Homeಮುಖಪುಟಬ್ರಿಜ್‌ ಭೂಷಣ್ ನೀಡಿದ ಲೈಂಗಿಕ ಕಿರುಕುಳದ ಬಗ್ಗೆ 2021ರಲ್ಲೇ ಪ್ರಧಾನಿಗೆ ತಿಳಿಸಲಾಗಿತ್ತು: ಎಫ್‌ಐಆರ್‌ನಲ್ಲಿ ಉಲ್ಲೇಖ

ಬ್ರಿಜ್‌ ಭೂಷಣ್ ನೀಡಿದ ಲೈಂಗಿಕ ಕಿರುಕುಳದ ಬಗ್ಗೆ 2021ರಲ್ಲೇ ಪ್ರಧಾನಿಗೆ ತಿಳಿಸಲಾಗಿತ್ತು: ಎಫ್‌ಐಆರ್‌ನಲ್ಲಿ ಉಲ್ಲೇಖ

- Advertisement -
- Advertisement -

ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ನೀಡಿರುವ ಲೈಂಗಿಕ ಕಿರುಕುಳದ ಕುರಿತು 2021ರಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂತ್ರಸ್ತ ಕುಸ್ತಿಪಟುವೊಬ್ಬರು ತಿಳಿಸಿದ್ದರು ಎಂಬುದು ‘ಎಫ್‌ಐಆರ್‌’ನಲ್ಲಿ ಉಲ್ಲೇಖಗೊಂಡಿದೆ.

ಬ್ರಿಜ್‌ ಭೂಷಣ್ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳ ಪೈಕಿ ಒಂದನ್ನು ಉಲ್ಲೇಖಿಸಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದ್ದು ಪ್ರಧಾನಿಯವರಿಗೆ ಕುಸ್ತಿಪಟು ದೂರು ನೀಡಿರುವ ಕುರಿತು ಪ್ರಸ್ತಾಪಿಸಲಾಗಿದೆ.

“ಬ್ರಿಜ್‌ ಭೂಷಣ್‌ ತನ್ನ ಆಪ್ತ ಸಹಾಯಕರ ಸಹಕಾರದಿಂದ ಪದೇ ಪದೇ ಲೈಂಗಿಕ, ಭಾವನಾತ್ಮಕ, ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದಾನೆ. ನನ್ನನ್ನು ಸೇರಿದಂತೆ ಇತರ ಮಹಿಳಾ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಕಿರುಕುಳದ ಬಗ್ಗೆ ನಾನು ಪ್ರಧಾನಿ [ಮೋದಿ] ಅವರಿಗೆ ತಿಳಿಸಿದ್ದೆ” ಎಂದು ಕುಸ್ತಿಪಟುವೊಬ್ಬರು ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಕ್ರೀಡಾ ಸಚಿವಾಲಯವು ನಿಮ್ಮ ದೂರನ್ನು ಪರಿಶೀಲಿಸುತ್ತದೆ ಎಂದು ಪ್ರಧಾನಿಯವರು ಭರವಸೆ ನೀಡಿದ್ದರು” ಎಂದು ಕುಸ್ತಿಪಟು ಹೇಳಿರುವುದಾಗಿ ‘ನ್ಯೂಸ್‌ ಮಿನಿಟ್’ ವರದಿ ತಿಳಿಸಿದೆ.

“ಆರೋಪಿ ಹಾಗೂ ಅವರ ನಿಕಟ ಸಹಚರರು ಪದೇ ಪದೇ ಉಂಟುಮಾಡಿದ ಮಾನಸಿಕ ಆಘಾತದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ. ಆದರೆ ಪ್ರಧಾನಿಯವರನ್ನು ಭೇಟಿಯಾದ ನಂತರ ಒಂದಿಷ್ಟು ಚೇತರಿಕೆ ಕಂಡು ಬಂತು. ಭಾರತಕ್ಕಾಗಿ ಆಡಲು ಸಾಧ್ಯವಾಗುತ್ತಿಲ್ಲ ಎಂಬ ಎಲ್ಲಾ ನಕಾರಾತ್ಮಕ ಆಲೋಚನೆ ಇಲ್ಲವಾದವು. ಆತ್ಮಹತ್ಯೆಯ ಆಲೋಚನೆಯಿಂದ ಹೊರಬಂದಿದ್ದೆ” ಎಂದು ತಿಳಿಸಿದ್ದಾರೆ.

