HomeಮುಖಪುಟBride in the Hills | ಕುವೆಂಪು ಕಾದಂಬರಿ 'ಮಲೆಗಳಲ್ಲಿ ಮದುಮಗಳು' ಮತ್ತೆ ಇಂಗ್ಲಿಷ್‌ಗೆ ಅನುವಾದ

Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಅವರ ಶ್ರೇಷ್ಠ ಕೃತಿಗಳಲ್ಲಿ ಒಂದಾದ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಮತ್ತೊಮ್ಮೆ ಇಂಗ್ಲಿಷ್‌ಗೆ ಅನುವಾದಗೊಂಡಿದೆ. ಈ ಬಾರಿ ಖ್ಯಾತ ಪ್ರಕಾಶನ ಸಂಸ್ಥೆಯಾದ ‘ಪೆಂಗ್ವಿನ್ ರಾಂಡೋಕ್‌ ಹೌಸ್ ಇಂಡಿಯಾ’ ಪ್ರಕಟಿಸಿದ್ದು, ಸಾಹಿತಿ, ಪ್ರಾಧ್ಯಾಪಕಿ ವನಮಾಲಾ ವಿಶ್ವನಾಥ ಅವರು ಈ ಬೃಹತ್ ಕಾದಂಬರಿಯನ್ನು ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಎಂಬ ಶೀರ್ಷಿಕೆಯಲ್ಲಿ ಇಂಗ್ಲಿಷ್‌ಗೆ ಅನುವಾದ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಅನುವಾದಕಿ ವನಮಾಲಾ ವಿಶ್ವನಾಥ ಅವರು ನಾಲ್ಕು ದಶಕಗಳಿಂದ ಬೆಂಗಳೂರಿನ ಗಣ್ಯ ಸಂಸ್ಥೆಗಳಲ್ಲಿ ಇಂಗ್ಲಿಷ್ ಕಲಿಸಿದ್ದಾರೆ. ದ್ವಿಭಾಷಾ ವಿದ್ವಾಂಸರಾಗಿರುವ ಅವರು ಕಥಾ, ಸಾಹಿತ್ಯ ಅಕಾಡೆಮಿ ಮತ್ತು ರಾಷ್ಟ್ರೀಯ ಅನುವಾದ ಮಿಷನ್‌ನ ಸಹಯೋಗದೊಂದಿಗೆ ಇಂಗ್ಲಿಷ್ ಭಾಷಾಂತರದಲ್ಲಿ ಭಾರತೀಯ ಸಾಹಿತ್ಯವನ್ನು ಕಲಿಸಿದ್ದಾರೆ, ಪ್ರಕಟಿಸಿದ್ದಾರೆ ಮತ್ತು ಪ್ರಚಾರ ಮಾಡಿದ್ದಾರೆ.

ಇದನ್ನೂಓದಿ: ಸಂದರ್ಶನ; ರಿಚರ್ಡ್ ಈಟನ್: ಸವೆದ ಹಾದಿಯಲ್ಲಿ ನಡೆಯದ ಇತಿಹಾಸಕಾರ

ಪ್ರಶಸ್ತಿ ವಿಜೇತ ಅನುವಾದಕಿ ಆಗಿರುವ ವನಮಾಲ ಅವರು ಆಧುನಿಕ ಕನ್ನಡ ಲೇಖಕರಾದ ತೇಜಸ್ವಿ (1994), ವೈದೇಹಿ (1998), ಸಾರಾ ಅಬೂಬಕರ್ (1999), ಯು.ಆರ್. ಅನಂತಮೂರ್ತಿ (2001), ಲಂಕೇಶ್ (2003), ಮತ್ತು ಗುಲ್ವಾಡಿ ವೆಂಕಟ ರಾವ್ (2019) ಅವರ ಕೃತಿಗಳನ್ನು ಅನುವಾದ ಮಾಡಿದ್ದಾರೆ. ಅಷ್ಟೆ ಅಲ್ಲದೆ, ವಚನ (2012); ದಿ ಲೈಫ್ ಆಫ್ ಹರಿಶ್ಚಂದ್ರ (ಹಾರ್ವರ್ಡ್ ಯೂನಿವರ್ಸಿಟಿ ಪ್ರೆಸ್, 2017); ಮತ್ತು ವಡ್ಡಾರಾಧನೆಯನ್ನು ಕೂಡಾ ಅವರು ಅನುವಾದ ಮಾಡಿದ್ದಾರೆ. ಅಶೋಕ ವಿಶ್ವವಿದ್ಯಾನಿಲಯದಲ್ಲಿ ಭಾಷಾಂತರ ಫೆಲೋ ಆಗಿರುವ ಅವರು ಪ್ರಸ್ತುತ ಎಲ್. ತೋಲ್ಪಾಡಿಯವರ ಪ್ರಬಂಧ ಸಂಗ್ರಹ, ‘ಮ್ಯೂಸಿಂಗ್ಸ್ ಆನ್ ದಿ ಮಹಾಭಾರತ’ವನ್ನು ಅನುವಾದಿಸುತ್ತಿದ್ದಾರೆ.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

