HomeಮುಖಪುಟBride in the Hills | ಕುವೆಂಪು ಕಾದಂಬರಿ 'ಮಲೆಗಳಲ್ಲಿ ಮದುಮಗಳು' ಮತ್ತೆ ಇಂಗ್ಲಿಷ್‌ಗೆ ಅನುವಾದ

Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಅವರ ಶ್ರೇಷ್ಠ ಕೃತಿಗಳಲ್ಲಿ ಒಂದಾದ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಮತ್ತೊಮ್ಮೆ ಇಂಗ್ಲಿಷ್‌ಗೆ ಅನುವಾದಗೊಂಡಿದೆ. ಈ ಬಾರಿ ಖ್ಯಾತ ಪ್ರಕಾಶನ ಸಂಸ್ಥೆಯಾದ ‘ಪೆಂಗ್ವಿನ್ ರಾಂಡೋಕ್‌ ಹೌಸ್ ಇಂಡಿಯಾ’ ಪ್ರಕಟಿಸಿದ್ದು, ಸಾಹಿತಿ, ಪ್ರಾಧ್ಯಾಪಕಿ ವನಮಾಲಾ ವಿಶ್ವನಾಥ ಅವರು ಈ ಬೃಹತ್ ಕಾದಂಬರಿಯನ್ನು ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಎಂಬ ಶೀರ್ಷಿಕೆಯಲ್ಲಿ ಇಂಗ್ಲಿಷ್‌ಗೆ ಅನುವಾದ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಅನುವಾದಕಿ ವನಮಾಲಾ ವಿಶ್ವನಾಥ ಅವರು ನಾಲ್ಕು ದಶಕಗಳಿಂದ ಬೆಂಗಳೂರಿನ ಗಣ್ಯ ಸಂಸ್ಥೆಗಳಲ್ಲಿ ಇಂಗ್ಲಿಷ್ ಕಲಿಸಿದ್ದಾರೆ. ದ್ವಿಭಾಷಾ ವಿದ್ವಾಂಸರಾಗಿರುವ ಅವರು ಕಥಾ, ಸಾಹಿತ್ಯ ಅಕಾಡೆಮಿ ಮತ್ತು ರಾಷ್ಟ್ರೀಯ ಅನುವಾದ ಮಿಷನ್‌ನ ಸಹಯೋಗದೊಂದಿಗೆ ಇಂಗ್ಲಿಷ್ ಭಾಷಾಂತರದಲ್ಲಿ ಭಾರತೀಯ ಸಾಹಿತ್ಯವನ್ನು ಕಲಿಸಿದ್ದಾರೆ, ಪ್ರಕಟಿಸಿದ್ದಾರೆ ಮತ್ತು ಪ್ರಚಾರ ಮಾಡಿದ್ದಾರೆ.

ಇದನ್ನೂಓದಿ: ಸಂದರ್ಶನ; ರಿಚರ್ಡ್ ಈಟನ್: ಸವೆದ ಹಾದಿಯಲ್ಲಿ ನಡೆಯದ ಇತಿಹಾಸಕಾರ

ಪ್ರಶಸ್ತಿ ವಿಜೇತ ಅನುವಾದಕಿ ಆಗಿರುವ ವನಮಾಲ ಅವರು ಆಧುನಿಕ ಕನ್ನಡ ಲೇಖಕರಾದ ತೇಜಸ್ವಿ (1994), ವೈದೇಹಿ (1998), ಸಾರಾ ಅಬೂಬಕರ್ (1999), ಯು.ಆರ್. ಅನಂತಮೂರ್ತಿ (2001), ಲಂಕೇಶ್ (2003), ಮತ್ತು ಗುಲ್ವಾಡಿ ವೆಂಕಟ ರಾವ್ (2019) ಅವರ ಕೃತಿಗಳನ್ನು ಅನುವಾದ ಮಾಡಿದ್ದಾರೆ. ಅಷ್ಟೆ ಅಲ್ಲದೆ, ವಚನ (2012); ದಿ ಲೈಫ್ ಆಫ್ ಹರಿಶ್ಚಂದ್ರ (ಹಾರ್ವರ್ಡ್ ಯೂನಿವರ್ಸಿಟಿ ಪ್ರೆಸ್, 2017); ಮತ್ತು ವಡ್ಡಾರಾಧನೆಯನ್ನು ಕೂಡಾ ಅವರು ಅನುವಾದ ಮಾಡಿದ್ದಾರೆ. ಅಶೋಕ ವಿಶ್ವವಿದ್ಯಾನಿಲಯದಲ್ಲಿ ಭಾಷಾಂತರ ಫೆಲೋ ಆಗಿರುವ ಅವರು ಪ್ರಸ್ತುತ ಎಲ್. ತೋಲ್ಪಾಡಿಯವರ ಪ್ರಬಂಧ ಸಂಗ್ರಹ, ‘ಮ್ಯೂಸಿಂಗ್ಸ್ ಆನ್ ದಿ ಮಹಾಭಾರತ’ವನ್ನು ಅನುವಾದಿಸುತ್ತಿದ್ದಾರೆ.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

