Homeಮುಖಪುಟಬ್ರಿಜ್‌ ಭೂಷಣ್ ನೀಡಿದ ಲೈಂಗಿಕ ಕಿರುಕುಳದ ಬಗ್ಗೆ 2021ರಲ್ಲೇ ಪ್ರಧಾನಿಗೆ ತಿಳಿಸಲಾಗಿತ್ತು: ಎಫ್‌ಐಆರ್‌ನಲ್ಲಿ ಉಲ್ಲೇಖ

ಬ್ರಿಜ್‌ ಭೂಷಣ್ ನೀಡಿದ ಲೈಂಗಿಕ ಕಿರುಕುಳದ ಬಗ್ಗೆ 2021ರಲ್ಲೇ ಪ್ರಧಾನಿಗೆ ತಿಳಿಸಲಾಗಿತ್ತು: ಎಫ್‌ಐಆರ್‌ನಲ್ಲಿ ಉಲ್ಲೇಖ

- Advertisement -
- Advertisement -

ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ನೀಡಿರುವ ಲೈಂಗಿಕ ಕಿರುಕುಳದ ಕುರಿತು 2021ರಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂತ್ರಸ್ತ ಕುಸ್ತಿಪಟುವೊಬ್ಬರು ತಿಳಿಸಿದ್ದರು ಎಂಬುದು ‘ಎಫ್‌ಐಆರ್‌’ನಲ್ಲಿ ಉಲ್ಲೇಖಗೊಂಡಿದೆ.

ಬ್ರಿಜ್‌ ಭೂಷಣ್ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳ ಪೈಕಿ ಒಂದನ್ನು ಉಲ್ಲೇಖಿಸಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದ್ದು ಪ್ರಧಾನಿಯವರಿಗೆ ಕುಸ್ತಿಪಟು ದೂರು ನೀಡಿರುವ ಕುರಿತು ಪ್ರಸ್ತಾಪಿಸಲಾಗಿದೆ.

“ಬ್ರಿಜ್‌ ಭೂಷಣ್‌ ತನ್ನ ಆಪ್ತ ಸಹಾಯಕರ ಸಹಕಾರದಿಂದ ಪದೇ ಪದೇ ಲೈಂಗಿಕ, ಭಾವನಾತ್ಮಕ, ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದಾನೆ. ನನ್ನನ್ನು ಸೇರಿದಂತೆ ಇತರ ಮಹಿಳಾ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಕಿರುಕುಳದ ಬಗ್ಗೆ ನಾನು ಪ್ರಧಾನಿ [ಮೋದಿ] ಅವರಿಗೆ ತಿಳಿಸಿದ್ದೆ” ಎಂದು ಕುಸ್ತಿಪಟುವೊಬ್ಬರು ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಕ್ರೀಡಾ ಸಚಿವಾಲಯವು ನಿಮ್ಮ ದೂರನ್ನು ಪರಿಶೀಲಿಸುತ್ತದೆ ಎಂದು ಪ್ರಧಾನಿಯವರು ಭರವಸೆ ನೀಡಿದ್ದರು” ಎಂದು ಕುಸ್ತಿಪಟು ಹೇಳಿರುವುದಾಗಿ ‘ನ್ಯೂಸ್‌ ಮಿನಿಟ್’ ವರದಿ ತಿಳಿಸಿದೆ.

“ಆರೋಪಿ ಹಾಗೂ ಅವರ ನಿಕಟ ಸಹಚರರು ಪದೇ ಪದೇ ಉಂಟುಮಾಡಿದ ಮಾನಸಿಕ ಆಘಾತದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ. ಆದರೆ ಪ್ರಧಾನಿಯವರನ್ನು ಭೇಟಿಯಾದ ನಂತರ ಒಂದಿಷ್ಟು ಚೇತರಿಕೆ ಕಂಡು ಬಂತು. ಭಾರತಕ್ಕಾಗಿ ಆಡಲು ಸಾಧ್ಯವಾಗುತ್ತಿಲ್ಲ ಎಂಬ ಎಲ್ಲಾ ನಕಾರಾತ್ಮಕ ಆಲೋಚನೆ ಇಲ್ಲವಾದವು. ಆತ್ಮಹತ್ಯೆಯ ಆಲೋಚನೆಯಿಂದ ಹೊರಬಂದಿದ್ದೆ” ಎಂದು ತಿಳಿಸಿದ್ದಾರೆ.

