Homeಮುಖಪುಟಬ್ರಿಜ್‌ ಭೂಷಣ್ ನೀಡಿದ ಲೈಂಗಿಕ ಕಿರುಕುಳದ ಬಗ್ಗೆ 2021ರಲ್ಲೇ ಪ್ರಧಾನಿಗೆ ತಿಳಿಸಲಾಗಿತ್ತು: ಎಫ್‌ಐಆರ್‌ನಲ್ಲಿ ಉಲ್ಲೇಖ

ಬ್ರಿಜ್‌ ಭೂಷಣ್ ನೀಡಿದ ಲೈಂಗಿಕ ಕಿರುಕುಳದ ಬಗ್ಗೆ 2021ರಲ್ಲೇ ಪ್ರಧಾನಿಗೆ ತಿಳಿಸಲಾಗಿತ್ತು: ಎಫ್‌ಐಆರ್‌ನಲ್ಲಿ ಉಲ್ಲೇಖ

- Advertisement -
- Advertisement -

ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ನೀಡಿರುವ ಲೈಂಗಿಕ ಕಿರುಕುಳದ ಕುರಿತು 2021ರಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂತ್ರಸ್ತ ಕುಸ್ತಿಪಟುವೊಬ್ಬರು ತಿಳಿಸಿದ್ದರು ಎಂಬುದು ‘ಎಫ್‌ಐಆರ್‌’ನಲ್ಲಿ ಉಲ್ಲೇಖಗೊಂಡಿದೆ.

ಬ್ರಿಜ್‌ ಭೂಷಣ್ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳ ಪೈಕಿ ಒಂದನ್ನು ಉಲ್ಲೇಖಿಸಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದ್ದು ಪ್ರಧಾನಿಯವರಿಗೆ ಕುಸ್ತಿಪಟು ದೂರು ನೀಡಿರುವ ಕುರಿತು ಪ್ರಸ್ತಾಪಿಸಲಾಗಿದೆ.

“ಬ್ರಿಜ್‌ ಭೂಷಣ್‌ ತನ್ನ ಆಪ್ತ ಸಹಾಯಕರ ಸಹಕಾರದಿಂದ ಪದೇ ಪದೇ ಲೈಂಗಿಕ, ಭಾವನಾತ್ಮಕ, ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದಾನೆ. ನನ್ನನ್ನು ಸೇರಿದಂತೆ ಇತರ ಮಹಿಳಾ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಕಿರುಕುಳದ ಬಗ್ಗೆ ನಾನು ಪ್ರಧಾನಿ [ಮೋದಿ] ಅವರಿಗೆ ತಿಳಿಸಿದ್ದೆ” ಎಂದು ಕುಸ್ತಿಪಟುವೊಬ್ಬರು ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಕ್ರೀಡಾ ಸಚಿವಾಲಯವು ನಿಮ್ಮ ದೂರನ್ನು ಪರಿಶೀಲಿಸುತ್ತದೆ ಎಂದು ಪ್ರಧಾನಿಯವರು ಭರವಸೆ ನೀಡಿದ್ದರು” ಎಂದು ಕುಸ್ತಿಪಟು ಹೇಳಿರುವುದಾಗಿ ‘ನ್ಯೂಸ್‌ ಮಿನಿಟ್’ ವರದಿ ತಿಳಿಸಿದೆ.

“ಆರೋಪಿ ಹಾಗೂ ಅವರ ನಿಕಟ ಸಹಚರರು ಪದೇ ಪದೇ ಉಂಟುಮಾಡಿದ ಮಾನಸಿಕ ಆಘಾತದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ. ಆದರೆ ಪ್ರಧಾನಿಯವರನ್ನು ಭೇಟಿಯಾದ ನಂತರ ಒಂದಿಷ್ಟು ಚೇತರಿಕೆ ಕಂಡು ಬಂತು. ಭಾರತಕ್ಕಾಗಿ ಆಡಲು ಸಾಧ್ಯವಾಗುತ್ತಿಲ್ಲ ಎಂಬ ಎಲ್ಲಾ ನಕಾರಾತ್ಮಕ ಆಲೋಚನೆ ಇಲ್ಲವಾದವು. ಆತ್ಮಹತ್ಯೆಯ ಆಲೋಚನೆಯಿಂದ ಹೊರಬಂದಿದ್ದೆ” ಎಂದು ತಿಳಿಸಿದ್ದಾರೆ.

