Homeಮುಖಪುಟಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

ಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವಾಗ ಕರ್ನಾಟಕ ಹೈಕೋರ್ಟ್‍ನಲ್ಲಿ ನಡೆಯುತ್ತಿರುವ ಸಂಬಂಧಿತ ವಿಚಾರಣೆಯ ಪ್ರತೀ ಪ್ರಕ್ರಿಯೆಯೂ ಸುದ್ದಿಯಾಗುತ್ತಿವೆ. ಈ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನದಲ್ಲಿ ನೀಡಲಾದ ಹಕ್ಕುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಕುರಿತ ಸಂಕ್ಷಿಪ್ತ ವಿವರ ಇಲ್ಲಿದೆ:

ನಮ್ಮ ಮೂಲಭೂತ ಹಕ್ಕುಗಳೇನು?

ಭಾರತೀಯರು ಘನತೆಯಿಂದ ಜೀವನ ನಡೆಸುವ ಸಲುವಾಗಿ ಸಂವಿಧಾನದ 3ನೇ ಭಾಗದಲ್ಲಿ 12 ರಿಂದ 35ನೇ ವಿಧಿಗಳಲ್ಲಿ 6 ಮೂಲಭೂತ ಹಕ್ಕುಗಳನ್ನು (Fundamental Rights) ನೀಡಲಾಗಿದೆ.

ಅವುಗಳೆಂದರೆ:-

1. ಸಮಾನತೆಯ ಹಕ್ಕು

2. ಸ್ವಾತಂತ್ರ್ಯದ ಹಕ್ಕು

3. ಶೋಷಣೆಯ ವಿರುದ್ಧದ ಹಕ್ಕು

4. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು

5. ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು

6. ಸಂವಿಧಾನಬದ್ಧ ಪರಿಹಾರದ ಹಕ್ಕು

ನಮ್ಮ ಹಕ್ಕುಗಳ ರಕ್ಷಕ ಯಾರು?

ಹಕ್ಕುಗಳು ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ, ವ್ಯಕ್ತಿಯ ಅಭಿವೃದ್ದಿಗೆ ಅಗತ್ಯ ಎಂಬುದು ಸಂವಿಧಾನದ ನಿಲುವು. ಇದೇ ಕಾರಣಕ್ಕೆ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಸವೋಚ್ಛ ಹಾಗೂ ಉಚ್ಚನ್ಯಾಯಾಲಯಗಳಿಗೆ ನೀಡಲಾಗಿದೆ. ಆದರೆ, ಭಾರತದಲ್ಲಿ ಈ ಹಕ್ಕುಗಳು ಪೈಕಿ ಆಗಿಂದಾಗ್ಗೆ ಚರ್ಚೆಗೆ ಒಳಪಡುವ ಮತ್ತು ವಿವಾದದ ಕೇಂದ್ರ ಬಿಂದುವಾಗಿರುವುದು ಧಾರ್ಮಿಕ ಹಕ್ಕು. ಹೀಗಾಗಿ ಧಾರ್ಮಿಕ ಹಕ್ಕಿನ ಬಗ್ಗೆ ಸಂವಿಧಾನ ಏನು ಹೇಳುತ್ತದೆ ಎನ್ನುವುದು ಇಂದಿನ ದಿನಗಳಲ್ಲಿ ಪ್ರಸ್ತುತವೆನಿಸುತ್ತಿದೆ.

ಧಾರ್ಮಿಕ ಸ್ವಾತಂತ್ರ್ಯದ ಹಕ್ಕು (ವಿಧಿ 25-28) ಏನು ಹೇಳುತ್ತದೆ?

  • 25ನೇ ವಿಧಿ ಅನ್ವಯ – ಪ್ರತಿಯೊಬ್ಬ ವ್ಯಕ್ತಿಯು ತನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಯಾವುದೇ ಧರ್ಮವನ್ನು ಸ್ವೀಕರಿಸುವ, ಆಚರಿಸುವ, ಆರಾಧಿಸುವ ಮತ್ತು ಪ್ರಚಾರ ಮಾಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾನೆ.
  • 26ನೇ ವಿಧಿ ಅನ್ವಯ – ಪ್ರತಿಯೊಂದು ಧರ್ಮವು ಧಾರ್ಮಿಕ ದಾನದತ್ತಿ ಉದ್ದೇಶಗಳಿಗಾಗಿ ತಮ್ಮದೇ ಆದ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸಿಕೊಳ್ಳುವ, ಚರ ಮತ್ತು ಸ್ಥಿರಾಸ್ತಿ ಹೊಂದುವ ಸ್ವಾತಂತ್ರ್ಯವನ್ನು ಹೊಂದಿರುತ್ತದೆ.

