Homeಮುಖಪುಟಮೋದಿ ಕಾರ್ಯಕ್ರಮಕ್ಕೆ 6 ಸಾವಿರ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ: DDPU ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ

ಮೋದಿ ಕಾರ್ಯಕ್ರಮಕ್ಕೆ 6 ಸಾವಿರ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ: DDPU ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಮಾರು 70 ಕಾಲೇಜುಗಳಿಂದ 6,000 ಹೆಚ್ಚು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಕರೆ ತರಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಒಂದು ವೇಳೆ ತಪ್ಪಿದ್ದಲ್ಲಿ ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆ ಸಹ ನೀಡಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದರು ಕಾಂಗ್ರೆಸ್ ಈ ಕೆಲಸಕ್ಕೆ ಶಿಕ್ಷಣ ಸಚಿವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದೆ.

“ದಿನಾಂಕ 11-11.2022 ರಂದು ಮಾನ್ಯ ಪ್ರಧಾನ ಮಂತ್ರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿರುವ ಪ್ರಯುಕ್ತ, ದಿನಾಂಕ:02-11-2022 ರಂದು ನಡೆದ ಪ್ರಾಂಶುಪಾಲರ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು (ಪ್ರತಿ ಲಗತ್ತಿಸಿದೆ) ನೇಮಕ ಮಾಡಿರುವ ಬಸ್ ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾಲೇಜಿನಿಂದ ಹೊರಡುವ ಬಸ್ ನಲ್ಲಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರೆತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗು-ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ” ಎಂದು ಸುತ್ತೊಲೆಯಲ್ಲಿ ತಿಳಿಸಲಾಗಿದೆ.

ಸುತ್ತೋಲೆಯೊಂದಿಗೆ ಪ್ರತಿ ಕಾಲೇಜಿನಿಂದ 100, 150, 500 ರಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕೆಂದು ಟಾರ್ಗೆಟ್ ಸಹ ನೀಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಸುಮಾರು 70 ಕಾಲೇಜುಗಳಿಂದ 6,000 ಹೆಚ್ಚು ವಿದ್ಯಾರ್ಥಿಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಕರೆ ತರಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದರೆ ಯಾವ ಕಾರ್ಯಕ್ರಮ? ಅದರ ಉದ್ದೇಶವೇನು ಎಂಬುದನ್ನು ಸುತ್ತೋಲೆಯಲ್ಲಿ ತಿಳಿಸಿಲ್ಲ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್‌ರವರು, “ಜನ ಬೇಕು ಸ್ವಾಮಿ ಜನಾ.. ಪ್ರಧಾನಿ ಮೋದಿಯವರ ಭಾಷಣಕ್ಕೆ ಜನ‌ ಬೇಕು ಸ್ವಾಮಿ ಜನಾ..ಮಾನ್ಯ ನರೇಂದ್ರ ಮೋದಿಯವರ ಜನಪ್ರಿಯತೆ ಈ ಮಟ್ಟಕ್ಕೆ ಕುಸಿದಿದೆ. ಸರ್ಕಾರದ ಆದೇಶದ ಮೂಲಕ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಲೋಡುಗಟ್ಟಲೆ ಸಾಗಿಸಲು‌ ಆದೇಶಿಸಲಾಗಿದೆ. ಶಿಕ್ಷಣ ಸಚಿವರೇ ನಿಮ್ಮ ಇಲಾಖೆ ಇಂಥಾದ್ದೊಂದು ಆದೇಶ ಹೊರಡಿಸಬಹುದೇ? ನಿಮಗೆ Shame ಅಲ್ಲವೇ?” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ; ಮುರುಘಾ ಶರಣರಿಗೆ ತಕ್ಕ ಶಿಕ್ಷೆಯಾಗಲಿ: ಬಿ.ಎಸ್‌.ಯಡಿಯೂರಪ್ಪ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...