Homeಕರ್ನಾಟಕಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು 'ಬೃಹತ್ ಬೆಂಗಳೂರು ಚಲೋ'

ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನವೆಂಬರ್ 26ರಂದು ಸಂಯುಕ್ತ ಹೋರಾಟ-ಕರ್ನಾಟಕ, ಸಂಯುಕ್ತ ಕಿಸಾ ಮೋರ್ಚಾ ಮತ್ತು ಜೆಸಿಟಿಯು ಸಂಘಟನೆಗಳು ಜಂಟಿಯಾಗಿ ‘ಬೃಹತ್ ಬೆಂಗಳೂರು ಚಲೋ’ ಪ್ರತಿಭಟನೆಗೆ ಕರೆ ನೀಡಿವೆ.

ಬೆಂಗಳೂರಿನ ಪ್ರಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘಟನೆ ಮುಖಂಡರು, “ಕೇಂದ್ರ ಸರ್ಕಾರ ರೈತರು, ಕಾರ್ಮಿಕರು ಹಾಗೂ ಇತರೆ ಜನವರ್ಗಗಳ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ; ಕಂಪನಿಗಳ ಹಿತ ಕಾಯುವುದರಲ್ಲಿ ಮಗ್ನವಾಗಿದೆ. ಅದು ಜಾರಿಗೆ ತರುತ್ತಿರುವ ನೀತಿಗಳ ಪರಿಣಾಮವಾಗಿ ಜನರು ತೀವ್ರ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾರೆ. ಈ ಕಾರಣಕ್ಕಾಗಿಯೇ ಜನ ರಾಜ್ಯದಲ್ಲಿ ಬಿಜೆಪಿಯ ಬದಲು ಕಾಂಗ್ರಸ್‌ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ತಂದಿದ್ದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳನ್ನು ಬದಲಾಯಿಸುತ್ತೇವೆ, ಜನಹಿತ ರಕ್ತಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ಲೆಸ್‌ ಸರ್ಕಾರ ಏನು ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಮಿಕರ ಸಂಕಷ್ಟ ನಿವಾರಣೆಯ ಕ್ರಮಗಳಿಗೆ ರಾಜ್ಯ ಸರ್ಕಾರ ಕೂಡಲೇ ಮುಂದಾಗಲೇಬೇಕು. ನವೆಂಬರ್‌ 26ರಂದು ಸಂಬಂಧಪಟ್ಟ ಸಚಿವರುಗಳು ಸ್ಪಷ್ಟ ತೀರ್ಮಾನಗಳನ್ನು ಘೋಷಿಸಬೇಕು. ಸಂವಿಧಾನ ದಿನವಾದ ನವೆಂಬರ್‌ 26, ಜನರ ಹಕ್ಕುಗಳ ಕುರಿತು ಖಚಿತ ನಿರ್ಣಯಗಳಾಗುವ ದಿನವಾಗಬೇಕು. ಇದನ್ನು ಸಿರ್ಲಕ್ಷಿಸಿದರೆ ಫ್ರೀಡಂ ಪಾರ್ಕಿನಲ್ಲೇ ತೀವ್ರ ಹೋರಾಟದ ತೀರ್ಮಾನ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಈ ಹೋರಾಟದ ಮೂಲಕ, ರಾಜ್ಯದ ದುಡಿಯುವ ಹಾಗೂ ದಮನಿತರು ಪರಿತಪಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಮುಂದಿಡುತ್ತಿದ್ದೇವೆ. ಇವನ್ನು ಬಗೆಹರಿಸಲು ಇರುವ ದಾರಿಗಳ ಕುರಿತೂ ನಮಗೆ ನಿರ್ಧಿಷ್ಟ ಪಸ್ತಾಪಗಳಿವೆ. ಈ ವಿಚಾರಗಳಿಗೆ ಸಾಧ್ಯವಿರುವ ತ್ವರಿತ ಪರಿಹಾರಗಳ ಕುರಿತು ಚರ್ಚಿಸಲು ಕೂಡಲೇ ಸಮಾಲೋಚನಾ ಸಭೆಗಳನ್ನು ಕರೆಯಬೇಕೆಂದು ಮುಖ್ಯಮಂತ್ರಿಗಳಲ್ಲೂ, ಸಂಬಂಧಪಟ್ಟ ಸಚಿವರುಗಳಲ್ಲಿಯೂ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ” ಎಂದರು.

