Homeಕರ್ನಾಟಕಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು 'ಬೃಹತ್ ಬೆಂಗಳೂರು ಚಲೋ'

ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನವೆಂಬರ್ 26ರಂದು ಸಂಯುಕ್ತ ಹೋರಾಟ-ಕರ್ನಾಟಕ, ಸಂಯುಕ್ತ ಕಿಸಾ ಮೋರ್ಚಾ ಮತ್ತು ಜೆಸಿಟಿಯು ಸಂಘಟನೆಗಳು ಜಂಟಿಯಾಗಿ ‘ಬೃಹತ್ ಬೆಂಗಳೂರು ಚಲೋ’ ಪ್ರತಿಭಟನೆಗೆ ಕರೆ ನೀಡಿವೆ.

ಬೆಂಗಳೂರಿನ ಪ್ರಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘಟನೆ ಮುಖಂಡರು, “ಕೇಂದ್ರ ಸರ್ಕಾರ ರೈತರು, ಕಾರ್ಮಿಕರು ಹಾಗೂ ಇತರೆ ಜನವರ್ಗಗಳ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ; ಕಂಪನಿಗಳ ಹಿತ ಕಾಯುವುದರಲ್ಲಿ ಮಗ್ನವಾಗಿದೆ. ಅದು ಜಾರಿಗೆ ತರುತ್ತಿರುವ ನೀತಿಗಳ ಪರಿಣಾಮವಾಗಿ ಜನರು ತೀವ್ರ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾರೆ. ಈ ಕಾರಣಕ್ಕಾಗಿಯೇ ಜನ ರಾಜ್ಯದಲ್ಲಿ ಬಿಜೆಪಿಯ ಬದಲು ಕಾಂಗ್ರಸ್‌ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ತಂದಿದ್ದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳನ್ನು ಬದಲಾಯಿಸುತ್ತೇವೆ, ಜನಹಿತ ರಕ್ತಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ಲೆಸ್‌ ಸರ್ಕಾರ ಏನು ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಮಿಕರ ಸಂಕಷ್ಟ ನಿವಾರಣೆಯ ಕ್ರಮಗಳಿಗೆ ರಾಜ್ಯ ಸರ್ಕಾರ ಕೂಡಲೇ ಮುಂದಾಗಲೇಬೇಕು. ನವೆಂಬರ್‌ 26ರಂದು ಸಂಬಂಧಪಟ್ಟ ಸಚಿವರುಗಳು ಸ್ಪಷ್ಟ ತೀರ್ಮಾನಗಳನ್ನು ಘೋಷಿಸಬೇಕು. ಸಂವಿಧಾನ ದಿನವಾದ ನವೆಂಬರ್‌ 26, ಜನರ ಹಕ್ಕುಗಳ ಕುರಿತು ಖಚಿತ ನಿರ್ಣಯಗಳಾಗುವ ದಿನವಾಗಬೇಕು. ಇದನ್ನು ಸಿರ್ಲಕ್ಷಿಸಿದರೆ ಫ್ರೀಡಂ ಪಾರ್ಕಿನಲ್ಲೇ ತೀವ್ರ ಹೋರಾಟದ ತೀರ್ಮಾನ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಈ ಹೋರಾಟದ ಮೂಲಕ, ರಾಜ್ಯದ ದುಡಿಯುವ ಹಾಗೂ ದಮನಿತರು ಪರಿತಪಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಮುಂದಿಡುತ್ತಿದ್ದೇವೆ. ಇವನ್ನು ಬಗೆಹರಿಸಲು ಇರುವ ದಾರಿಗಳ ಕುರಿತೂ ನಮಗೆ ನಿರ್ಧಿಷ್ಟ ಪಸ್ತಾಪಗಳಿವೆ. ಈ ವಿಚಾರಗಳಿಗೆ ಸಾಧ್ಯವಿರುವ ತ್ವರಿತ ಪರಿಹಾರಗಳ ಕುರಿತು ಚರ್ಚಿಸಲು ಕೂಡಲೇ ಸಮಾಲೋಚನಾ ಸಭೆಗಳನ್ನು ಕರೆಯಬೇಕೆಂದು ಮುಖ್ಯಮಂತ್ರಿಗಳಲ್ಲೂ, ಸಂಬಂಧಪಟ್ಟ ಸಚಿವರುಗಳಲ್ಲಿಯೂ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ” ಎಂದರು.

