Homeಕರ್ನಾಟಕಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು 'ಬೃಹತ್ ಬೆಂಗಳೂರು ಚಲೋ'

ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನವೆಂಬರ್ 26ರಂದು ಸಂಯುಕ್ತ ಹೋರಾಟ-ಕರ್ನಾಟಕ, ಸಂಯುಕ್ತ ಕಿಸಾ ಮೋರ್ಚಾ ಮತ್ತು ಜೆಸಿಟಿಯು ಸಂಘಟನೆಗಳು ಜಂಟಿಯಾಗಿ ‘ಬೃಹತ್ ಬೆಂಗಳೂರು ಚಲೋ’ ಪ್ರತಿಭಟನೆಗೆ ಕರೆ ನೀಡಿವೆ.

ಬೆಂಗಳೂರಿನ ಪ್ರಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘಟನೆ ಮುಖಂಡರು, “ಕೇಂದ್ರ ಸರ್ಕಾರ ರೈತರು, ಕಾರ್ಮಿಕರು ಹಾಗೂ ಇತರೆ ಜನವರ್ಗಗಳ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ; ಕಂಪನಿಗಳ ಹಿತ ಕಾಯುವುದರಲ್ಲಿ ಮಗ್ನವಾಗಿದೆ. ಅದು ಜಾರಿಗೆ ತರುತ್ತಿರುವ ನೀತಿಗಳ ಪರಿಣಾಮವಾಗಿ ಜನರು ತೀವ್ರ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾರೆ. ಈ ಕಾರಣಕ್ಕಾಗಿಯೇ ಜನ ರಾಜ್ಯದಲ್ಲಿ ಬಿಜೆಪಿಯ ಬದಲು ಕಾಂಗ್ರಸ್‌ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ತಂದಿದ್ದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳನ್ನು ಬದಲಾಯಿಸುತ್ತೇವೆ, ಜನಹಿತ ರಕ್ತಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ಲೆಸ್‌ ಸರ್ಕಾರ ಏನು ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಮಿಕರ ಸಂಕಷ್ಟ ನಿವಾರಣೆಯ ಕ್ರಮಗಳಿಗೆ ರಾಜ್ಯ ಸರ್ಕಾರ ಕೂಡಲೇ ಮುಂದಾಗಲೇಬೇಕು. ನವೆಂಬರ್‌ 26ರಂದು ಸಂಬಂಧಪಟ್ಟ ಸಚಿವರುಗಳು ಸ್ಪಷ್ಟ ತೀರ್ಮಾನಗಳನ್ನು ಘೋಷಿಸಬೇಕು. ಸಂವಿಧಾನ ದಿನವಾದ ನವೆಂಬರ್‌ 26, ಜನರ ಹಕ್ಕುಗಳ ಕುರಿತು ಖಚಿತ ನಿರ್ಣಯಗಳಾಗುವ ದಿನವಾಗಬೇಕು. ಇದನ್ನು ಸಿರ್ಲಕ್ಷಿಸಿದರೆ ಫ್ರೀಡಂ ಪಾರ್ಕಿನಲ್ಲೇ ತೀವ್ರ ಹೋರಾಟದ ತೀರ್ಮಾನ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಈ ಹೋರಾಟದ ಮೂಲಕ, ರಾಜ್ಯದ ದುಡಿಯುವ ಹಾಗೂ ದಮನಿತರು ಪರಿತಪಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಮುಂದಿಡುತ್ತಿದ್ದೇವೆ. ಇವನ್ನು ಬಗೆಹರಿಸಲು ಇರುವ ದಾರಿಗಳ ಕುರಿತೂ ನಮಗೆ ನಿರ್ಧಿಷ್ಟ ಪಸ್ತಾಪಗಳಿವೆ. ಈ ವಿಚಾರಗಳಿಗೆ ಸಾಧ್ಯವಿರುವ ತ್ವರಿತ ಪರಿಹಾರಗಳ ಕುರಿತು ಚರ್ಚಿಸಲು ಕೂಡಲೇ ಸಮಾಲೋಚನಾ ಸಭೆಗಳನ್ನು ಕರೆಯಬೇಕೆಂದು ಮುಖ್ಯಮಂತ್ರಿಗಳಲ್ಲೂ, ಸಂಬಂಧಪಟ್ಟ ಸಚಿವರುಗಳಲ್ಲಿಯೂ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ” ಎಂದರು.

