Homeಮುಖಪುಟಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

ಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವಾಗ ಕರ್ನಾಟಕ ಹೈಕೋರ್ಟ್‍ನಲ್ಲಿ ನಡೆಯುತ್ತಿರುವ ಸಂಬಂಧಿತ ವಿಚಾರಣೆಯ ಪ್ರತೀ ಪ್ರಕ್ರಿಯೆಯೂ ಸುದ್ದಿಯಾಗುತ್ತಿವೆ. ಈ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನದಲ್ಲಿ ನೀಡಲಾದ ಹಕ್ಕುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಕುರಿತ ಸಂಕ್ಷಿಪ್ತ ವಿವರ ಇಲ್ಲಿದೆ:

ನಮ್ಮ ಮೂಲಭೂತ ಹಕ್ಕುಗಳೇನು?

ಭಾರತೀಯರು ಘನತೆಯಿಂದ ಜೀವನ ನಡೆಸುವ ಸಲುವಾಗಿ ಸಂವಿಧಾನದ 3ನೇ ಭಾಗದಲ್ಲಿ 12 ರಿಂದ 35ನೇ ವಿಧಿಗಳಲ್ಲಿ 6 ಮೂಲಭೂತ ಹಕ್ಕುಗಳನ್ನು (Fundamental Rights) ನೀಡಲಾಗಿದೆ.

ಅವುಗಳೆಂದರೆ:-

1. ಸಮಾನತೆಯ ಹಕ್ಕು

2. ಸ್ವಾತಂತ್ರ್ಯದ ಹಕ್ಕು

3. ಶೋಷಣೆಯ ವಿರುದ್ಧದ ಹಕ್ಕು

4. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು

5. ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು

6. ಸಂವಿಧಾನಬದ್ಧ ಪರಿಹಾರದ ಹಕ್ಕು

ನಮ್ಮ ಹಕ್ಕುಗಳ ರಕ್ಷಕ ಯಾರು?

ಹಕ್ಕುಗಳು ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ, ವ್ಯಕ್ತಿಯ ಅಭಿವೃದ್ದಿಗೆ ಅಗತ್ಯ ಎಂಬುದು ಸಂವಿಧಾನದ ನಿಲುವು. ಇದೇ ಕಾರಣಕ್ಕೆ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಸವೋಚ್ಛ ಹಾಗೂ ಉಚ್ಚನ್ಯಾಯಾಲಯಗಳಿಗೆ ನೀಡಲಾಗಿದೆ. ಆದರೆ, ಭಾರತದಲ್ಲಿ ಈ ಹಕ್ಕುಗಳು ಪೈಕಿ ಆಗಿಂದಾಗ್ಗೆ ಚರ್ಚೆಗೆ ಒಳಪಡುವ ಮತ್ತು ವಿವಾದದ ಕೇಂದ್ರ ಬಿಂದುವಾಗಿರುವುದು ಧಾರ್ಮಿಕ ಹಕ್ಕು. ಹೀಗಾಗಿ ಧಾರ್ಮಿಕ ಹಕ್ಕಿನ ಬಗ್ಗೆ ಸಂವಿಧಾನ ಏನು ಹೇಳುತ್ತದೆ ಎನ್ನುವುದು ಇಂದಿನ ದಿನಗಳಲ್ಲಿ ಪ್ರಸ್ತುತವೆನಿಸುತ್ತಿದೆ.

ಧಾರ್ಮಿಕ ಸ್ವಾತಂತ್ರ್ಯದ ಹಕ್ಕು (ವಿಧಿ 25-28) ಏನು ಹೇಳುತ್ತದೆ?

  • 25ನೇ ವಿಧಿ ಅನ್ವಯ – ಪ್ರತಿಯೊಬ್ಬ ವ್ಯಕ್ತಿಯು ತನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಯಾವುದೇ ಧರ್ಮವನ್ನು ಸ್ವೀಕರಿಸುವ, ಆಚರಿಸುವ, ಆರಾಧಿಸುವ ಮತ್ತು ಪ್ರಚಾರ ಮಾಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾನೆ.
  • 26ನೇ ವಿಧಿ ಅನ್ವಯ – ಪ್ರತಿಯೊಂದು ಧರ್ಮವು ಧಾರ್ಮಿಕ ದಾನದತ್ತಿ ಉದ್ದೇಶಗಳಿಗಾಗಿ ತಮ್ಮದೇ ಆದ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸಿಕೊಳ್ಳುವ, ಚರ ಮತ್ತು ಸ್ಥಿರಾಸ್ತಿ ಹೊಂದುವ ಸ್ವಾತಂತ್ರ್ಯವನ್ನು ಹೊಂದಿರುತ್ತದೆ.

