Homeಮುಖಪುಟಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್

ಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್

- Advertisement -
- Advertisement -

ಗುರಾತಿನ ಮೋರ್ಬಿ ಸೇತುವೆ ಕುಸಿದು 141 ಜನರು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ #Go_Back_Modi ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದ್ದು, ಇದನ್ನು ವಿರೋಧಿಸಿ ಪ್ರಧಾನಿ ಬೆಂಬಲಿಗರು #GujaratWithModiJi ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಬೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ರ್‍ಯಾಲಿ ನಡೆಸಲು ಯೋಜಿಸಿಕೊಂಡಿದ್ದರು. ಈ ವೇಳೆಗೆ ಸೇತುವೆ ಕುಸಿದು ಬಿದ್ದಿದ್ದು, ಇದರ ನಂತರ ತಮ್ಮ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

#Go_Back_Modi ಹ್ಯಾಶ್‌ಟ್ಯಾಗ್‌ನೊಂದಿಗಿನ ಹಲವಾರು ಟ್ವೀಟ್‌ಗಳು ಆಗಿದ್ದು ಪ್ರಧಾನಿಯನ್ನು ಟೀಕಿಸಿವೆ.

ಗುಜರಾತಿನ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಅವರು,“ಪ್ರಧಾನಿ ಭೇಟಿಗೂ ಮುನ್ನ ಮೊರ್ಬಿ ಸಿವಿಲ್ ಆಸ್ಪತ್ರೆಯ ಪೇಂಟಿಂಗ್ ಆರಂಭವಾಗಿದೆ! ಇದಕ್ಕೆ ಯಾರು ಆದೇಶಿಸಿದರೋ ಅವರಿಗೆ ನಾಚಿಕೆಯಾಗಬೇಕು. ಸ್ವಚ್ಛತೆ ಕಾಪಾಡಬೇಕು ಎಂದಾಗ ಅದನ್ನು ಉಳಿಸಿಕೊಳ್ಳಲಾಗಲಿಲ್ಲ, ಇಷ್ಟು ಜರನು ಸಾವಿಗೀಡಾಗಿ ದೇಶ ಅಳುತ್ತಿರುವಾಗ ಬಣ್ಣ ಹಚ್ಚುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ರಾಜೇಶ್ ಎಂಬ ಟ್ವಿಟರ್‌ ಬಳಕೆದಾರದು,“27 ವರ್ಷಗಳ ಕಾಲ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿವೆ” ಎಂದು ಟ್ವೀಟ್ ಮಾಡಿದ್ದು, ಚಿತ್ರದಲ್ಲಿ ಮೋದಿ ಭೇಟಿ ನೀಡಲಿರುವ ಆಸ್ಪತ್ರೆ ರಿಪೇರಿ ಮಾಡುತ್ತಿರುವ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಪೋಂಡಿ ಅಶೋಕ್‌‌ ಅವರು,“ದಯವಿಟ್ಟು ಹಿಂತಿರುಗಿ ಹೋಗಿ ಮೋದಿ” ಎಂದು ಟ್ವೀಟ್ ಮಾಡಿದ್ದು, “ಗುಜರಾತ್ ಮೋಡೆಲ್” ಎಂದು ಬರೆದಿರುವ ಸೇತುವೆಯೊಂದು ಮುರಿದು ಬೀಳುವ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಮೋನು ವೆರ್ಮಾ ಅವರು, ಭಾರತಕ್ಕೆ ಪ್ರಧಾನಮಂತ್ರಿ ಬೇಕು ಹೊರತು ಜೋಕರ್‌ ಅಲ್ಲ ಎಂದು ಟ್ವೀಟ್‌ ಮಾಡಿದ್ದು, ಪ್ರಧಾನಿ ಮೋದಿ ಅವರ ಚಿತ್ರವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಇದರ ನಡುವೆ #GujaratWithModiJi ಎಂಬ ಹ್ಯಾಶ್ ಟ್ಯಾಗ್‌ ಕೂಡಾ ಟ್ರೆಂಡ್ ಆಗಿದೆ.

“ಗುಜರಾತ್ ಹಿಂದೆ ನಮೋ ಜೊತೆಗಿತ್ತು…ಗುಜರಾತ್ ನಮೋ ಜೊತೆಗಿದೆ… ಗುಜರಾತ್ ಯಾವತ್ತಿಗೂ ನರೇಂದ್ರ ಮೋದಿ ಅವರ ಜೊತೆಗಿರುತ್ತದೆ” ಎಂದು ಟ್ವಿಟರ್‌‌ ಬಳಕೆದಾರರೊಬ್ಬರು ಬರೆದಿದ್ದಾರೆ.

ಇದನ್ನೂ ಓದಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಆಡಳಿತಾರೂಢ ಬಿಜೆಪಿ ಗಾಯಾಳುಗಳ ಆರೈಕೆಗಿಂತ ಮೋದಿಯವರ ಭೇಟಿಗೆ ಆದ್ಯತೆ ನೀಡಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಈ ನಡುವೆ ಅಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದ್ದು, CFL ಬಲ್ಬ್‌ಗಳು, ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳಲ್ಲಿ ಪರಿಣತಿ ಹೊಂದಿರುವ ಒರೆವಾ ಗ್ರೂಪ್‌ಗೆ 100 ವರ್ಷ ಹಳೆಯ ಸೇತುವೆಯ ನಿರ್ವಹಣೆಯ ಗುತ್ತಿಗೆಯನ್ನು ಮೋರ್ಬಿ ಪುರಸಭೆಯಿಂದ ನೀಡಿದೆ ಎಂದು ತಿಳಿದು ಬಂದಿದೆ.

ಈ ವರ್ಷದ ಮಾರ್ಚ್‌ನಲ್ಲಿ ಮೋರ್ಬಿ ಪುರಸಭೆಯಿಂದ ಒರೆವಾ ಗ್ರೂಪ್‌ಗೆ ನಿರ್ವಹಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿದೆ. ಈ ನಡುವೆ ಸೇತುವೆಯ ಫಿಟ್ನೆಸ್‌ನ ಪ್ರಮಾಣ ಪತ್ರ ನೀಡದೆ ಸೇತುವೆಯನ್ನು ತೆರೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಮಧ್ಯೆ ಗುಜರಾತ್ ಪೊಲೀಸರು ಟಿಕೆಟ್‌ ಕೌಂಟರ್‌ನಲ್ಲಿದ್ದ ಇಬ್ಬರು ಗುಮಾಸ್ತರು ಸೇರಿದಂತೆ ಒರೆವಾ ಗ್ರೂಪಿನ ಒಂಬತ್ತು ಜನರನ್ನು ಬಂಧಿಸಿದೆ. ಒರೆವಾ ಗ್ರೂಪಿನ ಇಬ್ಬರು ಮ್ಯಾನೇಜರ್‌ಗಳು, ಇಬ್ಬರು ಗುತ್ತಿಗೆದಾರರು, ಮೂವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಟಿಕೆಟ್ ಕೌಂಟರ್‌ನ ಗುಮಾಸ್ತರು ಈ ಬಂಧಿತರಲ್ಲಿ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It is shameful to arrest counter booking Clarks and security guards who are casual employees of the company. They are not responsible for bridge collapse. The board of directors like Managing Director or chairman should have been arrested if they are capable policemen.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...