Homeಕರ್ನಾಟಕಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು 'ಬೃಹತ್ ಬೆಂಗಳೂರು ಚಲೋ'

ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನವೆಂಬರ್ 26ರಂದು ಸಂಯುಕ್ತ ಹೋರಾಟ-ಕರ್ನಾಟಕ, ಸಂಯುಕ್ತ ಕಿಸಾ ಮೋರ್ಚಾ ಮತ್ತು ಜೆಸಿಟಿಯು ಸಂಘಟನೆಗಳು ಜಂಟಿಯಾಗಿ ‘ಬೃಹತ್ ಬೆಂಗಳೂರು ಚಲೋ’ ಪ್ರತಿಭಟನೆಗೆ ಕರೆ ನೀಡಿವೆ.

ಬೆಂಗಳೂರಿನ ಪ್ರಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘಟನೆ ಮುಖಂಡರು, “ಕೇಂದ್ರ ಸರ್ಕಾರ ರೈತರು, ಕಾರ್ಮಿಕರು ಹಾಗೂ ಇತರೆ ಜನವರ್ಗಗಳ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ; ಕಂಪನಿಗಳ ಹಿತ ಕಾಯುವುದರಲ್ಲಿ ಮಗ್ನವಾಗಿದೆ. ಅದು ಜಾರಿಗೆ ತರುತ್ತಿರುವ ನೀತಿಗಳ ಪರಿಣಾಮವಾಗಿ ಜನರು ತೀವ್ರ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾರೆ. ಈ ಕಾರಣಕ್ಕಾಗಿಯೇ ಜನ ರಾಜ್ಯದಲ್ಲಿ ಬಿಜೆಪಿಯ ಬದಲು ಕಾಂಗ್ರಸ್‌ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ತಂದಿದ್ದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳನ್ನು ಬದಲಾಯಿಸುತ್ತೇವೆ, ಜನಹಿತ ರಕ್ತಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ಲೆಸ್‌ ಸರ್ಕಾರ ಏನು ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಮಿಕರ ಸಂಕಷ್ಟ ನಿವಾರಣೆಯ ಕ್ರಮಗಳಿಗೆ ರಾಜ್ಯ ಸರ್ಕಾರ ಕೂಡಲೇ ಮುಂದಾಗಲೇಬೇಕು. ನವೆಂಬರ್‌ 26ರಂದು ಸಂಬಂಧಪಟ್ಟ ಸಚಿವರುಗಳು ಸ್ಪಷ್ಟ ತೀರ್ಮಾನಗಳನ್ನು ಘೋಷಿಸಬೇಕು. ಸಂವಿಧಾನ ದಿನವಾದ ನವೆಂಬರ್‌ 26, ಜನರ ಹಕ್ಕುಗಳ ಕುರಿತು ಖಚಿತ ನಿರ್ಣಯಗಳಾಗುವ ದಿನವಾಗಬೇಕು. ಇದನ್ನು ಸಿರ್ಲಕ್ಷಿಸಿದರೆ ಫ್ರೀಡಂ ಪಾರ್ಕಿನಲ್ಲೇ ತೀವ್ರ ಹೋರಾಟದ ತೀರ್ಮಾನ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಈ ಹೋರಾಟದ ಮೂಲಕ, ರಾಜ್ಯದ ದುಡಿಯುವ ಹಾಗೂ ದಮನಿತರು ಪರಿತಪಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಮುಂದಿಡುತ್ತಿದ್ದೇವೆ. ಇವನ್ನು ಬಗೆಹರಿಸಲು ಇರುವ ದಾರಿಗಳ ಕುರಿತೂ ನಮಗೆ ನಿರ್ಧಿಷ್ಟ ಪಸ್ತಾಪಗಳಿವೆ. ಈ ವಿಚಾರಗಳಿಗೆ ಸಾಧ್ಯವಿರುವ ತ್ವರಿತ ಪರಿಹಾರಗಳ ಕುರಿತು ಚರ್ಚಿಸಲು ಕೂಡಲೇ ಸಮಾಲೋಚನಾ ಸಭೆಗಳನ್ನು ಕರೆಯಬೇಕೆಂದು ಮುಖ್ಯಮಂತ್ರಿಗಳಲ್ಲೂ, ಸಂಬಂಧಪಟ್ಟ ಸಚಿವರುಗಳಲ್ಲಿಯೂ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ” ಎಂದರು.