a) ಧಾರ್ಮಿಕ ಮತ್ತು ಧರ್ಮಾರ್ಥ ಉದ್ದೇಶಗಳಿಗಾಗಿ ಧಾರ್ಮಿಕ ಸಂಸ್ಥೆಯೊಂದನ್ನು ಸ್ಥಾಪಿಸುವ ಮತ್ತು ಅದನ್ನು ಮುಂದುವರಿಸಿಕೊಂಡು ಹೋಗುವ,

b) ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದಂತೆ ತನ್ನ ವ್ಯವಹಾರವನ್ನು ತಾನೇ ನಿರ್ವಹಿಸುವ,

c) ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದುವ,

d) ಕಾನೂನಿನನ್ವಯ ಅಂತಹ ಆಸ್ತಿಯ ವಹಿವಾಟು ನಡೆಸುವ; ಹಕ್ಕನ್ನು ಹೊಂದಿರತಕ್ಕದ್ದು.

27ನೇ ವಿಧಿ ಅನ್ವಯ – ಯಾವುದೇ ಧರ್ಮದ ರಕ್ಷಣೆಗೆ ಪೋಷಣೆಗೆ ಅಥವಾ ಪ್ರಚಾರದ ಸಲುವಾಗಿ ತೆರಿಗೆ ಅಥವಾ ವಂತಿಗೆ ನೀಡುವಂತೆ ಒಬ್ಬ ವ್ಯಕ್ತಿಯನ್ನು ಬಲವಂತಪಡಿಸುವಂತಿಲ್ಲ.

28ನೇ ವಿಧಿ ಅನ್ವಯ – ಕೇಂದ್ರ ಅಥವಾ ರಾಜ್ಯ ಸರ್ಕಾರದ ಅನುದಾನಕ್ಕೊಳಪಟ್ಟ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ಬೋಧನೆ ಮಾಡುವಂತಿಲ್ಲ. ಆದರೆ, ಧಾರ್ಮಿಕ ದತ್ತಿ ವಿದ್ಯಾಸಂಸ್ಥೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಇದಲ್ಲದೆ, ಧಾರ್ಮಿಕ ಶಿಕ್ಷಣ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳದಿರುವ ಹಕ್ಕು.

ಸಂಪೂರ್ಣವಾಗಿ ಸರ್ಕಾರದ ನಿಧಿಯಿಂದ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಶಿಕ್ಷಣವನ್ನು ನೀಡ ತಕ್ಕದ್ದಲ್ಲ. ಅಲ್ಲದೆ ಇಂಥ ಶೈಕ್ಷಣಿಕ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವಂತೆ ಯಾವುದೇ ವ್ಯಕ್ತಿಯನ್ನು ಒತ್ತಾಯಿಸತಕ್ಕದ್ದಲ್ಲ.

29ನೇ ವಿಧಿಯಲ್ಲಿ ನೀಡಲಾದ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು ಏನು ಹೇಳುತ್ತದೆ?

a) ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆ – ಭಾರತ ರಾಷ್ಟ್ರಕ್ಷೇತ್ರದ ಯಾವುದೇ ಭಾಗದಲ್ಲಿ ವಾಸಿಸುವ ನಾಗರಿಕರ ಯಾವುದೇ ಪಂಗಡ ತನ್ನದೇ ಆದ ಭಾಷೆ, ಲಿಪಿ ಅಥವಾ ಸಂಸ್ಕೃತಿ ಹೊಂದಿದ್ದಲ್ಲಿ ಅದು ಅವುಗಳನ್ನು ಸಂರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರತಕ್ಕದ್ದು.

b) ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶ ನಿರಾಕರಣೆ ವಿರುದ್ಧ ಹಕ್ಕು ಮತ್ತು ರಾಜ್ಯದಿಂದ ನಿರ್ವಹಿಸಲ್ಪಟ್ಟ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶೈಕ್ಷಣಿಕ ಸಂಸ್ಥೆಯು ಯಾವುದೇ ನಾಗರಿಕನಿಗೆ ಆತನ ಧರ್ಮ, ಮೂಲ ವಂಶ, ಜಾತಿ, ಭಾಷೆ ಇವುಗಳಲ್ಲಿ ಯಾವುದೊಂದರ ಆಧಾರದ ಮೇಲಿಂದ ಪ್ರವೇಶವನ್ನು ನಿರಾಕರಿಸಿದ್ದಲ್ಲ.