ಪ್ರಮುಖ ಹಕ್ಕೊತ್ತಾಯಗಳು

    • ಬಲವಂತದ ಭೂಸ್ವಾಧೀನಗಳನ್ನು ಕೈಬಿಡಬೇಕು.
    • ಉಳುಮೆ ಮಾಡುತ್ತಿರುವ, ಅರ್ಜಿ ಸಲ್ಲಿಸಿರುವ ಹಾಗೂ ಬೇರೆ ಭೂಮಿ ಇಲ್ಲದ ಬಗರ್‌ ಹುಕುಂ ರೈತರಿಗೆ ‘ಒನ್‌ ಟೈಂ
      ಸೆಟಲ್ಮೆಂಟ್‌’ ಆಧಾರದಲ್ಲಿ ಭೂಮಿ ಮಂಜೂರು ಮಾಡುವ ಗಟ್ಟಿ ತೀರ್ಮಾನ ಸರ್ಕಾರ ಮಾಡಬೇಕು.
    • ಅರಣ್ಯವಾಸಿಗಳನ್ನು ಆತಂತ್ರ ಸ್ಥಿತಿಯಿಂದ ಪಾರು ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯ ಹಕ್ಕು ಕಾಯ್ದೆ 2006ರ ಪ್ರಕಾರ ಆದಿವಾಸಿಗಳಿಗೆ ಮಾತ್ರವಲ್ಲದೆ. ಎಲ್ಲಾ ಅರಣ್ಯವಾಸಿಗಳಿಗೂ ಭೂಮಿ ಹಕ್ಕು ನೀಡಬೇಕು.
    • ಯಾವುದೇ ಕಾರಣಕ್ಕೂ ಬಡ ರೈತರನ್ನು ಒಕ್ಕಲೆಬ್ಬಿಸಬಾರದು. ಈಗಾಗಲೇ ಭೂಮಿ ಮಂಜೂರು ಮಾಡಿ ಖಾತೆ ಪಾಣಿಯಾಗಿರುವ ಭೂಮಿಗಳ ಖಾತೆಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು.
    • ವಸತಿ ನಿವೇಶನಗಳ ಹಂಚಿಕೆಗೆ ಸರ್ಕಾರ ಮೆಗಾ ಯೋಜನೆ ರೂಪಿಸಬೇಕು. ‘ಪ್ರತಿಯೊಬ್ಬರಿಗೂ ಸೂರು’ ಸರ್ಕಾರದ
      ಕಾರ್ಯನೀತಿಯಾಗಬೇಕು.
    • ರೈತರ ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಪರಿಷ್ಕರಿಸಬೇಕು ಮತ್ತು ಖರೀದಿ ಪ್ರಮಾಣವನ್ನು ಹೆಚ್ಚಿಸಬೇಕು.
    • ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು, ಹಣದ ಹಂಚಿಕೆ ನಿಲ್ಲಬೇಕು. ರೈತರಿಂದ ವಿವಿಧ ಬೆಳೆಗಳನ್ನು ಖರೀದಿಸಿ ಸಮಗ್ರ ಕುಟುಂಬ ಪ್ಯಾಕ್‌ ವಿತರಿಸಬೇಕು.
    • ಕಬ್ಬಿನ ಬೆಲೆಯಲ್ಲಿ ಆಗುತ್ತಿರುವ ಆನ್ಯಾಯ ತಡೆಯಲು ರಾಜ್ಯ ಬೆಲೆ ನಿಗದಿ ನೀತಿಯನ್ನು ರೂಪಿಸಬೇಕು. ಸ್ವಾಮಿನಾಥನ್ ವರದಿ ಜಾರಿ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ಮೈಕೋಫೈನಾನ್ಸ್‌ ಹಾವಳಿಯಿಂದ ಜನಸಾಮಾನ್ಯರಿಗೆ ಮುಕ್ತಿ ದೊರಕಬೇಕು. ಜಪ್ತಿ, ಸಾಮಾಜಿಕ ಆವಮಾನ ಮಾಡುವಂತಹ ಕ್ರಿಯೆಗಳ ಮೇಲೆ ಕಠಿಣ ಕಮಕ್ಕೆಗೊಳ್ಳಬೇಕು. ಮೈಕ್ರೋಫೈನಾನ್ಸ್‌ ಸಂಸ್ಥೆಗಳನ್ನೂ ಆರ್‌ಬಿಐ ನಿಯಮಾವಳಿಗಳಡಿ ತರಬೇಕು.
    • ಸಣ್ಣ ರೈತರು ಮಾಡಿರುವ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು.
    • 9 ರೈತರಿಗೆ, ಕೃಷಿಕೂಲಿಗಳಿಗೆ ಸರಳವಾಗಿ ಹಾಗೂ ಜಾಮೀನು ರಹಿತವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಸೌಲಭ್ಯ ದೊರಕಿಸುವ ಕ್ರಮಕ್ಕೆ ಸರ್ಕಾರ ಮುಂದಾಗಬೇಕು.
    • ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ವಿದ್ಯುತ್‌ ಖಾಸಗೀಕರಣವನ್ನು ಕೈಬಿಡಬೇಕು. ಪ್ರೀಪೇಯ್ಡ್‌ ಮೀಟರ್‌ ಅಳವಡಿಕೆ ಕೈಬಿಡಬೇಕು.
    • ವಿದ್ಯುತ್‌ ಸಂಪರ್ಕ ವೆಚ್ಚವನ್ನು ರೈತರ ಮೇಲೆಯೇ ಹೇರುವ ನೀತಿ ರದ್ದಾಗಬೇಕು.