ಪ್ರಮುಖ ಹಕ್ಕೊತ್ತಾಯಗಳು

    • ಬಲವಂತದ ಭೂಸ್ವಾಧೀನಗಳನ್ನು ಕೈಬಿಡಬೇಕು.
    • ಉಳುಮೆ ಮಾಡುತ್ತಿರುವ, ಅರ್ಜಿ ಸಲ್ಲಿಸಿರುವ ಹಾಗೂ ಬೇರೆ ಭೂಮಿ ಇಲ್ಲದ ಬಗರ್‌ ಹುಕುಂ ರೈತರಿಗೆ ‘ಒನ್‌ ಟೈಂ
      ಸೆಟಲ್ಮೆಂಟ್‌’ ಆಧಾರದಲ್ಲಿ ಭೂಮಿ ಮಂಜೂರು ಮಾಡುವ ಗಟ್ಟಿ ತೀರ್ಮಾನ ಸರ್ಕಾರ ಮಾಡಬೇಕು.
    • ಅರಣ್ಯವಾಸಿಗಳನ್ನು ಆತಂತ್ರ ಸ್ಥಿತಿಯಿಂದ ಪಾರು ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯ ಹಕ್ಕು ಕಾಯ್ದೆ 2006ರ ಪ್ರಕಾರ ಆದಿವಾಸಿಗಳಿಗೆ ಮಾತ್ರವಲ್ಲದೆ. ಎಲ್ಲಾ ಅರಣ್ಯವಾಸಿಗಳಿಗೂ ಭೂಮಿ ಹಕ್ಕು ನೀಡಬೇಕು.
    • ಯಾವುದೇ ಕಾರಣಕ್ಕೂ ಬಡ ರೈತರನ್ನು ಒಕ್ಕಲೆಬ್ಬಿಸಬಾರದು. ಈಗಾಗಲೇ ಭೂಮಿ ಮಂಜೂರು ಮಾಡಿ ಖಾತೆ ಪಾಣಿಯಾಗಿರುವ ಭೂಮಿಗಳ ಖಾತೆಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು.
    • ವಸತಿ ನಿವೇಶನಗಳ ಹಂಚಿಕೆಗೆ ಸರ್ಕಾರ ಮೆಗಾ ಯೋಜನೆ ರೂಪಿಸಬೇಕು. ‘ಪ್ರತಿಯೊಬ್ಬರಿಗೂ ಸೂರು’ ಸರ್ಕಾರದ
      ಕಾರ್ಯನೀತಿಯಾಗಬೇಕು.
    • ರೈತರ ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಪರಿಷ್ಕರಿಸಬೇಕು ಮತ್ತು ಖರೀದಿ ಪ್ರಮಾಣವನ್ನು ಹೆಚ್ಚಿಸಬೇಕು.
    • ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು, ಹಣದ ಹಂಚಿಕೆ ನಿಲ್ಲಬೇಕು. ರೈತರಿಂದ ವಿವಿಧ ಬೆಳೆಗಳನ್ನು ಖರೀದಿಸಿ ಸಮಗ್ರ ಕುಟುಂಬ ಪ್ಯಾಕ್‌ ವಿತರಿಸಬೇಕು.
    • ಕಬ್ಬಿನ ಬೆಲೆಯಲ್ಲಿ ಆಗುತ್ತಿರುವ ಆನ್ಯಾಯ ತಡೆಯಲು ರಾಜ್ಯ ಬೆಲೆ ನಿಗದಿ ನೀತಿಯನ್ನು ರೂಪಿಸಬೇಕು. ಸ್ವಾಮಿನಾಥನ್ ವರದಿ ಜಾರಿ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ಮೈಕೋಫೈನಾನ್ಸ್‌ ಹಾವಳಿಯಿಂದ ಜನಸಾಮಾನ್ಯರಿಗೆ ಮುಕ್ತಿ ದೊರಕಬೇಕು. ಜಪ್ತಿ, ಸಾಮಾಜಿಕ ಆವಮಾನ ಮಾಡುವಂತಹ ಕ್ರಿಯೆಗಳ ಮೇಲೆ ಕಠಿಣ ಕಮಕ್ಕೆಗೊಳ್ಳಬೇಕು. ಮೈಕ್ರೋಫೈನಾನ್ಸ್‌ ಸಂಸ್ಥೆಗಳನ್ನೂ ಆರ್‌ಬಿಐ ನಿಯಮಾವಳಿಗಳಡಿ ತರಬೇಕು.
    • ಸಣ್ಣ ರೈತರು ಮಾಡಿರುವ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು.
    • 9 ರೈತರಿಗೆ, ಕೃಷಿಕೂಲಿಗಳಿಗೆ ಸರಳವಾಗಿ ಹಾಗೂ ಜಾಮೀನು ರಹಿತವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಸೌಲಭ್ಯ ದೊರಕಿಸುವ ಕ್ರಮಕ್ಕೆ ಸರ್ಕಾರ ಮುಂದಾಗಬೇಕು.
    • ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ವಿದ್ಯುತ್‌ ಖಾಸಗೀಕರಣವನ್ನು ಕೈಬಿಡಬೇಕು. ಪ್ರೀಪೇಯ್ಡ್‌ ಮೀಟರ್‌ ಅಳವಡಿಕೆ ಕೈಬಿಡಬೇಕು.
    • ವಿದ್ಯುತ್‌ ಸಂಪರ್ಕ ವೆಚ್ಚವನ್ನು ರೈತರ ಮೇಲೆಯೇ ಹೇರುವ ನೀತಿ ರದ್ದಾಗಬೇಕು.
