Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

- Advertisement -
- Advertisement -

ಕುಸ್ತಿ ಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಸಿಂಗ್‌ಗೆ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಿರುವ ಬಿಜೆಪಿಯ ನಿರ್ಧಾರವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸಮರ್ಥಿಸಿಕೊಂಡಿದ್ದಾರೆ.

ಪುಣೆಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌,  ಕೆಲವರ ತಂದೆ, ತಾಯಿ ಅಥವಾ ಚಿಕ್ಕಪ್ಪನ ಮೇಲೆ ಗಂಭೀರ ಅಪರಾಧಗಳ ಆರೋಪವಿದ್ದರೂ ಅವರಿಗೆ ಟಿಕೆಟ್‌ ನೀಡಲಾಗಿದೆ. ಎಲ್ಲಾ ಪಕ್ಷಗಳು ಅದನ್ನು ಮಾಡುತ್ತವೆ. ಶಿಕ್ಷೆಗೊಳಗಾದವರ ಮಕ್ಕಳಿಗೂ ಟಿಕೆಟ್ ಸಿಗುತ್ತದೆ. ಇಲ್ಲಿ ಬ್ರಿಜ್ ಭೂಷಣ್ ವಿರುದ್ಧ ಇನ್ನೂ ಏನೂ ಸಾಬೀತಾಗಿಲ್ಲ. ಮತ್ತೇಗೆ ಅವರನ್ನು ತಪ್ಪಿತಸ್ಥ ಎಂದು ಹೇಳುವುದು ಎಂದು ಪ್ರಶ್ನಿಸಿದ್ದಾರೆ.

ಕರಣ್ ಸಿಂಗ್‌ಗೆ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಿರುವ ಬಿಜೆಪಿಯ ನಿರ್ಧಾರವನ್ನು  ಭಾರತೀಯ ಕುಸ್ತಿಪಟುಗಳು ಟೀಕಿಸಿದ್ದರು, ವಿಶೇಷವಾಗಿ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಕರಣ್ ಅವರನ್ನು ಕಣಕ್ಕಿಳಿಸುವ ಬಿಜೆಪಿ ನಿರ್ಧಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದರು.

ಸಾಕ್ಷಿ ಮಲಿಕ್ ಈ ಬಗ್ಗೆ ಪ್ರತಿಕ್ರಿಯಿಸಿ, ಭಾರತದ ಹೆಣ್ಣುಮಕ್ಕಳು ಸೋತಿದ್ದಾರೆ, ಬ್ರಿಜ್ ಭೂಷಣ್ ಗೆದ್ದಿದ್ದಾರೆ ಎಂದು ಹೇಳಿದ್ದರು. ನಾವೆಲ್ಲರೂ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ, ಬೀದಿಯಲ್ಲಿ ದಿನಗಳನ್ನು ಕಳೆದಿದ್ದೇವೆ. ಬ್ರಿಜ್ ಭೂಷಣ್ ಅವರನ್ನು ಇನ್ನೂ ಬಂಧಿಸಿಲ್ಲ. ನಾವು ಕೇಳಿದ್ದು ನ್ಯಾಯ ಮಾತ್ರ. ಆದರೆ ಬಂಧಿಸುವುದು ಬಿಡಿ, ಅವರ ಮಗನಿಗೆ ಟಿಕೆಟ್ ಸಿಕ್ಕಿದ್ದು ಅದು ಭಾರತದ ಕೋಟ್ಯಂತರ ಹೆಣ್ಣುಮಕ್ಕಳ ಉತ್ಸಾಹವನ್ನು ಛಿದ್ರಗೊಳಿಸಿದೆ, ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಒಬ್ಬ ವ್ಯಕ್ತಿಯ ಮುಂದೆ ಸರ್ಕಾರ ಏಕೆ ದುರ್ಬಲವಾಗಿದೆ? ನಿಮಗೆ ಬೇಕಾಗಿರುವುದು ಭಗವಾನ್ ರಾಮನ ಹೆಸರಿನಲ್ಲಿ ಮತಗಳು, ಅವರ ನೀತಿಗಳನ್ನು ಅನುಸರಿಸುವ ಬಗ್ಗೆ ನಿಮ್ಮ ನಿಲುವು ಏನು? ಎಂದು ಪ್ರಶ್ನಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯ, ಬಿಜೆಪಿ ಮಹಿಳೆಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ಪರಿವಾರವಾದ ಅಥವಾ ವಂಶಪಾರಂಪರ್ಯ ರಾಜಕಾರಣ ಆಡಳಿತಾರೂಢ ಬಿಜೆಪಿಯಲ್ಲೂ ಬೇರೂರಿದೆ ಎಂದು ಹೇಳಿದ್ದರು.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲು, ಬೆದರಿಸಲು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮುಖ್ಯಸ್ಥರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಸಾಕ್ಷಿ ಮಲಿಕ್‌, ವಿನೇಶ್ ಫೋಗಟ್, ಬಜರಂಗ್ ಪುನಿಯ ಮುಂಚೂಣಿಯಲ್ಲಿದ್ದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಗಂಭೀರವಾದ ಲೈಂಗಿಕ ದೌರ್ಜನ್ಯದ ಆರೋಪವಿದೆ. ಆದ್ದರಿಂದ ಕಳೆದ ಕೆಲವು ತಿಂಗಳುಗಳಿಂದ ಯುಪಿಯ ಕೈಸರ್‌ಗಂಜ್ ಕ್ಷೇತ್ರಕ್ಕೆ ಬಿಜೆಪಿಯ ಈ ಬಾರಿಯ ಆಯ್ಕೆ ಯಾರೆಂಬುದರ ಬಗ್ಗೆ ಚರ್ಚೆ ನಡೆದಿತ್ತು. ಈ ಕ್ಷೇತ್ರದಲ್ಲಿ ಬ್ರಿಜ್ ಭೂಷಣ್ ಸಾಕಷ್ಟು ಪ್ರಭಾವ ಹೊಂದಿರುವ ಹಿನ್ನೆಲೆ ಬಿಜೆಪಿ ಈ ಭಾರಿ ಅವರ ಪುತ್ರನಿಗೆ ಟಿಕೆಟ್‌ ನೀಡಿದೆ ಎನ್ನಲಾಗಿದೆ.

