Homeರಾಷ್ಟ್ರೀಯಸೇತುವೆ ಕುಸಿತ | ಗುಜರಾತ್ ಸರ್ಕಾರ ಇನ್ನೂ ಸಾರ್ವಜನಿಕರ ಕ್ಷಮೆ ಯಾಚಿಸಿಲ್ಲ: ಪಿ.ಚಿದಂಬರಂ

ಸೇತುವೆ ಕುಸಿತ | ಗುಜರಾತ್ ಸರ್ಕಾರ ಇನ್ನೂ ಸಾರ್ವಜನಿಕರ ಕ್ಷಮೆ ಯಾಚಿಸಿಲ್ಲ: ಪಿ.ಚಿದಂಬರಂ

- Advertisement -
- Advertisement -

ಕಳೆದ ವಾರ ಗುಜರಾತ್‌ನ ಮೊರ್ಬಿಯಲ್ಲಿ ಸೇತುವೆ ಕುಸಿದು 141 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಬಗ್ಗೆ ಕಾಂಗ್ರೆಸ್‌‌ ಸಂಸದ ಪಿ. ಚಿದಂಬರಂ ಮಂಗಳವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ವಾಸ್ತವದಲ್ಲಿ ಸರ್ಕಾರದಿಂದ ಯಾರೂ ಸಾರ್ವಜನಿಕರಲ್ಲಿ ಕ್ಷಮೆಯಾಚಿಸಲಿಲ್ಲ ಎಂದು ಸೂಚಿಸಿದ್ದಾರೆ. ಅಲ್ಲದೆ, ಗುಜರಾತ್‌ ಬಿಜೆಪಿಯನ್ನು ಪಿ.ಚಿದಂಬರಂ ತರಾಟೆಗೆ ತೆಗೆದುಕೊಂಡಿದ್ದಾರೆ.

“…ಅತ್ಯಂತ ಆಘಾತಕಾರಿ ಬೆಳವಣಿಗೆಯೆಂದರೆ, ದುರಂತಕ್ಕೆ ಸರ್ಕಾರದ ಪರವಾಗಿ ಯಾರೂ ಕ್ಷಮೆಯಾಚಿಸಲಿಲ್ಲ. ಘಟನೆಯ ಜವಾಬ್ದಾರಿ ಹೊತ್ತು ಯಾರೂ ರಾಜೀನಾಮೆ ನೀಡಿಲ್ಲ. ಮೋರ್ಬಿ ಸೇತುವೆ ಕುಸಿತವು ಗುಜರಾತ್‌‌ನ ಹೆಸರಿಗೆ ಅವಮಾನ ತಂದಿದೆ” ಎಂದು ಪಿ. ಚಿದಂಬರಂ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊರ್ಬಿಯ ‘ತೂಗುವ ಸೇತುವೆ’ ಕುಸಿದು 141 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 6 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ಸರಿಯಾದ ಅನುಮತಿಯಿಲ್ಲದೆ ಸೇತುವೆಯನ್ನು ಪುನಃ ತೆರೆಯಲಾಗಿದ್ದು, ಜನದಟ್ಟಣೆಯಿಂದಾಗಿ ಸೇತುವೆ ಮುರಿದುಹೋಗಿದೆ ಎಂದು ಪ್ರಾಥಮಿಕ ವಿಚಾರಣೆಗಳು ದೃಢಪಡಿಸಿವೆ. ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳನ್ನು ತಯಾರಿಸುವ ಖಾಸಗಿ ಕಂಪನಿಯಾದ ಓರೆವಾ ಗ್ರೂಪ್‌ಗೆ ನವೀಕರಣ ಮತ್ತು ನಿರ್ವಹಣೆಯ ಗುತ್ತಿಗೆ ನೀಡಲಾಗಿತ್ತು.

ಹೆಸರು ಹೇಳಲಿಚ್ಛಿಸದ ಹಿರಿಯ ಅಧಿಕಾರಿಯೊಬ್ಬರು ಒರೆವಾ ಸಂಸ್ಥೆ ಮತ್ತು ಮೊರ್ಬಿ ಮುನ್ಸಿಪಾಲಿಟಿ ಅಧಿಕಾರಿಗಳ ನಡುವಿನ ಒಪ್ಪಂದದಲ್ಲಿ ಕೆಲವು ಕಾರ್ಯವಿಧಾನದ ಲೋಪಗಳು ನಡೆದಿದೆ ಎಂದು ಹೇಳಿದ್ದಾರೆ.

ಕಳೆದ ವಾರ ಗುಜರಾತ್ ಸರ್ಕಾರವು ಮೋರ್ಬಿ ಮುನ್ಸಿಪಾಲಿಟಿಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಾಲಾ ಅವರನ್ನು ಅಮಾನತುಗೊಳಿಸಿದೆ. ಅಮಾನತು ಆದೇಶದಲ್ಲಿ ಯಾವುದೇ ನಿರ್ದಿಷ್ಟ ಆರೋಪವನ್ನು ಮಾಡಿಲ್ಲ ಎಂದು ಹಿಂದೂಸ್ಥಾನ್‌ ಟೈಮ್ಸ್‌ ವರದಿ ಹೇಳಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಸೋಮವಾರ ಮಾತನಾಡಿದ್ದ ಮತ್ತೊಬ್ಬ ಕಾಂಗ್ರೆಸ್ ನಾಯಕ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, “ದುರಂತವು ಬಿಜೆಪಿಯ 27 ವರ್ಷಗಳ ಆಡಳಿತದ ದುರಾಡಳಿತವನ್ನು ಬಹಿರಂಗಪಡಿಸಿದೆ…” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರದಿಂದ ವರದಿಯನ್ನು ಕೇಳಿದ್ದು, ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ನ್ಯಾಯಾಲಯವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಬಯಸಿದ್ದು, ನವೆಂಬರ್ 14 ರೊಳಗೆ ಸ್ಥಿತಿಗತಿ ವರದಿಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದೆ. ಅಂದೆ ಪ್ರಕರಣ ಮತ್ತೆ ವಿಚಾರಣೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...