Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

- Advertisement -
- Advertisement -

ಕುಸ್ತಿ ಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಸಿಂಗ್‌ಗೆ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಿರುವ ಬಿಜೆಪಿಯ ನಿರ್ಧಾರವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸಮರ್ಥಿಸಿಕೊಂಡಿದ್ದಾರೆ.

ಪುಣೆಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌,  ಕೆಲವರ ತಂದೆ, ತಾಯಿ ಅಥವಾ ಚಿಕ್ಕಪ್ಪನ ಮೇಲೆ ಗಂಭೀರ ಅಪರಾಧಗಳ ಆರೋಪವಿದ್ದರೂ ಅವರಿಗೆ ಟಿಕೆಟ್‌ ನೀಡಲಾಗಿದೆ. ಎಲ್ಲಾ ಪಕ್ಷಗಳು ಅದನ್ನು ಮಾಡುತ್ತವೆ. ಶಿಕ್ಷೆಗೊಳಗಾದವರ ಮಕ್ಕಳಿಗೂ ಟಿಕೆಟ್ ಸಿಗುತ್ತದೆ. ಇಲ್ಲಿ ಬ್ರಿಜ್ ಭೂಷಣ್ ವಿರುದ್ಧ ಇನ್ನೂ ಏನೂ ಸಾಬೀತಾಗಿಲ್ಲ. ಮತ್ತೇಗೆ ಅವರನ್ನು ತಪ್ಪಿತಸ್ಥ ಎಂದು ಹೇಳುವುದು ಎಂದು ಪ್ರಶ್ನಿಸಿದ್ದಾರೆ.

ಕರಣ್ ಸಿಂಗ್‌ಗೆ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಿರುವ ಬಿಜೆಪಿಯ ನಿರ್ಧಾರವನ್ನು  ಭಾರತೀಯ ಕುಸ್ತಿಪಟುಗಳು ಟೀಕಿಸಿದ್ದರು, ವಿಶೇಷವಾಗಿ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಕರಣ್ ಅವರನ್ನು ಕಣಕ್ಕಿಳಿಸುವ ಬಿಜೆಪಿ ನಿರ್ಧಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದರು.

ಸಾಕ್ಷಿ ಮಲಿಕ್ ಈ ಬಗ್ಗೆ ಪ್ರತಿಕ್ರಿಯಿಸಿ, ಭಾರತದ ಹೆಣ್ಣುಮಕ್ಕಳು ಸೋತಿದ್ದಾರೆ, ಬ್ರಿಜ್ ಭೂಷಣ್ ಗೆದ್ದಿದ್ದಾರೆ ಎಂದು ಹೇಳಿದ್ದರು. ನಾವೆಲ್ಲರೂ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ, ಬೀದಿಯಲ್ಲಿ ದಿನಗಳನ್ನು ಕಳೆದಿದ್ದೇವೆ. ಬ್ರಿಜ್ ಭೂಷಣ್ ಅವರನ್ನು ಇನ್ನೂ ಬಂಧಿಸಿಲ್ಲ. ನಾವು ಕೇಳಿದ್ದು ನ್ಯಾಯ ಮಾತ್ರ. ಆದರೆ ಬಂಧಿಸುವುದು ಬಿಡಿ, ಅವರ ಮಗನಿಗೆ ಟಿಕೆಟ್ ಸಿಕ್ಕಿದ್ದು ಅದು ಭಾರತದ ಕೋಟ್ಯಂತರ ಹೆಣ್ಣುಮಕ್ಕಳ ಉತ್ಸಾಹವನ್ನು ಛಿದ್ರಗೊಳಿಸಿದೆ, ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಒಬ್ಬ ವ್ಯಕ್ತಿಯ ಮುಂದೆ ಸರ್ಕಾರ ಏಕೆ ದುರ್ಬಲವಾಗಿದೆ? ನಿಮಗೆ ಬೇಕಾಗಿರುವುದು ಭಗವಾನ್ ರಾಮನ ಹೆಸರಿನಲ್ಲಿ ಮತಗಳು, ಅವರ ನೀತಿಗಳನ್ನು ಅನುಸರಿಸುವ ಬಗ್ಗೆ ನಿಮ್ಮ ನಿಲುವು ಏನು? ಎಂದು ಪ್ರಶ್ನಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯ, ಬಿಜೆಪಿ ಮಹಿಳೆಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ಪರಿವಾರವಾದ ಅಥವಾ ವಂಶಪಾರಂಪರ್ಯ ರಾಜಕಾರಣ ಆಡಳಿತಾರೂಢ ಬಿಜೆಪಿಯಲ್ಲೂ ಬೇರೂರಿದೆ ಎಂದು ಹೇಳಿದ್ದರು.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲು, ಬೆದರಿಸಲು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮುಖ್ಯಸ್ಥರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಸಾಕ್ಷಿ ಮಲಿಕ್‌, ವಿನೇಶ್ ಫೋಗಟ್, ಬಜರಂಗ್ ಪುನಿಯ ಮುಂಚೂಣಿಯಲ್ಲಿದ್ದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಗಂಭೀರವಾದ ಲೈಂಗಿಕ ದೌರ್ಜನ್ಯದ ಆರೋಪವಿದೆ. ಆದ್ದರಿಂದ ಕಳೆದ ಕೆಲವು ತಿಂಗಳುಗಳಿಂದ ಯುಪಿಯ ಕೈಸರ್‌ಗಂಜ್ ಕ್ಷೇತ್ರಕ್ಕೆ ಬಿಜೆಪಿಯ ಈ ಬಾರಿಯ ಆಯ್ಕೆ ಯಾರೆಂಬುದರ ಬಗ್ಗೆ ಚರ್ಚೆ ನಡೆದಿತ್ತು. ಈ ಕ್ಷೇತ್ರದಲ್ಲಿ ಬ್ರಿಜ್ ಭೂಷಣ್ ಸಾಕಷ್ಟು ಪ್ರಭಾವ ಹೊಂದಿರುವ ಹಿನ್ನೆಲೆ ಬಿಜೆಪಿ ಈ ಭಾರಿ ಅವರ ಪುತ್ರನಿಗೆ ಟಿಕೆಟ್‌ ನೀಡಿದೆ ಎನ್ನಲಾಗಿದೆ.

