Homeಮುಖಪುಟಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್

ಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್

- Advertisement -
- Advertisement -

ಗುರಾತಿನ ಮೋರ್ಬಿ ಸೇತುವೆ ಕುಸಿದು 141 ಜನರು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ #Go_Back_Modi ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದ್ದು, ಇದನ್ನು ವಿರೋಧಿಸಿ ಪ್ರಧಾನಿ ಬೆಂಬಲಿಗರು #GujaratWithModiJi ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಬೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ರ್‍ಯಾಲಿ ನಡೆಸಲು ಯೋಜಿಸಿಕೊಂಡಿದ್ದರು. ಈ ವೇಳೆಗೆ ಸೇತುವೆ ಕುಸಿದು ಬಿದ್ದಿದ್ದು, ಇದರ ನಂತರ ತಮ್ಮ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

#Go_Back_Modi ಹ್ಯಾಶ್‌ಟ್ಯಾಗ್‌ನೊಂದಿಗಿನ ಹಲವಾರು ಟ್ವೀಟ್‌ಗಳು ಆಗಿದ್ದು ಪ್ರಧಾನಿಯನ್ನು ಟೀಕಿಸಿವೆ.

ಗುಜರಾತಿನ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಅವರು,“ಪ್ರಧಾನಿ ಭೇಟಿಗೂ ಮುನ್ನ ಮೊರ್ಬಿ ಸಿವಿಲ್ ಆಸ್ಪತ್ರೆಯ ಪೇಂಟಿಂಗ್ ಆರಂಭವಾಗಿದೆ! ಇದಕ್ಕೆ ಯಾರು ಆದೇಶಿಸಿದರೋ ಅವರಿಗೆ ನಾಚಿಕೆಯಾಗಬೇಕು. ಸ್ವಚ್ಛತೆ ಕಾಪಾಡಬೇಕು ಎಂದಾಗ ಅದನ್ನು ಉಳಿಸಿಕೊಳ್ಳಲಾಗಲಿಲ್ಲ, ಇಷ್ಟು ಜರನು ಸಾವಿಗೀಡಾಗಿ ದೇಶ ಅಳುತ್ತಿರುವಾಗ ಬಣ್ಣ ಹಚ್ಚುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ರಾಜೇಶ್ ಎಂಬ ಟ್ವಿಟರ್‌ ಬಳಕೆದಾರದು,“27 ವರ್ಷಗಳ ಕಾಲ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿವೆ” ಎಂದು ಟ್ವೀಟ್ ಮಾಡಿದ್ದು, ಚಿತ್ರದಲ್ಲಿ ಮೋದಿ ಭೇಟಿ ನೀಡಲಿರುವ ಆಸ್ಪತ್ರೆ ರಿಪೇರಿ ಮಾಡುತ್ತಿರುವ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಪೋಂಡಿ ಅಶೋಕ್‌‌ ಅವರು,“ದಯವಿಟ್ಟು ಹಿಂತಿರುಗಿ ಹೋಗಿ ಮೋದಿ” ಎಂದು ಟ್ವೀಟ್ ಮಾಡಿದ್ದು, “ಗುಜರಾತ್ ಮೋಡೆಲ್” ಎಂದು ಬರೆದಿರುವ ಸೇತುವೆಯೊಂದು ಮುರಿದು ಬೀಳುವ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಮೋನು ವೆರ್ಮಾ ಅವರು, ಭಾರತಕ್ಕೆ ಪ್ರಧಾನಮಂತ್ರಿ ಬೇಕು ಹೊರತು ಜೋಕರ್‌ ಅಲ್ಲ ಎಂದು ಟ್ವೀಟ್‌ ಮಾಡಿದ್ದು, ಪ್ರಧಾನಿ ಮೋದಿ ಅವರ ಚಿತ್ರವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಇದರ ನಡುವೆ #GujaratWithModiJi ಎಂಬ ಹ್ಯಾಶ್ ಟ್ಯಾಗ್‌ ಕೂಡಾ ಟ್ರೆಂಡ್ ಆಗಿದೆ.

“ಗುಜರಾತ್ ಹಿಂದೆ ನಮೋ ಜೊತೆಗಿತ್ತು…ಗುಜರಾತ್ ನಮೋ ಜೊತೆಗಿದೆ… ಗುಜರಾತ್ ಯಾವತ್ತಿಗೂ ನರೇಂದ್ರ ಮೋದಿ ಅವರ ಜೊತೆಗಿರುತ್ತದೆ” ಎಂದು ಟ್ವಿಟರ್‌‌ ಬಳಕೆದಾರರೊಬ್ಬರು ಬರೆದಿದ್ದಾರೆ.

ಇದನ್ನೂ ಓದಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಆಡಳಿತಾರೂಢ ಬಿಜೆಪಿ ಗಾಯಾಳುಗಳ ಆರೈಕೆಗಿಂತ ಮೋದಿಯವರ ಭೇಟಿಗೆ ಆದ್ಯತೆ ನೀಡಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಈ ನಡುವೆ ಅಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದ್ದು, CFL ಬಲ್ಬ್‌ಗಳು, ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳಲ್ಲಿ ಪರಿಣತಿ ಹೊಂದಿರುವ ಒರೆವಾ ಗ್ರೂಪ್‌ಗೆ 100 ವರ್ಷ ಹಳೆಯ ಸೇತುವೆಯ ನಿರ್ವಹಣೆಯ ಗುತ್ತಿಗೆಯನ್ನು ಮೋರ್ಬಿ ಪುರಸಭೆಯಿಂದ ನೀಡಿದೆ ಎಂದು ತಿಳಿದು ಬಂದಿದೆ.

ಈ ವರ್ಷದ ಮಾರ್ಚ್‌ನಲ್ಲಿ ಮೋರ್ಬಿ ಪುರಸಭೆಯಿಂದ ಒರೆವಾ ಗ್ರೂಪ್‌ಗೆ ನಿರ್ವಹಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿದೆ. ಈ ನಡುವೆ ಸೇತುವೆಯ ಫಿಟ್ನೆಸ್‌ನ ಪ್ರಮಾಣ ಪತ್ರ ನೀಡದೆ ಸೇತುವೆಯನ್ನು ತೆರೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಮಧ್ಯೆ ಗುಜರಾತ್ ಪೊಲೀಸರು ಟಿಕೆಟ್‌ ಕೌಂಟರ್‌ನಲ್ಲಿದ್ದ ಇಬ್ಬರು ಗುಮಾಸ್ತರು ಸೇರಿದಂತೆ ಒರೆವಾ ಗ್ರೂಪಿನ ಒಂಬತ್ತು ಜನರನ್ನು ಬಂಧಿಸಿದೆ. ಒರೆವಾ ಗ್ರೂಪಿನ ಇಬ್ಬರು ಮ್ಯಾನೇಜರ್‌ಗಳು, ಇಬ್ಬರು ಗುತ್ತಿಗೆದಾರರು, ಮೂವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಟಿಕೆಟ್ ಕೌಂಟರ್‌ನ ಗುಮಾಸ್ತರು ಈ ಬಂಧಿತರಲ್ಲಿ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It is shameful to arrest counter booking Clarks and security guards who are casual employees of the company. They are not responsible for bridge collapse. The board of directors like Managing Director or chairman should have been arrested if they are capable policemen.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...