a) ಧಾರ್ಮಿಕ ಮತ್ತು ಧರ್ಮಾರ್ಥ ಉದ್ದೇಶಗಳಿಗಾಗಿ ಧಾರ್ಮಿಕ ಸಂಸ್ಥೆಯೊಂದನ್ನು ಸ್ಥಾಪಿಸುವ ಮತ್ತು ಅದನ್ನು ಮುಂದುವರಿಸಿಕೊಂಡು ಹೋಗುವ,

b) ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದಂತೆ ತನ್ನ ವ್ಯವಹಾರವನ್ನು ತಾನೇ ನಿರ್ವಹಿಸುವ,

c) ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದುವ,

d) ಕಾನೂನಿನನ್ವಯ ಅಂತಹ ಆಸ್ತಿಯ ವಹಿವಾಟು ನಡೆಸುವ; ಹಕ್ಕನ್ನು ಹೊಂದಿರತಕ್ಕದ್ದು.

27ನೇ ವಿಧಿ ಅನ್ವಯ – ಯಾವುದೇ ಧರ್ಮದ ರಕ್ಷಣೆಗೆ ಪೋಷಣೆಗೆ ಅಥವಾ ಪ್ರಚಾರದ ಸಲುವಾಗಿ ತೆರಿಗೆ ಅಥವಾ ವಂತಿಗೆ ನೀಡುವಂತೆ ಒಬ್ಬ ವ್ಯಕ್ತಿಯನ್ನು ಬಲವಂತಪಡಿಸುವಂತಿಲ್ಲ.

28ನೇ ವಿಧಿ ಅನ್ವಯ – ಕೇಂದ್ರ ಅಥವಾ ರಾಜ್ಯ ಸರ್ಕಾರದ ಅನುದಾನಕ್ಕೊಳಪಟ್ಟ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ಬೋಧನೆ ಮಾಡುವಂತಿಲ್ಲ. ಆದರೆ, ಧಾರ್ಮಿಕ ದತ್ತಿ ವಿದ್ಯಾಸಂಸ್ಥೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಇದಲ್ಲದೆ, ಧಾರ್ಮಿಕ ಶಿಕ್ಷಣ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳದಿರುವ ಹಕ್ಕು.

ಸಂಪೂರ್ಣವಾಗಿ ಸರ್ಕಾರದ ನಿಧಿಯಿಂದ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಶಿಕ್ಷಣವನ್ನು ನೀಡ ತಕ್ಕದ್ದಲ್ಲ. ಅಲ್ಲದೆ ಇಂಥ ಶೈಕ್ಷಣಿಕ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವಂತೆ ಯಾವುದೇ ವ್ಯಕ್ತಿಯನ್ನು ಒತ್ತಾಯಿಸತಕ್ಕದ್ದಲ್ಲ.

29ನೇ ವಿಧಿಯಲ್ಲಿ ನೀಡಲಾದ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು ಏನು ಹೇಳುತ್ತದೆ?

a) ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆ – ಭಾರತ ರಾಷ್ಟ್ರಕ್ಷೇತ್ರದ ಯಾವುದೇ ಭಾಗದಲ್ಲಿ ವಾಸಿಸುವ ನಾಗರಿಕರ ಯಾವುದೇ ಪಂಗಡ ತನ್ನದೇ ಆದ ಭಾಷೆ, ಲಿಪಿ ಅಥವಾ ಸಂಸ್ಕೃತಿ ಹೊಂದಿದ್ದಲ್ಲಿ ಅದು ಅವುಗಳನ್ನು ಸಂರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರತಕ್ಕದ್ದು.

b) ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶ ನಿರಾಕರಣೆ ವಿರುದ್ಧ ಹಕ್ಕು ಮತ್ತು ರಾಜ್ಯದಿಂದ ನಿರ್ವಹಿಸಲ್ಪಟ್ಟ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶೈಕ್ಷಣಿಕ ಸಂಸ್ಥೆಯು ಯಾವುದೇ ನಾಗರಿಕನಿಗೆ ಆತನ ಧರ್ಮ, ಮೂಲ ವಂಶ, ಜಾತಿ, ಭಾಷೆ ಇವುಗಳಲ್ಲಿ ಯಾವುದೊಂದರ ಆಧಾರದ ಮೇಲಿಂದ ಪ್ರವೇಶವನ್ನು ನಿರಾಕರಿಸಿದ್ದಲ್ಲ.