    • ಜನಸಾಮಾನ್ಯರ ವಿದ್ಯುತ್‌ ದರಗಳನ್ನು ತಗ್ಗಿಸಬೇಕು.
    • ಕಾರ್ಮಿಕ ಕೋಡ್‌ ಗಳು; ಕಾರ್ಮಿಕರ ಹಕ್ಕುಗಳಿಗೆ ಸಂಬಂಧಿಸಿದ 26 ಕಾಯ್ದೆಗಳನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ತಂದಿರುವ ಕೋಡ್‌ ಗಳ ರದ್ದುಮಾಡುವ ತೀರ್ಮಾನ ತೆಗೆದುಕೊಳ್ಳಬೇಕು.
    • ಅಸ೦ಂಘಟತ ಅಕಾರ್ಮಿಕರ ಕುಂದುಕೊರತೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವು ಎಲ್ಲಾ ತಾಲೂಕು, ಜಿಲ್ಲೆ ಮತ್ತು ಮಹಾನಗರ ಪಾಲಿಕೆ ಮಟ್ಟಗಳಲ್ಲಿ ಕಾರ್ಮಿಕರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಬೇಕು.
    • ಅಸುರಕ್ಷಿತ ಕಾರ್ಮಿಕರಿಗಾಗಿ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಬೇಕು.
    • ಶ್ರಮಜೀವಿಗಳನ್ನು ಗುಲಾಮರಂತೆ ನಡೆಸಿಕೊಳ್ಳುವ ಅಮಾನವೀಯ ಪದ್ಧತಿಗಳು ಕೂಡಲೇ ಕೊನೆಗೊಳ್ಳಬೇಕು.
    • ಮಾಜಿ ಜೀತಗಾರರ ಪುನರ್ವಸತಿ ತ್ವರಿತವಾಗಿ ಜಾರಿಯಾಗಬೇಕು, ವಲಸೆ ಕಾರ್ಮಿಕರ ರಕ್ಷಣೆ, ವಲಸೆ ಕಾರ್ಮಿಕರಿಗೆ ರಕ್ಷಣೆ ನೀಡಬೇಕು. ಅವರಿಗೆ ಪಡಿತರ ಆಹಾರ ವ್ಯವಸ್ಥೆಗೆ ಪ್ರವೇಶವಿರಬೇಕು. ಅವರ ವಸತಿ
      ಸ್ಥಳದಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು.
    • ಕನಿಷ್ಟ ವೇತನ ಪರಿಷ್ಕರಣೆಗಾಗಿ ರಚಿಸಿರುವ ತ್ರಿಪಕ್ಷೀಯ ಸಲಹಾ ಮಂಡಳಿಯ ನಿರ್ಧಾರವನ್ನು ಈ ಕೂಡಲೇ
    • ಜಾರಿಮಾಡಬೇಕು.
    • ಕನಿಷ್ಠ ವೇತನವನ್ನು ಎಲ್ಲ ಕಾರ್ಮಿಕ ಸಂಘಟನೆಗಳಿಗೂ, ಮಾಲೀಕರಿಗೂ ಇಲಾಖೆಗಳಿಗೂ ಮನದಟ್ಟಾಗುವಂತೆ
      ಮುಟ್ಟಿಸಬೇಕು. ಅದನ್ನು ಜಾರಿಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು.
    • ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಧನದ ಬದಲು ಘನತೆಯ ವೇತನ ಜಾರಿಯಾಗಬೇಕು. ಇತರೆ ಕಾರ್ಮಿಕರಂತೆ ಸ್ಕೀಂ ಕಾರ್ಮಿಕರಿಗೂ ಸಾಮಾಜಿಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು.
    • ಎಂಟು ಗಂಟೆ ಕೆಲಸ; ದುಡಿಮೆಯ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸುವ ತೀರ್ಮಾನವನ್ನು
      ರದ್ದುಗೊಳಿಸಬೇಕು. ಹೆಚ್ಚುವರಿ ಕೆಲಸಕ್ಕೆ ಎರಡುಪಟ್ಟು ವೇತನ ನೀಡಬೇಕು.
    • ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಹಂತಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ
      ನೀಡಬೇಕು.
    • ಉದ್ಯೋಗ ಸೃಷ್ಟಿಗೆ ಸಮಗ್ರ ಕಾರ್ಯಯೋಜನೆ ರೂಪಿಸಲು ‘ಉದ್ಯೋಗ ಖಾತ್ರಿ ಆಯೋಗ’ವನ್ನು ರಚಿಸಬೇಕು.
