Homeಮುಖಪುಟಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

ಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸಂಜಯ್ ಸಿಂಗ್ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬ್ರಿಜ್ ಭೂಷಣ್ ವಿರುದ್ದ ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ, ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸಾಕ್ಷಿ ಮಲಿಕ್ ಮತ್ತು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಖ್ಯಾತ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಸಂಜಯ್ ಸಿಂಗ್‌ಗೆ ಪ್ರತಿಸ್ಪರ್ಧಿಯಾಗಿ ಕುಸ್ತಿಪಟುಗಳನ್ನು ಬೆಂಬಲಿಸುವ ಕಾಮನ್‌ವೆಲ್ತ್‌ ಚಿನ್ನದ ಪದಕ ವಿಜೇತೆ ಅನಿತಾ ಶಿಯೋರನ್ ಸ್ಪರ್ಧಿಸಿದ್ದರು. ಒಟ್ಟು 50 ಮತಗಳ ಪೈಕಿ ಸಂಜಯ್ ಸಿಂಗ್ 40 ಮತಗಳನ್ನು ಪಡೆದಿದ್ದಾರೆ.

ಕುಸ್ತಿ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿಯಾಗಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬೆಂಬಲಿತ ಬಣದ ಪ್ರೇಮ್ ಚಂದ್ ಲೋಚಬ್ ಅವರು ಆಯ್ಕೆಯಾಗಿದ್ದಾರೆ.

ವಾರಣಾಸಿ ಮೂಲದ ಸಂಜಯ್‌ ಸಿಂಗ್ ಅವರು ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸಂಜಯ್‌ ಸಿಂಗ್ ಅವರು ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸೂಚಿಸಲು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಒತ್ತಾಯಿಸಿದ್ದರು ಎಂದು ವರದಿಗಳು ಹೇಳಿವೆ.

ನವದೆಹಲಿಯ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಪ್ರಧಾನ ಕಚೇರಿಯಲ್ಲಿ ಗುರುವಾರ ಮತದಾನ ನಡೆಯಿತು. ಅಧ್ಯಕ್ಷರು ಮಾತ್ರವಲ್ಲದೆ, ಪ್ರಧಾನ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ, ಇಬ್ಬರು ಜಂಟಿ ಕಾರ್ಯದರ್ಶಿಗಳು, ನಾಲ್ವರು ಉಪಾಧ್ಯಕ್ಷರು ಮತ್ತು ಐವರು ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಗಿದೆ.

ಈ ವರ್ಷದ ಆಗಸ್ಟ್‌ನಲ್ಲಿ ವಿಶ್ವ ಕುಸ್ತಿ ಫೆಡರೇಶನ್ (UWW)ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಲು ವಿಫಲವಾದ ಕಾರಣಕ್ಕಾಗಿ ಭಾರತೀಯ ಕುಸ್ತಿ ಫೆಡರೇಶನ್‌ನ ಸದಸ್ಯತ್ವವನ್ನು ಅಮಾನತುಗೊಳಿಸಿತ್ತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದ ಕಾರಣ ಚುನಾವಣೆ ವಿಳಂಬವಾಗಿತ್ತು.

ಕುಸ್ತಿ ಫೆಡರೇಶ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಬಾಕಿ ಇರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ಅನುಗುಣವಾಗಿ ಚುನಾವಣೆಯ ಫಲಿತಾಂಶ ಒಳಪಟ್ಟಿರುತ್ತದೆ ಎಂದು ಡಬ್ಲ್ಯುಎಫ್‌ಐ ಚುನಾವಣಾಧಿಕಾರಿ ಹಾಗೂ ನ್ಯಾಯಮೂರ್ತಿ (ನಿವೃತ್ತ) ಎಂ.ಎಂ.ಕುಮಾರ್ ಹೇಳಿದ್ದಾರೆ.

ಕುಸ್ತಿಪಟುಗಳಿಂದ ಪ್ರತಿಭಟನೆ:

ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಭಾರತದ ಖ್ಯಾತ ಮಹಿಳಾ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಹಲವು ಜನಪರ ಮತ್ತು ರೈತ ಸಂಘಟನೆಗಳೂ ಸಾಥ್ ನೀಡಿತ್ತು. ಒಂದೆರಡು ಬಾರಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ದೌರ್ಜನ್ಯ ನಡೆಸಿದ್ದರು.

ಬ್ರಿಜ್ ಭೂಷಣ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕುಸ್ತಿಪಟುಗಳು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿದ್ದರು. ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದರು. ಆದರೆ, ಸರ್ಕಾರ ಕುಸ್ತಿಪಟುಗಳ ಅಳಲು ಕೇಳಿಸಿಕೊಂಡಿರಲಿಲ್ಲ. ದೆಹಲಿ ಪೊಲೀಸರು ಕೂಡ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಬಳಿಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಅರ್ ದಾಖಲಿಸಲು ಸೂಚಿಸಿತ್ತು. ಕೋರ್ಟ್‌ ಆದೇಶದ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪೂರ್ತಿಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...