Homeಮುಖಪುಟಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

ಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವಾಗ ಕರ್ನಾಟಕ ಹೈಕೋರ್ಟ್‍ನಲ್ಲಿ ನಡೆಯುತ್ತಿರುವ ಸಂಬಂಧಿತ ವಿಚಾರಣೆಯ ಪ್ರತೀ ಪ್ರಕ್ರಿಯೆಯೂ ಸುದ್ದಿಯಾಗುತ್ತಿವೆ. ಈ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನದಲ್ಲಿ ನೀಡಲಾದ ಹಕ್ಕುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಕುರಿತ ಸಂಕ್ಷಿಪ್ತ ವಿವರ ಇಲ್ಲಿದೆ:

ನಮ್ಮ ಮೂಲಭೂತ ಹಕ್ಕುಗಳೇನು?

ಭಾರತೀಯರು ಘನತೆಯಿಂದ ಜೀವನ ನಡೆಸುವ ಸಲುವಾಗಿ ಸಂವಿಧಾನದ 3ನೇ ಭಾಗದಲ್ಲಿ 12 ರಿಂದ 35ನೇ ವಿಧಿಗಳಲ್ಲಿ 6 ಮೂಲಭೂತ ಹಕ್ಕುಗಳನ್ನು (Fundamental Rights) ನೀಡಲಾಗಿದೆ.

ಅವುಗಳೆಂದರೆ:-

1. ಸಮಾನತೆಯ ಹಕ್ಕು

2. ಸ್ವಾತಂತ್ರ್ಯದ ಹಕ್ಕು

3. ಶೋಷಣೆಯ ವಿರುದ್ಧದ ಹಕ್ಕು

4. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು

5. ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು

6. ಸಂವಿಧಾನಬದ್ಧ ಪರಿಹಾರದ ಹಕ್ಕು

ನಮ್ಮ ಹಕ್ಕುಗಳ ರಕ್ಷಕ ಯಾರು?

ಹಕ್ಕುಗಳು ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ, ವ್ಯಕ್ತಿಯ ಅಭಿವೃದ್ದಿಗೆ ಅಗತ್ಯ ಎಂಬುದು ಸಂವಿಧಾನದ ನಿಲುವು. ಇದೇ ಕಾರಣಕ್ಕೆ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಸವೋಚ್ಛ ಹಾಗೂ ಉಚ್ಚನ್ಯಾಯಾಲಯಗಳಿಗೆ ನೀಡಲಾಗಿದೆ. ಆದರೆ, ಭಾರತದಲ್ಲಿ ಈ ಹಕ್ಕುಗಳು ಪೈಕಿ ಆಗಿಂದಾಗ್ಗೆ ಚರ್ಚೆಗೆ ಒಳಪಡುವ ಮತ್ತು ವಿವಾದದ ಕೇಂದ್ರ ಬಿಂದುವಾಗಿರುವುದು ಧಾರ್ಮಿಕ ಹಕ್ಕು. ಹೀಗಾಗಿ ಧಾರ್ಮಿಕ ಹಕ್ಕಿನ ಬಗ್ಗೆ ಸಂವಿಧಾನ ಏನು ಹೇಳುತ್ತದೆ ಎನ್ನುವುದು ಇಂದಿನ ದಿನಗಳಲ್ಲಿ ಪ್ರಸ್ತುತವೆನಿಸುತ್ತಿದೆ.

ಧಾರ್ಮಿಕ ಸ್ವಾತಂತ್ರ್ಯದ ಹಕ್ಕು (ವಿಧಿ 25-28) ಏನು ಹೇಳುತ್ತದೆ?

  • 25ನೇ ವಿಧಿ ಅನ್ವಯ – ಪ್ರತಿಯೊಬ್ಬ ವ್ಯಕ್ತಿಯು ತನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಯಾವುದೇ ಧರ್ಮವನ್ನು ಸ್ವೀಕರಿಸುವ, ಆಚರಿಸುವ, ಆರಾಧಿಸುವ ಮತ್ತು ಪ್ರಚಾರ ಮಾಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾನೆ.
  • 26ನೇ ವಿಧಿ ಅನ್ವಯ – ಪ್ರತಿಯೊಂದು ಧರ್ಮವು ಧಾರ್ಮಿಕ ದಾನದತ್ತಿ ಉದ್ದೇಶಗಳಿಗಾಗಿ ತಮ್ಮದೇ ಆದ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸಿಕೊಳ್ಳುವ, ಚರ ಮತ್ತು ಸ್ಥಿರಾಸ್ತಿ ಹೊಂದುವ ಸ್ವಾತಂತ್ರ್ಯವನ್ನು ಹೊಂದಿರುತ್ತದೆ.