ಅಪ್ರಾಪ್ತೆ ಸೇರಿ ಕನಿಷ್ಠ ಆರು ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಅಪ್ರಾಪ್ತೆಯ ಕುಟುಂಬವು ಹಿಂದೆ ಸರಿಯುವಂತೆ ಒತ್ತಡ ಹಾಕಿದ ಕಾರಣ ಆಕೆ ದೂರನ್ನು ಹಿಂಪಡೆದಿದ್ದಳು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಎರಡು ಎಫ್‌ಐಆರ್‌ಗಳು ಕನಿಷ್ಠ 15 ಲೈಂಗಿಕ ಕಿರುಕುಳದ ಬಗ್ಗೆ ಹೇಳುತ್ತದೆ. ಅದರಲ್ಲಿ ಅನುಚಿತ ಸ್ಪರ್ಶ, ಬೆದರಿಕೆ ಆರೋಪ ಸೇರಿದೆ. ಆದರೆ ಈ ಎಲ್ಲಾ ಆರೋಪಗಳನ್ನು ಬ್ರಿಜ್ ಭೂಷಣ್ ಶರಣ್ ಸಿಂಗ್ ನಿರಾಕರಿಸಿದ್ದಾರೆ.

ಬ್ರಿಜ್ ಭೂಷಣ್ ಪ್ರಕರಣದಲ್ಲಿ ಬಿಜೆಪಿಯು ಲೈಂಗಿಕ ದೌರ್ಜನ್ಯ ಆರೋಪಿಯ ಬೆಂಬಲಕ್ಕೆ ನಿಂತಿರುವುದು ಆರಂಭದಿಂದಲೂ ಕಂಡು ಬಂದಿತ್ತು, ಗಂಭೀರ ಆರೋಪಗಳ ಹೊರತಾಗಿಯೂ  ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಸ್ಥಾನದಿಂದ ಬ್ರಿಜ್‌ ಭೂಷಣ್‌ಗೆ ಕೆಳಗಿಳಿಸದೆ ಕೇಂದ್ರ ಸರಕಾರ ಮೌನ ತಾಳಿತ್ತು. ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ಮಾಡುವಾಗ ಪೊಲೀಸರ ಮೂಲಕ ಕುಸ್ತಿಪಟುಗಳ ಮೇಲೆ ಬಲಪ್ರಯೋಗ ನಡೆಸಲಾಗಿತ್ತು. ಪಟ್ಟು ಬಿಡದೆ ಕುಸ್ತಿಪಟುಗಳು ತಮ್ಮ ಹೋರಾಟವನ್ನು ನಡೆಸಿದ ಕಾರಣ ಕೊನೆಗೆ ಬೇರೆ ಹಾದಿಯಿಲ್ಲದೆ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಸ್ಥಾನದಿಂದ ಬ್ರಿಜ್ ಭೂಷಣ್‌ಗೆ ಕೆಳಗಿಳಿಸಲಾಗಿತ್ತು.

ಇದನ್ನು ಓದಿ: ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...