Homeರಾಷ್ಟ್ರೀಯಸೇತುವೆ ಕುಸಿತ | ಗುಜರಾತ್ ಸರ್ಕಾರ ಇನ್ನೂ ಸಾರ್ವಜನಿಕರ ಕ್ಷಮೆ ಯಾಚಿಸಿಲ್ಲ: ಪಿ.ಚಿದಂಬರಂ

ಸೇತುವೆ ಕುಸಿತ | ಗುಜರಾತ್ ಸರ್ಕಾರ ಇನ್ನೂ ಸಾರ್ವಜನಿಕರ ಕ್ಷಮೆ ಯಾಚಿಸಿಲ್ಲ: ಪಿ.ಚಿದಂಬರಂ

- Advertisement -
- Advertisement -

ಕಳೆದ ವಾರ ಗುಜರಾತ್‌ನ ಮೊರ್ಬಿಯಲ್ಲಿ ಸೇತುವೆ ಕುಸಿದು 141 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಬಗ್ಗೆ ಕಾಂಗ್ರೆಸ್‌‌ ಸಂಸದ ಪಿ. ಚಿದಂಬರಂ ಮಂಗಳವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ವಾಸ್ತವದಲ್ಲಿ ಸರ್ಕಾರದಿಂದ ಯಾರೂ ಸಾರ್ವಜನಿಕರಲ್ಲಿ ಕ್ಷಮೆಯಾಚಿಸಲಿಲ್ಲ ಎಂದು ಸೂಚಿಸಿದ್ದಾರೆ. ಅಲ್ಲದೆ, ಗುಜರಾತ್‌ ಬಿಜೆಪಿಯನ್ನು ಪಿ.ಚಿದಂಬರಂ ತರಾಟೆಗೆ ತೆಗೆದುಕೊಂಡಿದ್ದಾರೆ.

“…ಅತ್ಯಂತ ಆಘಾತಕಾರಿ ಬೆಳವಣಿಗೆಯೆಂದರೆ, ದುರಂತಕ್ಕೆ ಸರ್ಕಾರದ ಪರವಾಗಿ ಯಾರೂ ಕ್ಷಮೆಯಾಚಿಸಲಿಲ್ಲ. ಘಟನೆಯ ಜವಾಬ್ದಾರಿ ಹೊತ್ತು ಯಾರೂ ರಾಜೀನಾಮೆ ನೀಡಿಲ್ಲ. ಮೋರ್ಬಿ ಸೇತುವೆ ಕುಸಿತವು ಗುಜರಾತ್‌‌ನ ಹೆಸರಿಗೆ ಅವಮಾನ ತಂದಿದೆ” ಎಂದು ಪಿ. ಚಿದಂಬರಂ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊರ್ಬಿಯ ‘ತೂಗುವ ಸೇತುವೆ’ ಕುಸಿದು 141 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 6 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ಸರಿಯಾದ ಅನುಮತಿಯಿಲ್ಲದೆ ಸೇತುವೆಯನ್ನು ಪುನಃ ತೆರೆಯಲಾಗಿದ್ದು, ಜನದಟ್ಟಣೆಯಿಂದಾಗಿ ಸೇತುವೆ ಮುರಿದುಹೋಗಿದೆ ಎಂದು ಪ್ರಾಥಮಿಕ ವಿಚಾರಣೆಗಳು ದೃಢಪಡಿಸಿವೆ. ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳನ್ನು ತಯಾರಿಸುವ ಖಾಸಗಿ ಕಂಪನಿಯಾದ ಓರೆವಾ ಗ್ರೂಪ್‌ಗೆ ನವೀಕರಣ ಮತ್ತು ನಿರ್ವಹಣೆಯ ಗುತ್ತಿಗೆ ನೀಡಲಾಗಿತ್ತು.

ಹೆಸರು ಹೇಳಲಿಚ್ಛಿಸದ ಹಿರಿಯ ಅಧಿಕಾರಿಯೊಬ್ಬರು ಒರೆವಾ ಸಂಸ್ಥೆ ಮತ್ತು ಮೊರ್ಬಿ ಮುನ್ಸಿಪಾಲಿಟಿ ಅಧಿಕಾರಿಗಳ ನಡುವಿನ ಒಪ್ಪಂದದಲ್ಲಿ ಕೆಲವು ಕಾರ್ಯವಿಧಾನದ ಲೋಪಗಳು ನಡೆದಿದೆ ಎಂದು ಹೇಳಿದ್ದಾರೆ.

ಕಳೆದ ವಾರ ಗುಜರಾತ್ ಸರ್ಕಾರವು ಮೋರ್ಬಿ ಮುನ್ಸಿಪಾಲಿಟಿಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಾಲಾ ಅವರನ್ನು ಅಮಾನತುಗೊಳಿಸಿದೆ. ಅಮಾನತು ಆದೇಶದಲ್ಲಿ ಯಾವುದೇ ನಿರ್ದಿಷ್ಟ ಆರೋಪವನ್ನು ಮಾಡಿಲ್ಲ ಎಂದು ಹಿಂದೂಸ್ಥಾನ್‌ ಟೈಮ್ಸ್‌ ವರದಿ ಹೇಳಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಸೋಮವಾರ ಮಾತನಾಡಿದ್ದ ಮತ್ತೊಬ್ಬ ಕಾಂಗ್ರೆಸ್ ನಾಯಕ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, “ದುರಂತವು ಬಿಜೆಪಿಯ 27 ವರ್ಷಗಳ ಆಡಳಿತದ ದುರಾಡಳಿತವನ್ನು ಬಹಿರಂಗಪಡಿಸಿದೆ…” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರದಿಂದ ವರದಿಯನ್ನು ಕೇಳಿದ್ದು, ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ನ್ಯಾಯಾಲಯವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಬಯಸಿದ್ದು, ನವೆಂಬರ್ 14 ರೊಳಗೆ ಸ್ಥಿತಿಗತಿ ವರದಿಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದೆ. ಅಂದೆ ಪ್ರಕರಣ ಮತ್ತೆ ವಿಚಾರಣೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...