ಪ್ರಮುಖ ಹಕ್ಕೊತ್ತಾಯಗಳು

    • ಬಲವಂತದ ಭೂಸ್ವಾಧೀನಗಳನ್ನು ಕೈಬಿಡಬೇಕು.
    • ಉಳುಮೆ ಮಾಡುತ್ತಿರುವ, ಅರ್ಜಿ ಸಲ್ಲಿಸಿರುವ ಹಾಗೂ ಬೇರೆ ಭೂಮಿ ಇಲ್ಲದ ಬಗರ್‌ ಹುಕುಂ ರೈತರಿಗೆ ‘ಒನ್‌ ಟೈಂ
      ಸೆಟಲ್ಮೆಂಟ್‌’ ಆಧಾರದಲ್ಲಿ ಭೂಮಿ ಮಂಜೂರು ಮಾಡುವ ಗಟ್ಟಿ ತೀರ್ಮಾನ ಸರ್ಕಾರ ಮಾಡಬೇಕು.
    • ಅರಣ್ಯವಾಸಿಗಳನ್ನು ಆತಂತ್ರ ಸ್ಥಿತಿಯಿಂದ ಪಾರು ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯ ಹಕ್ಕು ಕಾಯ್ದೆ 2006ರ ಪ್ರಕಾರ ಆದಿವಾಸಿಗಳಿಗೆ ಮಾತ್ರವಲ್ಲದೆ. ಎಲ್ಲಾ ಅರಣ್ಯವಾಸಿಗಳಿಗೂ ಭೂಮಿ ಹಕ್ಕು ನೀಡಬೇಕು.
    • ಯಾವುದೇ ಕಾರಣಕ್ಕೂ ಬಡ ರೈತರನ್ನು ಒಕ್ಕಲೆಬ್ಬಿಸಬಾರದು. ಈಗಾಗಲೇ ಭೂಮಿ ಮಂಜೂರು ಮಾಡಿ ಖಾತೆ ಪಾಣಿಯಾಗಿರುವ ಭೂಮಿಗಳ ಖಾತೆಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು.
    • ವಸತಿ ನಿವೇಶನಗಳ ಹಂಚಿಕೆಗೆ ಸರ್ಕಾರ ಮೆಗಾ ಯೋಜನೆ ರೂಪಿಸಬೇಕು. ‘ಪ್ರತಿಯೊಬ್ಬರಿಗೂ ಸೂರು’ ಸರ್ಕಾರದ
      ಕಾರ್ಯನೀತಿಯಾಗಬೇಕು.
    • ರೈತರ ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಪರಿಷ್ಕರಿಸಬೇಕು ಮತ್ತು ಖರೀದಿ ಪ್ರಮಾಣವನ್ನು ಹೆಚ್ಚಿಸಬೇಕು.
    • ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು, ಹಣದ ಹಂಚಿಕೆ ನಿಲ್ಲಬೇಕು. ರೈತರಿಂದ ವಿವಿಧ ಬೆಳೆಗಳನ್ನು ಖರೀದಿಸಿ ಸಮಗ್ರ ಕುಟುಂಬ ಪ್ಯಾಕ್‌ ವಿತರಿಸಬೇಕು.
    • ಕಬ್ಬಿನ ಬೆಲೆಯಲ್ಲಿ ಆಗುತ್ತಿರುವ ಆನ್ಯಾಯ ತಡೆಯಲು ರಾಜ್ಯ ಬೆಲೆ ನಿಗದಿ ನೀತಿಯನ್ನು ರೂಪಿಸಬೇಕು. ಸ್ವಾಮಿನಾಥನ್ ವರದಿ ಜಾರಿ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ಮೈಕೋಫೈನಾನ್ಸ್‌ ಹಾವಳಿಯಿಂದ ಜನಸಾಮಾನ್ಯರಿಗೆ ಮುಕ್ತಿ ದೊರಕಬೇಕು. ಜಪ್ತಿ, ಸಾಮಾಜಿಕ ಆವಮಾನ ಮಾಡುವಂತಹ ಕ್ರಿಯೆಗಳ ಮೇಲೆ ಕಠಿಣ ಕಮಕ್ಕೆಗೊಳ್ಳಬೇಕು. ಮೈಕ್ರೋಫೈನಾನ್ಸ್‌ ಸಂಸ್ಥೆಗಳನ್ನೂ ಆರ್‌ಬಿಐ ನಿಯಮಾವಳಿಗಳಡಿ ತರಬೇಕು.
    • ಸಣ್ಣ ರೈತರು ಮಾಡಿರುವ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು.
    • 9 ರೈತರಿಗೆ, ಕೃಷಿಕೂಲಿಗಳಿಗೆ ಸರಳವಾಗಿ ಹಾಗೂ ಜಾಮೀನು ರಹಿತವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಸೌಲಭ್ಯ ದೊರಕಿಸುವ ಕ್ರಮಕ್ಕೆ ಸರ್ಕಾರ ಮುಂದಾಗಬೇಕು.
    • ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ವಿದ್ಯುತ್‌ ಖಾಸಗೀಕರಣವನ್ನು ಕೈಬಿಡಬೇಕು. ಪ್ರೀಪೇಯ್ಡ್‌ ಮೀಟರ್‌ ಅಳವಡಿಕೆ ಕೈಬಿಡಬೇಕು.
    • ವಿದ್ಯುತ್‌ ಸಂಪರ್ಕ ವೆಚ್ಚವನ್ನು ರೈತರ ಮೇಲೆಯೇ ಹೇರುವ ನೀತಿ ರದ್ದಾಗಬೇಕು.