ತಮ್ಮ ಅನುವಾದಿತ ಕೃತಿ ‘ಬ್ರೈಡ್ ಇನ್‌ ದಿ ಹಿಲ್ಸ್‌’ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವನಮಾಲ ಅವರು, ”ಕನ್ನಡ ಕಾದಂಬರಿ ಲೋಕದ ಉತ್ತುಂಗ ಶಿಖರ ಎನಿಸಿಕೊಂಡಿರುವ ‘ಮಲೆಗಲಲ್ಲಿ ಮದುಮಗಳು’ ಕೃತಿಯನ್ನು ಸುಮಾರು 30 ವರ್ಷಗಳ ಹಿಂದೆ ಮೊದಲ ಬಾರಿಗೆ ಓದಿದಾಗಲೆ ಅದರ ಆಳ ಅಗಲಗಳನ್ನು ನೋಡಿ ದಂಗಾಗಿ ಬಿಟ್ಟಿದ್ದೆ. ಕಾದಂಬರಿಯ ವಿಸ್ತಾವರವಾದ ಬಿತ್ತಿ ಯಾವುದನ್ನೂ ಯಾರನ್ನೂ ಬಿಡದೆ ಒಳಗೊಳ್ಳುವ ರೀತಿ ಕೆವಿ ಸುಬ್ಬಣ್ಣ ಅವರು ಹೇಳಿದಂತೆ ‘ಮಲೆನಾಡ ಮಹಾಭಾರತ’ ಎನ್ನಿಸುವಂತಹ ಸಂಕೀರ್ಣತೆ ನಮ್ಮ ಮುಂದೆ ಚೈತನ್ಯದಿಂದ ಮಿಡಿಯುತ್ತಿರುವ ಬದುಕನ್ನೆ ಅನಾವರಣ ಮಾಡುತ್ತವೆ. ಇಂತಹ ಮಹಾನ್ ಕೃತಿಯನ್ನು ಅನುವಾದ ಮಾಡಬಹುದು, ನಾನೇ ಮಾಡಿದರೂ ಮಾಡಬಹುದು ಎಂಬ ಕನಸು ಕೂಡಾ ಆಗ ಇರಲಿಲ್ಲ” ಎಂದು ಹೇಳಿದರು.

ಅದಾಗ್ಯೂ, 2017ರಲ್ಲಿ ಹಾರ್ವರ್ಡ್ ಯುನಿವರ್ಸಿಟಿ ಪ್ರೆಸ್‌ಗೆ ‘ಹರಿಶ್ಚಂದ್ರ ಕಾವ್ಯ’ವನ್ನು, 2019ರಲ್ಲಿ ಆಕ್ಸ್‌ಫರ್ಡ್‌ ಯುನಿವರ್ಸಿಟಿ ಪ್ರೆಸ್‌ಗೆ ‘ಇಂದಿರಾ ಬಾಯಿ’ಯಂತಹ ಬಹು ಭಾಷೆಗಳನ್ನು ಬಳಸಿರುವ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದ ಮಾಡಿದ ನಂತರ ಈ ಸಾಹಸಕ್ಕೆ ಕೈ ಹಾಕುವ ಧೈರ್ಯ ಬಂತು ಎಂದು ವನಮಾಲ ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂಓದಿ: ದೇವಿದಯಾಳ್ ಅವರ ’ಡಾ. ಬಾಬಾಸಾಹೇಬ್ ಅಂಬೇಡ್ಕರ್ ದಿನಚರಿ’ ಪುಸ್ತಕದ ಕನ್ನಡಾನುವಾದದಿಂದ ಆಯ್ದ ಅಧ್ಯಾಯ