    • ಜನಸಾಮಾನ್ಯರ ವಿದ್ಯುತ್‌ ದರಗಳನ್ನು ತಗ್ಗಿಸಬೇಕು.
    • ಕಾರ್ಮಿಕ ಕೋಡ್‌ ಗಳು; ಕಾರ್ಮಿಕರ ಹಕ್ಕುಗಳಿಗೆ ಸಂಬಂಧಿಸಿದ 26 ಕಾಯ್ದೆಗಳನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ತಂದಿರುವ ಕೋಡ್‌ ಗಳ ರದ್ದುಮಾಡುವ ತೀರ್ಮಾನ ತೆಗೆದುಕೊಳ್ಳಬೇಕು.
    • ಅಸ೦ಂಘಟತ ಅಕಾರ್ಮಿಕರ ಕುಂದುಕೊರತೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವು ಎಲ್ಲಾ ತಾಲೂಕು, ಜಿಲ್ಲೆ ಮತ್ತು ಮಹಾನಗರ ಪಾಲಿಕೆ ಮಟ್ಟಗಳಲ್ಲಿ ಕಾರ್ಮಿಕರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಬೇಕು.
    • ಅಸುರಕ್ಷಿತ ಕಾರ್ಮಿಕರಿಗಾಗಿ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಬೇಕು.
    • ಶ್ರಮಜೀವಿಗಳನ್ನು ಗುಲಾಮರಂತೆ ನಡೆಸಿಕೊಳ್ಳುವ ಅಮಾನವೀಯ ಪದ್ಧತಿಗಳು ಕೂಡಲೇ ಕೊನೆಗೊಳ್ಳಬೇಕು.
    • ಮಾಜಿ ಜೀತಗಾರರ ಪುನರ್ವಸತಿ ತ್ವರಿತವಾಗಿ ಜಾರಿಯಾಗಬೇಕು, ವಲಸೆ ಕಾರ್ಮಿಕರ ರಕ್ಷಣೆ, ವಲಸೆ ಕಾರ್ಮಿಕರಿಗೆ ರಕ್ಷಣೆ ನೀಡಬೇಕು. ಅವರಿಗೆ ಪಡಿತರ ಆಹಾರ ವ್ಯವಸ್ಥೆಗೆ ಪ್ರವೇಶವಿರಬೇಕು. ಅವರ ವಸತಿ
      ಸ್ಥಳದಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು.
    • ಕನಿಷ್ಟ ವೇತನ ಪರಿಷ್ಕರಣೆಗಾಗಿ ರಚಿಸಿರುವ ತ್ರಿಪಕ್ಷೀಯ ಸಲಹಾ ಮಂಡಳಿಯ ನಿರ್ಧಾರವನ್ನು ಈ ಕೂಡಲೇ
    • ಜಾರಿಮಾಡಬೇಕು.
    • ಕನಿಷ್ಠ ವೇತನವನ್ನು ಎಲ್ಲ ಕಾರ್ಮಿಕ ಸಂಘಟನೆಗಳಿಗೂ, ಮಾಲೀಕರಿಗೂ ಇಲಾಖೆಗಳಿಗೂ ಮನದಟ್ಟಾಗುವಂತೆ
      ಮುಟ್ಟಿಸಬೇಕು. ಅದನ್ನು ಜಾರಿಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು.
    • ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಧನದ ಬದಲು ಘನತೆಯ ವೇತನ ಜಾರಿಯಾಗಬೇಕು. ಇತರೆ ಕಾರ್ಮಿಕರಂತೆ ಸ್ಕೀಂ ಕಾರ್ಮಿಕರಿಗೂ ಸಾಮಾಜಿಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು.
    • ಎಂಟು ಗಂಟೆ ಕೆಲಸ; ದುಡಿಮೆಯ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸುವ ತೀರ್ಮಾನವನ್ನು
      ರದ್ದುಗೊಳಿಸಬೇಕು. ಹೆಚ್ಚುವರಿ ಕೆಲಸಕ್ಕೆ ಎರಡುಪಟ್ಟು ವೇತನ ನೀಡಬೇಕು.
    • ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಹಂತಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ
      ನೀಡಬೇಕು.
    • ಉದ್ಯೋಗ ಸೃಷ್ಟಿಗೆ ಸಮಗ್ರ ಕಾರ್ಯಯೋಜನೆ ರೂಪಿಸಲು ‘ಉದ್ಯೋಗ ಖಾತ್ರಿ ಆಯೋಗ’ವನ್ನು ರಚಿಸಬೇಕು.