    • ಜನಸಾಮಾನ್ಯರ ವಿದ್ಯುತ್‌ ದರಗಳನ್ನು ತಗ್ಗಿಸಬೇಕು.
    • ಕಾರ್ಮಿಕ ಕೋಡ್‌ ಗಳು; ಕಾರ್ಮಿಕರ ಹಕ್ಕುಗಳಿಗೆ ಸಂಬಂಧಿಸಿದ 26 ಕಾಯ್ದೆಗಳನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ತಂದಿರುವ ಕೋಡ್‌ ಗಳ ರದ್ದುಮಾಡುವ ತೀರ್ಮಾನ ತೆಗೆದುಕೊಳ್ಳಬೇಕು.
    • ಅಸ೦ಂಘಟತ ಅಕಾರ್ಮಿಕರ ಕುಂದುಕೊರತೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವು ಎಲ್ಲಾ ತಾಲೂಕು, ಜಿಲ್ಲೆ ಮತ್ತು ಮಹಾನಗರ ಪಾಲಿಕೆ ಮಟ್ಟಗಳಲ್ಲಿ ಕಾರ್ಮಿಕರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಬೇಕು.
    • ಅಸುರಕ್ಷಿತ ಕಾರ್ಮಿಕರಿಗಾಗಿ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಬೇಕು.
    • ಶ್ರಮಜೀವಿಗಳನ್ನು ಗುಲಾಮರಂತೆ ನಡೆಸಿಕೊಳ್ಳುವ ಅಮಾನವೀಯ ಪದ್ಧತಿಗಳು ಕೂಡಲೇ ಕೊನೆಗೊಳ್ಳಬೇಕು.
    • ಮಾಜಿ ಜೀತಗಾರರ ಪುನರ್ವಸತಿ ತ್ವರಿತವಾಗಿ ಜಾರಿಯಾಗಬೇಕು, ವಲಸೆ ಕಾರ್ಮಿಕರ ರಕ್ಷಣೆ, ವಲಸೆ ಕಾರ್ಮಿಕರಿಗೆ ರಕ್ಷಣೆ ನೀಡಬೇಕು. ಅವರಿಗೆ ಪಡಿತರ ಆಹಾರ ವ್ಯವಸ್ಥೆಗೆ ಪ್ರವೇಶವಿರಬೇಕು. ಅವರ ವಸತಿ
      ಸ್ಥಳದಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು.
    • ಕನಿಷ್ಟ ವೇತನ ಪರಿಷ್ಕರಣೆಗಾಗಿ ರಚಿಸಿರುವ ತ್ರಿಪಕ್ಷೀಯ ಸಲಹಾ ಮಂಡಳಿಯ ನಿರ್ಧಾರವನ್ನು ಈ ಕೂಡಲೇ
    • ಜಾರಿಮಾಡಬೇಕು.
    • ಕನಿಷ್ಠ ವೇತನವನ್ನು ಎಲ್ಲ ಕಾರ್ಮಿಕ ಸಂಘಟನೆಗಳಿಗೂ, ಮಾಲೀಕರಿಗೂ ಇಲಾಖೆಗಳಿಗೂ ಮನದಟ್ಟಾಗುವಂತೆ
      ಮುಟ್ಟಿಸಬೇಕು. ಅದನ್ನು ಜಾರಿಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು.
    • ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಧನದ ಬದಲು ಘನತೆಯ ವೇತನ ಜಾರಿಯಾಗಬೇಕು. ಇತರೆ ಕಾರ್ಮಿಕರಂತೆ ಸ್ಕೀಂ ಕಾರ್ಮಿಕರಿಗೂ ಸಾಮಾಜಿಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು.
    • ಎಂಟು ಗಂಟೆ ಕೆಲಸ; ದುಡಿಮೆಯ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸುವ ತೀರ್ಮಾನವನ್ನು
      ರದ್ದುಗೊಳಿಸಬೇಕು. ಹೆಚ್ಚುವರಿ ಕೆಲಸಕ್ಕೆ ಎರಡುಪಟ್ಟು ವೇತನ ನೀಡಬೇಕು.
    • ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಹಂತಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ
      ನೀಡಬೇಕು.
    • ಉದ್ಯೋಗ ಸೃಷ್ಟಿಗೆ ಸಮಗ್ರ ಕಾರ್ಯಯೋಜನೆ ರೂಪಿಸಲು ‘ಉದ್ಯೋಗ ಖಾತ್ರಿ ಆಯೋಗ’ವನ್ನು ರಚಿಸಬೇಕು.