“ಇಂತಹ ಕಷ್ಟಸಾಧ್ಯವಾದ ಕೃತಿಯನ್ನು ಅನುವಾದ ಮಾಡುವುದು ಒಂದು ಮಾತಾದರೆ, ಅದನ್ನು ಕನ್ನಡೇತರರಿಗೆ ದೊರಕುವಂತೆ ಮಾಡುವುದು ಬೇರೆಯದೆ ಮಾತು. ಹೀಗಾಗಿ Penguin Random House India ನಂತಹ ಪ್ರತಿಷ್ಠಿತ ಸಂಸ್ಥೆ ಕೃತಿ ಅನುವಾದ ಪ್ರಕಟಿಸಲು ಮುಂದಾದಾಗ ನನಗೆ ಈ ಹಿಮಾಲಯವನ್ನು ಏರುವುದಕ್ಕೆ ಬೇಕಾದ ಶಕ್ತಿ ಮತ್ತು ಹುರುಪು ಬಂತು” ಎಂದು ತಿಳಿಸಿದರು. ನಮ್ಮ ಅರಿವನ್ನು ಹಿಗ್ಗಿಸಿ ನಮ್ಮ ವರ್ಣ ವರ್ಗಗಳ ಮಿತಿಗಳನ್ನು ವಿಸ್ತರಿಸಿ, ನಮ್ಮ ಅಸ್ಮಿತೆಗಳ ಎಲ್ಲೆಗಳ ಮಾರುವಂತೆ ನಮ್ಮನ್ನು ಬೆಳೆಸುವ ‘ಎಪಿಕ್ ನೋವೆಲ್’ ಇದು. ಇಂತಹ ಮೇರು ಕೃತಿಯನ್ನು ಅನುವಾದ ಮಾಡುವ ಅವಕಾಶ, ಸವಾಲು, ಸಂತೋಷ ನನ್ನಗಾಗಿದ್ದು, ಇದಕ್ಕಾಗಿ, ನಾನು ಚಿರಋಣಿ ಎಂದು ವನಮಾಲ ಹೇಳಿದರು.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

 

1967ರಲ್ಲಿ ಕನ್ನಡದಲ್ಲಿ ಪ್ರಕಟವಾದ “ಮಲೆಗಳಲ್ಲಿ ಮದುಮಗಳು” ಕಾದಂಬರಿಯನ್ನು ಈ ಹಿಂದೆ 2020ರಲ್ಲಿ ‘ಕುವೆಂಪು ಪ್ರತಿಷ್ಠಾನ’ವು ದಿ ಬ್ರೈಡ್ ಇನ್ ದಿ ರೈನಿ ಮೌಂಟೈನ್ಸ್‌ (The Bride in the Rainy Mountains) ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿತ್ತು. ಅದನ್ನು ಡಾ. ಕೆ.ಎಂ. ಶ್ರೀನಿವಾಸ ಗೌಡ ಮತ್ತು ಜಿ.ಎಸ್ ಶ್ರೀಕಾಂತ ಮೂರ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪೆಂಗ್ವಿನ್ ಪ್ರಕಟಿಸಿರುವ, ವನಮಾಲ ವಿಶ್ವನಾಥ್ ಅನುವಾದಿಸಿರುವ ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಇಂಗ್ಲಿಷ್ ಆವೃತ್ತಿಯ ಬೆಲೆ 799/- ಆಗಿದ್ದು ಪುಸ್ತಕದ ಅಂಗಡಿಗಳನ್ನು ದೊರೆಯುತ್ತದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...