಿನ ಗಣ್ಯ ಸಂಸ್ಥೆಗಳಲ್ಲಿ ಇಂಗ್ಲಿಷ್ ಕಲಿಸಿದ್ದಾರೆ. ದ್ವಿಭಾಷಾ ವಿದ್ವಾಂಸರಾಗಿರುವ ಅವರು ಕಥಾ, ಸಾಹಿತ್ಯ ಅಕಾಡೆಮಿ ಮತ್ತು ರಾಷ್ಟ್ರೀಯ ಅನುವಾದ ಮಿಷನ್‌ನ ಸಹಯೋಗದೊಂದಿಗೆ ಇಂಗ್ಲಿಷ್ ಭಾಷಾಂತರದಲ್ಲಿ ಭಾರತೀಯ ಸಾಹಿತ್ಯವನ್ನು ಕಲಿಸಿದ್ದಾರೆ, ಪ್ರಕಟಿಸಿದ್ದಾರೆ ಮತ್ತು ಪ್ರಚಾರ ಮಾಡಿದ್ದಾರೆ.

ಇದನ್ನೂಓದಿ: ಸಂದರ್ಶನ; ರಿಚರ್ಡ್ ಈಟನ್: ಸವೆದ ಹಾದಿಯಲ್ಲಿ ನಡೆಯದ ಇತಿಹಾಸಕಾರ

ಪ್ರಶಸ್ತಿ ವಿಜೇತ ಅನುವಾದಕಿ ಆಗಿರುವ ವನಮಾಲ ಅವರು ಆಧುನಿಕ ಕನ್ನಡ ಲೇಖಕರಾದ ತೇಜಸ್ವಿ (1994), ವೈದೇಹಿ (1998), ಸಾರಾ ಅಬೂಬಕರ್ (1999), ಯು.ಆರ್. ಅನಂತಮೂರ್ತಿ (2001), ಲಂಕೇಶ್ (2003), ಮತ್ತು ಗುಲ್ವಾಡಿ ವೆಂಕಟ ರಾವ್ (2019) ಅವರ ಕೃತಿಗಳನ್ನು ಅನುವಾದ ಮಾಡಿದ್ದಾರೆ. ಅಷ್ಟೆ ಅಲ್ಲದೆ, ವಚನ (2012); ದಿ ಲೈಫ್ ಆಫ್ ಹರಿಶ್ಚಂದ್ರ (ಹಾರ್ವರ್ಡ್ ಯೂನಿವರ್ಸಿಟಿ ಪ್ರೆಸ್, 2017); ಮತ್ತು ವಡ್ಡಾರಾಧನೆಯನ್ನು ಕೂಡಾ ಅವರು ಅನುವಾದ ಮಾಡಿದ್ದಾರೆ. ಅಶೋಕ ವಿಶ್ವವಿದ್ಯಾನಿಲಯದಲ್ಲಿ ಭಾಷಾಂತರ ಫೆಲೋ ಆಗಿರುವ ಅವರು ಪ್ರಸ್ತುತ ಎಲ್. ತೋಲ್ಪಾಡಿಯವರ ಪ್ರಬಂಧ ಸಂಗ್ರಹ, ‘ಮ್ಯೂಸಿಂಗ್ಸ್ ಆನ್ ದಿ ಮಹಾಭಾರತ’ವನ್ನು ಅನುವಾದಿಸುತ್ತಿದ್ದಾರೆ.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

ತಮ್ಮ ಅನುವಾದಿತ ಕೃತಿ ‘ಬ್ರೈಡ್ ಇನ್‌ ದಿ ಹಿಲ್ಸ್‌’ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವನಮಾಲ ಅವರು, ”ಕನ್ನಡ ಕಾದಂಬರಿ ಲೋಕದ ಉತ್ತುಂಗ ಶಿಖರ ಎನಿಸಿಕೊಂಡಿರುವ ‘ಮಲೆಗಲಲ್ಲಿ ಮದುಮಗಳು’ ಕೃತಿಯನ್ನು ಸುಮಾರು 30 ವರ್ಷಗಳ ಹಿಂದೆ ಮೊದಲ ಬಾರಿಗೆ ಓದಿದಾಗಲೆ ಅದರ ಆಳ ಅಗಲಗಳನ್ನು ನೋಡಿ ದಂಗಾಗಿ ಬಿಟ್ಟಿದ್ದೆ. ಕಾದಂಬರಿಯ ವಿಸ್ತಾವರವಾದ ಬಿತ್ತಿ ಯಾವುದನ್ನೂ ಯಾರನ್ನೂ ಬಿಡದೆ ಒಳಗೊಳ್ಳುವ ರೀತಿ ಕೆವಿ ಸುಬ್ಬಣ್ಣ ಅವರು ಹೇಳಿದಂತೆ ‘ಮಲೆನಾಡ ಮಹಾಭಾರತ’ ಎನ್ನಿಸುವಂತಹ ಸಂಕೀರ್ಣತೆ ನಮ್ಮ ಮುಂದೆ ಚೈತನ್ಯದಿಂದ ಮಿಡಿಯುತ್ತಿರುವ ಬದುಕನ್ನೆ ಅನಾವರಣ ಮಾಡುತ್ತವೆ. ಇಂತಹ ಮಹಾನ್ ಕೃತಿಯನ್ನು ಅನುವಾದ ಮಾಡಬಹುದು, ನಾನೇ ಮಾಡಿದರೂ ಮಾಡಬಹುದು ಎಂಬ ಕನಸು ಕೂಡಾ ಆಗ ಇರಲಿಲ್ಲ” ಎಂದು ಹೇಳಿದರು.