30ನೇ ವಿಧಿ – ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆ ಹಾಗೂ ಅವುಗಳ ಆಡಳಿತ ನಿರ್ವಹಣೆಯ ಸಂಬಂಧ ಅಲ್ಪಸಂಖ್ಯಾತರ ಹಕ್ಕು

a) ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರು ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ಅವುಗಳ ಆಡಳಿತವನ್ನು ನಿರ್ವಹಿಸುವ ಹಕ್ಕನ್ನು ಹೊಂದಿರತಕ್ಕದ್ದು.

b) ರಾಜ್ಯವು ಶೈಕ್ಷಣಿಕ ಸಂಸ್ಥೆಗಳಿಗೆ ನೆರವು ಅನುದಾನ ಮಂಜೂರು ಮಾಡುವಾಗ ಯಾವುದೇ ಶಿಕ್ಷಣ ಸಂಸ್ಥೆಯ ವಿರುದ್ಧ ಅದು ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಆಡಳಿತ ಕ್ಕೊಳಪಟ್ಟಿದೆ ಎನ್ನುವ ಕಾರಣದಿಂದ ತಾರತಮ್ಯ ಎಸಗತಕ್ಕದ್ದಲ್ಲ.

ಹಕ್ಕು ಚ್ಯುತಿಯಾದಾಗ ಏನು ಮಾಡಬೇಕು?

ಪ್ರತಿಯೊಬ್ಬನ ಮೂಲಭೂತ ಹಕ್ಕಿಗೆ ಚ್ಯುತಿ ಉಂಟಾದಲ್ಲಿ ತನಗೆ ಸಂವಿಧಾನ ಕೊಡ ಮಾಡಿದ ಹಕ್ಕಿನ ಜಾರಿಗಾಗಿ ನೇರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಸಾಂವಿಧಾನಿಕ ಪರಿಹಾರ ಪಡೆಯುವ ಹಕ್ಕನ್ನೂ ಸಹ ಸಂವಿಧಾನ ತನ್ನ ಪ್ರಜೆಗಳಿಗೆ ನೀಡಿದೆ. ಸಂವಿಧಾನದ ಪರಿಹಾರೋಪಯವೂ ಸಹ ಮೂಲಭೂತ ಹಕ್ಕೇ ಆಗಿದ್ದು ಇದನ್ನು ಸರ್ಕಾರವು ಯಾರಿಗೂ ನಿರಾಕರಿಸುವಂತಿಲ್ಲ ಎಂದೂ ಸಹ ಉಲ್ಲೇಖಿಸಲಾಗಿದೆ.

ಯಾವಾಗ ಈ ಹಕ್ಕು ಅನ್ವಯಿಸುವುದಿಲ್ಲ?

ಆದರೆ, ಈ ಯಾವುದೇ ಮೂಲಭೂತ ಹಕ್ಕು ಸ್ವಯಂ ಪರಿಪೂರ್ಣವಲ್ಲ. ದೇಶದ ಸಾರ್ವಭೌಮತ್ವಕ್ಕೆ ಭಂಗ ತರುವ ಸಾಧ್ಯತೆ ಇದ್ದಲ್ಲಿ ಈ ಹಕ್ಕುಗಳನ್ನು 1983 ಸೆಕ್ಷನ್ 7 (2A) ಅಡಿಯಲ್ಲಿ ಹಿಂಪಡೆಯುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ. ಆದರೆ, ಹಕ್ಕುಗಳನ್ನು ಹೀಗೆ ಹಿಂಪಡೆಯುವ ಸರ್ಕಾರದ ಪ್ರಕ್ರಿಯೆ ತಾತ್ಕಾಲಿಕವೇ ಹೊರತು ಶಾಶ್ವತವಲ್ಲ ಮತ್ತು ಯಾವುದೇ ಸರ್ಕಾರ ಸಂವಿಧಾನದ ವಿರುದ್ಧ ಹೆಜ್ಜೆ ಇಡುವುದು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಷ್ಟು ಸುಲಭದ ಮಾತೂ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...