ಪ್ರಧಾನಿಯವರಿಗೆ ದೂರು ನೀಡಿರುವುದು ಬ್ರಿಜ್‌ ಭೂಷಣ್‌ಗೆ ತಿಳಿಯಿತು. ಈ ಹಿಂದೆ ನೀಡಲಾಗಿದ್ದ ಶೋಕಾಸ್ ನೋಟಿಸ್ ಅನ್ನು ಫೆಡರೇಶನ್ ಹಿಂಪಡೆಯಿತು ಎಂದು ಕುಸ್ತಿಪಟು ಹೇಳಿದ್ದಾರೆ.

ಭೂಷಣ್ ಮತ್ತು ಅವರ ಸಹಾಯಕರಿಂದಾಗುತ್ತಿದ್ದ ಒತ್ತಡವು ಸ್ವಲ್ಪ ಸಮಯದವರೆಗೆ ನಿಂತುಹೋಯಿತು, ಆದರೆ ನಂತರ ಪುನರಾರಂಭವಾಯಿತು ಎಂದು ಕುಸ್ತಿಪಟು ಆರೋಪಿಸಿದ್ದಾರೆ.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ದೂರುದಾರರು ಬ್ರಿಜ್‌ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವೃತ್ತಿಪರ ಕೆಲಸಗಳಾಗಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಬ್ರಿಜ್ ಭೂಷಣ್‌ ಒತ್ತಾಯಿಸುತ್ತಿದ್ದನು ಎಂದು ದೂರಿದ್ದಾರೆ.

ಲೈಂಗಿಕ ಕಿರುಕುಳದ 15 ಘಟನೆಗಳನ್ನು ಉಲ್ಲೇಖಿಸಲಾಗಿದೆ. ಕುಸ್ತಿಪಟುಗಳ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಅವರ ಎದೆ ಮತ್ತು ಹೊಟ್ಟೆಯನ್ನು ಬ್ರಿಜ್ ಭೂಷಣ್ ಸ್ಪರ್ಶಿಸುತ್ತಿದ್ದನು ಎಂದು ಮೂವರು ಕುಸ್ತಿಪಟುಗಳು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಸ್ತ್ರೀ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ), 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಬ್ರಿಜ್ ವಿರುದ್ಧ ಒಂದು ಎಫ್‌ಐಆರ್‌ ದಾಖಲಾಗಿದೆ.

ಅಪ್ರಾಪ್ತ ಬಾಲಕಿಯ ತಂದೆಯ ದೂರಿನ ಮೇರೆಗೆ ಬ್ರಿಜ್‌ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ಒಲಿಂಪಿಕ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರು ಸೇರಿದಂತೆ ಹಲವಾರು ಕುಸ್ತಿಪಟುಗಳು ಬ್ರಿಜ್ ವಿರುದ್ಧ ಹೋರಾಡುತ್ತಿದ್ದಾರೆ. ಆತನನ್ನು ಬಂಧಿಸಿ, ಕುಸ್ತಿ ಫೆಡರೇಷನ್‌ನಿಂದ ಹೊರಹಾಕಬೇಕು ಎಂದು ಒತ್ತಾಯಿಸಿ ಕಳೆದ ಏಪ್ರಿಲ್‌ನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Yes it’s good escalation we will wait wt pm modi will take care and agenda having having about women safety in india , he will be most power man to take care women’s rights and safety he have launched already bhati padoo bhati bhachavo wait and see modi action

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...