Homeಮುಖಪುಟಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್

ಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್

- Advertisement -
- Advertisement -

ಗುರಾತಿನ ಮೋರ್ಬಿ ಸೇತುವೆ ಕುಸಿದು 141 ಜನರು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ #Go_Back_Modi ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದ್ದು, ಇದನ್ನು ವಿರೋಧಿಸಿ ಪ್ರಧಾನಿ ಬೆಂಬಲಿಗರು #GujaratWithModiJi ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಬೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ರ್‍ಯಾಲಿ ನಡೆಸಲು ಯೋಜಿಸಿಕೊಂಡಿದ್ದರು. ಈ ವೇಳೆಗೆ ಸೇತುವೆ ಕುಸಿದು ಬಿದ್ದಿದ್ದು, ಇದರ ನಂತರ ತಮ್ಮ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

#Go_Back_Modi ಹ್ಯಾಶ್‌ಟ್ಯಾಗ್‌ನೊಂದಿಗಿನ ಹಲವಾರು ಟ್ವೀಟ್‌ಗಳು ಆಗಿದ್ದು ಪ್ರಧಾನಿಯನ್ನು ಟೀಕಿಸಿವೆ.

ಗುಜರಾತಿನ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಅವರು,“ಪ್ರಧಾನಿ ಭೇಟಿಗೂ ಮುನ್ನ ಮೊರ್ಬಿ ಸಿವಿಲ್ ಆಸ್ಪತ್ರೆಯ ಪೇಂಟಿಂಗ್ ಆರಂಭವಾಗಿದೆ! ಇದಕ್ಕೆ ಯಾರು ಆದೇಶಿಸಿದರೋ ಅವರಿಗೆ ನಾಚಿಕೆಯಾಗಬೇಕು. ಸ್ವಚ್ಛತೆ ಕಾಪಾಡಬೇಕು ಎಂದಾಗ ಅದನ್ನು ಉಳಿಸಿಕೊಳ್ಳಲಾಗಲಿಲ್ಲ, ಇಷ್ಟು ಜರನು ಸಾವಿಗೀಡಾಗಿ ದೇಶ ಅಳುತ್ತಿರುವಾಗ ಬಣ್ಣ ಹಚ್ಚುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ರಾಜೇಶ್ ಎಂಬ ಟ್ವಿಟರ್‌ ಬಳಕೆದಾರದು,“27 ವರ್ಷಗಳ ಕಾಲ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿವೆ” ಎಂದು ಟ್ವೀಟ್ ಮಾಡಿದ್ದು, ಚಿತ್ರದಲ್ಲಿ ಮೋದಿ ಭೇಟಿ ನೀಡಲಿರುವ ಆಸ್ಪತ್ರೆ ರಿಪೇರಿ ಮಾಡುತ್ತಿರುವ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಪೋಂಡಿ ಅಶೋಕ್‌‌ ಅವರು,“ದಯವಿಟ್ಟು ಹಿಂತಿರುಗಿ ಹೋಗಿ ಮೋದಿ” ಎಂದು ಟ್ವೀಟ್ ಮಾಡಿದ್ದು, “ಗುಜರಾತ್ ಮೋಡೆಲ್” ಎಂದು ಬರೆದಿರುವ ಸೇತುವೆಯೊಂದು ಮುರಿದು ಬೀಳುವ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಮೋನು ವೆರ್ಮಾ ಅವರು, ಭಾರತಕ್ಕೆ ಪ್ರಧಾನಮಂತ್ರಿ ಬೇಕು ಹೊರತು ಜೋಕರ್‌ ಅಲ್ಲ ಎಂದು ಟ್ವೀಟ್‌ ಮಾಡಿದ್ದು, ಪ್ರಧಾನಿ ಮೋದಿ ಅವರ ಚಿತ್ರವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಇದರ ನಡುವೆ #GujaratWithModiJi ಎಂಬ ಹ್ಯಾಶ್ ಟ್ಯಾಗ್‌ ಕೂಡಾ ಟ್ರೆಂಡ್ ಆಗಿದೆ.

“ಗುಜರಾತ್ ಹಿಂದೆ ನಮೋ ಜೊತೆಗಿತ್ತು…ಗುಜರಾತ್ ನಮೋ ಜೊತೆಗಿದೆ… ಗುಜರಾತ್ ಯಾವತ್ತಿಗೂ ನರೇಂದ್ರ ಮೋದಿ ಅವರ ಜೊತೆಗಿರುತ್ತದೆ” ಎಂದು ಟ್ವಿಟರ್‌‌ ಬಳಕೆದಾರರೊಬ್ಬರು ಬರೆದಿದ್ದಾರೆ.

ಇದನ್ನೂ ಓದಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಆಡಳಿತಾರೂಢ ಬಿಜೆಪಿ ಗಾಯಾಳುಗಳ ಆರೈಕೆಗಿಂತ ಮೋದಿಯವರ ಭೇಟಿಗೆ ಆದ್ಯತೆ ನೀಡಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಈ ನಡುವೆ ಅಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದ್ದು, CFL ಬಲ್ಬ್‌ಗಳು, ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳಲ್ಲಿ ಪರಿಣತಿ ಹೊಂದಿರುವ ಒರೆವಾ ಗ್ರೂಪ್‌ಗೆ 100 ವರ್ಷ ಹಳೆಯ ಸೇತುವೆಯ ನಿರ್ವಹಣೆಯ ಗುತ್ತಿಗೆಯನ್ನು ಮೋರ್ಬಿ ಪುರಸಭೆಯಿಂದ ನೀಡಿದೆ ಎಂದು ತಿಳಿದು ಬಂದಿದೆ.

ಈ ವರ್ಷದ ಮಾರ್ಚ್‌ನಲ್ಲಿ ಮೋರ್ಬಿ ಪುರಸಭೆಯಿಂದ ಒರೆವಾ ಗ್ರೂಪ್‌ಗೆ ನಿರ್ವಹಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿದೆ. ಈ ನಡುವೆ ಸೇತುವೆಯ ಫಿಟ್ನೆಸ್‌ನ ಪ್ರಮಾಣ ಪತ್ರ ನೀಡದೆ ಸೇತುವೆಯನ್ನು ತೆರೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಮಧ್ಯೆ ಗುಜರಾತ್ ಪೊಲೀಸರು ಟಿಕೆಟ್‌ ಕೌಂಟರ್‌ನಲ್ಲಿದ್ದ ಇಬ್ಬರು ಗುಮಾಸ್ತರು ಸೇರಿದಂತೆ ಒರೆವಾ ಗ್ರೂಪಿನ ಒಂಬತ್ತು ಜನರನ್ನು ಬಂಧಿಸಿದೆ. ಒರೆವಾ ಗ್ರೂಪಿನ ಇಬ್ಬರು ಮ್ಯಾನೇಜರ್‌ಗಳು, ಇಬ್ಬರು ಗುತ್ತಿಗೆದಾರರು, ಮೂವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಟಿಕೆಟ್ ಕೌಂಟರ್‌ನ ಗುಮಾಸ್ತರು ಈ ಬಂಧಿತರಲ್ಲಿ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It is shameful to arrest counter booking Clarks and security guards who are casual employees of the company. They are not responsible for bridge collapse. The board of directors like Managing Director or chairman should have been arrested if they are capable policemen.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....