ತಮ್ಮ ಅನುವಾದಿತ ಕೃತಿ ‘ಬ್ರೈಡ್ ಇನ್‌ ದಿ ಹಿಲ್ಸ್‌’ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವನಮಾಲ ಅವರು, ”ಕನ್ನಡ ಕಾದಂಬರಿ ಲೋಕದ ಉತ್ತುಂಗ ಶಿಖರ ಎನಿಸಿಕೊಂಡಿರುವ ‘ಮಲೆಗಲಲ್ಲಿ ಮದುಮಗಳು’ ಕೃತಿಯನ್ನು ಸುಮಾರು 30 ವರ್ಷಗಳ ಹಿಂದೆ ಮೊದಲ ಬಾರಿಗೆ ಓದಿದಾಗಲೆ ಅದರ ಆಳ ಅಗಲಗಳನ್ನು ನೋಡಿ ದಂಗಾಗಿ ಬಿಟ್ಟಿದ್ದೆ. ಕಾದಂಬರಿಯ ವಿಸ್ತಾವರವಾದ ಬಿತ್ತಿ ಯಾವುದನ್ನೂ ಯಾರನ್ನೂ ಬಿಡದೆ ಒಳಗೊಳ್ಳುವ ರೀತಿ ಕೆವಿ ಸುಬ್ಬಣ್ಣ ಅವರು ಹೇಳಿದಂತೆ ‘ಮಲೆನಾಡ ಮಹಾಭಾರತ’ ಎನ್ನಿಸುವಂತಹ ಸಂಕೀರ್ಣತೆ ನಮ್ಮ ಮುಂದೆ ಚೈತನ್ಯದಿಂದ ಮಿಡಿಯುತ್ತಿರುವ ಬದುಕನ್ನೆ ಅನಾವರಣ ಮಾಡುತ್ತವೆ. ಇಂತಹ ಮಹಾನ್ ಕೃತಿಯನ್ನು ಅನುವಾದ ಮಾಡಬಹುದು, ನಾನೇ ಮಾಡಿದರೂ ಮಾಡಬಹುದು ಎಂಬ ಕನಸು ಕೂಡಾ ಆಗ ಇರಲಿಲ್ಲ” ಎಂದು ಹೇಳಿದರು.

ಅದಾಗ್ಯೂ, 2017ರಲ್ಲಿ ಹಾರ್ವರ್ಡ್ ಯುನಿವರ್ಸಿಟಿ ಪ್ರೆಸ್‌ಗೆ ‘ಹರಿಶ್ಚಂದ್ರ ಕಾವ್ಯ’ವನ್ನು, 2019ರಲ್ಲಿ ಆಕ್ಸ್‌ಫರ್ಡ್‌ ಯುನಿವರ್ಸಿಟಿ ಪ್ರೆಸ್‌ಗೆ ‘ಇಂದಿರಾ ಬಾಯಿ’ಯಂತಹ ಬಹು ಭಾಷೆಗಳನ್ನು ಬಳಸಿರುವ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದ ಮಾಡಿದ ನಂತರ ಈ ಸಾಹಸಕ್ಕೆ ಕೈ ಹಾಕುವ ಧೈರ್ಯ ಬಂತು ಎಂದು ವನಮಾಲ ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂಓದಿ: ದೇವಿದಯಾಳ್ ಅವರ ’ಡಾ. ಬಾಬಾಸಾಹೇಬ್ ಅಂಬೇಡ್ಕರ್ ದಿನಚರಿ’ ಪುಸ್ತಕದ ಕನ್ನಡಾನುವಾದದಿಂದ ಆಯ್ದ ಅಧ್ಯಾಯ

