Homeಕರ್ನಾಟಕಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು 'ಬೃಹತ್ ಬೆಂಗಳೂರು ಚಲೋ'

ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನವೆಂಬರ್ 26ರಂದು ಸಂಯುಕ್ತ ಹೋರಾಟ-ಕರ್ನಾಟಕ, ಸಂಯುಕ್ತ ಕಿಸಾ ಮೋರ್ಚಾ ಮತ್ತು ಜೆಸಿಟಿಯು ಸಂಘಟನೆಗಳು ಜಂಟಿಯಾಗಿ ‘ಬೃಹತ್ ಬೆಂಗಳೂರು ಚಲೋ’ ಪ್ರತಿಭಟನೆಗೆ ಕರೆ ನೀಡಿವೆ.

ಬೆಂಗಳೂರಿನ ಪ್ರಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘಟನೆ ಮುಖಂಡರು, “ಕೇಂದ್ರ ಸರ್ಕಾರ ರೈತರು, ಕಾರ್ಮಿಕರು ಹಾಗೂ ಇತರೆ ಜನವರ್ಗಗಳ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ; ಕಂಪನಿಗಳ ಹಿತ ಕಾಯುವುದರಲ್ಲಿ ಮಗ್ನವಾಗಿದೆ. ಅದು ಜಾರಿಗೆ ತರುತ್ತಿರುವ ನೀತಿಗಳ ಪರಿಣಾಮವಾಗಿ ಜನರು ತೀವ್ರ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾರೆ. ಈ ಕಾರಣಕ್ಕಾಗಿಯೇ ಜನ ರಾಜ್ಯದಲ್ಲಿ ಬಿಜೆಪಿಯ ಬದಲು ಕಾಂಗ್ರಸ್‌ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ತಂದಿದ್ದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳನ್ನು ಬದಲಾಯಿಸುತ್ತೇವೆ, ಜನಹಿತ ರಕ್ತಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ಲೆಸ್‌ ಸರ್ಕಾರ ಏನು ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಮಿಕರ ಸಂಕಷ್ಟ ನಿವಾರಣೆಯ ಕ್ರಮಗಳಿಗೆ ರಾಜ್ಯ ಸರ್ಕಾರ ಕೂಡಲೇ ಮುಂದಾಗಲೇಬೇಕು. ನವೆಂಬರ್‌ 26ರಂದು ಸಂಬಂಧಪಟ್ಟ ಸಚಿವರುಗಳು ಸ್ಪಷ್ಟ ತೀರ್ಮಾನಗಳನ್ನು ಘೋಷಿಸಬೇಕು. ಸಂವಿಧಾನ ದಿನವಾದ ನವೆಂಬರ್‌ 26, ಜನರ ಹಕ್ಕುಗಳ ಕುರಿತು ಖಚಿತ ನಿರ್ಣಯಗಳಾಗುವ ದಿನವಾಗಬೇಕು. ಇದನ್ನು ಸಿರ್ಲಕ್ಷಿಸಿದರೆ ಫ್ರೀಡಂ ಪಾರ್ಕಿನಲ್ಲೇ ತೀವ್ರ ಹೋರಾಟದ ತೀರ್ಮಾನ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಈ ಹೋರಾಟದ ಮೂಲಕ, ರಾಜ್ಯದ ದುಡಿಯುವ ಹಾಗೂ ದಮನಿತರು ಪರಿತಪಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಮುಂದಿಡುತ್ತಿದ್ದೇವೆ. ಇವನ್ನು ಬಗೆಹರಿಸಲು ಇರುವ ದಾರಿಗಳ ಕುರಿತೂ ನಮಗೆ ನಿರ್ಧಿಷ್ಟ ಪಸ್ತಾಪಗಳಿವೆ. ಈ ವಿಚಾರಗಳಿಗೆ ಸಾಧ್ಯವಿರುವ ತ್ವರಿತ ಪರಿಹಾರಗಳ ಕುರಿತು ಚರ್ಚಿಸಲು ಕೂಡಲೇ ಸಮಾಲೋಚನಾ ಸಭೆಗಳನ್ನು ಕರೆಯಬೇಕೆಂದು ಮುಖ್ಯಮಂತ್ರಿಗಳಲ್ಲೂ, ಸಂಬಂಧಪಟ್ಟ ಸಚಿವರುಗಳಲ್ಲಿಯೂ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ” ಎಂದರು.

