Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

- Advertisement -
- Advertisement -

ಕುಸ್ತಿ ಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಸಿಂಗ್‌ಗೆ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಿರುವ ಬಿಜೆಪಿಯ ನಿರ್ಧಾರವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸಮರ್ಥಿಸಿಕೊಂಡಿದ್ದಾರೆ.

ಪುಣೆಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌,  ಕೆಲವರ ತಂದೆ, ತಾಯಿ ಅಥವಾ ಚಿಕ್ಕಪ್ಪನ ಮೇಲೆ ಗಂಭೀರ ಅಪರಾಧಗಳ ಆರೋಪವಿದ್ದರೂ ಅವರಿಗೆ ಟಿಕೆಟ್‌ ನೀಡಲಾಗಿದೆ. ಎಲ್ಲಾ ಪಕ್ಷಗಳು ಅದನ್ನು ಮಾಡುತ್ತವೆ. ಶಿಕ್ಷೆಗೊಳಗಾದವರ ಮಕ್ಕಳಿಗೂ ಟಿಕೆಟ್ ಸಿಗುತ್ತದೆ. ಇಲ್ಲಿ ಬ್ರಿಜ್ ಭೂಷಣ್ ವಿರುದ್ಧ ಇನ್ನೂ ಏನೂ ಸಾಬೀತಾಗಿಲ್ಲ. ಮತ್ತೇಗೆ ಅವರನ್ನು ತಪ್ಪಿತಸ್ಥ ಎಂದು ಹೇಳುವುದು ಎಂದು ಪ್ರಶ್ನಿಸಿದ್ದಾರೆ.

ಕರಣ್ ಸಿಂಗ್‌ಗೆ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಿರುವ ಬಿಜೆಪಿಯ ನಿರ್ಧಾರವನ್ನು  ಭಾರತೀಯ ಕುಸ್ತಿಪಟುಗಳು ಟೀಕಿಸಿದ್ದರು, ವಿಶೇಷವಾಗಿ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಕರಣ್ ಅವರನ್ನು ಕಣಕ್ಕಿಳಿಸುವ ಬಿಜೆಪಿ ನಿರ್ಧಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದರು.

ಸಾಕ್ಷಿ ಮಲಿಕ್ ಈ ಬಗ್ಗೆ ಪ್ರತಿಕ್ರಿಯಿಸಿ, ಭಾರತದ ಹೆಣ್ಣುಮಕ್ಕಳು ಸೋತಿದ್ದಾರೆ, ಬ್ರಿಜ್ ಭೂಷಣ್ ಗೆದ್ದಿದ್ದಾರೆ ಎಂದು ಹೇಳಿದ್ದರು. ನಾವೆಲ್ಲರೂ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ, ಬೀದಿಯಲ್ಲಿ ದಿನಗಳನ್ನು ಕಳೆದಿದ್ದೇವೆ. ಬ್ರಿಜ್ ಭೂಷಣ್ ಅವರನ್ನು ಇನ್ನೂ ಬಂಧಿಸಿಲ್ಲ. ನಾವು ಕೇಳಿದ್ದು ನ್ಯಾಯ ಮಾತ್ರ. ಆದರೆ ಬಂಧಿಸುವುದು ಬಿಡಿ, ಅವರ ಮಗನಿಗೆ ಟಿಕೆಟ್ ಸಿಕ್ಕಿದ್ದು ಅದು ಭಾರತದ ಕೋಟ್ಯಂತರ ಹೆಣ್ಣುಮಕ್ಕಳ ಉತ್ಸಾಹವನ್ನು ಛಿದ್ರಗೊಳಿಸಿದೆ, ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಒಬ್ಬ ವ್ಯಕ್ತಿಯ ಮುಂದೆ ಸರ್ಕಾರ ಏಕೆ ದುರ್ಬಲವಾಗಿದೆ? ನಿಮಗೆ ಬೇಕಾಗಿರುವುದು ಭಗವಾನ್ ರಾಮನ ಹೆಸರಿನಲ್ಲಿ ಮತಗಳು, ಅವರ ನೀತಿಗಳನ್ನು ಅನುಸರಿಸುವ ಬಗ್ಗೆ ನಿಮ್ಮ ನಿಲುವು ಏನು? ಎಂದು ಪ್ರಶ್ನಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯ, ಬಿಜೆಪಿ ಮಹಿಳೆಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ಪರಿವಾರವಾದ ಅಥವಾ ವಂಶಪಾರಂಪರ್ಯ ರಾಜಕಾರಣ ಆಡಳಿತಾರೂಢ ಬಿಜೆಪಿಯಲ್ಲೂ ಬೇರೂರಿದೆ ಎಂದು ಹೇಳಿದ್ದರು.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲು, ಬೆದರಿಸಲು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮುಖ್ಯಸ್ಥರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಸಾಕ್ಷಿ ಮಲಿಕ್‌, ವಿನೇಶ್ ಫೋಗಟ್, ಬಜರಂಗ್ ಪುನಿಯ ಮುಂಚೂಣಿಯಲ್ಲಿದ್ದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಗಂಭೀರವಾದ ಲೈಂಗಿಕ ದೌರ್ಜನ್ಯದ ಆರೋಪವಿದೆ. ಆದ್ದರಿಂದ ಕಳೆದ ಕೆಲವು ತಿಂಗಳುಗಳಿಂದ ಯುಪಿಯ ಕೈಸರ್‌ಗಂಜ್ ಕ್ಷೇತ್ರಕ್ಕೆ ಬಿಜೆಪಿಯ ಈ ಬಾರಿಯ ಆಯ್ಕೆ ಯಾರೆಂಬುದರ ಬಗ್ಗೆ ಚರ್ಚೆ ನಡೆದಿತ್ತು. ಈ ಕ್ಷೇತ್ರದಲ್ಲಿ ಬ್ರಿಜ್ ಭೂಷಣ್ ಸಾಕಷ್ಟು ಪ್ರಭಾವ ಹೊಂದಿರುವ ಹಿನ್ನೆಲೆ ಬಿಜೆಪಿ ಈ ಭಾರಿ ಅವರ ಪುತ್ರನಿಗೆ ಟಿಕೆಟ್‌ ನೀಡಿದೆ ಎನ್ನಲಾಗಿದೆ.