a) ಧಾರ್ಮಿಕ ಮತ್ತು ಧರ್ಮಾರ್ಥ ಉದ್ದೇಶಗಳಿಗಾಗಿ ಧಾರ್ಮಿಕ ಸಂಸ್ಥೆಯೊಂದನ್ನು ಸ್ಥಾಪಿಸುವ ಮತ್ತು ಅದನ್ನು ಮುಂದುವರಿಸಿಕೊಂಡು ಹೋಗುವ,

b) ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದಂತೆ ತನ್ನ ವ್ಯವಹಾರವನ್ನು ತಾನೇ ನಿರ್ವಹಿಸುವ,

c) ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದುವ,

d) ಕಾನೂನಿನನ್ವಯ ಅಂತಹ ಆಸ್ತಿಯ ವಹಿವಾಟು ನಡೆಸುವ; ಹಕ್ಕನ್ನು ಹೊಂದಿರತಕ್ಕದ್ದು.

27ನೇ ವಿಧಿ ಅನ್ವಯ – ಯಾವುದೇ ಧರ್ಮದ ರಕ್ಷಣೆಗೆ ಪೋಷಣೆಗೆ ಅಥವಾ ಪ್ರಚಾರದ ಸಲುವಾಗಿ ತೆರಿಗೆ ಅಥವಾ ವಂತಿಗೆ ನೀಡುವಂತೆ ಒಬ್ಬ ವ್ಯಕ್ತಿಯನ್ನು ಬಲವಂತಪಡಿಸುವಂತಿಲ್ಲ.

28ನೇ ವಿಧಿ ಅನ್ವಯ – ಕೇಂದ್ರ ಅಥವಾ ರಾಜ್ಯ ಸರ್ಕಾರದ ಅನುದಾನಕ್ಕೊಳಪಟ್ಟ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ಬೋಧನೆ ಮಾಡುವಂತಿಲ್ಲ. ಆದರೆ, ಧಾರ್ಮಿಕ ದತ್ತಿ ವಿದ್ಯಾಸಂಸ್ಥೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಇದಲ್ಲದೆ, ಧಾರ್ಮಿಕ ಶಿಕ್ಷಣ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳದಿರುವ ಹಕ್ಕು.

ಸಂಪೂರ್ಣವಾಗಿ ಸರ್ಕಾರದ ನಿಧಿಯಿಂದ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಶಿಕ್ಷಣವನ್ನು ನೀಡ ತಕ್ಕದ್ದಲ್ಲ. ಅಲ್ಲದೆ ಇಂಥ ಶೈಕ್ಷಣಿಕ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವಂತೆ ಯಾವುದೇ ವ್ಯಕ್ತಿಯನ್ನು ಒತ್ತಾಯಿಸತಕ್ಕದ್ದಲ್ಲ.

29ನೇ ವಿಧಿಯಲ್ಲಿ ನೀಡಲಾದ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು ಏನು ಹೇಳುತ್ತದೆ?

a) ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆ – ಭಾರತ ರಾಷ್ಟ್ರಕ್ಷೇತ್ರದ ಯಾವುದೇ ಭಾಗದಲ್ಲಿ ವಾಸಿಸುವ ನಾಗರಿಕರ ಯಾವುದೇ ಪಂಗಡ ತನ್ನದೇ ಆದ ಭಾಷೆ, ಲಿಪಿ ಅಥವಾ ಸಂಸ್ಕೃತಿ ಹೊಂದಿದ್ದಲ್ಲಿ ಅದು ಅವುಗಳನ್ನು ಸಂರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರತಕ್ಕದ್ದು.

b) ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶ ನಿರಾಕರಣೆ ವಿರುದ್ಧ ಹಕ್ಕು ಮತ್ತು ರಾಜ್ಯದಿಂದ ನಿರ್ವಹಿಸಲ್ಪಟ್ಟ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶೈಕ್ಷಣಿಕ ಸಂಸ್ಥೆಯು ಯಾವುದೇ ನಾಗರಿಕನಿಗೆ ಆತನ ಧರ್ಮ, ಮೂಲ ವಂಶ, ಜಾತಿ, ಭಾಷೆ ಇವುಗಳಲ್ಲಿ ಯಾವುದೊಂದರ ಆಧಾರದ ಮೇಲಿಂದ ಪ್ರವೇಶವನ್ನು ನಿರಾಕರಿಸಿದ್ದಲ್ಲ.