    • ಹಿಂದುಳಿದಿರುವ ಎಲ್ಲ ತಾಲ್ಲೂಕುಗಳಲ್ಲಿ ನರೇಗಾ ಕೆಲಸವನ್ನು 200 ದಿನಗಳಿಗೆ ವಿಸ್ತರಿಸಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಕುರಿತು ಸಮಗ್ರ ಚರ್ಚಿಸಲು ಹಾಗೂ ಮೌಲ್ಯಮಾಪನ ಮಾಡಲು ‘ಅವಲೋಕನ ಸಭೆ’ ಕರೆಯಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ, ವಿನಿಯೋಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ದೃಷ್ಟಿಯಿಂದ ‘ಏಕ ಗವಾಕ್ಷಿ ಯೋಜನೆ’ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ವಹಿಸುವುದು. ನಿರ್ವಹಣೆಗಾಗಿ ಮೇಲ್ವಿಚಾರಣಾ ಕೋಶ ರಚಿಸುವುದು.
    • ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ಅನ್ನು ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಶೋಷಿತ ಹಾಗೂ ಬಡ ಮಕ್ಕಳಿಗೆ ಮೊದಲಿನಂತೆಯೇ ಶೈಕ್ಷಣಿಕ ನೆರವು ಮುಂದುವರೆಯುವಂತಾಗಬೇಕು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

    ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

    ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

    ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

    “ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

    ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

    ‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

    ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

    ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

    ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

    ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

    ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

    ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

    ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

    ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

    ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

    ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

    ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

    ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

    ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....