Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...