Homeಕರೋನಾ ತಲ್ಲಣ’ಚಂದನ’ ವಾಹಿನಿಯಲ್ಲಿ ’ಸೇತುಬಂಧ’ ತರಗತಿ ಪ್ರಾರಂಭ: ಸಚಿವ ಸುರೇಶ್ ಕುಮಾರ್‌‌

’ಚಂದನ’ ವಾಹಿನಿಯಲ್ಲಿ ’ಸೇತುಬಂಧ’ ತರಗತಿ ಪ್ರಾರಂಭ: ಸಚಿವ ಸುರೇಶ್ ಕುಮಾರ್‌‌

ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿದ್ದು, ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ವಿಡಿಯೋ ತರಗತಿಯನ್ನು ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಇದಕ್ಕಾಗಿ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಒಂದು ತರಗತಿಯಿಂದ ಮತ್ತೊಂದು ತರಗತಿಗೆ ತೇರ್ಗಡೆ ಹೊಂದುವ ಮಕ್ಕಳಿಗೆ ಹಿಂದಿನ ತರಗತಿಗಳ ಕಲಿಕೆಯನ್ನು ನೆನಪಿಸಿ ಮುಂದಿನ ತರಗತಿಗಳಿಗೆ ಸಿದ್ಧಗೊಳಿಸುವ ತರಗತಿಗಳನ್ನು ‘ಸೇತುಬಂಧ’ ಎಂದು ಹೇಳುತ್ತಾರೆ. ಮಕ್ಕಳ ಕಲಿಕೆಯನ್ನು ಸಮಗ್ರವಾಗಿಸುವ ನಿಟ್ಟಿನಲ್ಲಿ ಒಂದು ಪರಿಪೂರ್ಣ ಕಾರ್ಯಕ್ರಮ ಎಂದು ಸಚಿವರು ತಿಳಿಸಿದರು.

ಇಲಾಖೆಯ ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ-ಡಿಎಸ್‍ಇಆರ್‍ಟಿಯಲ್ಲಿ ಸೇತುಬಂಧ ಕಾರ್ಯಕ್ರಮದ ರೂಪುರೇಷೆ ಮತ್ತು ಸಿದ್ಧತೆಗಳನ್ನು ಬುಧವಾರ ಪರಿಶೀಲಿಸಿದ ಸಚಿವರು, ಇಲಾಖೆ ಸಿದ್ಧಪಡಿಸಿದ ವಿಡಿಯೋ ತರಗತಿಗಳನ್ನು ವೀಕ್ಷಿಸಿದರು.

ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕಲಿಕೆಯನ್ನು ನಿರಂತರವಾಗಿರಿಸಲು ಸಾರ್ವಜನಿಕ ಶಿಕ್ಷಣ ಇಂದಿನ ಸಂದರ್ಭಕ್ಕೆ ಪರಿಣಾಮಕಾರಿಯಾದ ಪರ್ಯಾಯ ಕ್ರಮಗಳಿಗೆ ಚಾಲನೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ 8ರಿಂದ 10ನೇ ತರಗತಿಯ ಸೇತುಬಂದ ವಿಡಿಯೋ ತರಗತಿಗಳು ಚಂದನ ವಾಹಿನಿಯಲ್ಲಿ ಆರಂಭಗೊಳ್ಳಲಿವೆ. ಆ ನಂತರ ಇಂಗ್ಲಿಷ್ ಮಾಧ್ಯಮಗಳಲ್ಲೂ ಈ ತರಗತಿಗಳ ಪಾಠಗಳನ್ನು ಪ್ರಾರಂಭಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿದ್ದು, ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದರು.


ಓದಿ: ಆನ್‌ಲೈನ್‌ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ: ಸುರೇಶ್ ಕುಮಾರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...