Homeಮುಖಪುಟಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

ಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವಾಗ ಕರ್ನಾಟಕ ಹೈಕೋರ್ಟ್‍ನಲ್ಲಿ ನಡೆಯುತ್ತಿರುವ ಸಂಬಂಧಿತ ವಿಚಾರಣೆಯ ಪ್ರತೀ ಪ್ರಕ್ರಿಯೆಯೂ ಸುದ್ದಿಯಾಗುತ್ತಿವೆ. ಈ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನದಲ್ಲಿ ನೀಡಲಾದ ಹಕ್ಕುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಕುರಿತ ಸಂಕ್ಷಿಪ್ತ ವಿವರ ಇಲ್ಲಿದೆ:

ನಮ್ಮ ಮೂಲಭೂತ ಹಕ್ಕುಗಳೇನು?

ಭಾರತೀಯರು ಘನತೆಯಿಂದ ಜೀವನ ನಡೆಸುವ ಸಲುವಾಗಿ ಸಂವಿಧಾನದ 3ನೇ ಭಾಗದಲ್ಲಿ 12 ರಿಂದ 35ನೇ ವಿಧಿಗಳಲ್ಲಿ 6 ಮೂಲಭೂತ ಹಕ್ಕುಗಳನ್ನು (Fundamental Rights) ನೀಡಲಾಗಿದೆ.

ಅವುಗಳೆಂದರೆ:-

1. ಸಮಾನತೆಯ ಹಕ್ಕು

2. ಸ್ವಾತಂತ್ರ್ಯದ ಹಕ್ಕು

3. ಶೋಷಣೆಯ ವಿರುದ್ಧದ ಹಕ್ಕು

4. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು

5. ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು

6. ಸಂವಿಧಾನಬದ್ಧ ಪರಿಹಾರದ ಹಕ್ಕು

ನಮ್ಮ ಹಕ್ಕುಗಳ ರಕ್ಷಕ ಯಾರು?

ಹಕ್ಕುಗಳು ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ, ವ್ಯಕ್ತಿಯ ಅಭಿವೃದ್ದಿಗೆ ಅಗತ್ಯ ಎಂಬುದು ಸಂವಿಧಾನದ ನಿಲುವು. ಇದೇ ಕಾರಣಕ್ಕೆ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಸವೋಚ್ಛ ಹಾಗೂ ಉಚ್ಚನ್ಯಾಯಾಲಯಗಳಿಗೆ ನೀಡಲಾಗಿದೆ. ಆದರೆ, ಭಾರತದಲ್ಲಿ ಈ ಹಕ್ಕುಗಳು ಪೈಕಿ ಆಗಿಂದಾಗ್ಗೆ ಚರ್ಚೆಗೆ ಒಳಪಡುವ ಮತ್ತು ವಿವಾದದ ಕೇಂದ್ರ ಬಿಂದುವಾಗಿರುವುದು ಧಾರ್ಮಿಕ ಹಕ್ಕು. ಹೀಗಾಗಿ ಧಾರ್ಮಿಕ ಹಕ್ಕಿನ ಬಗ್ಗೆ ಸಂವಿಧಾನ ಏನು ಹೇಳುತ್ತದೆ ಎನ್ನುವುದು ಇಂದಿನ ದಿನಗಳಲ್ಲಿ ಪ್ರಸ್ತುತವೆನಿಸುತ್ತಿದೆ.

ಧಾರ್ಮಿಕ ಸ್ವಾತಂತ್ರ್ಯದ ಹಕ್ಕು (ವಿಧಿ 25-28) ಏನು ಹೇಳುತ್ತದೆ?

  • 25ನೇ ವಿಧಿ ಅನ್ವಯ – ಪ್ರತಿಯೊಬ್ಬ ವ್ಯಕ್ತಿಯು ತನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಯಾವುದೇ ಧರ್ಮವನ್ನು ಸ್ವೀಕರಿಸುವ, ಆಚರಿಸುವ, ಆರಾಧಿಸುವ ಮತ್ತು ಪ್ರಚಾರ ಮಾಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾನೆ.
  • 26ನೇ ವಿಧಿ ಅನ್ವಯ – ಪ್ರತಿಯೊಂದು ಧರ್ಮವು ಧಾರ್ಮಿಕ ದಾನದತ್ತಿ ಉದ್ದೇಶಗಳಿಗಾಗಿ ತಮ್ಮದೇ ಆದ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸಿಕೊಳ್ಳುವ, ಚರ ಮತ್ತು ಸ್ಥಿರಾಸ್ತಿ ಹೊಂದುವ ಸ್ವಾತಂತ್ರ್ಯವನ್ನು ಹೊಂದಿರುತ್ತದೆ.