ಪ್ರಮುಖ ಹಕ್ಕೊತ್ತಾಯಗಳು

    • ಬಲವಂತದ ಭೂಸ್ವಾಧೀನಗಳನ್ನು ಕೈಬಿಡಬೇಕು.
    • ಉಳುಮೆ ಮಾಡುತ್ತಿರುವ, ಅರ್ಜಿ ಸಲ್ಲಿಸಿರುವ ಹಾಗೂ ಬೇರೆ ಭೂಮಿ ಇಲ್ಲದ ಬಗರ್‌ ಹುಕುಂ ರೈತರಿಗೆ ‘ಒನ್‌ ಟೈಂ
      ಸೆಟಲ್ಮೆಂಟ್‌’ ಆಧಾರದಲ್ಲಿ ಭೂಮಿ ಮಂಜೂರು ಮಾಡುವ ಗಟ್ಟಿ ತೀರ್ಮಾನ ಸರ್ಕಾರ ಮಾಡಬೇಕು.
    • ಅರಣ್ಯವಾಸಿಗಳನ್ನು ಆತಂತ್ರ ಸ್ಥಿತಿಯಿಂದ ಪಾರು ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯ ಹಕ್ಕು ಕಾಯ್ದೆ 2006ರ ಪ್ರಕಾರ ಆದಿವಾಸಿಗಳಿಗೆ ಮಾತ್ರವಲ್ಲದೆ. ಎಲ್ಲಾ ಅರಣ್ಯವಾಸಿಗಳಿಗೂ ಭೂಮಿ ಹಕ್ಕು ನೀಡಬೇಕು.
    • ಯಾವುದೇ ಕಾರಣಕ್ಕೂ ಬಡ ರೈತರನ್ನು ಒಕ್ಕಲೆಬ್ಬಿಸಬಾರದು. ಈಗಾಗಲೇ ಭೂಮಿ ಮಂಜೂರು ಮಾಡಿ ಖಾತೆ ಪಾಣಿಯಾಗಿರುವ ಭೂಮಿಗಳ ಖಾತೆಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು.
    • ವಸತಿ ನಿವೇಶನಗಳ ಹಂಚಿಕೆಗೆ ಸರ್ಕಾರ ಮೆಗಾ ಯೋಜನೆ ರೂಪಿಸಬೇಕು. ‘ಪ್ರತಿಯೊಬ್ಬರಿಗೂ ಸೂರು’ ಸರ್ಕಾರದ
      ಕಾರ್ಯನೀತಿಯಾಗಬೇಕು.
    • ರೈತರ ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಪರಿಷ್ಕರಿಸಬೇಕು ಮತ್ತು ಖರೀದಿ ಪ್ರಮಾಣವನ್ನು ಹೆಚ್ಚಿಸಬೇಕು.
    • ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು, ಹಣದ ಹಂಚಿಕೆ ನಿಲ್ಲಬೇಕು. ರೈತರಿಂದ ವಿವಿಧ ಬೆಳೆಗಳನ್ನು ಖರೀದಿಸಿ ಸಮಗ್ರ ಕುಟುಂಬ ಪ್ಯಾಕ್‌ ವಿತರಿಸಬೇಕು.
    • ಕಬ್ಬಿನ ಬೆಲೆಯಲ್ಲಿ ಆಗುತ್ತಿರುವ ಆನ್ಯಾಯ ತಡೆಯಲು ರಾಜ್ಯ ಬೆಲೆ ನಿಗದಿ ನೀತಿಯನ್ನು ರೂಪಿಸಬೇಕು. ಸ್ವಾಮಿನಾಥನ್ ವರದಿ ಜಾರಿ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ಮೈಕೋಫೈನಾನ್ಸ್‌ ಹಾವಳಿಯಿಂದ ಜನಸಾಮಾನ್ಯರಿಗೆ ಮುಕ್ತಿ ದೊರಕಬೇಕು. ಜಪ್ತಿ, ಸಾಮಾಜಿಕ ಆವಮಾನ ಮಾಡುವಂತಹ ಕ್ರಿಯೆಗಳ ಮೇಲೆ ಕಠಿಣ ಕಮಕ್ಕೆಗೊಳ್ಳಬೇಕು. ಮೈಕ್ರೋಫೈನಾನ್ಸ್‌ ಸಂಸ್ಥೆಗಳನ್ನೂ ಆರ್‌ಬಿಐ ನಿಯಮಾವಳಿಗಳಡಿ ತರಬೇಕು.
    • ಸಣ್ಣ ರೈತರು ಮಾಡಿರುವ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು.
    • 9 ರೈತರಿಗೆ, ಕೃಷಿಕೂಲಿಗಳಿಗೆ ಸರಳವಾಗಿ ಹಾಗೂ ಜಾಮೀನು ರಹಿತವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಸೌಲಭ್ಯ ದೊರಕಿಸುವ ಕ್ರಮಕ್ಕೆ ಸರ್ಕಾರ ಮುಂದಾಗಬೇಕು.
    • ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ವಿದ್ಯುತ್‌ ಖಾಸಗೀಕರಣವನ್ನು ಕೈಬಿಡಬೇಕು. ಪ್ರೀಪೇಯ್ಡ್‌ ಮೀಟರ್‌ ಅಳವಡಿಕೆ ಕೈಬಿಡಬೇಕು.
    • ವಿದ್ಯುತ್‌ ಸಂಪರ್ಕ ವೆಚ್ಚವನ್ನು ರೈತರ ಮೇಲೆಯೇ ಹೇರುವ ನೀತಿ ರದ್ದಾಗಬೇಕು.