ಅಪ್ರಾಪ್ತೆ ಸೇರಿ ಕನಿಷ್ಠ ಆರು ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಅಪ್ರಾಪ್ತೆಯ ಕುಟುಂಬವು ಹಿಂದೆ ಸರಿಯುವಂತೆ ಒತ್ತಡ ಹಾಕಿದ ಕಾರಣ ಆಕೆ ದೂರನ್ನು ಹಿಂಪಡೆದಿದ್ದಳು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಎರಡು ಎಫ್‌ಐಆರ್‌ಗಳು ಕನಿಷ್ಠ 15 ಲೈಂಗಿಕ ಕಿರುಕುಳದ ಬಗ್ಗೆ ಹೇಳುತ್ತದೆ. ಅದರಲ್ಲಿ ಅನುಚಿತ ಸ್ಪರ್ಶ, ಬೆದರಿಕೆ ಆರೋಪ ಸೇರಿದೆ. ಆದರೆ ಈ ಎಲ್ಲಾ ಆರೋಪಗಳನ್ನು ಬ್ರಿಜ್ ಭೂಷಣ್ ಶರಣ್ ಸಿಂಗ್ ನಿರಾಕರಿಸಿದ್ದಾರೆ.

ಬ್ರಿಜ್ ಭೂಷಣ್ ಪ್ರಕರಣದಲ್ಲಿ ಬಿಜೆಪಿಯು ಲೈಂಗಿಕ ದೌರ್ಜನ್ಯ ಆರೋಪಿಯ ಬೆಂಬಲಕ್ಕೆ ನಿಂತಿರುವುದು ಆರಂಭದಿಂದಲೂ ಕಂಡು ಬಂದಿತ್ತು, ಗಂಭೀರ ಆರೋಪಗಳ ಹೊರತಾಗಿಯೂ  ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಸ್ಥಾನದಿಂದ ಬ್ರಿಜ್‌ ಭೂಷಣ್‌ಗೆ ಕೆಳಗಿಳಿಸದೆ ಕೇಂದ್ರ ಸರಕಾರ ಮೌನ ತಾಳಿತ್ತು. ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ಮಾಡುವಾಗ ಪೊಲೀಸರ ಮೂಲಕ ಕುಸ್ತಿಪಟುಗಳ ಮೇಲೆ ಬಲಪ್ರಯೋಗ ನಡೆಸಲಾಗಿತ್ತು. ಪಟ್ಟು ಬಿಡದೆ ಕುಸ್ತಿಪಟುಗಳು ತಮ್ಮ ಹೋರಾಟವನ್ನು ನಡೆಸಿದ ಕಾರಣ ಕೊನೆಗೆ ಬೇರೆ ಹಾದಿಯಿಲ್ಲದೆ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಸ್ಥಾನದಿಂದ ಬ್ರಿಜ್ ಭೂಷಣ್‌ಗೆ ಕೆಳಗಿಳಿಸಲಾಗಿತ್ತು.

ಇದನ್ನು ಓದಿ: ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...