ಪ್ರಮುಖ ಹಕ್ಕೊತ್ತಾಯಗಳು

    • ಬಲವಂತದ ಭೂಸ್ವಾಧೀನಗಳನ್ನು ಕೈಬಿಡಬೇಕು.
    • ಉಳುಮೆ ಮಾಡುತ್ತಿರುವ, ಅರ್ಜಿ ಸಲ್ಲಿಸಿರುವ ಹಾಗೂ ಬೇರೆ ಭೂಮಿ ಇಲ್ಲದ ಬಗರ್‌ ಹುಕುಂ ರೈತರಿಗೆ ‘ಒನ್‌ ಟೈಂ
      ಸೆಟಲ್ಮೆಂಟ್‌’ ಆಧಾರದಲ್ಲಿ ಭೂಮಿ ಮಂಜೂರು ಮಾಡುವ ಗಟ್ಟಿ ತೀರ್ಮಾನ ಸರ್ಕಾರ ಮಾಡಬೇಕು.
    • ಅರಣ್ಯವಾಸಿಗಳನ್ನು ಆತಂತ್ರ ಸ್ಥಿತಿಯಿಂದ ಪಾರು ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯ ಹಕ್ಕು ಕಾಯ್ದೆ 2006ರ ಪ್ರಕಾರ ಆದಿವಾಸಿಗಳಿಗೆ ಮಾತ್ರವಲ್ಲದೆ. ಎಲ್ಲಾ ಅರಣ್ಯವಾಸಿಗಳಿಗೂ ಭೂಮಿ ಹಕ್ಕು ನೀಡಬೇಕು.
    • ಯಾವುದೇ ಕಾರಣಕ್ಕೂ ಬಡ ರೈತರನ್ನು ಒಕ್ಕಲೆಬ್ಬಿಸಬಾರದು. ಈಗಾಗಲೇ ಭೂಮಿ ಮಂಜೂರು ಮಾಡಿ ಖಾತೆ ಪಾಣಿಯಾಗಿರುವ ಭೂಮಿಗಳ ಖಾತೆಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು.
    • ವಸತಿ ನಿವೇಶನಗಳ ಹಂಚಿಕೆಗೆ ಸರ್ಕಾರ ಮೆಗಾ ಯೋಜನೆ ರೂಪಿಸಬೇಕು. ‘ಪ್ರತಿಯೊಬ್ಬರಿಗೂ ಸೂರು’ ಸರ್ಕಾರದ
      ಕಾರ್ಯನೀತಿಯಾಗಬೇಕು.
    • ರೈತರ ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಪರಿಷ್ಕರಿಸಬೇಕು ಮತ್ತು ಖರೀದಿ ಪ್ರಮಾಣವನ್ನು ಹೆಚ್ಚಿಸಬೇಕು.
    • ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು, ಹಣದ ಹಂಚಿಕೆ ನಿಲ್ಲಬೇಕು. ರೈತರಿಂದ ವಿವಿಧ ಬೆಳೆಗಳನ್ನು ಖರೀದಿಸಿ ಸಮಗ್ರ ಕುಟುಂಬ ಪ್ಯಾಕ್‌ ವಿತರಿಸಬೇಕು.
    • ಕಬ್ಬಿನ ಬೆಲೆಯಲ್ಲಿ ಆಗುತ್ತಿರುವ ಆನ್ಯಾಯ ತಡೆಯಲು ರಾಜ್ಯ ಬೆಲೆ ನಿಗದಿ ನೀತಿಯನ್ನು ರೂಪಿಸಬೇಕು. ಸ್ವಾಮಿನಾಥನ್ ವರದಿ ಜಾರಿ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ಮೈಕೋಫೈನಾನ್ಸ್‌ ಹಾವಳಿಯಿಂದ ಜನಸಾಮಾನ್ಯರಿಗೆ ಮುಕ್ತಿ ದೊರಕಬೇಕು. ಜಪ್ತಿ, ಸಾಮಾಜಿಕ ಆವಮಾನ ಮಾಡುವಂತಹ ಕ್ರಿಯೆಗಳ ಮೇಲೆ ಕಠಿಣ ಕಮಕ್ಕೆಗೊಳ್ಳಬೇಕು. ಮೈಕ್ರೋಫೈನಾನ್ಸ್‌ ಸಂಸ್ಥೆಗಳನ್ನೂ ಆರ್‌ಬಿಐ ನಿಯಮಾವಳಿಗಳಡಿ ತರಬೇಕು.
    • ಸಣ್ಣ ರೈತರು ಮಾಡಿರುವ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು.
    • 9 ರೈತರಿಗೆ, ಕೃಷಿಕೂಲಿಗಳಿಗೆ ಸರಳವಾಗಿ ಹಾಗೂ ಜಾಮೀನು ರಹಿತವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಸೌಲಭ್ಯ ದೊರಕಿಸುವ ಕ್ರಮಕ್ಕೆ ಸರ್ಕಾರ ಮುಂದಾಗಬೇಕು.
    • ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ವಿದ್ಯುತ್‌ ಖಾಸಗೀಕರಣವನ್ನು ಕೈಬಿಡಬೇಕು. ಪ್ರೀಪೇಯ್ಡ್‌ ಮೀಟರ್‌ ಅಳವಡಿಕೆ ಕೈಬಿಡಬೇಕು.
    • ವಿದ್ಯುತ್‌ ಸಂಪರ್ಕ ವೆಚ್ಚವನ್ನು ರೈತರ ಮೇಲೆಯೇ ಹೇರುವ ನೀತಿ ರದ್ದಾಗಬೇಕು.