    • ಜನಸಾಮಾನ್ಯರ ವಿದ್ಯುತ್‌ ದರಗಳನ್ನು ತಗ್ಗಿಸಬೇಕು.
    • ಕಾರ್ಮಿಕ ಕೋಡ್‌ ಗಳು; ಕಾರ್ಮಿಕರ ಹಕ್ಕುಗಳಿಗೆ ಸಂಬಂಧಿಸಿದ 26 ಕಾಯ್ದೆಗಳನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ತಂದಿರುವ ಕೋಡ್‌ ಗಳ ರದ್ದುಮಾಡುವ ತೀರ್ಮಾನ ತೆಗೆದುಕೊಳ್ಳಬೇಕು.
    • ಅಸ೦ಂಘಟತ ಅಕಾರ್ಮಿಕರ ಕುಂದುಕೊರತೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವು ಎಲ್ಲಾ ತಾಲೂಕು, ಜಿಲ್ಲೆ ಮತ್ತು ಮಹಾನಗರ ಪಾಲಿಕೆ ಮಟ್ಟಗಳಲ್ಲಿ ಕಾರ್ಮಿಕರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಬೇಕು.
    • ಅಸುರಕ್ಷಿತ ಕಾರ್ಮಿಕರಿಗಾಗಿ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಬೇಕು.
    • ಶ್ರಮಜೀವಿಗಳನ್ನು ಗುಲಾಮರಂತೆ ನಡೆಸಿಕೊಳ್ಳುವ ಅಮಾನವೀಯ ಪದ್ಧತಿಗಳು ಕೂಡಲೇ ಕೊನೆಗೊಳ್ಳಬೇಕು.
    • ಮಾಜಿ ಜೀತಗಾರರ ಪುನರ್ವಸತಿ ತ್ವರಿತವಾಗಿ ಜಾರಿಯಾಗಬೇಕು, ವಲಸೆ ಕಾರ್ಮಿಕರ ರಕ್ಷಣೆ, ವಲಸೆ ಕಾರ್ಮಿಕರಿಗೆ ರಕ್ಷಣೆ ನೀಡಬೇಕು. ಅವರಿಗೆ ಪಡಿತರ ಆಹಾರ ವ್ಯವಸ್ಥೆಗೆ ಪ್ರವೇಶವಿರಬೇಕು. ಅವರ ವಸತಿ
      ಸ್ಥಳದಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು.
    • ಕನಿಷ್ಟ ವೇತನ ಪರಿಷ್ಕರಣೆಗಾಗಿ ರಚಿಸಿರುವ ತ್ರಿಪಕ್ಷೀಯ ಸಲಹಾ ಮಂಡಳಿಯ ನಿರ್ಧಾರವನ್ನು ಈ ಕೂಡಲೇ
    • ಜಾರಿಮಾಡಬೇಕು.
    • ಕನಿಷ್ಠ ವೇತನವನ್ನು ಎಲ್ಲ ಕಾರ್ಮಿಕ ಸಂಘಟನೆಗಳಿಗೂ, ಮಾಲೀಕರಿಗೂ ಇಲಾಖೆಗಳಿಗೂ ಮನದಟ್ಟಾಗುವಂತೆ
      ಮುಟ್ಟಿಸಬೇಕು. ಅದನ್ನು ಜಾರಿಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು.
    • ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಧನದ ಬದಲು ಘನತೆಯ ವೇತನ ಜಾರಿಯಾಗಬೇಕು. ಇತರೆ ಕಾರ್ಮಿಕರಂತೆ ಸ್ಕೀಂ ಕಾರ್ಮಿಕರಿಗೂ ಸಾಮಾಜಿಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು.
    • ಎಂಟು ಗಂಟೆ ಕೆಲಸ; ದುಡಿಮೆಯ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸುವ ತೀರ್ಮಾನವನ್ನು
      ರದ್ದುಗೊಳಿಸಬೇಕು. ಹೆಚ್ಚುವರಿ ಕೆಲಸಕ್ಕೆ ಎರಡುಪಟ್ಟು ವೇತನ ನೀಡಬೇಕು.
    • ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಹಂತಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ
      ನೀಡಬೇಕು.
    • ಉದ್ಯೋಗ ಸೃಷ್ಟಿಗೆ ಸಮಗ್ರ ಕಾರ್ಯಯೋಜನೆ ರೂಪಿಸಲು ‘ಉದ್ಯೋಗ ಖಾತ್ರಿ ಆಯೋಗ’ವನ್ನು ರಚಿಸಬೇಕು.