“ಇಂತಹ ಕಷ್ಟಸಾಧ್ಯವಾದ ಕೃತಿಯನ್ನು ಅನುವಾದ ಮಾಡುವುದು ಒಂದು ಮಾತಾದರೆ, ಅದನ್ನು ಕನ್ನಡೇತರರಿಗೆ ದೊರಕುವಂತೆ ಮಾಡುವುದು ಬೇರೆಯದೆ ಮಾತು. ಹೀಗಾಗಿ Penguin Random House India ನಂತಹ ಪ್ರತಿಷ್ಠಿತ ಸಂಸ್ಥೆ ಕೃತಿ ಅನುವಾದ ಪ್ರಕಟಿಸಲು ಮುಂದಾದಾಗ ನನಗೆ ಈ ಹಿಮಾಲಯವನ್ನು ಏರುವುದಕ್ಕೆ ಬೇಕಾದ ಶಕ್ತಿ ಮತ್ತು ಹುರುಪು ಬಂತು” ಎಂದು ತಿಳಿಸಿದರು. ನಮ್ಮ ಅರಿವನ್ನು ಹಿಗ್ಗಿಸಿ ನಮ್ಮ ವರ್ಣ ವರ್ಗಗಳ ಮಿತಿಗಳನ್ನು ವಿಸ್ತರಿಸಿ, ನಮ್ಮ ಅಸ್ಮಿತೆಗಳ ಎಲ್ಲೆಗಳ ಮಾರುವಂತೆ ನಮ್ಮನ್ನು ಬೆಳೆಸುವ ‘ಎಪಿಕ್ ನೋವೆಲ್’ ಇದು. ಇಂತಹ ಮೇರು ಕೃತಿಯನ್ನು ಅನುವಾದ ಮಾಡುವ ಅವಕಾಶ, ಸವಾಲು, ಸಂತೋಷ ನನ್ನಗಾಗಿದ್ದು, ಇದಕ್ಕಾಗಿ, ನಾನು ಚಿರಋಣಿ ಎಂದು ವನಮಾಲ ಹೇಳಿದರು.

Bride in the Hills,ಕುವೆಂಪು ಕಾದಂಬರಿ,ಮಲೆಗಳಲ್ಲಿ ಮದುಮಗಳು, ಇಂಗ್ಲಿಷ್‌,ಅನುವಾದ, Novel, English, Translation,

 

1967ರಲ್ಲಿ ಕನ್ನಡದಲ್ಲಿ ಪ್ರಕಟವಾದ “ಮಲೆಗಳಲ್ಲಿ ಮದುಮಗಳು” ಕಾದಂಬರಿಯನ್ನು ಈ ಹಿಂದೆ 2020ರಲ್ಲಿ ‘ಕುವೆಂಪು ಪ್ರತಿಷ್ಠಾನ’ವು ದಿ ಬ್ರೈಡ್ ಇನ್ ದಿ ರೈನಿ ಮೌಂಟೈನ್ಸ್‌ (The Bride in the Rainy Mountains) ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿತ್ತು. ಅದನ್ನು ಡಾ. ಕೆ.ಎಂ. ಶ್ರೀನಿವಾಸ ಗೌಡ ಮತ್ತು ಜಿ.ಎಸ್ ಶ್ರೀಕಾಂತ ಮೂರ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪೆಂಗ್ವಿನ್ ಪ್ರಕಟಿಸಿರುವ, ವನಮಾಲ ವಿಶ್ವನಾಥ್ ಅನುವಾದಿಸಿರುವ ‘ಬ್ರೈಡ್ ಇನ್‌ ದಿ ಹಿಲ್ಸ್‌’ (Bride in the Hills) ಇಂಗ್ಲಿಷ್ ಆವೃತ್ತಿಯ ಬೆಲೆ 799/- ಆಗಿದ್ದು ಪುಸ್ತಕದ ಅಂಗಡಿಗಳನ್ನು ದೊರೆಯುತ್ತದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...