ಅಪ್ರಾಪ್ತೆ ಸೇರಿ ಕನಿಷ್ಠ ಆರು ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಅಪ್ರಾಪ್ತೆಯ ಕುಟುಂಬವು ಹಿಂದೆ ಸರಿಯುವಂತೆ ಒತ್ತಡ ಹಾಕಿದ ಕಾರಣ ಆಕೆ ದೂರನ್ನು ಹಿಂಪಡೆದಿದ್ದಳು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಎರಡು ಎಫ್‌ಐಆರ್‌ಗಳು ಕನಿಷ್ಠ 15 ಲೈಂಗಿಕ ಕಿರುಕುಳದ ಬಗ್ಗೆ ಹೇಳುತ್ತದೆ. ಅದರಲ್ಲಿ ಅನುಚಿತ ಸ್ಪರ್ಶ, ಬೆದರಿಕೆ ಆರೋಪ ಸೇರಿದೆ. ಆದರೆ ಈ ಎಲ್ಲಾ ಆರೋಪಗಳನ್ನು ಬ್ರಿಜ್ ಭೂಷಣ್ ಶರಣ್ ಸಿಂಗ್ ನಿರಾಕರಿಸಿದ್ದಾರೆ.

ಬ್ರಿಜ್ ಭೂಷಣ್ ಪ್ರಕರಣದಲ್ಲಿ ಬಿಜೆಪಿಯು ಲೈಂಗಿಕ ದೌರ್ಜನ್ಯ ಆರೋಪಿಯ ಬೆಂಬಲಕ್ಕೆ ನಿಂತಿರುವುದು ಆರಂಭದಿಂದಲೂ ಕಂಡು ಬಂದಿತ್ತು, ಗಂಭೀರ ಆರೋಪಗಳ ಹೊರತಾಗಿಯೂ  ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಸ್ಥಾನದಿಂದ ಬ್ರಿಜ್‌ ಭೂಷಣ್‌ಗೆ ಕೆಳಗಿಳಿಸದೆ ಕೇಂದ್ರ ಸರಕಾರ ಮೌನ ತಾಳಿತ್ತು. ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ಮಾಡುವಾಗ ಪೊಲೀಸರ ಮೂಲಕ ಕುಸ್ತಿಪಟುಗಳ ಮೇಲೆ ಬಲಪ್ರಯೋಗ ನಡೆಸಲಾಗಿತ್ತು. ಪಟ್ಟು ಬಿಡದೆ ಕುಸ್ತಿಪಟುಗಳು ತಮ್ಮ ಹೋರಾಟವನ್ನು ನಡೆಸಿದ ಕಾರಣ ಕೊನೆಗೆ ಬೇರೆ ಹಾದಿಯಿಲ್ಲದೆ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಸ್ಥಾನದಿಂದ ಬ್ರಿಜ್ ಭೂಷಣ್‌ಗೆ ಕೆಳಗಿಳಿಸಲಾಗಿತ್ತು.

ಇದನ್ನು ಓದಿ: ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...