Homeಮುಖಪುಟಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

ಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸಂಜಯ್ ಸಿಂಗ್ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬ್ರಿಜ್ ಭೂಷಣ್ ವಿರುದ್ದ ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ, ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸಾಕ್ಷಿ ಮಲಿಕ್ ಮತ್ತು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಖ್ಯಾತ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಸಂಜಯ್ ಸಿಂಗ್‌ಗೆ ಪ್ರತಿಸ್ಪರ್ಧಿಯಾಗಿ ಕುಸ್ತಿಪಟುಗಳನ್ನು ಬೆಂಬಲಿಸುವ ಕಾಮನ್‌ವೆಲ್ತ್‌ ಚಿನ್ನದ ಪದಕ ವಿಜೇತೆ ಅನಿತಾ ಶಿಯೋರನ್ ಸ್ಪರ್ಧಿಸಿದ್ದರು. ಒಟ್ಟು 50 ಮತಗಳ ಪೈಕಿ ಸಂಜಯ್ ಸಿಂಗ್ 40 ಮತಗಳನ್ನು ಪಡೆದಿದ್ದಾರೆ.

ಕುಸ್ತಿ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿಯಾಗಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬೆಂಬಲಿತ ಬಣದ ಪ್ರೇಮ್ ಚಂದ್ ಲೋಚಬ್ ಅವರು ಆಯ್ಕೆಯಾಗಿದ್ದಾರೆ.

ವಾರಣಾಸಿ ಮೂಲದ ಸಂಜಯ್‌ ಸಿಂಗ್ ಅವರು ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸಂಜಯ್‌ ಸಿಂಗ್ ಅವರು ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸೂಚಿಸಲು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಒತ್ತಾಯಿಸಿದ್ದರು ಎಂದು ವರದಿಗಳು ಹೇಳಿವೆ.

ನವದೆಹಲಿಯ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಪ್ರಧಾನ ಕಚೇರಿಯಲ್ಲಿ ಗುರುವಾರ ಮತದಾನ ನಡೆಯಿತು. ಅಧ್ಯಕ್ಷರು ಮಾತ್ರವಲ್ಲದೆ, ಪ್ರಧಾನ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ, ಇಬ್ಬರು ಜಂಟಿ ಕಾರ್ಯದರ್ಶಿಗಳು, ನಾಲ್ವರು ಉಪಾಧ್ಯಕ್ಷರು ಮತ್ತು ಐವರು ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಗಿದೆ.

ಈ ವರ್ಷದ ಆಗಸ್ಟ್‌ನಲ್ಲಿ ವಿಶ್ವ ಕುಸ್ತಿ ಫೆಡರೇಶನ್ (UWW)ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಲು ವಿಫಲವಾದ ಕಾರಣಕ್ಕಾಗಿ ಭಾರತೀಯ ಕುಸ್ತಿ ಫೆಡರೇಶನ್‌ನ ಸದಸ್ಯತ್ವವನ್ನು ಅಮಾನತುಗೊಳಿಸಿತ್ತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದ ಕಾರಣ ಚುನಾವಣೆ ವಿಳಂಬವಾಗಿತ್ತು.

ಕುಸ್ತಿ ಫೆಡರೇಶ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಬಾಕಿ ಇರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ಅನುಗುಣವಾಗಿ ಚುನಾವಣೆಯ ಫಲಿತಾಂಶ ಒಳಪಟ್ಟಿರುತ್ತದೆ ಎಂದು ಡಬ್ಲ್ಯುಎಫ್‌ಐ ಚುನಾವಣಾಧಿಕಾರಿ ಹಾಗೂ ನ್ಯಾಯಮೂರ್ತಿ (ನಿವೃತ್ತ) ಎಂ.ಎಂ.ಕುಮಾರ್ ಹೇಳಿದ್ದಾರೆ.

ಕುಸ್ತಿಪಟುಗಳಿಂದ ಪ್ರತಿಭಟನೆ:

ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಭಾರತದ ಖ್ಯಾತ ಮಹಿಳಾ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಹಲವು ಜನಪರ ಮತ್ತು ರೈತ ಸಂಘಟನೆಗಳೂ ಸಾಥ್ ನೀಡಿತ್ತು. ಒಂದೆರಡು ಬಾರಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ದೌರ್ಜನ್ಯ ನಡೆಸಿದ್ದರು.

ಬ್ರಿಜ್ ಭೂಷಣ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕುಸ್ತಿಪಟುಗಳು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿದ್ದರು. ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದರು. ಆದರೆ, ಸರ್ಕಾರ ಕುಸ್ತಿಪಟುಗಳ ಅಳಲು ಕೇಳಿಸಿಕೊಂಡಿರಲಿಲ್ಲ. ದೆಹಲಿ ಪೊಲೀಸರು ಕೂಡ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಬಳಿಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಅರ್ ದಾಖಲಿಸಲು ಸೂಚಿಸಿತ್ತು. ಕೋರ್ಟ್‌ ಆದೇಶದ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪೂರ್ತಿಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...