    • ಹಿಂದುಳಿದಿರುವ ಎಲ್ಲ ತಾಲ್ಲೂಕುಗಳಲ್ಲಿ ನರೇಗಾ ಕೆಲಸವನ್ನು 200 ದಿನಗಳಿಗೆ ವಿಸ್ತರಿಸಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಕುರಿತು ಸಮಗ್ರ ಚರ್ಚಿಸಲು ಹಾಗೂ ಮೌಲ್ಯಮಾಪನ ಮಾಡಲು ‘ಅವಲೋಕನ ಸಭೆ’ ಕರೆಯಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ, ವಿನಿಯೋಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ದೃಷ್ಟಿಯಿಂದ ‘ಏಕ ಗವಾಕ್ಷಿ ಯೋಜನೆ’ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ವಹಿಸುವುದು. ನಿರ್ವಹಣೆಗಾಗಿ ಮೇಲ್ವಿಚಾರಣಾ ಕೋಶ ರಚಿಸುವುದು.
    • ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ಅನ್ನು ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಶೋಷಿತ ಹಾಗೂ ಬಡ ಮಕ್ಕಳಿಗೆ ಮೊದಲಿನಂತೆಯೇ ಶೈಕ್ಷಣಿಕ ನೆರವು ಮುಂದುವರೆಯುವಂತಾಗಬೇಕು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

    ​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

    ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

    ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

    ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

    ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

    ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

    ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

    “ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

    ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

    ‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

    ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

    ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

    ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

    ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

    ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

    ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

    ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

    “ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

    ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...