Homeಕರೋನಾ ತಲ್ಲಣ’ಚಂದನ’ ವಾಹಿನಿಯಲ್ಲಿ ’ಸೇತುಬಂಧ’ ತರಗತಿ ಪ್ರಾರಂಭ: ಸಚಿವ ಸುರೇಶ್ ಕುಮಾರ್‌‌

’ಚಂದನ’ ವಾಹಿನಿಯಲ್ಲಿ ’ಸೇತುಬಂಧ’ ತರಗತಿ ಪ್ರಾರಂಭ: ಸಚಿವ ಸುರೇಶ್ ಕುಮಾರ್‌‌

ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿದ್ದು, ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ವಿಡಿಯೋ ತರಗತಿಯನ್ನು ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಇದಕ್ಕಾಗಿ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಒಂದು ತರಗತಿಯಿಂದ ಮತ್ತೊಂದು ತರಗತಿಗೆ ತೇರ್ಗಡೆ ಹೊಂದುವ ಮಕ್ಕಳಿಗೆ ಹಿಂದಿನ ತರಗತಿಗಳ ಕಲಿಕೆಯನ್ನು ನೆನಪಿಸಿ ಮುಂದಿನ ತರಗತಿಗಳಿಗೆ ಸಿದ್ಧಗೊಳಿಸುವ ತರಗತಿಗಳನ್ನು ‘ಸೇತುಬಂಧ’ ಎಂದು ಹೇಳುತ್ತಾರೆ. ಮಕ್ಕಳ ಕಲಿಕೆಯನ್ನು ಸಮಗ್ರವಾಗಿಸುವ ನಿಟ್ಟಿನಲ್ಲಿ ಒಂದು ಪರಿಪೂರ್ಣ ಕಾರ್ಯಕ್ರಮ ಎಂದು ಸಚಿವರು ತಿಳಿಸಿದರು.

ಇಲಾಖೆಯ ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ-ಡಿಎಸ್‍ಇಆರ್‍ಟಿಯಲ್ಲಿ ಸೇತುಬಂಧ ಕಾರ್ಯಕ್ರಮದ ರೂಪುರೇಷೆ ಮತ್ತು ಸಿದ್ಧತೆಗಳನ್ನು ಬುಧವಾರ ಪರಿಶೀಲಿಸಿದ ಸಚಿವರು, ಇಲಾಖೆ ಸಿದ್ಧಪಡಿಸಿದ ವಿಡಿಯೋ ತರಗತಿಗಳನ್ನು ವೀಕ್ಷಿಸಿದರು.

ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕಲಿಕೆಯನ್ನು ನಿರಂತರವಾಗಿರಿಸಲು ಸಾರ್ವಜನಿಕ ಶಿಕ್ಷಣ ಇಂದಿನ ಸಂದರ್ಭಕ್ಕೆ ಪರಿಣಾಮಕಾರಿಯಾದ ಪರ್ಯಾಯ ಕ್ರಮಗಳಿಗೆ ಚಾಲನೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ 8ರಿಂದ 10ನೇ ತರಗತಿಯ ಸೇತುಬಂದ ವಿಡಿಯೋ ತರಗತಿಗಳು ಚಂದನ ವಾಹಿನಿಯಲ್ಲಿ ಆರಂಭಗೊಳ್ಳಲಿವೆ. ಆ ನಂತರ ಇಂಗ್ಲಿಷ್ ಮಾಧ್ಯಮಗಳಲ್ಲೂ ಈ ತರಗತಿಗಳ ಪಾಠಗಳನ್ನು ಪ್ರಾರಂಭಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿದ್ದು, ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದರು.


ಓದಿ: ಆನ್‌ಲೈನ್‌ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ: ಸುರೇಶ್ ಕುಮಾರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...