Homeಮುಖಪುಟರಾಜ್ಯ ರಾಜಕಾರಣಕ್ಕೆ ಧುಮುಕಿದ ಕೆ.ಎಚ್ ಮುನಿಯಪ್ಪನವರ ಕಿರು ಪರಿಚಯ

ರಾಜ್ಯ ರಾಜಕಾರಣಕ್ಕೆ ಧುಮುಕಿದ ಕೆ.ಎಚ್ ಮುನಿಯಪ್ಪನವರ ಕಿರು ಪರಿಚಯ

- Advertisement -
- Advertisement -

ಕಾಂಗ್ರೆಸ್‌ನ ಹಿರಿಯ ದಲಿತ ಮುಖಂಡ, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪನವರು ರಾಜ್ಯ ರಾಜಕಾರಣಕ್ಕೆ ಕಾಲಿಟ್ಟಿದ್ದು, ಇಂದು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಸುದೀರ್ಘ ರಾಜಕೀಯ ಜೀವನದ ಇಣುಕು ನೋಟ ಇಲ್ಲಿದೆ.

ಅವಿಭಜಿತ ಕೋಲಾರ ಜಿಲ್ಲೆಯು ರಾಜ್ಯದಲ್ಲೆ ಅತ್ಯಂತ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲೊಂದು. ಹಾಗಾಗಿಯೇ ಕೋಲಾರ ಲೋಕಸಭಾ ಕ್ಷೇತ್ರವು ಎಸ್.ಸಿ. ಮೀಸಲು ಕ್ಷೇತ್ರವಾಗಿದೆ. ಕಂಬದಹಳ್ಳಿ ಹನುಮಪ್ಪ ಮುನಿಯಪ್ಪನವರು ಮಾಚ್‌ 07, 1948ರಂದು ಕೋಲಾರ ಜಿಲ್ಲೆಯ ಶಿಢ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯ ಹನುಮಪ್ಪ ಹಾಗೂ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ದಲಿತ ಎಡಗೈ ಸಮುದಾಯದ ಕೆ.ಎಚ್ ಮುನಿಯಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದ ಸಂದರ್ಭದಲ್ಲಿ ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಸಲ ಸಂಸದರಾಗಿ ಆಯ್ಕೆಯಾಗಿದ್ದ ಬ್ರಾಹ್ಮಣ ಸಮುದಾಯದ ವಿ.ಕೃಷ್ಣರಾವ್‌ರವರ ಆಪ್ತರಾಗಿದ್ದರು.

ಹಾಗಾಗಿ ದೆಹಲಿಯ ಕಾಂಗ್ರೆಸ್ ಮುಖಂಡರ ಪರಿಚಯವಿದ್ದ ಮುನಿಯಪ್ಪನವರು ರಾಜಕೀಯ ಪ್ರವೇಶಿಸಿ 1991 ರಲ್ಲಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆನಂತರ 1996, 1998, 1999, 2004, 2009, 2014ರವರೆಗೂ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾದ ಕೀರ್ತಿ ಅವರಿಗೆ ಸಲ್ಲುತ್ತದೆ.

2004ರಲ್ಲಿ ಸಾಗಾಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು 2009ರಲ್ಲಿ ರೈಲ್ವೇ ಸಚಿವರಾದರು. ಆನಂತರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಮೊದಲ ಸೋಲು

ಕೆ.ಎಚ್ ಮುನಿಯಪ್ಪನವರಿಗೆ ಇಡೀ ಕೋಲಾರ ಜಿಲ್ಲೆಯ ಮೇಲೆ ತಮ್ಮದೇ ಹಿಡಿತ ಹೊಂದಿದ್ದಾರೆ. ಆದರೆ, ತಾಲೂಕುಗಳಲ್ಲಿ ಕಾಂಗ್ರೆಸ್ ವಿರುದ್ಧ ಇರುವ ಬೇರೆ ಪಕ್ಷದ ಎಂಎಲ್‌ಎಗಳು ಅಥವಾ ಎಂಎಲ್‌ಎ ಅಭ್ಯರ್ಥಿಗಳಿಂದ ಲೋಕಸಭಾ ಚುನಾವಣೆಗಳಿಗೆ ಬೆಂಬಲ ಪಡೆದು, ನಂತರದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡುತ್ತಾರೆ ಎಂಬ ಆರೋಪವು ಅವರ ಮೇಲಿದೆ. ಹಾಗಾಗಿ ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಮುನಿಯಪ್ಪ ಬಣ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ ಸಕ್ರಿಯವಾಗಿದೆ. ಮುನಿಯಪ್ಪನವರ ಮೇಲೆ ಕೋಪಗೊಂಡಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು 2019ರ ಲೋಕಸಭಾ ಚುನಾವಣೆಯಲ್ಲಿ ಅವರ ವಿರುದ್ಧ ಕೆಲಸ ಮಾಡಿದ ಪರಿಣಾಮ ಮುನಿಯಪ್ಪನವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋತರು. ಜಿಲ್ಲೆಯಲ್ಲಿನ ರಮೇಶ್ ಕುಮಾರ್ ಬಣವೇ ಅದಕ್ಕೆ ಕಾರಣ ಎಂದು ಕೋಪಿಸಿಕೊಂಡಿದ್ದ ಅವರು ಪಕ್ಷ ತೊರೆಯುವ ಸೂಚನೆ ಸಹ ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನ ಮಾಡಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಮನವೊಲಿಸಿ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದರ ಫಲವಾಗಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡ ಅವರು ಸಿದ್ದರಾಮಯ್ಯನವರ ಸಂಪುಟದ ಭಾಗವಾಗಿದ್ದಾರೆ.

ಮುನಿಯಪ್ಪನವರು ಸಚಿವರಾಗುವ ಮೂಲಕ ದೇವನಹಳ್ಳಿ ತಾಲ್ಲೂಕಿಗೆ ಮೊದಲ ಬಾರಿಗೆ ಮಂತ್ರಿ ಸ್ಥಾನ ದಕ್ಕಿದಂತಾಗಿದೆ. ಕೆ.ಎಚ್ ಮುನಿಯಪ್ಪನವರು ಸಿಎಂ ಸಿದ್ದರಾಮಯ್ಯನವರನ್ನು ಹೊರತುಪಡಿಸಿ ಸಚಿವ ಸಂಪುಟದಲ್ಲಿನ ಹಿರಿಯ ಮಂತ್ರಿಯಾಗಿದ್ದಾರೆ.

ಇದನ್ನೂ ಓದಿ: 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದ ಪರಿಣಾಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...