ಅದಾಗ್ಯೂ, 2017ರಲ್ಲಿ ಹಾರ್ವರ್ಡ್ ಯುನಿವರ್ಸಿಟಿ ಪ್ರೆಸ್‌ಗೆ ‘ಹರಿಶ್ಚಂದ್ರ ಕಾವ್ಯ’ವನ್ನು, 2019ರಲ್ಲಿ ಆಕ್ಸ್‌ಫರ್ಡ್‌ ಯುನಿವರ್ಸಿಟಿ ಪ್ರೆಸ್‌ಗೆ ‘ಇಂದಿರಾ ಬಾಯಿ’ಯಂತಹ ಬಹು ಭಾಷೆಗಳನ್ನು ಬಳಸಿರುವ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದ ಮಾಡಿದ ನಂತರ ಈ ಸಾಹಸಕ್ಕೆ ಕೈ ಹಾಕುವ ಧೈರ್ಯ ಬಂತು ಎಂದು ವನಮಾಲ ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂಓದಿ: ದೇವಿದಯಾಳ್ ಅವರ ’ಡಾ. ಬಾಬಾಸಾಹೇಬ್ ಅಂಬೇಡ್ಕರ್ ದಿನಚರಿ’ ಪುಸ್ತಕದ ಕನ್ನಡಾನುವಾದದಿಂದ ಆಯ್ದ ಅಧ್ಯಾಯ

“ಇಂತಹ ಕಷ್ಟಸಾಧ್ಯವಾದ ಕೃತಿಯನ್ನು ಅನುವಾದ ಮಾಡುವುದು ಒಂದು ಮಾತಾದರೆ, ಅದನ್ನು ಕನ್ನಡೇತರರಿಗೆ ದೊರಕುವಂತೆ ಮಾಡುವುದು ಬೇರೆಯದೆ ಮಾತು. ಹೀಗಾಗಿ Penguin Random House India ನಂತಹ ಪ್ರತಿಷ್ಠಿತ ಸಂಸ್ಥೆ ಕೃತಿ ಅನುವಾದ ಪ್ರಕಟಿಸಲು ಮುಂದಾದಾಗ ನನಗೆ ಈ ಹಿಮಾಲಯವನ್ನು ಏರುವುದಕ್ಕೆ ಬೇಕಾದ ಶಕ್ತಿ ಮತ್ತು ಹುರುಪು ಬಂತು” ಎಂದು ತಿಳಿಸಿದರು. ನಮ್ಮ ಅರಿವನ್ನು ಹಿಗ್ಗಿಸಿ ನಮ್ಮ ವರ್ಣ ವರ್ಗಗಳ ಮಿತಿಗಳನ್ನು ವಿಸ್ತರಿಸಿ, ನಮ್ಮ ಅಸ್ಮಿತೆಗಳ ಎಲ್ಲೆಗಳ ಮಾರುವಂತೆ ನಮ್ಮನ್ನು ಬೆಳೆಸುವ ‘ಎಪಿಕ್ ನೋವೆಲ್’ ಇದು. ಇಂತಹ ಮೇರು ಕೃತಿಯನ್ನು ಅನುವಾದ ಮಾಡುವ ಅವಕಾಶ, ಸವಾಲು, ಸಂತೋಷ ನನ್ನಗಾಗಿದ್ದು, ಇದಕ್ಕಾಗಿ, ನಾನು ಚಿರಋಣಿ ಎಂದು ವನಮಾಲ ಹೇಳಿದರು.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

 

1967ರಲ್ಲಿ ಕನ್ನಡದಲ್ಲಿ ಪ್ರಕಟವಾದ “ಮಲೆಗಳಲ್ಲಿ ಮದುಮಗಳು” ಕಾದಂಬರಿಯನ್ನು ಈ ಹಿಂದೆ 2020ರಲ್ಲಿ ‘ಕುವೆಂಪು ಪ್ರತಿಷ್ಠಾನ’ವು ದಿ ಬ್ರೈಡ್ ಇನ್ ದಿ ರೈನಿ ಮೌಂಟೈನ್ಸ್‌ (The Bride in the Rainy Mountains) ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿತ್ತು. ಅದನ್ನು ಡಾ. ಕೆ.ಎಂ. ಶ್ರೀನಿವಾಸ ಗೌಡ ಮತ್ತು ಜಿ.ಎಸ್ ಶ್ರೀಕಾಂತ ಮೂರ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪೆಂಗ್ವಿನ್ ಪ್ರಕಟಿಸಿರುವ, ವನಮಾಲ ವಿಶ್ವನಾಥ್ ಅನುವಾದಿಸಿರುವ ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಇಂಗ್ಲಿಷ್ ಆವೃತ್ತಿಯ ಬೆಲೆ 799/- ಆಗಿದ್ದು ಪುಸ್ತಕದ ಅಂಗಡಿಗಳನ್ನು ದೊರೆಯುತ್ತದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....