a) ಧಾರ್ಮಿಕ ಮತ್ತು ಧರ್ಮಾರ್ಥ ಉದ್ದೇಶಗಳಿಗಾಗಿ ಧಾರ್ಮಿಕ ಸಂಸ್ಥೆಯೊಂದನ್ನು ಸ್ಥಾಪಿಸುವ ಮತ್ತು ಅದನ್ನು ಮುಂದುವರಿಸಿಕೊಂಡು ಹೋಗುವ,

b) ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದಂತೆ ತನ್ನ ವ್ಯವಹಾರವನ್ನು ತಾನೇ ನಿರ್ವಹಿಸುವ,

c) ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದುವ,

d) ಕಾನೂನಿನನ್ವಯ ಅಂತಹ ಆಸ್ತಿಯ ವಹಿವಾಟು ನಡೆಸುವ; ಹಕ್ಕನ್ನು ಹೊಂದಿರತಕ್ಕದ್ದು.

27ನೇ ವಿಧಿ ಅನ್ವಯ – ಯಾವುದೇ ಧರ್ಮದ ರಕ್ಷಣೆಗೆ ಪೋಷಣೆಗೆ ಅಥವಾ ಪ್ರಚಾರದ ಸಲುವಾಗಿ ತೆರಿಗೆ ಅಥವಾ ವಂತಿಗೆ ನೀಡುವಂತೆ ಒಬ್ಬ ವ್ಯಕ್ತಿಯನ್ನು ಬಲವಂತಪಡಿಸುವಂತಿಲ್ಲ.

28ನೇ ವಿಧಿ ಅನ್ವಯ – ಕೇಂದ್ರ ಅಥವಾ ರಾಜ್ಯ ಸರ್ಕಾರದ ಅನುದಾನಕ್ಕೊಳಪಟ್ಟ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ಬೋಧನೆ ಮಾಡುವಂತಿಲ್ಲ. ಆದರೆ, ಧಾರ್ಮಿಕ ದತ್ತಿ ವಿದ್ಯಾಸಂಸ್ಥೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಇದಲ್ಲದೆ, ಧಾರ್ಮಿಕ ಶಿಕ್ಷಣ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳದಿರುವ ಹಕ್ಕು.

ಸಂಪೂರ್ಣವಾಗಿ ಸರ್ಕಾರದ ನಿಧಿಯಿಂದ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಶಿಕ್ಷಣವನ್ನು ನೀಡ ತಕ್ಕದ್ದಲ್ಲ. ಅಲ್ಲದೆ ಇಂಥ ಶೈಕ್ಷಣಿಕ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವಂತೆ ಯಾವುದೇ ವ್ಯಕ್ತಿಯನ್ನು ಒತ್ತಾಯಿಸತಕ್ಕದ್ದಲ್ಲ.

29ನೇ ವಿಧಿಯಲ್ಲಿ ನೀಡಲಾದ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು ಏನು ಹೇಳುತ್ತದೆ?

a) ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆ – ಭಾರತ ರಾಷ್ಟ್ರಕ್ಷೇತ್ರದ ಯಾವುದೇ ಭಾಗದಲ್ಲಿ ವಾಸಿಸುವ ನಾಗರಿಕರ ಯಾವುದೇ ಪಂಗಡ ತನ್ನದೇ ಆದ ಭಾಷೆ, ಲಿಪಿ ಅಥವಾ ಸಂಸ್ಕೃತಿ ಹೊಂದಿದ್ದಲ್ಲಿ ಅದು ಅವುಗಳನ್ನು ಸಂರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರತಕ್ಕದ್ದು.

b) ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶ ನಿರಾಕರಣೆ ವಿರುದ್ಧ ಹಕ್ಕು ಮತ್ತು ರಾಜ್ಯದಿಂದ ನಿರ್ವಹಿಸಲ್ಪಟ್ಟ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶೈಕ್ಷಣಿಕ ಸಂಸ್ಥೆಯು ಯಾವುದೇ ನಾಗರಿಕನಿಗೆ ಆತನ ಧರ್ಮ, ಮೂಲ ವಂಶ, ಜಾತಿ, ಭಾಷೆ ಇವುಗಳಲ್ಲಿ ಯಾವುದೊಂದರ ಆಧಾರದ ಮೇಲಿಂದ ಪ್ರವೇಶವನ್ನು ನಿರಾಕರಿಸಿದ್ದಲ್ಲ.

