Homeಮುಖಪುಟಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

ಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸಂಜಯ್ ಸಿಂಗ್ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬ್ರಿಜ್ ಭೂಷಣ್ ವಿರುದ್ದ ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ, ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸಾಕ್ಷಿ ಮಲಿಕ್ ಮತ್ತು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಖ್ಯಾತ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಸಂಜಯ್ ಸಿಂಗ್‌ಗೆ ಪ್ರತಿಸ್ಪರ್ಧಿಯಾಗಿ ಕುಸ್ತಿಪಟುಗಳನ್ನು ಬೆಂಬಲಿಸುವ ಕಾಮನ್‌ವೆಲ್ತ್‌ ಚಿನ್ನದ ಪದಕ ವಿಜೇತೆ ಅನಿತಾ ಶಿಯೋರನ್ ಸ್ಪರ್ಧಿಸಿದ್ದರು. ಒಟ್ಟು 50 ಮತಗಳ ಪೈಕಿ ಸಂಜಯ್ ಸಿಂಗ್ 40 ಮತಗಳನ್ನು ಪಡೆದಿದ್ದಾರೆ.

ಕುಸ್ತಿ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿಯಾಗಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬೆಂಬಲಿತ ಬಣದ ಪ್ರೇಮ್ ಚಂದ್ ಲೋಚಬ್ ಅವರು ಆಯ್ಕೆಯಾಗಿದ್ದಾರೆ.

ವಾರಣಾಸಿ ಮೂಲದ ಸಂಜಯ್‌ ಸಿಂಗ್ ಅವರು ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸಂಜಯ್‌ ಸಿಂಗ್ ಅವರು ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸೂಚಿಸಲು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಒತ್ತಾಯಿಸಿದ್ದರು ಎಂದು ವರದಿಗಳು ಹೇಳಿವೆ.

ನವದೆಹಲಿಯ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಪ್ರಧಾನ ಕಚೇರಿಯಲ್ಲಿ ಗುರುವಾರ ಮತದಾನ ನಡೆಯಿತು. ಅಧ್ಯಕ್ಷರು ಮಾತ್ರವಲ್ಲದೆ, ಪ್ರಧಾನ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ, ಇಬ್ಬರು ಜಂಟಿ ಕಾರ್ಯದರ್ಶಿಗಳು, ನಾಲ್ವರು ಉಪಾಧ್ಯಕ್ಷರು ಮತ್ತು ಐವರು ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಗಿದೆ.

ಈ ವರ್ಷದ ಆಗಸ್ಟ್‌ನಲ್ಲಿ ವಿಶ್ವ ಕುಸ್ತಿ ಫೆಡರೇಶನ್ (UWW)ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಲು ವಿಫಲವಾದ ಕಾರಣಕ್ಕಾಗಿ ಭಾರತೀಯ ಕುಸ್ತಿ ಫೆಡರೇಶನ್‌ನ ಸದಸ್ಯತ್ವವನ್ನು ಅಮಾನತುಗೊಳಿಸಿತ್ತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದ ಕಾರಣ ಚುನಾವಣೆ ವಿಳಂಬವಾಗಿತ್ತು.

ಕುಸ್ತಿ ಫೆಡರೇಶ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಬಾಕಿ ಇರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ಅನುಗುಣವಾಗಿ ಚುನಾವಣೆಯ ಫಲಿತಾಂಶ ಒಳಪಟ್ಟಿರುತ್ತದೆ ಎಂದು ಡಬ್ಲ್ಯುಎಫ್‌ಐ ಚುನಾವಣಾಧಿಕಾರಿ ಹಾಗೂ ನ್ಯಾಯಮೂರ್ತಿ (ನಿವೃತ್ತ) ಎಂ.ಎಂ.ಕುಮಾರ್ ಹೇಳಿದ್ದಾರೆ.

ಕುಸ್ತಿಪಟುಗಳಿಂದ ಪ್ರತಿಭಟನೆ:

ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಭಾರತದ ಖ್ಯಾತ ಮಹಿಳಾ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಹಲವು ಜನಪರ ಮತ್ತು ರೈತ ಸಂಘಟನೆಗಳೂ ಸಾಥ್ ನೀಡಿತ್ತು. ಒಂದೆರಡು ಬಾರಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ದೌರ್ಜನ್ಯ ನಡೆಸಿದ್ದರು.

ಬ್ರಿಜ್ ಭೂಷಣ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕುಸ್ತಿಪಟುಗಳು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿದ್ದರು. ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದರು. ಆದರೆ, ಸರ್ಕಾರ ಕುಸ್ತಿಪಟುಗಳ ಅಳಲು ಕೇಳಿಸಿಕೊಂಡಿರಲಿಲ್ಲ. ದೆಹಲಿ ಪೊಲೀಸರು ಕೂಡ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಬಳಿಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಅರ್ ದಾಖಲಿಸಲು ಸೂಚಿಸಿತ್ತು. ಕೋರ್ಟ್‌ ಆದೇಶದ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪೂರ್ತಿಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...