    • ಹಿಂದುಳಿದಿರುವ ಎಲ್ಲ ತಾಲ್ಲೂಕುಗಳಲ್ಲಿ ನರೇಗಾ ಕೆಲಸವನ್ನು 200 ದಿನಗಳಿಗೆ ವಿಸ್ತರಿಸಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಕುರಿತು ಸಮಗ್ರ ಚರ್ಚಿಸಲು ಹಾಗೂ ಮೌಲ್ಯಮಾಪನ ಮಾಡಲು ‘ಅವಲೋಕನ ಸಭೆ’ ಕರೆಯಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ, ವಿನಿಯೋಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ದೃಷ್ಟಿಯಿಂದ ‘ಏಕ ಗವಾಕ್ಷಿ ಯೋಜನೆ’ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ವಹಿಸುವುದು. ನಿರ್ವಹಣೆಗಾಗಿ ಮೇಲ್ವಿಚಾರಣಾ ಕೋಶ ರಚಿಸುವುದು.
    • ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ಅನ್ನು ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಶೋಷಿತ ಹಾಗೂ ಬಡ ಮಕ್ಕಳಿಗೆ ಮೊದಲಿನಂತೆಯೇ ಶೈಕ್ಷಣಿಕ ನೆರವು ಮುಂದುವರೆಯುವಂತಾಗಬೇಕು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

    ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

    ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

    18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

    ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

    ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

    ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

    ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

    ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

    ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

    ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

    ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

    ‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

    ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

    16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

    16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

    ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

    ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

    ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

    ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...