30ನೇ ವಿಧಿ – ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆ ಹಾಗೂ ಅವುಗಳ ಆಡಳಿತ ನಿರ್ವಹಣೆಯ ಸಂಬಂಧ ಅಲ್ಪಸಂಖ್ಯಾತರ ಹಕ್ಕು

a) ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರು ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ಅವುಗಳ ಆಡಳಿತವನ್ನು ನಿರ್ವಹಿಸುವ ಹಕ್ಕನ್ನು ಹೊಂದಿರತಕ್ಕದ್ದು.

b) ರಾಜ್ಯವು ಶೈಕ್ಷಣಿಕ ಸಂಸ್ಥೆಗಳಿಗೆ ನೆರವು ಅನುದಾನ ಮಂಜೂರು ಮಾಡುವಾಗ ಯಾವುದೇ ಶಿಕ್ಷಣ ಸಂಸ್ಥೆಯ ವಿರುದ್ಧ ಅದು ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಆಡಳಿತ ಕ್ಕೊಳಪಟ್ಟಿದೆ ಎನ್ನುವ ಕಾರಣದಿಂದ ತಾರತಮ್ಯ ಎಸಗತಕ್ಕದ್ದಲ್ಲ.

ಹಕ್ಕು ಚ್ಯುತಿಯಾದಾಗ ಏನು ಮಾಡಬೇಕು?

ಪ್ರತಿಯೊಬ್ಬನ ಮೂಲಭೂತ ಹಕ್ಕಿಗೆ ಚ್ಯುತಿ ಉಂಟಾದಲ್ಲಿ ತನಗೆ ಸಂವಿಧಾನ ಕೊಡ ಮಾಡಿದ ಹಕ್ಕಿನ ಜಾರಿಗಾಗಿ ನೇರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಸಾಂವಿಧಾನಿಕ ಪರಿಹಾರ ಪಡೆಯುವ ಹಕ್ಕನ್ನೂ ಸಹ ಸಂವಿಧಾನ ತನ್ನ ಪ್ರಜೆಗಳಿಗೆ ನೀಡಿದೆ. ಸಂವಿಧಾನದ ಪರಿಹಾರೋಪಯವೂ ಸಹ ಮೂಲಭೂತ ಹಕ್ಕೇ ಆಗಿದ್ದು ಇದನ್ನು ಸರ್ಕಾರವು ಯಾರಿಗೂ ನಿರಾಕರಿಸುವಂತಿಲ್ಲ ಎಂದೂ ಸಹ ಉಲ್ಲೇಖಿಸಲಾಗಿದೆ.

ಯಾವಾಗ ಈ ಹಕ್ಕು ಅನ್ವಯಿಸುವುದಿಲ್ಲ?

ಆದರೆ, ಈ ಯಾವುದೇ ಮೂಲಭೂತ ಹಕ್ಕು ಸ್ವಯಂ ಪರಿಪೂರ್ಣವಲ್ಲ. ದೇಶದ ಸಾರ್ವಭೌಮತ್ವಕ್ಕೆ ಭಂಗ ತರುವ ಸಾಧ್ಯತೆ ಇದ್ದಲ್ಲಿ ಈ ಹಕ್ಕುಗಳನ್ನು 1983 ಸೆಕ್ಷನ್ 7 (2A) ಅಡಿಯಲ್ಲಿ ಹಿಂಪಡೆಯುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ. ಆದರೆ, ಹಕ್ಕುಗಳನ್ನು ಹೀಗೆ ಹಿಂಪಡೆಯುವ ಸರ್ಕಾರದ ಪ್ರಕ್ರಿಯೆ ತಾತ್ಕಾಲಿಕವೇ ಹೊರತು ಶಾಶ್ವತವಲ್ಲ ಮತ್ತು ಯಾವುದೇ ಸರ್ಕಾರ ಸಂವಿಧಾನದ ವಿರುದ್ಧ ಹೆಜ್ಜೆ ಇಡುವುದು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಷ್ಟು ಸುಲಭದ ಮಾತೂ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...