Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...