    • ಜನಸಾಮಾನ್ಯರ ವಿದ್ಯುತ್‌ ದರಗಳನ್ನು ತಗ್ಗಿಸಬೇಕು.
    • ಕಾರ್ಮಿಕ ಕೋಡ್‌ ಗಳು; ಕಾರ್ಮಿಕರ ಹಕ್ಕುಗಳಿಗೆ ಸಂಬಂಧಿಸಿದ 26 ಕಾಯ್ದೆಗಳನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ತಂದಿರುವ ಕೋಡ್‌ ಗಳ ರದ್ದುಮಾಡುವ ತೀರ್ಮಾನ ತೆಗೆದುಕೊಳ್ಳಬೇಕು.
    • ಅಸ೦ಂಘಟತ ಅಕಾರ್ಮಿಕರ ಕುಂದುಕೊರತೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವು ಎಲ್ಲಾ ತಾಲೂಕು, ಜಿಲ್ಲೆ ಮತ್ತು ಮಹಾನಗರ ಪಾಲಿಕೆ ಮಟ್ಟಗಳಲ್ಲಿ ಕಾರ್ಮಿಕರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಬೇಕು.
    • ಅಸುರಕ್ಷಿತ ಕಾರ್ಮಿಕರಿಗಾಗಿ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಬೇಕು.
    • ಶ್ರಮಜೀವಿಗಳನ್ನು ಗುಲಾಮರಂತೆ ನಡೆಸಿಕೊಳ್ಳುವ ಅಮಾನವೀಯ ಪದ್ಧತಿಗಳು ಕೂಡಲೇ ಕೊನೆಗೊಳ್ಳಬೇಕು.
    • ಮಾಜಿ ಜೀತಗಾರರ ಪುನರ್ವಸತಿ ತ್ವರಿತವಾಗಿ ಜಾರಿಯಾಗಬೇಕು, ವಲಸೆ ಕಾರ್ಮಿಕರ ರಕ್ಷಣೆ, ವಲಸೆ ಕಾರ್ಮಿಕರಿಗೆ ರಕ್ಷಣೆ ನೀಡಬೇಕು. ಅವರಿಗೆ ಪಡಿತರ ಆಹಾರ ವ್ಯವಸ್ಥೆಗೆ ಪ್ರವೇಶವಿರಬೇಕು. ಅವರ ವಸತಿ
      ಸ್ಥಳದಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು.
    • ಕನಿಷ್ಟ ವೇತನ ಪರಿಷ್ಕರಣೆಗಾಗಿ ರಚಿಸಿರುವ ತ್ರಿಪಕ್ಷೀಯ ಸಲಹಾ ಮಂಡಳಿಯ ನಿರ್ಧಾರವನ್ನು ಈ ಕೂಡಲೇ
    • ಜಾರಿಮಾಡಬೇಕು.
    • ಕನಿಷ್ಠ ವೇತನವನ್ನು ಎಲ್ಲ ಕಾರ್ಮಿಕ ಸಂಘಟನೆಗಳಿಗೂ, ಮಾಲೀಕರಿಗೂ ಇಲಾಖೆಗಳಿಗೂ ಮನದಟ್ಟಾಗುವಂತೆ
      ಮುಟ್ಟಿಸಬೇಕು. ಅದನ್ನು ಜಾರಿಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು.
    • ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಧನದ ಬದಲು ಘನತೆಯ ವೇತನ ಜಾರಿಯಾಗಬೇಕು. ಇತರೆ ಕಾರ್ಮಿಕರಂತೆ ಸ್ಕೀಂ ಕಾರ್ಮಿಕರಿಗೂ ಸಾಮಾಜಿಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು.
    • ಎಂಟು ಗಂಟೆ ಕೆಲಸ; ದುಡಿಮೆಯ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸುವ ತೀರ್ಮಾನವನ್ನು
      ರದ್ದುಗೊಳಿಸಬೇಕು. ಹೆಚ್ಚುವರಿ ಕೆಲಸಕ್ಕೆ ಎರಡುಪಟ್ಟು ವೇತನ ನೀಡಬೇಕು.
    • ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಹಂತಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ
      ನೀಡಬೇಕು.
    • ಉದ್ಯೋಗ ಸೃಷ್ಟಿಗೆ ಸಮಗ್ರ ಕಾರ್ಯಯೋಜನೆ ರೂಪಿಸಲು ‘ಉದ್ಯೋಗ ಖಾತ್ರಿ ಆಯೋಗ’ವನ್ನು ರಚಿಸಬೇಕು.
