Homeಮುಖಪುಟರಾಜ್ಯ ರಾಜಕಾರಣಕ್ಕೆ ಧುಮುಕಿದ ಕೆ.ಎಚ್ ಮುನಿಯಪ್ಪನವರ ಕಿರು ಪರಿಚಯ

ರಾಜ್ಯ ರಾಜಕಾರಣಕ್ಕೆ ಧುಮುಕಿದ ಕೆ.ಎಚ್ ಮುನಿಯಪ್ಪನವರ ಕಿರು ಪರಿಚಯ

- Advertisement -
- Advertisement -

ಕಾಂಗ್ರೆಸ್‌ನ ಹಿರಿಯ ದಲಿತ ಮುಖಂಡ, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪನವರು ರಾಜ್ಯ ರಾಜಕಾರಣಕ್ಕೆ ಕಾಲಿಟ್ಟಿದ್ದು, ಇಂದು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಸುದೀರ್ಘ ರಾಜಕೀಯ ಜೀವನದ ಇಣುಕು ನೋಟ ಇಲ್ಲಿದೆ.

ಅವಿಭಜಿತ ಕೋಲಾರ ಜಿಲ್ಲೆಯು ರಾಜ್ಯದಲ್ಲೆ ಅತ್ಯಂತ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲೊಂದು. ಹಾಗಾಗಿಯೇ ಕೋಲಾರ ಲೋಕಸಭಾ ಕ್ಷೇತ್ರವು ಎಸ್.ಸಿ. ಮೀಸಲು ಕ್ಷೇತ್ರವಾಗಿದೆ. ಕಂಬದಹಳ್ಳಿ ಹನುಮಪ್ಪ ಮುನಿಯಪ್ಪನವರು ಮಾಚ್‌ 07, 1948ರಂದು ಕೋಲಾರ ಜಿಲ್ಲೆಯ ಶಿಢ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯ ಹನುಮಪ್ಪ ಹಾಗೂ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ದಲಿತ ಎಡಗೈ ಸಮುದಾಯದ ಕೆ.ಎಚ್ ಮುನಿಯಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದ ಸಂದರ್ಭದಲ್ಲಿ ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಸಲ ಸಂಸದರಾಗಿ ಆಯ್ಕೆಯಾಗಿದ್ದ ಬ್ರಾಹ್ಮಣ ಸಮುದಾಯದ ವಿ.ಕೃಷ್ಣರಾವ್‌ರವರ ಆಪ್ತರಾಗಿದ್ದರು.

ಹಾಗಾಗಿ ದೆಹಲಿಯ ಕಾಂಗ್ರೆಸ್ ಮುಖಂಡರ ಪರಿಚಯವಿದ್ದ ಮುನಿಯಪ್ಪನವರು ರಾಜಕೀಯ ಪ್ರವೇಶಿಸಿ 1991 ರಲ್ಲಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆನಂತರ 1996, 1998, 1999, 2004, 2009, 2014ರವರೆಗೂ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾದ ಕೀರ್ತಿ ಅವರಿಗೆ ಸಲ್ಲುತ್ತದೆ.

2004ರಲ್ಲಿ ಸಾಗಾಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು 2009ರಲ್ಲಿ ರೈಲ್ವೇ ಸಚಿವರಾದರು. ಆನಂತರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಮೊದಲ ಸೋಲು

ಕೆ.ಎಚ್ ಮುನಿಯಪ್ಪನವರಿಗೆ ಇಡೀ ಕೋಲಾರ ಜಿಲ್ಲೆಯ ಮೇಲೆ ತಮ್ಮದೇ ಹಿಡಿತ ಹೊಂದಿದ್ದಾರೆ. ಆದರೆ, ತಾಲೂಕುಗಳಲ್ಲಿ ಕಾಂಗ್ರೆಸ್ ವಿರುದ್ಧ ಇರುವ ಬೇರೆ ಪಕ್ಷದ ಎಂಎಲ್‌ಎಗಳು ಅಥವಾ ಎಂಎಲ್‌ಎ ಅಭ್ಯರ್ಥಿಗಳಿಂದ ಲೋಕಸಭಾ ಚುನಾವಣೆಗಳಿಗೆ ಬೆಂಬಲ ಪಡೆದು, ನಂತರದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡುತ್ತಾರೆ ಎಂಬ ಆರೋಪವು ಅವರ ಮೇಲಿದೆ. ಹಾಗಾಗಿ ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಮುನಿಯಪ್ಪ ಬಣ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ ಸಕ್ರಿಯವಾಗಿದೆ. ಮುನಿಯಪ್ಪನವರ ಮೇಲೆ ಕೋಪಗೊಂಡಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು 2019ರ ಲೋಕಸಭಾ ಚುನಾವಣೆಯಲ್ಲಿ ಅವರ ವಿರುದ್ಧ ಕೆಲಸ ಮಾಡಿದ ಪರಿಣಾಮ ಮುನಿಯಪ್ಪನವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋತರು. ಜಿಲ್ಲೆಯಲ್ಲಿನ ರಮೇಶ್ ಕುಮಾರ್ ಬಣವೇ ಅದಕ್ಕೆ ಕಾರಣ ಎಂದು ಕೋಪಿಸಿಕೊಂಡಿದ್ದ ಅವರು ಪಕ್ಷ ತೊರೆಯುವ ಸೂಚನೆ ಸಹ ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನ ಮಾಡಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಮನವೊಲಿಸಿ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದರ ಫಲವಾಗಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡ ಅವರು ಸಿದ್ದರಾಮಯ್ಯನವರ ಸಂಪುಟದ ಭಾಗವಾಗಿದ್ದಾರೆ.

ಮುನಿಯಪ್ಪನವರು ಸಚಿವರಾಗುವ ಮೂಲಕ ದೇವನಹಳ್ಳಿ ತಾಲ್ಲೂಕಿಗೆ ಮೊದಲ ಬಾರಿಗೆ ಮಂತ್ರಿ ಸ್ಥಾನ ದಕ್ಕಿದಂತಾಗಿದೆ. ಕೆ.ಎಚ್ ಮುನಿಯಪ್ಪನವರು ಸಿಎಂ ಸಿದ್ದರಾಮಯ್ಯನವರನ್ನು ಹೊರತುಪಡಿಸಿ ಸಚಿವ ಸಂಪುಟದಲ್ಲಿನ ಹಿರಿಯ ಮಂತ್ರಿಯಾಗಿದ್ದಾರೆ.

ಇದನ್ನೂ ಓದಿ: 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದ ಪರಿಣಾಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...