    • ಹಿಂದುಳಿದಿರುವ ಎಲ್ಲ ತಾಲ್ಲೂಕುಗಳಲ್ಲಿ ನರೇಗಾ ಕೆಲಸವನ್ನು 200 ದಿನಗಳಿಗೆ ವಿಸ್ತರಿಸಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಕುರಿತು ಸಮಗ್ರ ಚರ್ಚಿಸಲು ಹಾಗೂ ಮೌಲ್ಯಮಾಪನ ಮಾಡಲು ‘ಅವಲೋಕನ ಸಭೆ’ ಕರೆಯಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ, ವಿನಿಯೋಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ದೃಷ್ಟಿಯಿಂದ ‘ಏಕ ಗವಾಕ್ಷಿ ಯೋಜನೆ’ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ವಹಿಸುವುದು. ನಿರ್ವಹಣೆಗಾಗಿ ಮೇಲ್ವಿಚಾರಣಾ ಕೋಶ ರಚಿಸುವುದು.
    • ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ಅನ್ನು ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಶೋಷಿತ ಹಾಗೂ ಬಡ ಮಕ್ಕಳಿಗೆ ಮೊದಲಿನಂತೆಯೇ ಶೈಕ್ಷಣಿಕ ನೆರವು ಮುಂದುವರೆಯುವಂತಾಗಬೇಕು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

    ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

    ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

    ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

    ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

    ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

    ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

    ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

    ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

    ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

    ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

    ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

    ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

    ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

    SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

    ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

    ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

    ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

    ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

    ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...