30ನೇ ವಿಧಿ – ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆ ಹಾಗೂ ಅವುಗಳ ಆಡಳಿತ ನಿರ್ವಹಣೆಯ ಸಂಬಂಧ ಅಲ್ಪಸಂಖ್ಯಾತರ ಹಕ್ಕು

a) ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರು ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ಅವುಗಳ ಆಡಳಿತವನ್ನು ನಿರ್ವಹಿಸುವ ಹಕ್ಕನ್ನು ಹೊಂದಿರತಕ್ಕದ್ದು.

b) ರಾಜ್ಯವು ಶೈಕ್ಷಣಿಕ ಸಂಸ್ಥೆಗಳಿಗೆ ನೆರವು ಅನುದಾನ ಮಂಜೂರು ಮಾಡುವಾಗ ಯಾವುದೇ ಶಿಕ್ಷಣ ಸಂಸ್ಥೆಯ ವಿರುದ್ಧ ಅದು ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಆಡಳಿತ ಕ್ಕೊಳಪಟ್ಟಿದೆ ಎನ್ನುವ ಕಾರಣದಿಂದ ತಾರತಮ್ಯ ಎಸಗತಕ್ಕದ್ದಲ್ಲ.

ಹಕ್ಕು ಚ್ಯುತಿಯಾದಾಗ ಏನು ಮಾಡಬೇಕು?

ಪ್ರತಿಯೊಬ್ಬನ ಮೂಲಭೂತ ಹಕ್ಕಿಗೆ ಚ್ಯುತಿ ಉಂಟಾದಲ್ಲಿ ತನಗೆ ಸಂವಿಧಾನ ಕೊಡ ಮಾಡಿದ ಹಕ್ಕಿನ ಜಾರಿಗಾಗಿ ನೇರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಸಾಂವಿಧಾನಿಕ ಪರಿಹಾರ ಪಡೆಯುವ ಹಕ್ಕನ್ನೂ ಸಹ ಸಂವಿಧಾನ ತನ್ನ ಪ್ರಜೆಗಳಿಗೆ ನೀಡಿದೆ. ಸಂವಿಧಾನದ ಪರಿಹಾರೋಪಯವೂ ಸಹ ಮೂಲಭೂತ ಹಕ್ಕೇ ಆಗಿದ್ದು ಇದನ್ನು ಸರ್ಕಾರವು ಯಾರಿಗೂ ನಿರಾಕರಿಸುವಂತಿಲ್ಲ ಎಂದೂ ಸಹ ಉಲ್ಲೇಖಿಸಲಾಗಿದೆ.

ಯಾವಾಗ ಈ ಹಕ್ಕು ಅನ್ವಯಿಸುವುದಿಲ್ಲ?

ಆದರೆ, ಈ ಯಾವುದೇ ಮೂಲಭೂತ ಹಕ್ಕು ಸ್ವಯಂ ಪರಿಪೂರ್ಣವಲ್ಲ. ದೇಶದ ಸಾರ್ವಭೌಮತ್ವಕ್ಕೆ ಭಂಗ ತರುವ ಸಾಧ್ಯತೆ ಇದ್ದಲ್ಲಿ ಈ ಹಕ್ಕುಗಳನ್ನು 1983 ಸೆಕ್ಷನ್ 7 (2A) ಅಡಿಯಲ್ಲಿ ಹಿಂಪಡೆಯುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ. ಆದರೆ, ಹಕ್ಕುಗಳನ್ನು ಹೀಗೆ ಹಿಂಪಡೆಯುವ ಸರ್ಕಾರದ ಪ್ರಕ್ರಿಯೆ ತಾತ್ಕಾಲಿಕವೇ ಹೊರತು ಶಾಶ್ವತವಲ್ಲ ಮತ್ತು ಯಾವುದೇ ಸರ್ಕಾರ ಸಂವಿಧಾನದ ವಿರುದ್ಧ ಹೆಜ್ಜೆ ಇಡುವುದು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಷ್ಟು ಸುಲಭದ ಮಾತೂ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...