ಪ್ರಧಾನಿಯವರಿಗೆ ದೂರು ನೀಡಿರುವುದು ಬ್ರಿಜ್‌ ಭೂಷಣ್‌ಗೆ ತಿಳಿಯಿತು. ಈ ಹಿಂದೆ ನೀಡಲಾಗಿದ್ದ ಶೋಕಾಸ್ ನೋಟಿಸ್ ಅನ್ನು ಫೆಡರೇಶನ್ ಹಿಂಪಡೆಯಿತು ಎಂದು ಕುಸ್ತಿಪಟು ಹೇಳಿದ್ದಾರೆ.

ಭೂಷಣ್ ಮತ್ತು ಅವರ ಸಹಾಯಕರಿಂದಾಗುತ್ತಿದ್ದ ಒತ್ತಡವು ಸ್ವಲ್ಪ ಸಮಯದವರೆಗೆ ನಿಂತುಹೋಯಿತು, ಆದರೆ ನಂತರ ಪುನರಾರಂಭವಾಯಿತು ಎಂದು ಕುಸ್ತಿಪಟು ಆರೋಪಿಸಿದ್ದಾರೆ.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ದೂರುದಾರರು ಬ್ರಿಜ್‌ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವೃತ್ತಿಪರ ಕೆಲಸಗಳಾಗಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಬ್ರಿಜ್ ಭೂಷಣ್‌ ಒತ್ತಾಯಿಸುತ್ತಿದ್ದನು ಎಂದು ದೂರಿದ್ದಾರೆ.

ಲೈಂಗಿಕ ಕಿರುಕುಳದ 15 ಘಟನೆಗಳನ್ನು ಉಲ್ಲೇಖಿಸಲಾಗಿದೆ. ಕುಸ್ತಿಪಟುಗಳ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಅವರ ಎದೆ ಮತ್ತು ಹೊಟ್ಟೆಯನ್ನು ಬ್ರಿಜ್ ಭೂಷಣ್ ಸ್ಪರ್ಶಿಸುತ್ತಿದ್ದನು ಎಂದು ಮೂವರು ಕುಸ್ತಿಪಟುಗಳು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಸ್ತ್ರೀ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ), 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಬ್ರಿಜ್ ವಿರುದ್ಧ ಒಂದು ಎಫ್‌ಐಆರ್‌ ದಾಖಲಾಗಿದೆ.

ಅಪ್ರಾಪ್ತ ಬಾಲಕಿಯ ತಂದೆಯ ದೂರಿನ ಮೇರೆಗೆ ಬ್ರಿಜ್‌ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ಒಲಿಂಪಿಕ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರು ಸೇರಿದಂತೆ ಹಲವಾರು ಕುಸ್ತಿಪಟುಗಳು ಬ್ರಿಜ್ ವಿರುದ್ಧ ಹೋರಾಡುತ್ತಿದ್ದಾರೆ. ಆತನನ್ನು ಬಂಧಿಸಿ, ಕುಸ್ತಿ ಫೆಡರೇಷನ್‌ನಿಂದ ಹೊರಹಾಕಬೇಕು ಎಂದು ಒತ್ತಾಯಿಸಿ ಕಳೆದ ಏಪ್ರಿಲ್‌ನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Yes it’s good escalation we will wait wt pm modi will take care and agenda having having about women safety in india , he will be most power man to take care women’s rights and safety he have launched already bhati padoo bhati bhachavo wait and see modi action

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...