ಪ್ರಧಾನಿಯವರಿಗೆ ದೂರು ನೀಡಿರುವುದು ಬ್ರಿಜ್‌ ಭೂಷಣ್‌ಗೆ ತಿಳಿಯಿತು. ಈ ಹಿಂದೆ ನೀಡಲಾಗಿದ್ದ ಶೋಕಾಸ್ ನೋಟಿಸ್ ಅನ್ನು ಫೆಡರೇಶನ್ ಹಿಂಪಡೆಯಿತು ಎಂದು ಕುಸ್ತಿಪಟು ಹೇಳಿದ್ದಾರೆ.

ಭೂಷಣ್ ಮತ್ತು ಅವರ ಸಹಾಯಕರಿಂದಾಗುತ್ತಿದ್ದ ಒತ್ತಡವು ಸ್ವಲ್ಪ ಸಮಯದವರೆಗೆ ನಿಂತುಹೋಯಿತು, ಆದರೆ ನಂತರ ಪುನರಾರಂಭವಾಯಿತು ಎಂದು ಕುಸ್ತಿಪಟು ಆರೋಪಿಸಿದ್ದಾರೆ.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ದೂರುದಾರರು ಬ್ರಿಜ್‌ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವೃತ್ತಿಪರ ಕೆಲಸಗಳಾಗಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಬ್ರಿಜ್ ಭೂಷಣ್‌ ಒತ್ತಾಯಿಸುತ್ತಿದ್ದನು ಎಂದು ದೂರಿದ್ದಾರೆ.

ಲೈಂಗಿಕ ಕಿರುಕುಳದ 15 ಘಟನೆಗಳನ್ನು ಉಲ್ಲೇಖಿಸಲಾಗಿದೆ. ಕುಸ್ತಿಪಟುಗಳ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಅವರ ಎದೆ ಮತ್ತು ಹೊಟ್ಟೆಯನ್ನು ಬ್ರಿಜ್ ಭೂಷಣ್ ಸ್ಪರ್ಶಿಸುತ್ತಿದ್ದನು ಎಂದು ಮೂವರು ಕುಸ್ತಿಪಟುಗಳು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಸ್ತ್ರೀ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ), 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಬ್ರಿಜ್ ವಿರುದ್ಧ ಒಂದು ಎಫ್‌ಐಆರ್‌ ದಾಖಲಾಗಿದೆ.

ಅಪ್ರಾಪ್ತ ಬಾಲಕಿಯ ತಂದೆಯ ದೂರಿನ ಮೇರೆಗೆ ಬ್ರಿಜ್‌ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ಒಲಿಂಪಿಕ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರು ಸೇರಿದಂತೆ ಹಲವಾರು ಕುಸ್ತಿಪಟುಗಳು ಬ್ರಿಜ್ ವಿರುದ್ಧ ಹೋರಾಡುತ್ತಿದ್ದಾರೆ. ಆತನನ್ನು ಬಂಧಿಸಿ, ಕುಸ್ತಿ ಫೆಡರೇಷನ್‌ನಿಂದ ಹೊರಹಾಕಬೇಕು ಎಂದು ಒತ್ತಾಯಿಸಿ ಕಳೆದ ಏಪ್ರಿಲ್‌ನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Yes it’s good escalation we will wait wt pm modi will take care and agenda having having about women safety in india , he will be most power man to take care women’s rights and safety he have launched already bhati padoo bhati bhachavo wait and see modi action

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...