    • ಹಿಂದುಳಿದಿರುವ ಎಲ್ಲ ತಾಲ್ಲೂಕುಗಳಲ್ಲಿ ನರೇಗಾ ಕೆಲಸವನ್ನು 200 ದಿನಗಳಿಗೆ ವಿಸ್ತರಿಸಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಕುರಿತು ಸಮಗ್ರ ಚರ್ಚಿಸಲು ಹಾಗೂ ಮೌಲ್ಯಮಾಪನ ಮಾಡಲು ‘ಅವಲೋಕನ ಸಭೆ’ ಕರೆಯಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ, ವಿನಿಯೋಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ದೃಷ್ಟಿಯಿಂದ ‘ಏಕ ಗವಾಕ್ಷಿ ಯೋಜನೆ’ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ವಹಿಸುವುದು. ನಿರ್ವಹಣೆಗಾಗಿ ಮೇಲ್ವಿಚಾರಣಾ ಕೋಶ ರಚಿಸುವುದು.
    • ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ಅನ್ನು ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಶೋಷಿತ ಹಾಗೂ ಬಡ ಮಕ್ಕಳಿಗೆ ಮೊದಲಿನಂತೆಯೇ ಶೈಕ್ಷಣಿಕ ನೆರವು ಮುಂದುವರೆಯುವಂತಾಗಬೇಕು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

    ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

    ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

    ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

    ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

    2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

    ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

    ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

    ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

    ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

    ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

    ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

    ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

    ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

    ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

    ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

    Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

    ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

    ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

    ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...