30ನೇ ವಿಧಿ – ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆ ಹಾಗೂ ಅವುಗಳ ಆಡಳಿತ ನಿರ್ವಹಣೆಯ ಸಂಬಂಧ ಅಲ್ಪಸಂಖ್ಯಾತರ ಹಕ್ಕು

a) ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರು ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ಅವುಗಳ ಆಡಳಿತವನ್ನು ನಿರ್ವಹಿಸುವ ಹಕ್ಕನ್ನು ಹೊಂದಿರತಕ್ಕದ್ದು.

b) ರಾಜ್ಯವು ಶೈಕ್ಷಣಿಕ ಸಂಸ್ಥೆಗಳಿಗೆ ನೆರವು ಅನುದಾನ ಮಂಜೂರು ಮಾಡುವಾಗ ಯಾವುದೇ ಶಿಕ್ಷಣ ಸಂಸ್ಥೆಯ ವಿರುದ್ಧ ಅದು ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಆಡಳಿತ ಕ್ಕೊಳಪಟ್ಟಿದೆ ಎನ್ನುವ ಕಾರಣದಿಂದ ತಾರತಮ್ಯ ಎಸಗತಕ್ಕದ್ದಲ್ಲ.

ಹಕ್ಕು ಚ್ಯುತಿಯಾದಾಗ ಏನು ಮಾಡಬೇಕು?

ಪ್ರತಿಯೊಬ್ಬನ ಮೂಲಭೂತ ಹಕ್ಕಿಗೆ ಚ್ಯುತಿ ಉಂಟಾದಲ್ಲಿ ತನಗೆ ಸಂವಿಧಾನ ಕೊಡ ಮಾಡಿದ ಹಕ್ಕಿನ ಜಾರಿಗಾಗಿ ನೇರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಸಾಂವಿಧಾನಿಕ ಪರಿಹಾರ ಪಡೆಯುವ ಹಕ್ಕನ್ನೂ ಸಹ ಸಂವಿಧಾನ ತನ್ನ ಪ್ರಜೆಗಳಿಗೆ ನೀಡಿದೆ. ಸಂವಿಧಾನದ ಪರಿಹಾರೋಪಯವೂ ಸಹ ಮೂಲಭೂತ ಹಕ್ಕೇ ಆಗಿದ್ದು ಇದನ್ನು ಸರ್ಕಾರವು ಯಾರಿಗೂ ನಿರಾಕರಿಸುವಂತಿಲ್ಲ ಎಂದೂ ಸಹ ಉಲ್ಲೇಖಿಸಲಾಗಿದೆ.

ಯಾವಾಗ ಈ ಹಕ್ಕು ಅನ್ವಯಿಸುವುದಿಲ್ಲ?

ಆದರೆ, ಈ ಯಾವುದೇ ಮೂಲಭೂತ ಹಕ್ಕು ಸ್ವಯಂ ಪರಿಪೂರ್ಣವಲ್ಲ. ದೇಶದ ಸಾರ್ವಭೌಮತ್ವಕ್ಕೆ ಭಂಗ ತರುವ ಸಾಧ್ಯತೆ ಇದ್ದಲ್ಲಿ ಈ ಹಕ್ಕುಗಳನ್ನು 1983 ಸೆಕ್ಷನ್ 7 (2A) ಅಡಿಯಲ್ಲಿ ಹಿಂಪಡೆಯುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ. ಆದರೆ, ಹಕ್ಕುಗಳನ್ನು ಹೀಗೆ ಹಿಂಪಡೆಯುವ ಸರ್ಕಾರದ ಪ್ರಕ್ರಿಯೆ ತಾತ್ಕಾಲಿಕವೇ ಹೊರತು ಶಾಶ್ವತವಲ್ಲ ಮತ್ತು ಯಾವುದೇ ಸರ್ಕಾರ ಸಂವಿಧಾನದ ವಿರುದ್ಧ ಹೆಜ್ಜೆ ಇಡುವುದು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಷ್ಟು ಸುಲಭದ ಮಾತೂ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....